Homeಮುಖಪುಟರಜನಿಯ ಹೊಸ ರಾಜಕೀಯ ಪಕ್ಷದ ಹೆಸರು ಮಕ್ಕಳ್ ಸೇವೈ ಕಚ್ಚಿ? ಚಿಹ್ನೆ ಆಟೋ ರಿಕ್ಷಾ?

ರಜನಿಯ ಹೊಸ ರಾಜಕೀಯ ಪಕ್ಷದ ಹೆಸರು ಮಕ್ಕಳ್ ಸೇವೈ ಕಚ್ಚಿ? ಚಿಹ್ನೆ ಆಟೋ ರಿಕ್ಷಾ?

ತನ್ನ ಹೆಸರನ್ನು ’ಮಕ್ಕಳ್ ಸೇವೈ ಕಚ್ಚಿ’ ಎಂದು ಬದಲಾಯಿಸಿಕೊಂಡ ಪಕ್ಷವು ಈ ಹಿಂದೆ 'ಆಲ್ ಇಂಡಿಯಾ ಮಕ್ಕಳ್ ಶಕ್ತಿ ಕಳಗಂ’ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿತ್ತು ಎಂದು ಚುನಾವಣಾ ಆಯೋಗದಲ್ಲಿ ನೋಂದಾಯಿಸಲಾದ ಮಾಹಿ ತಿಳಿಸಿದೆ.

- Advertisement -
- Advertisement -

ನಟ ರಜನಿ ಕಾಂತ್‌ ತಮ್ಮ‌ ಹೊಸ ಪಕ್ಷ ಪ್ರಾರಂಭ ದಿನಾಂಕ ಮತ್ತು ಇತರ ವಿವರಗಳನ್ನು ಈ ತಿಂಗಳ 31 ರಂದು ತಿಳಿಸಲಾಗುವುದು ಎಂದು ಘೋಷಿಸಿದ್ದ ಹಿನ್ನಲೆಯಲ್ಲಿ, ಈಗಾಗಲೇ ಚುನಾವಣಾ ಆಯೋಗದಲ್ಲಿ ನೋಂದಾಯಿಸಿರುವ ರಾಜಕೀಯ ಪಕ್ಷ ‘ಮಕ್ಕಳ್ ಸೇವೈ ಕಚ್ಚಿ’ ಎಂಬ ಹೆಸರನ್ನು ನಟ ರಜನಿಕಾಂತ್ ಬಳಸಲಿದ್ದಾರೆ ತಮಿಳುನಾಡು ಮಾಧ್ಯಮಗಳು ವರದಿ ಮಾಡಿದೆ.

ಆ ಈ ಬಗ್ಗೆ ರಜನಿಕಾಂತ್ ಅವರ ಪಕ್ಷ ಯಾವುದೇ ಮಾಹಿತಿಯನ್ನು ಖಚಿತಪಡಿಸಿಲ್ಲ. “ನಾಯಕತ್ವವು ಈ ಬಗ್ಗೆ ಅಧಿಕೃತ ಘೋಷಣೆ ಮಾಡುವವರೆಗೆ ಕಾಯಿರಿ” ಎಂದು ರಜನಿಕಾಂತ್‌ ಅಭಿಮಾನಿ ಸಂಘದ ಮುಖ್ಯಸ್ಥ ಸುಧಾಕರ್ ಹೇಳಿದ್ದಾರೆ.

ಇದನ್ನೂ ಓದಿ: ನಟ ರಜನಿಕಾಂತ್ ಅವರ ಬಹುನಿರೀಕ್ಷಿತ ಹೊಸ ಪಕ್ಷ ಜನವರಿಯಲ್ಲಿ ಆರಂಭ

ರಜನಿ ಅಭಿಮಾನಿಗಳ ಸಂಘ ಹೇಳಿಕೆ

“ಭಾರತದ ಚುನಾವಣಾ ಆಯೋಗ ಹೊರಡಿಸಿದ ಹೇಳಿಕೆಯನ್ನು ಉಲ್ಲೇಖಿಸಿ, ಕೆಲವು ಮಾಧ್ಯಮಗಳು ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ರಜಿನಿ ಅಭಿಮಾನಿಗಳ ಸಂಘಕ್ಕೆ ಸೇರಿದೆ ಎಂದು ಹೇಳಿದ್ದು, ನಾಯಕತ್ವದ ಅಧಿಕೃತ ಪ್ರಕಟಣೆ ಬರುವವರೆಗೂ ಕಾಯುವಂತೆ ಅಭಿಮಾನಿಗಳಲ್ಲಿ ಕೇಳಿಕೊಳ್ಳುತ್ತೇವೆ” ಎಂದು ಸಂಘದ ಮುಖ್ಯಸ್ಥ ವಿ.ಎಂ ಸುಧಾಕರ್ ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್ ನಲ್ಲಿ ತನ್ನ ಹೆಸರನ್ನು ’ಮಕ್ಕಳ್ ಸೇವೈ ಕಚ್ಚಿ’ ಎಂದು ಬದಲಾಯಿಸಿಕೊಂಡ ಪಕ್ಷವು ಈ ಹಿಂದೆ ‘ಆಲ್ ಇಂಡಿಯಾ ಮಕ್ಕಳ್ ಶಕ್ತಿ ಕಳಗಂ’ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿತ್ತು ಎಂದು ಚುನಾವಣಾ ಆಯೋಗದಲ್ಲಿ ನೋಂದಾಯಿಸಲಾದ ಮಾಹಿತಿಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ಸತ್ಯಗಳು

ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ಈ ಹಿನ್ನೆಲೆಯಲ್ಲಿ ಚುನಾವಣಾ ಸ್ಪರ್ಧೆಯಲ್ಲಿ ರಾಜಕೀಯ ಪಕ್ಷಗಳಿಗೆ ನೀಡಬೇಕಾದ ಚಿಹ್ನೆಗಳ ಬಗ್ಗೆ ಚುನಾವಣಾ ಆಯೋಗವು ಡಿಸೆಂಬರ್ 14 ರಂದು ಆದೇಶ ಹೊರಡಿಸಿದ್ದು, ಇದಕ್ಕೆ ಮಕ್ಕಳ್ ಸೇವೈ ಕಚ್ಚಿಗೆ ’ಆಟೋ’ ಚಿಹ್ನೆಯನ್ನು ನೀಡಿದೆ.

ಈ ಸಂಬಂಧಿತ ವಿಷಯದಲ್ಲಿ ‘ಎರಡು ಬೆರಳುಗಳ ಹಸ್ತ ಮುದ್ರೆ’ ಅಥವಾ ‘ಬಾಬಾ ಮುದ್ರೆ’ಯ ಚಿಹ್ನೆಯನ್ನು ಕೊಡಬೇಕು ಎಂದು ಪಕ್ಷವು ಕೇಳಿಕೊಂಡಿತ್ತು. ಆದರೆ ಹಸ್ತವು ಕಾಂಗ್ರೆಸ್ ಪಕ್ಷದ ಚುನಾವಣಾ ಚಿಹ್ನೆಯನ್ನು ಹೋಲುತ್ತದೆ ಎಂದು ಅದನ್ನು ನೀಡಲು ನಿರಾಕರಿಸಿದ ಚುನಾವಣಾ ಆಯೋಗವು ಆಟೋ ಚಿಹ್ನೆಯನ್ನು ನೀಡಿದೆ.

ಇದಲ್ಲದೆ, ಚುನಾವಣಾ ಆಯೋಗವು ಡಿಸೆಂಬರ್ 14 ರಂದು ಭಾರತದ ಇತರ ರಾಜಕೀಯ ಪಕ್ಷಗಳಿಗೆ ಚುನಾವಣಾ ಚಿಹ್ನೆಗಳನ್ನು ನಿಗದಿಪಡಿಸಿತ್ತು.

ಇದನ್ನೂ ಓದಿ: ಮುಖ್ಯಮಂತ್ರಿಯಾಗಲು ಎಂದಿಗೂ ಬಯಸಲಿಲ್ಲ: ಹೊಸ ಪಕ್ಷ ಘೋಷಿಸಿದ ರಜನಿಕಾಂತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...