Homeಮುಖಪುಟಹೈಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ನಾಗೇಂದ್ರ ರಾಮಚಂದ್ರ ನಾಯಕ್ ಹೆಸರು: ಕೊಲಿಜಿಯಂ ಪುನರುಚ್ಚಾರ

ಹೈಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ನಾಗೇಂದ್ರ ರಾಮಚಂದ್ರ ನಾಯಕ್ ಹೆಸರು: ಕೊಲಿಜಿಯಂ ಪುನರುಚ್ಚಾರ

- Advertisement -
- Advertisement -

ವಕೀಲರಾದ ನಾಗೇಂದ್ರ ರಾಮಚಂದ್ರ ನಾಯಕ್ ಅವರನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡುವ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಮಂಗಳವಾರ ಮೂರನೇ ಬಾರಿಗೆ ಪುನರುಚ್ಚರಿಸಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಜನವರಿ 10ರಂದು ನಡೆದ ಸುಪ್ರೀಂಕೋರ್ಟ್ ಕೊಲಿಜಿಯಂ ಸಭೆಯಲ್ಲಿ, ಕರ್ನಾಟಕ ಹೈಕೋರ್ಟ್‌ ವಕೀಲರಾದ ನಾಗೇಂದ್ರ ರಾಮಚಂದ್ರ ನಾಯ್ಕ್ ಅವರನ್ನು ನ್ಯಾಯಾಧೀಶರನ್ನಾಗಿ ನೇಮಿಸುವ ಹಿಂದಿನ ಶಿಫಾರಸನ್ನು ಪುನರುಚ್ಚರಿಸಲಾಗಿದೆ ಎಂದು ಸಿಜೆಐ ಡಿ.ವೈ.ಚಂದ್ರಚೂಡ್ ಹೇಳಿದ್ದಾರೆ.

ಮೊದಲು 2019 ರ ಅಕ್ಟೋಬರ್ 3 ರಂದು ನಾಯಕ್ ಅವರ ಹೆಸರನ್ನು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ ಮಾಡಲು ಕೊಲಿಜಿಯಂ ಶಿಫಾರಸು ಮಾಡಿತ್ತು. ಆ ನಂತರವೂ ಅದು ತನ್ನ ನಿರ್ಧಾರವನ್ನು ಎರಡು ಬಾರಿ- ಅಂದರೆ ಒಮ್ಮೆ ಮಾರ್ಚ್ 2, 2021 ರಂದು, ನಂತರ ಸೆಪ್ಟೆಂಬರ್ 1, 2021ರಂದು ತಿಳಿಸಿತ್ತು. ಸಂಪ್ರದಾಯದಂತೆ, ನಿರ್ಧಾರವನ್ನು ಪುನರುಚ್ಚರಿಸಿದರೆ ಕೊಲಿಜಿಯಂನ ಶಿಫಾರಸನ್ನು ಸರ್ಕಾರ ಒಪ್ಪಿಕೊಳ್ಳಬೇಕಾಗಿದೆ.

ಕೊಲಿಜಿಯಂ ತನ್ನ ಶಿಫಾರಸುಗಳನ್ನು ಸರ್ವಾನುಮತದಿಂದ ಪುನರುಚ್ಚರಿಸಿದರೆ ಸರ್ಕಾರವು ಮೂರರಿಂದ ನಾಲ್ಕು ವಾರಗಳಲ್ಲಿ ನ್ಯಾಯಾಧೀಶರನ್ನು ನೇಮಿಸಬೇಕು ಎಂದು ಏಪ್ರಿಲ್ 2021ರಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು.

ಈ ಮಧ್ಯೆ ಕೊಲಿಜಿಯಂ ಇತರ ಎಂಟು ಹೆಸರನ್ನು ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಶಿಫಾರಸು ಮಾಡಿದೆ. ಇವರಲ್ಲಿ ಏಳು ಜನ ಪ್ರಸ್ತುತ ನ್ಯಾಯಾಂಗದ ಅಧಿಕಾರಿಗಳಾಗಿದ್ದು, ಒಬ್ಬರು ವಕೀಲರಾಗಿದ್ದಾರೆ. ಅರಿಬಮ್ ಗುಣೇಶ್ವರ್ ಶರ್ಮಾ ಮತ್ತು ಗೊಲ್ಮೆಯ್ ಗೈಫುಲ್‌ಶಿಲ್ಲು ಕಬುಯಿ ಅವರನ್ನು ಮಣಿಪುರ ಹೈಕೋರ್ಟ್‌ಗೆ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ.

ಆಂಧ್ರಪ್ರದೇಶ ಹೈಕೋರ್ಟ್‌ಗೆ ಪಿ.ವೆಂಕಟ ಜ್ಯೋತಿರ್ಮಾಯಿ ಮತ್ತು ವಿ.ಗೋಪಾಲಕೃಷ್ಣ ರಾವ್ ಅವರ ಹೆಸರನ್ನು ಮುಂದಿಟ್ಟಿದೆ. ಮೃದುಲ್ ಕುಮಾರ್ ಕಲಿತಾ ಅವರನ್ನು ಗೌಹಾಟಿ ಹೈಕೋರ್ಟ್‌ಗೆ ನೇಮಿಸಲು ಕೊಲಿಜಿಯಂ ಶಿಫಾರಸು ಮಾಡಿದೆ. ಇನ್ನು ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಳ್ಳಲು ವಕೀಲರಾದ ನೀಲಾ ಕೇದಾರ್ ಗೋಖಲೆ ಅವರನ್ನು ನೇಮಿಸಲಾಯಿತು. ಕರ್ನಾಟಕ ಹೈಕೋರ್ಟ್‌ಗೆ ರಾಮಚಂದ್ರ ದತ್ತಾತ್ರೇ ಹುದ್ದಾರ್ ಮತ್ತು ವೆಂಕಟೇಶ್ ನಾಯ್ಕ್ ತಾವರ್ಯಾನಾಯ್ಕ್ ಅವರನ್ನು ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಸೂಚಿಸಿದೆ.

ಕಾನೂನು ಸಚಿವ ಕಿರಣ್ ರಿಜಿಜು ಅವರು ಕೊಲಿಜಿಯಂ ನೇಮಕಾತಿ ವ್ಯವಸ್ಥೆಯನ್ನು ಪದೇ ಪದೇ ಟೀಕಿಸಿದ್ದಾರೆ. ನ್ಯಾಯಾಂಗ ನೇಮಕಾತಿ ಪ್ರಕ್ರಿಯೆ ನಡೆಸಬೇಕಿದ್ದ ಕೇಂದ್ರ ಸರ್ಕಾರ ಮತ್ತು ನ್ಯಾಯಾಂಗವು ಪ್ರಸ್ತುತ ಜಗಳದಲ್ಲಿ ನಿರತವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...