Homeಕರ್ನಾಟಕರಾಮನಗರ ಹೆಸರು ಬದಲಾವಣೆಯಿಂದ ಹಿಂದೆ ಸರಿಯದಿದ್ದರೆ ಹೋರಾಟ ಅನಿವಾರ್ಯ: ಎಚ್‌.ಡಿ.ಕೆ

ರಾಮನಗರ ಹೆಸರು ಬದಲಾವಣೆಯಿಂದ ಹಿಂದೆ ಸರಿಯದಿದ್ದರೆ ಹೋರಾಟ ಅನಿವಾರ್ಯ: ಎಚ್‌.ಡಿ.ಕೆ

ರಾಮನಗರ ಹೆಸರು ಬದಲಿಸುವುದು ರಾಮನ ಹೆಸರಿಗೆ ಆಗುವ ಅಪಮಾನ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement -
- Advertisement -

ಪಕ್ಕದಲ್ಲೇ ಕಾವೇರಿ ನದಿ ಇದೆ, ಇಗ್ಗಲೂರಿನಲ್ಲಿ ‘ದೇವೇಗೌಡ ಬ್ಯಾರೇಜ್’ ಇದೆ. ಮಾಗಡಿಗೆ ಹೇಮೆ ಹರಿಯಲಿದ್ದಾಳೆ, ಚಿನ್ನದಂಥ ಭೂಮಿ ಇದೆ, ಮುಗ್ಧ ಜನರಿದ್ದಾರೆ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಈ ಸಂಪದ್ಭರಿತ ಭೂಮಿಯನ್ನು ಕಿತ್ತುಕೊಂಡು ಬಂಡವಾಳಶಾಹಿಗಳಿಗೆ ಹಂಚಲು ಹೆಸರೊಂದು ಅಡ್ಡಿ ಇದೆ. ನನ್ನ ಮೇಲಿನ ರಾಜಕೀಯ ವೈಷಮ್ಯವೂ ಇದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮಾರ್ಮಿಕವಾಗಿ ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಮನಗರವನ್ನು ಅಭಿವೃದ್ಧಿ ಮಾಡುವ ಇಚ್ಛೆ ನಿಮಗಿದೆಯೇ ಬಿಎಸ್ವೈ ಅವರೇ? ಹಾಗಿದ್ದರೆ ಜಿಲ್ಲೆಗೆ ನಾನು ನನ್ನ ಬಜೆಟ್‌ನಲ್ಲಿ ಮೀಸಲಿಟ್ಟ ಹಣವನ್ನು ಪ್ರಾಮಾಣಿಕವಾಗಿ ಬಿಡುಗಡೆ ಮಾಡಿ ಸಾಕು. ಅದನ್ನೂ ಮೀರಿದ ಅಭಿವೃದ್ಧಿ ಮಾಡುವ ಮನಸ್ಸಿದ್ದರೆ ನಿಮಗೆ ನನ್ನ, ನನ್ನ ಜನ ಸಹಕಾರ ಸದಾ ಇರಲಿದೆ. ಆದರೆ ಹೆಸರು ಬದಲಿಸಿ ಜಿಲ್ಲೆ ಸಂಸ್ಕೃತಿ, ಅಸ್ಮಿತೆಗೆ ಬೆಂಕಿ ಇಡಬೇಡಿ ಎಂದಿದ್ದಾರೆ.

ಕೆಂಪೇಗೌಡರು ಬೆಂಗಳೂರು ಕಟ್ಟಿದಾಗ ಊರು ಇನ್ನು ಮುಂದೆ ಹೋಗಬಾರದು ಎಂದು ನಾಲ್ಕು ದಿಕ್ಕುಗಳಿಗೆ ಗಡಿ ಗೋಪುರ ಕಟ್ಟಿದ್ದರು. ಆದರೆ ನಾವು ಅದನ್ನೆಲ್ಲ ಎಂದೋ ದಾಟಿದೆವು. ಕೆಂಪೇಗೌಡರ ಇಚ್ಛೆ ಮೀರಿದೆವು. ಕೆರೆ ಕಾಲುವೆ ಮುಚ್ಚಿದೆವು ಪರಿಣಾಮ ಬೆಂಗಳೂರು ಇಂದು ಸಮಸ್ಯೆಗಳ ಕೂಪವಾಗಿದೆ ಎಂದಿದ್ದಾರೆ.

ಅಭಿವೃದ್ಧಿಯ ಹೆಸರಲ್ಲಿ ಇದೇ ಸಮಸ್ಯೆಗಳನ್ನು ರಾಮನಗರಕ್ಕೆ ವಿಸ್ತರಿಸುವುದು ಬೇಡ. ಇಲ್ಲಿಗೆ ಕೋಟಿ ಕುಳಗಳು ಬರದಿದ್ದರೂ ಬೇಡ. ಭೂಮಿ ಲೂಟಿಯಾಗದೇ ಇರಲಿ. ಕೆರೆಗಳು ಮುಚ್ಚದೇ ಇರಲಿ. ಸಮೃದ್ಧ ಜನಪದ ಸಂಸ್ಕೃತಿ ಅಳಿಯದಿರಲಿ. ಜನರ ಮುಗ್ಧತೆ ಬಲಿಯಾಗದೇ ಇರಲಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಅಷ್ಟಕ್ಕೂ ಹೆಸರಲ್ಲಿ ಏನಿದೆ. ಬೆಂಗಳೂರು ಎಂದ ಮಾತ್ರಕ್ಕೆ ಅಭಿವೃದ್ಧಿ ಸಾಧ್ಯವೇ? ಹಾಗಿದ್ದರೆ ರಾಜ್ಯದ ಬೇರೆ ಜಿಲ್ಲೆಗಳಿಗೆ ಇದೇ ಹೆಸರಿಡಬಹುದಲ್ಲವೇ? ಅದು ನಿಮಗೆ ಸಾಧ್ಯವೇ? ರಾಮನಗರದ ಹೆಸರು ಬದಲಾಯಿಸಲು ಬರುವ ಬಿಎಸ್ವೈ ಅವರು ಶಿವಮೊಗ್ಗಕ್ಕೆ ಬೆಂಗಳೂರು ಎಂದು ಹೆಸರಿಡಬಲ್ಲರೇ? ದಕ್ಷಿಣ ಕನ್ನಡಕ್ಕೆ? ಇಡುವರೆ ಎಂದು ಅವರು ಪ್ರಶ್ನಿಸಿದ್ದಾರೆ.

ಬೆಂಗಳೂರಿನಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಜಮೀನು ಹೊಂದಬೇಕು ಎಂಬುದು ಇಂದಿನ ಹಣವಂತರ ಬಯಕೆ. ಇದರಲ್ಲಿ ಉತ್ತರಭಾರತೀಯರೇ ಹೆಚ್ಚು. ಹಾಗಾಗಿಯೇ ಸಾಕಷ್ಟು ಭೂಮಿ ಫಾರಂ ಹೌಸ್‌ಗಳಿಗೆ ಬಲಿಯಾಗಿವೆ. ಕೃಷಿಯಿಂದ ಹಿಮ್ಮುಖವಾಗಿವೆ. ರಾಮನಗರದ ಹೆಸರು ಬದಲಾವಣೆ ಇಂಥವರಿಗಾಗಿಯೇ ಹೊರತು ರೈತರಿಗೆ ಅಲ್ಲ ಎಂದಿದ್ದಾರೆ.

ರಾಮನಗರ ತಾಲೂಕು ಮೊದಲು ‘ಕ್ಲೋಸ್ ಪೇಟೆ’ ಎಂದು ಇತ್ತು. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರು ರಾಮನಗರ ತಾಲೂಕು ಮಾಡಿದರು. ಅದೇ ಹೆಸರನ್ನು ನಾನು ಇಡೀ ಜಿಲ್ಲೆಗೆ ಇಟ್ಟಿದ್ದೇನೆ. ಅದನ್ನು ಬದಲಾಯಿಸುವುದು ಅವರಿಗೆ ಮಾಡುವ ಅಪಮಾನ ಎಂದಿದ್ದಾರೆ.

ಈ ಜಿಲ್ಲೆ ಗಂಗರು ಆಳಿದ ನಾಡು. ಬಾಲಗಂಗಾಧರನಾಥರ, ಶಿವಕುಮಾರ ಶ್ರೀಗಳ ಜನ್ಮಭೂಮಿ. ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ಶಕ್ತಿಸ್ಥಳ. ಇದೆ ಹೆಸರನ್ನು ಬೆಂಗಳೂರು ಎಂದು ಬದಲಿಸಿದರೆ ಜಿಲ್ಲೆಯ ಐತಿಹ್ಯ ಅಳಿಯಲಿದೆ ಎಂದು ಅವರು ಹೇಳಿದ್ದಾರೆ.

ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ‌. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಹೆಸರು ಬದಲಿಸುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...