Homeಕರ್ನಾಟಕ125 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮ: ಯುಗಾದಿ ಬಳಿಕ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ

125 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮ: ಯುಗಾದಿ ಬಳಿಕ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ

- Advertisement -
- Advertisement -

ಮುಂಬರುವ ಕರ್ನಾಟಕ ವಿಧಾನಸಭೆಯ ಚುನಾವಣೆಗೆ 125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಕೇಂದ್ರ ಚುನಾವಣಾ ಸಮಿತಿಯು ಶುಕ್ರವಾರ ಅಂತಿಮಗೊಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಈ ಸಭೆಯಲ್ಲಿ 71 ಹಾಲಿ ಶಾಸಕರಿಗೆ ಮತ್ತೆ ಟಿಕೆಟ್​ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಮೊದಲ ಪಟ್ಟಿಯನ್ನು ಯುಗಾದಿ ಹಬ್ಬದ ನಂತರ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಜ್ಯ ಘಟಕದ ನಾಯಕರ ಸಲಹೆ ಮೇರೆಗೆ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. ಹಾಲಿ ಶಾಸಕರ ಜತೆ ಕಳೆದ ಬಾರಿ ಕಡಿಮೆ ಅಂತದಲ್ಲಿ ಸೋತವರಿಗೂ ಟಿಕೆಟ್​ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.

ಹರಿಹರ (ಆರ್‌.ರಾಮಪ್ಪ), ಕುಂದಗೋಳ (ಕುಸುಮಾ ಶಿವಳ್ಳಿ) ಹಾಗೂ ಲಿಂಗಸುಗೂರು (ಡಿ.ಎಸ್‌.ಹೂಲಗೇರಿ) ಕ್ಷೇತ್ರಗಳಲ್ಲಿ ಹಾಲಿ ಶಾಸಕರನ್ನು ಕಣಕ್ಕೆ ಇಳಿಸಿದರೆ ಗೆಲುವು ಕಷ್ಟ ಎಂದು ಪಕ್ಷದ ಆಂತರಿಕ ಸಮೀಕ್ಷೆಗಳು ತಿಳಿಸಿವೆ. ಹಾಗಾಗಿ ಈ  ಕ್ಷೇತ್ರಗಳಲ್ಲಿ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಿ ಮುಂದಿನ ತೀರ್ಮಾನಕ್ಕೆ ಬರಲು  ಹೈಕಮಾಂಡ್ ನಿರ್ಧರಿಸಿದೆ.

ಪಾವಗಡ (ವೆಂಕಟರಮಣಯ್ಯ),  ಅಫಜಲಪುರ (ಎಂ.ವೈ.ಪಾಟೀಲ) ಕ್ಷೇತ್ರದ ಶಾಸಕರು ತಮ್ಮ ಪುತ್ರರಿಗೆ ಟಿಕೆಟ್‌ ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಹೈಕಮಾಂಡ್‌ ಒಪ್ಪಿದೆ. ಪುಲಕೇಶಿನಗರ (ಅಖಂಡ ಶ್ರೀನಿವಾಸಮೂರ್ತಿ) ಕ್ಷೇತ್ರದ ಕುರಿತು ಹಿರಿಯ ನಾಯಕರು ಇನ್ನಷ್ಟು ಚರ್ಚೆ ನಡೆಸಿ ಮುಂದಿನ ಹೆಜ್ಜೆ ಇಡುವುದು ಉತ್ತಮ ಎಂಬ ನಿರ್ಧಾರಕ್ಕೆ ಬರಲಾಯಿತು.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ: ಸಿ.ಟಿ ರವಿ-ವಿಜಯೇಂದ್ರ ನಡುವೆ ವಾಕ್ಸಮರ

ಪಟ್ಟಿ ಬಿಡುಗಡೆ ಬಗ್ಗೆ ಮಾತನಾಡಿದ ಹಿರಿಯ ಮುಖಂಡರೊಬ್ಬರು, ”ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಇದೇ 20ರಂದು ಬೆಳಗಾವಿಯಲ್ಲಿ ನಡೆಯುವ ‘ಯುವ ಕ್ರಾಂತಿ ರ‍್ಯಾಲಿ’ಗೆ ಬರಲಿದ್ದಾರೆ. ಆ ಬಳಿಕವೇ  ಮೊದಲ ಪಟ್ಟಿ ಪ್ರಕಟಿಸಬೇಕು ಎಂದು ಹಲವು ನಾಯಕರು ಸಲಹೆ ನೀಡಿದ್ದಾರೆ. ಇದಕ್ಕೆ ಹೈಕಮಾಂಡ್‌ ಕೂಡ ಬಹುತೇಕವಾಗಿ ಒಪ್ಪಿದೆ ಎಂದು ಹೇಳಿದರು.

ಈ ಬಾರಿ ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಅವರು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಅವರು ಸೂಚಿಸುವ ಮುಖಂಡರಿಗೆ ಟಿಕೆಟ್‌ ನೀಡಲು ತೀರ್ಮಾನಿಸಲಾಯಿತು. ಜತೆಗೆ, ಹೊಸಕೋಟೆ ಶಾಸಕ ಶರತ್‌ ಬಚ್ಚೇಗೌಡ, ಎರಡು ತಿಂಗಳ ಹಿಂದೆ ಕಾಂಗ್ರೆಸ್‌ಗೆ ಸೇರ್ಪಡೆಯಾದ ಮುಳಬಾಗಿಲಿನ ಶಾಸಕ ಎಚ್‌.ನಾಗೇಶ್‌ ಅವರನ್ನು ಮಹದೇವಪುರದಲ್ಲಿ, ವಿಧಾನ ಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್‌ ಅವರನ್ನು ಬಸವನಗುಡಿ ಕ್ಷೇತ್ರದಲ್ಲಿ ಟಿಕೆಟ್ ನೀಡಲು ನಿರ್ಧರಿಸದಲಾಯಿತು.

ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಅವರಿಗೆ ರಾಜಾಜಿನಗರ ಕ್ಷೇತ್ರದಿಂದ ಟಿಕೆಟ್ ನೀಡಲು ಕೆಲವು ನಾಯಕರಿಂದ ಒಲವು ವ್ಯಕ್ತಪಡಿಸಿದರು. ಆದರೆ ಅವರು ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ಪಡೆದ ಬಳಿಕ ಅಂತಿಮಗೊಳಿಸುವುದು ಉತ್ತಮ ಎಂದು ಹಲವು ಮುಖಂಡರು ಸಲಹೆ ನೀಡಿದರು.

ಚುನಾವಣಾ ಸಮಿತಿ ಸಭೆಯಲ್ಲಿ ರಾಹುಲ್‌ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌, ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ, ಶಾಸಕ ಜಿ.ಪರಮೇಶ್ವರ ಹಾಗೂ ಹಿರಿಯ ಮುಖಂಡ ಎಂ.ವೀರಪ್ಪ ಮೊಯಿಲಿ ಭಾಗವಹಿಸಿದ್ದರು.

70 ಕ್ಷೇತ್ರಗಳಿಗೆ ಎರಡು–ಮೂವರು ಸಂಭವನೀಯ ಅಭ್ಯರ್ಥಿಗಳ ಹೆಸರು ಗುರುತಿಸಿ ಪರಿಶೀಲನಾ ಸಮಿತಿ ಪಟ್ಟಿ ಮಾಡಿದೆ. ಈ ಪಟ್ಟಿಯ ಕುರಿತು ಸಹ ಸಭೆಯಲ್ಲಿ ಚರ್ಚಿಸಲಾಯಿತು. ಈ ಕ್ಷೇತ್ರಗಳ ಆಕಾಂಕ್ಷಿಗಳ ಜತೆಗೆ ರಾಜ್ಯ ನಾಯಕರು ಚರ್ಚೆ ನಡೆಸಿ ಯಾವುದೇ ಗೊಂದಲಕ್ಕೆ ಎಡೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೈಕಮಾಂಡ್‌ ಸೂಚಿಸಿದೆ.  ಸಭೆಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಕಾಂಗ್ರೆಸ್‌ನ ಮುಖಂಡರ ಜತೆಗೆ ಮತ್ತೊಂದು ಸುತ್ತಿನ ಸಭೆ ನಡೆಸಿದರು.

ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಭೆಯಲ್ಲಿ ಭಾಗವಹಿಸಿದ್ದರು.

ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಾವು ಏಕಾಂಗಿಯಾಗಿ ಚುನಾವಣೆ ಎದುರಿಸಲಿದ್ದು, ಅಧಿಕಾರಕ್ಕೇರಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...