Homeಕರ್ನಾಟಕ125 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮ: ಯುಗಾದಿ ಬಳಿಕ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ

125 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮ: ಯುಗಾದಿ ಬಳಿಕ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ

- Advertisement -
- Advertisement -

ಮುಂಬರುವ ಕರ್ನಾಟಕ ವಿಧಾನಸಭೆಯ ಚುನಾವಣೆಗೆ 125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಕೇಂದ್ರ ಚುನಾವಣಾ ಸಮಿತಿಯು ಶುಕ್ರವಾರ ಅಂತಿಮಗೊಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಈ ಸಭೆಯಲ್ಲಿ 71 ಹಾಲಿ ಶಾಸಕರಿಗೆ ಮತ್ತೆ ಟಿಕೆಟ್​ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಮೊದಲ ಪಟ್ಟಿಯನ್ನು ಯುಗಾದಿ ಹಬ್ಬದ ನಂತರ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಜ್ಯ ಘಟಕದ ನಾಯಕರ ಸಲಹೆ ಮೇರೆಗೆ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. ಹಾಲಿ ಶಾಸಕರ ಜತೆ ಕಳೆದ ಬಾರಿ ಕಡಿಮೆ ಅಂತದಲ್ಲಿ ಸೋತವರಿಗೂ ಟಿಕೆಟ್​ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.

ಹರಿಹರ (ಆರ್‌.ರಾಮಪ್ಪ), ಕುಂದಗೋಳ (ಕುಸುಮಾ ಶಿವಳ್ಳಿ) ಹಾಗೂ ಲಿಂಗಸುಗೂರು (ಡಿ.ಎಸ್‌.ಹೂಲಗೇರಿ) ಕ್ಷೇತ್ರಗಳಲ್ಲಿ ಹಾಲಿ ಶಾಸಕರನ್ನು ಕಣಕ್ಕೆ ಇಳಿಸಿದರೆ ಗೆಲುವು ಕಷ್ಟ ಎಂದು ಪಕ್ಷದ ಆಂತರಿಕ ಸಮೀಕ್ಷೆಗಳು ತಿಳಿಸಿವೆ. ಹಾಗಾಗಿ ಈ  ಕ್ಷೇತ್ರಗಳಲ್ಲಿ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಿ ಮುಂದಿನ ತೀರ್ಮಾನಕ್ಕೆ ಬರಲು  ಹೈಕಮಾಂಡ್ ನಿರ್ಧರಿಸಿದೆ.

ಪಾವಗಡ (ವೆಂಕಟರಮಣಯ್ಯ),  ಅಫಜಲಪುರ (ಎಂ.ವೈ.ಪಾಟೀಲ) ಕ್ಷೇತ್ರದ ಶಾಸಕರು ತಮ್ಮ ಪುತ್ರರಿಗೆ ಟಿಕೆಟ್‌ ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಹೈಕಮಾಂಡ್‌ ಒಪ್ಪಿದೆ. ಪುಲಕೇಶಿನಗರ (ಅಖಂಡ ಶ್ರೀನಿವಾಸಮೂರ್ತಿ) ಕ್ಷೇತ್ರದ ಕುರಿತು ಹಿರಿಯ ನಾಯಕರು ಇನ್ನಷ್ಟು ಚರ್ಚೆ ನಡೆಸಿ ಮುಂದಿನ ಹೆಜ್ಜೆ ಇಡುವುದು ಉತ್ತಮ ಎಂಬ ನಿರ್ಧಾರಕ್ಕೆ ಬರಲಾಯಿತು.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ: ಸಿ.ಟಿ ರವಿ-ವಿಜಯೇಂದ್ರ ನಡುವೆ ವಾಕ್ಸಮರ

ಪಟ್ಟಿ ಬಿಡುಗಡೆ ಬಗ್ಗೆ ಮಾತನಾಡಿದ ಹಿರಿಯ ಮುಖಂಡರೊಬ್ಬರು, ”ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಇದೇ 20ರಂದು ಬೆಳಗಾವಿಯಲ್ಲಿ ನಡೆಯುವ ‘ಯುವ ಕ್ರಾಂತಿ ರ‍್ಯಾಲಿ’ಗೆ ಬರಲಿದ್ದಾರೆ. ಆ ಬಳಿಕವೇ  ಮೊದಲ ಪಟ್ಟಿ ಪ್ರಕಟಿಸಬೇಕು ಎಂದು ಹಲವು ನಾಯಕರು ಸಲಹೆ ನೀಡಿದ್ದಾರೆ. ಇದಕ್ಕೆ ಹೈಕಮಾಂಡ್‌ ಕೂಡ ಬಹುತೇಕವಾಗಿ ಒಪ್ಪಿದೆ ಎಂದು ಹೇಳಿದರು.

ಈ ಬಾರಿ ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಅವರು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಅವರು ಸೂಚಿಸುವ ಮುಖಂಡರಿಗೆ ಟಿಕೆಟ್‌ ನೀಡಲು ತೀರ್ಮಾನಿಸಲಾಯಿತು. ಜತೆಗೆ, ಹೊಸಕೋಟೆ ಶಾಸಕ ಶರತ್‌ ಬಚ್ಚೇಗೌಡ, ಎರಡು ತಿಂಗಳ ಹಿಂದೆ ಕಾಂಗ್ರೆಸ್‌ಗೆ ಸೇರ್ಪಡೆಯಾದ ಮುಳಬಾಗಿಲಿನ ಶಾಸಕ ಎಚ್‌.ನಾಗೇಶ್‌ ಅವರನ್ನು ಮಹದೇವಪುರದಲ್ಲಿ, ವಿಧಾನ ಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್‌ ಅವರನ್ನು ಬಸವನಗುಡಿ ಕ್ಷೇತ್ರದಲ್ಲಿ ಟಿಕೆಟ್ ನೀಡಲು ನಿರ್ಧರಿಸದಲಾಯಿತು.

ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಅವರಿಗೆ ರಾಜಾಜಿನಗರ ಕ್ಷೇತ್ರದಿಂದ ಟಿಕೆಟ್ ನೀಡಲು ಕೆಲವು ನಾಯಕರಿಂದ ಒಲವು ವ್ಯಕ್ತಪಡಿಸಿದರು. ಆದರೆ ಅವರು ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ಪಡೆದ ಬಳಿಕ ಅಂತಿಮಗೊಳಿಸುವುದು ಉತ್ತಮ ಎಂದು ಹಲವು ಮುಖಂಡರು ಸಲಹೆ ನೀಡಿದರು.

ಚುನಾವಣಾ ಸಮಿತಿ ಸಭೆಯಲ್ಲಿ ರಾಹುಲ್‌ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌, ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ, ಶಾಸಕ ಜಿ.ಪರಮೇಶ್ವರ ಹಾಗೂ ಹಿರಿಯ ಮುಖಂಡ ಎಂ.ವೀರಪ್ಪ ಮೊಯಿಲಿ ಭಾಗವಹಿಸಿದ್ದರು.

70 ಕ್ಷೇತ್ರಗಳಿಗೆ ಎರಡು–ಮೂವರು ಸಂಭವನೀಯ ಅಭ್ಯರ್ಥಿಗಳ ಹೆಸರು ಗುರುತಿಸಿ ಪರಿಶೀಲನಾ ಸಮಿತಿ ಪಟ್ಟಿ ಮಾಡಿದೆ. ಈ ಪಟ್ಟಿಯ ಕುರಿತು ಸಹ ಸಭೆಯಲ್ಲಿ ಚರ್ಚಿಸಲಾಯಿತು. ಈ ಕ್ಷೇತ್ರಗಳ ಆಕಾಂಕ್ಷಿಗಳ ಜತೆಗೆ ರಾಜ್ಯ ನಾಯಕರು ಚರ್ಚೆ ನಡೆಸಿ ಯಾವುದೇ ಗೊಂದಲಕ್ಕೆ ಎಡೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೈಕಮಾಂಡ್‌ ಸೂಚಿಸಿದೆ.  ಸಭೆಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಕಾಂಗ್ರೆಸ್‌ನ ಮುಖಂಡರ ಜತೆಗೆ ಮತ್ತೊಂದು ಸುತ್ತಿನ ಸಭೆ ನಡೆಸಿದರು.

ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಭೆಯಲ್ಲಿ ಭಾಗವಹಿಸಿದ್ದರು.

ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಾವು ಏಕಾಂಗಿಯಾಗಿ ಚುನಾವಣೆ ಎದುರಿಸಲಿದ್ದು, ಅಧಿಕಾರಕ್ಕೇರಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...