Homeಕರ್ನಾಟಕರಾಮನಗರ ಹೆಸರು ಬದಲಾವಣೆಯಿಂದ ಹಿಂದೆ ಸರಿಯದಿದ್ದರೆ ಹೋರಾಟ ಅನಿವಾರ್ಯ: ಎಚ್‌.ಡಿ.ಕೆ

ರಾಮನಗರ ಹೆಸರು ಬದಲಾವಣೆಯಿಂದ ಹಿಂದೆ ಸರಿಯದಿದ್ದರೆ ಹೋರಾಟ ಅನಿವಾರ್ಯ: ಎಚ್‌.ಡಿ.ಕೆ

ರಾಮನಗರ ಹೆಸರು ಬದಲಿಸುವುದು ರಾಮನ ಹೆಸರಿಗೆ ಆಗುವ ಅಪಮಾನ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement -
- Advertisement -

ಪಕ್ಕದಲ್ಲೇ ಕಾವೇರಿ ನದಿ ಇದೆ, ಇಗ್ಗಲೂರಿನಲ್ಲಿ ‘ದೇವೇಗೌಡ ಬ್ಯಾರೇಜ್’ ಇದೆ. ಮಾಗಡಿಗೆ ಹೇಮೆ ಹರಿಯಲಿದ್ದಾಳೆ, ಚಿನ್ನದಂಥ ಭೂಮಿ ಇದೆ, ಮುಗ್ಧ ಜನರಿದ್ದಾರೆ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಈ ಸಂಪದ್ಭರಿತ ಭೂಮಿಯನ್ನು ಕಿತ್ತುಕೊಂಡು ಬಂಡವಾಳಶಾಹಿಗಳಿಗೆ ಹಂಚಲು ಹೆಸರೊಂದು ಅಡ್ಡಿ ಇದೆ. ನನ್ನ ಮೇಲಿನ ರಾಜಕೀಯ ವೈಷಮ್ಯವೂ ಇದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮಾರ್ಮಿಕವಾಗಿ ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಮನಗರವನ್ನು ಅಭಿವೃದ್ಧಿ ಮಾಡುವ ಇಚ್ಛೆ ನಿಮಗಿದೆಯೇ ಬಿಎಸ್ವೈ ಅವರೇ? ಹಾಗಿದ್ದರೆ ಜಿಲ್ಲೆಗೆ ನಾನು ನನ್ನ ಬಜೆಟ್‌ನಲ್ಲಿ ಮೀಸಲಿಟ್ಟ ಹಣವನ್ನು ಪ್ರಾಮಾಣಿಕವಾಗಿ ಬಿಡುಗಡೆ ಮಾಡಿ ಸಾಕು. ಅದನ್ನೂ ಮೀರಿದ ಅಭಿವೃದ್ಧಿ ಮಾಡುವ ಮನಸ್ಸಿದ್ದರೆ ನಿಮಗೆ ನನ್ನ, ನನ್ನ ಜನ ಸಹಕಾರ ಸದಾ ಇರಲಿದೆ. ಆದರೆ ಹೆಸರು ಬದಲಿಸಿ ಜಿಲ್ಲೆ ಸಂಸ್ಕೃತಿ, ಅಸ್ಮಿತೆಗೆ ಬೆಂಕಿ ಇಡಬೇಡಿ ಎಂದಿದ್ದಾರೆ.

ಕೆಂಪೇಗೌಡರು ಬೆಂಗಳೂರು ಕಟ್ಟಿದಾಗ ಊರು ಇನ್ನು ಮುಂದೆ ಹೋಗಬಾರದು ಎಂದು ನಾಲ್ಕು ದಿಕ್ಕುಗಳಿಗೆ ಗಡಿ ಗೋಪುರ ಕಟ್ಟಿದ್ದರು. ಆದರೆ ನಾವು ಅದನ್ನೆಲ್ಲ ಎಂದೋ ದಾಟಿದೆವು. ಕೆಂಪೇಗೌಡರ ಇಚ್ಛೆ ಮೀರಿದೆವು. ಕೆರೆ ಕಾಲುವೆ ಮುಚ್ಚಿದೆವು ಪರಿಣಾಮ ಬೆಂಗಳೂರು ಇಂದು ಸಮಸ್ಯೆಗಳ ಕೂಪವಾಗಿದೆ ಎಂದಿದ್ದಾರೆ.

ಅಭಿವೃದ್ಧಿಯ ಹೆಸರಲ್ಲಿ ಇದೇ ಸಮಸ್ಯೆಗಳನ್ನು ರಾಮನಗರಕ್ಕೆ ವಿಸ್ತರಿಸುವುದು ಬೇಡ. ಇಲ್ಲಿಗೆ ಕೋಟಿ ಕುಳಗಳು ಬರದಿದ್ದರೂ ಬೇಡ. ಭೂಮಿ ಲೂಟಿಯಾಗದೇ ಇರಲಿ. ಕೆರೆಗಳು ಮುಚ್ಚದೇ ಇರಲಿ. ಸಮೃದ್ಧ ಜನಪದ ಸಂಸ್ಕೃತಿ ಅಳಿಯದಿರಲಿ. ಜನರ ಮುಗ್ಧತೆ ಬಲಿಯಾಗದೇ ಇರಲಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಅಷ್ಟಕ್ಕೂ ಹೆಸರಲ್ಲಿ ಏನಿದೆ. ಬೆಂಗಳೂರು ಎಂದ ಮಾತ್ರಕ್ಕೆ ಅಭಿವೃದ್ಧಿ ಸಾಧ್ಯವೇ? ಹಾಗಿದ್ದರೆ ರಾಜ್ಯದ ಬೇರೆ ಜಿಲ್ಲೆಗಳಿಗೆ ಇದೇ ಹೆಸರಿಡಬಹುದಲ್ಲವೇ? ಅದು ನಿಮಗೆ ಸಾಧ್ಯವೇ? ರಾಮನಗರದ ಹೆಸರು ಬದಲಾಯಿಸಲು ಬರುವ ಬಿಎಸ್ವೈ ಅವರು ಶಿವಮೊಗ್ಗಕ್ಕೆ ಬೆಂಗಳೂರು ಎಂದು ಹೆಸರಿಡಬಲ್ಲರೇ? ದಕ್ಷಿಣ ಕನ್ನಡಕ್ಕೆ? ಇಡುವರೆ ಎಂದು ಅವರು ಪ್ರಶ್ನಿಸಿದ್ದಾರೆ.

ಬೆಂಗಳೂರಿನಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಜಮೀನು ಹೊಂದಬೇಕು ಎಂಬುದು ಇಂದಿನ ಹಣವಂತರ ಬಯಕೆ. ಇದರಲ್ಲಿ ಉತ್ತರಭಾರತೀಯರೇ ಹೆಚ್ಚು. ಹಾಗಾಗಿಯೇ ಸಾಕಷ್ಟು ಭೂಮಿ ಫಾರಂ ಹೌಸ್‌ಗಳಿಗೆ ಬಲಿಯಾಗಿವೆ. ಕೃಷಿಯಿಂದ ಹಿಮ್ಮುಖವಾಗಿವೆ. ರಾಮನಗರದ ಹೆಸರು ಬದಲಾವಣೆ ಇಂಥವರಿಗಾಗಿಯೇ ಹೊರತು ರೈತರಿಗೆ ಅಲ್ಲ ಎಂದಿದ್ದಾರೆ.

ರಾಮನಗರ ತಾಲೂಕು ಮೊದಲು ‘ಕ್ಲೋಸ್ ಪೇಟೆ’ ಎಂದು ಇತ್ತು. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರು ರಾಮನಗರ ತಾಲೂಕು ಮಾಡಿದರು. ಅದೇ ಹೆಸರನ್ನು ನಾನು ಇಡೀ ಜಿಲ್ಲೆಗೆ ಇಟ್ಟಿದ್ದೇನೆ. ಅದನ್ನು ಬದಲಾಯಿಸುವುದು ಅವರಿಗೆ ಮಾಡುವ ಅಪಮಾನ ಎಂದಿದ್ದಾರೆ.

ಈ ಜಿಲ್ಲೆ ಗಂಗರು ಆಳಿದ ನಾಡು. ಬಾಲಗಂಗಾಧರನಾಥರ, ಶಿವಕುಮಾರ ಶ್ರೀಗಳ ಜನ್ಮಭೂಮಿ. ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ಶಕ್ತಿಸ್ಥಳ. ಇದೆ ಹೆಸರನ್ನು ಬೆಂಗಳೂರು ಎಂದು ಬದಲಿಸಿದರೆ ಜಿಲ್ಲೆಯ ಐತಿಹ್ಯ ಅಳಿಯಲಿದೆ ಎಂದು ಅವರು ಹೇಳಿದ್ದಾರೆ.

ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ‌. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಹೆಸರು ಬದಲಿಸುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...