Homeಕರ್ನಾಟಕರಾಮನಗರ ಹೆಸರು ಬದಲಾವಣೆಯಿಂದ ಹಿಂದೆ ಸರಿಯದಿದ್ದರೆ ಹೋರಾಟ ಅನಿವಾರ್ಯ: ಎಚ್‌.ಡಿ.ಕೆ

ರಾಮನಗರ ಹೆಸರು ಬದಲಾವಣೆಯಿಂದ ಹಿಂದೆ ಸರಿಯದಿದ್ದರೆ ಹೋರಾಟ ಅನಿವಾರ್ಯ: ಎಚ್‌.ಡಿ.ಕೆ

ರಾಮನಗರ ಹೆಸರು ಬದಲಿಸುವುದು ರಾಮನ ಹೆಸರಿಗೆ ಆಗುವ ಅಪಮಾನ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement -
- Advertisement -

ಪಕ್ಕದಲ್ಲೇ ಕಾವೇರಿ ನದಿ ಇದೆ, ಇಗ್ಗಲೂರಿನಲ್ಲಿ ‘ದೇವೇಗೌಡ ಬ್ಯಾರೇಜ್’ ಇದೆ. ಮಾಗಡಿಗೆ ಹೇಮೆ ಹರಿಯಲಿದ್ದಾಳೆ, ಚಿನ್ನದಂಥ ಭೂಮಿ ಇದೆ, ಮುಗ್ಧ ಜನರಿದ್ದಾರೆ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಈ ಸಂಪದ್ಭರಿತ ಭೂಮಿಯನ್ನು ಕಿತ್ತುಕೊಂಡು ಬಂಡವಾಳಶಾಹಿಗಳಿಗೆ ಹಂಚಲು ಹೆಸರೊಂದು ಅಡ್ಡಿ ಇದೆ. ನನ್ನ ಮೇಲಿನ ರಾಜಕೀಯ ವೈಷಮ್ಯವೂ ಇದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮಾರ್ಮಿಕವಾಗಿ ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಮನಗರವನ್ನು ಅಭಿವೃದ್ಧಿ ಮಾಡುವ ಇಚ್ಛೆ ನಿಮಗಿದೆಯೇ ಬಿಎಸ್ವೈ ಅವರೇ? ಹಾಗಿದ್ದರೆ ಜಿಲ್ಲೆಗೆ ನಾನು ನನ್ನ ಬಜೆಟ್‌ನಲ್ಲಿ ಮೀಸಲಿಟ್ಟ ಹಣವನ್ನು ಪ್ರಾಮಾಣಿಕವಾಗಿ ಬಿಡುಗಡೆ ಮಾಡಿ ಸಾಕು. ಅದನ್ನೂ ಮೀರಿದ ಅಭಿವೃದ್ಧಿ ಮಾಡುವ ಮನಸ್ಸಿದ್ದರೆ ನಿಮಗೆ ನನ್ನ, ನನ್ನ ಜನ ಸಹಕಾರ ಸದಾ ಇರಲಿದೆ. ಆದರೆ ಹೆಸರು ಬದಲಿಸಿ ಜಿಲ್ಲೆ ಸಂಸ್ಕೃತಿ, ಅಸ್ಮಿತೆಗೆ ಬೆಂಕಿ ಇಡಬೇಡಿ ಎಂದಿದ್ದಾರೆ.

ಕೆಂಪೇಗೌಡರು ಬೆಂಗಳೂರು ಕಟ್ಟಿದಾಗ ಊರು ಇನ್ನು ಮುಂದೆ ಹೋಗಬಾರದು ಎಂದು ನಾಲ್ಕು ದಿಕ್ಕುಗಳಿಗೆ ಗಡಿ ಗೋಪುರ ಕಟ್ಟಿದ್ದರು. ಆದರೆ ನಾವು ಅದನ್ನೆಲ್ಲ ಎಂದೋ ದಾಟಿದೆವು. ಕೆಂಪೇಗೌಡರ ಇಚ್ಛೆ ಮೀರಿದೆವು. ಕೆರೆ ಕಾಲುವೆ ಮುಚ್ಚಿದೆವು ಪರಿಣಾಮ ಬೆಂಗಳೂರು ಇಂದು ಸಮಸ್ಯೆಗಳ ಕೂಪವಾಗಿದೆ ಎಂದಿದ್ದಾರೆ.

ಅಭಿವೃದ್ಧಿಯ ಹೆಸರಲ್ಲಿ ಇದೇ ಸಮಸ್ಯೆಗಳನ್ನು ರಾಮನಗರಕ್ಕೆ ವಿಸ್ತರಿಸುವುದು ಬೇಡ. ಇಲ್ಲಿಗೆ ಕೋಟಿ ಕುಳಗಳು ಬರದಿದ್ದರೂ ಬೇಡ. ಭೂಮಿ ಲೂಟಿಯಾಗದೇ ಇರಲಿ. ಕೆರೆಗಳು ಮುಚ್ಚದೇ ಇರಲಿ. ಸಮೃದ್ಧ ಜನಪದ ಸಂಸ್ಕೃತಿ ಅಳಿಯದಿರಲಿ. ಜನರ ಮುಗ್ಧತೆ ಬಲಿಯಾಗದೇ ಇರಲಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಅಷ್ಟಕ್ಕೂ ಹೆಸರಲ್ಲಿ ಏನಿದೆ. ಬೆಂಗಳೂರು ಎಂದ ಮಾತ್ರಕ್ಕೆ ಅಭಿವೃದ್ಧಿ ಸಾಧ್ಯವೇ? ಹಾಗಿದ್ದರೆ ರಾಜ್ಯದ ಬೇರೆ ಜಿಲ್ಲೆಗಳಿಗೆ ಇದೇ ಹೆಸರಿಡಬಹುದಲ್ಲವೇ? ಅದು ನಿಮಗೆ ಸಾಧ್ಯವೇ? ರಾಮನಗರದ ಹೆಸರು ಬದಲಾಯಿಸಲು ಬರುವ ಬಿಎಸ್ವೈ ಅವರು ಶಿವಮೊಗ್ಗಕ್ಕೆ ಬೆಂಗಳೂರು ಎಂದು ಹೆಸರಿಡಬಲ್ಲರೇ? ದಕ್ಷಿಣ ಕನ್ನಡಕ್ಕೆ? ಇಡುವರೆ ಎಂದು ಅವರು ಪ್ರಶ್ನಿಸಿದ್ದಾರೆ.

ಬೆಂಗಳೂರಿನಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಜಮೀನು ಹೊಂದಬೇಕು ಎಂಬುದು ಇಂದಿನ ಹಣವಂತರ ಬಯಕೆ. ಇದರಲ್ಲಿ ಉತ್ತರಭಾರತೀಯರೇ ಹೆಚ್ಚು. ಹಾಗಾಗಿಯೇ ಸಾಕಷ್ಟು ಭೂಮಿ ಫಾರಂ ಹೌಸ್‌ಗಳಿಗೆ ಬಲಿಯಾಗಿವೆ. ಕೃಷಿಯಿಂದ ಹಿಮ್ಮುಖವಾಗಿವೆ. ರಾಮನಗರದ ಹೆಸರು ಬದಲಾವಣೆ ಇಂಥವರಿಗಾಗಿಯೇ ಹೊರತು ರೈತರಿಗೆ ಅಲ್ಲ ಎಂದಿದ್ದಾರೆ.

ರಾಮನಗರ ತಾಲೂಕು ಮೊದಲು ‘ಕ್ಲೋಸ್ ಪೇಟೆ’ ಎಂದು ಇತ್ತು. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರು ರಾಮನಗರ ತಾಲೂಕು ಮಾಡಿದರು. ಅದೇ ಹೆಸರನ್ನು ನಾನು ಇಡೀ ಜಿಲ್ಲೆಗೆ ಇಟ್ಟಿದ್ದೇನೆ. ಅದನ್ನು ಬದಲಾಯಿಸುವುದು ಅವರಿಗೆ ಮಾಡುವ ಅಪಮಾನ ಎಂದಿದ್ದಾರೆ.

ಈ ಜಿಲ್ಲೆ ಗಂಗರು ಆಳಿದ ನಾಡು. ಬಾಲಗಂಗಾಧರನಾಥರ, ಶಿವಕುಮಾರ ಶ್ರೀಗಳ ಜನ್ಮಭೂಮಿ. ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ಶಕ್ತಿಸ್ಥಳ. ಇದೆ ಹೆಸರನ್ನು ಬೆಂಗಳೂರು ಎಂದು ಬದಲಿಸಿದರೆ ಜಿಲ್ಲೆಯ ಐತಿಹ್ಯ ಅಳಿಯಲಿದೆ ಎಂದು ಅವರು ಹೇಳಿದ್ದಾರೆ.

ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ‌. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಹೆಸರು ಬದಲಿಸುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...