Homeಕರ್ನಾಟಕ125 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮ: ಯುಗಾದಿ ಬಳಿಕ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ

125 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮ: ಯುಗಾದಿ ಬಳಿಕ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ

- Advertisement -
- Advertisement -

ಮುಂಬರುವ ಕರ್ನಾಟಕ ವಿಧಾನಸಭೆಯ ಚುನಾವಣೆಗೆ 125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಕೇಂದ್ರ ಚುನಾವಣಾ ಸಮಿತಿಯು ಶುಕ್ರವಾರ ಅಂತಿಮಗೊಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಈ ಸಭೆಯಲ್ಲಿ 71 ಹಾಲಿ ಶಾಸಕರಿಗೆ ಮತ್ತೆ ಟಿಕೆಟ್​ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಮೊದಲ ಪಟ್ಟಿಯನ್ನು ಯುಗಾದಿ ಹಬ್ಬದ ನಂತರ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಜ್ಯ ಘಟಕದ ನಾಯಕರ ಸಲಹೆ ಮೇರೆಗೆ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. ಹಾಲಿ ಶಾಸಕರ ಜತೆ ಕಳೆದ ಬಾರಿ ಕಡಿಮೆ ಅಂತದಲ್ಲಿ ಸೋತವರಿಗೂ ಟಿಕೆಟ್​ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.

ಹರಿಹರ (ಆರ್‌.ರಾಮಪ್ಪ), ಕುಂದಗೋಳ (ಕುಸುಮಾ ಶಿವಳ್ಳಿ) ಹಾಗೂ ಲಿಂಗಸುಗೂರು (ಡಿ.ಎಸ್‌.ಹೂಲಗೇರಿ) ಕ್ಷೇತ್ರಗಳಲ್ಲಿ ಹಾಲಿ ಶಾಸಕರನ್ನು ಕಣಕ್ಕೆ ಇಳಿಸಿದರೆ ಗೆಲುವು ಕಷ್ಟ ಎಂದು ಪಕ್ಷದ ಆಂತರಿಕ ಸಮೀಕ್ಷೆಗಳು ತಿಳಿಸಿವೆ. ಹಾಗಾಗಿ ಈ  ಕ್ಷೇತ್ರಗಳಲ್ಲಿ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಿ ಮುಂದಿನ ತೀರ್ಮಾನಕ್ಕೆ ಬರಲು  ಹೈಕಮಾಂಡ್ ನಿರ್ಧರಿಸಿದೆ.

ಪಾವಗಡ (ವೆಂಕಟರಮಣಯ್ಯ),  ಅಫಜಲಪುರ (ಎಂ.ವೈ.ಪಾಟೀಲ) ಕ್ಷೇತ್ರದ ಶಾಸಕರು ತಮ್ಮ ಪುತ್ರರಿಗೆ ಟಿಕೆಟ್‌ ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಹೈಕಮಾಂಡ್‌ ಒಪ್ಪಿದೆ. ಪುಲಕೇಶಿನಗರ (ಅಖಂಡ ಶ್ರೀನಿವಾಸಮೂರ್ತಿ) ಕ್ಷೇತ್ರದ ಕುರಿತು ಹಿರಿಯ ನಾಯಕರು ಇನ್ನಷ್ಟು ಚರ್ಚೆ ನಡೆಸಿ ಮುಂದಿನ ಹೆಜ್ಜೆ ಇಡುವುದು ಉತ್ತಮ ಎಂಬ ನಿರ್ಧಾರಕ್ಕೆ ಬರಲಾಯಿತು.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ: ಸಿ.ಟಿ ರವಿ-ವಿಜಯೇಂದ್ರ ನಡುವೆ ವಾಕ್ಸಮರ

ಪಟ್ಟಿ ಬಿಡುಗಡೆ ಬಗ್ಗೆ ಮಾತನಾಡಿದ ಹಿರಿಯ ಮುಖಂಡರೊಬ್ಬರು, ”ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಇದೇ 20ರಂದು ಬೆಳಗಾವಿಯಲ್ಲಿ ನಡೆಯುವ ‘ಯುವ ಕ್ರಾಂತಿ ರ‍್ಯಾಲಿ’ಗೆ ಬರಲಿದ್ದಾರೆ. ಆ ಬಳಿಕವೇ  ಮೊದಲ ಪಟ್ಟಿ ಪ್ರಕಟಿಸಬೇಕು ಎಂದು ಹಲವು ನಾಯಕರು ಸಲಹೆ ನೀಡಿದ್ದಾರೆ. ಇದಕ್ಕೆ ಹೈಕಮಾಂಡ್‌ ಕೂಡ ಬಹುತೇಕವಾಗಿ ಒಪ್ಪಿದೆ ಎಂದು ಹೇಳಿದರು.

ಈ ಬಾರಿ ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಅವರು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಅವರು ಸೂಚಿಸುವ ಮುಖಂಡರಿಗೆ ಟಿಕೆಟ್‌ ನೀಡಲು ತೀರ್ಮಾನಿಸಲಾಯಿತು. ಜತೆಗೆ, ಹೊಸಕೋಟೆ ಶಾಸಕ ಶರತ್‌ ಬಚ್ಚೇಗೌಡ, ಎರಡು ತಿಂಗಳ ಹಿಂದೆ ಕಾಂಗ್ರೆಸ್‌ಗೆ ಸೇರ್ಪಡೆಯಾದ ಮುಳಬಾಗಿಲಿನ ಶಾಸಕ ಎಚ್‌.ನಾಗೇಶ್‌ ಅವರನ್ನು ಮಹದೇವಪುರದಲ್ಲಿ, ವಿಧಾನ ಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್‌ ಅವರನ್ನು ಬಸವನಗುಡಿ ಕ್ಷೇತ್ರದಲ್ಲಿ ಟಿಕೆಟ್ ನೀಡಲು ನಿರ್ಧರಿಸದಲಾಯಿತು.

ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಅವರಿಗೆ ರಾಜಾಜಿನಗರ ಕ್ಷೇತ್ರದಿಂದ ಟಿಕೆಟ್ ನೀಡಲು ಕೆಲವು ನಾಯಕರಿಂದ ಒಲವು ವ್ಯಕ್ತಪಡಿಸಿದರು. ಆದರೆ ಅವರು ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ಪಡೆದ ಬಳಿಕ ಅಂತಿಮಗೊಳಿಸುವುದು ಉತ್ತಮ ಎಂದು ಹಲವು ಮುಖಂಡರು ಸಲಹೆ ನೀಡಿದರು.

ಚುನಾವಣಾ ಸಮಿತಿ ಸಭೆಯಲ್ಲಿ ರಾಹುಲ್‌ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌, ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ, ಶಾಸಕ ಜಿ.ಪರಮೇಶ್ವರ ಹಾಗೂ ಹಿರಿಯ ಮುಖಂಡ ಎಂ.ವೀರಪ್ಪ ಮೊಯಿಲಿ ಭಾಗವಹಿಸಿದ್ದರು.

70 ಕ್ಷೇತ್ರಗಳಿಗೆ ಎರಡು–ಮೂವರು ಸಂಭವನೀಯ ಅಭ್ಯರ್ಥಿಗಳ ಹೆಸರು ಗುರುತಿಸಿ ಪರಿಶೀಲನಾ ಸಮಿತಿ ಪಟ್ಟಿ ಮಾಡಿದೆ. ಈ ಪಟ್ಟಿಯ ಕುರಿತು ಸಹ ಸಭೆಯಲ್ಲಿ ಚರ್ಚಿಸಲಾಯಿತು. ಈ ಕ್ಷೇತ್ರಗಳ ಆಕಾಂಕ್ಷಿಗಳ ಜತೆಗೆ ರಾಜ್ಯ ನಾಯಕರು ಚರ್ಚೆ ನಡೆಸಿ ಯಾವುದೇ ಗೊಂದಲಕ್ಕೆ ಎಡೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೈಕಮಾಂಡ್‌ ಸೂಚಿಸಿದೆ.  ಸಭೆಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಕಾಂಗ್ರೆಸ್‌ನ ಮುಖಂಡರ ಜತೆಗೆ ಮತ್ತೊಂದು ಸುತ್ತಿನ ಸಭೆ ನಡೆಸಿದರು.

ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಭೆಯಲ್ಲಿ ಭಾಗವಹಿಸಿದ್ದರು.

ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಾವು ಏಕಾಂಗಿಯಾಗಿ ಚುನಾವಣೆ ಎದುರಿಸಲಿದ್ದು, ಅಧಿಕಾರಕ್ಕೇರಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...