Homeಮುಖಪುಟರಜನಿಯ ಹೊಸ ರಾಜಕೀಯ ಪಕ್ಷದ ಹೆಸರು ಮಕ್ಕಳ್ ಸೇವೈ ಕಚ್ಚಿ? ಚಿಹ್ನೆ ಆಟೋ ರಿಕ್ಷಾ?

ರಜನಿಯ ಹೊಸ ರಾಜಕೀಯ ಪಕ್ಷದ ಹೆಸರು ಮಕ್ಕಳ್ ಸೇವೈ ಕಚ್ಚಿ? ಚಿಹ್ನೆ ಆಟೋ ರಿಕ್ಷಾ?

ತನ್ನ ಹೆಸರನ್ನು ’ಮಕ್ಕಳ್ ಸೇವೈ ಕಚ್ಚಿ’ ಎಂದು ಬದಲಾಯಿಸಿಕೊಂಡ ಪಕ್ಷವು ಈ ಹಿಂದೆ 'ಆಲ್ ಇಂಡಿಯಾ ಮಕ್ಕಳ್ ಶಕ್ತಿ ಕಳಗಂ’ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿತ್ತು ಎಂದು ಚುನಾವಣಾ ಆಯೋಗದಲ್ಲಿ ನೋಂದಾಯಿಸಲಾದ ಮಾಹಿ ತಿಳಿಸಿದೆ.

- Advertisement -
- Advertisement -

ನಟ ರಜನಿ ಕಾಂತ್‌ ತಮ್ಮ‌ ಹೊಸ ಪಕ್ಷ ಪ್ರಾರಂಭ ದಿನಾಂಕ ಮತ್ತು ಇತರ ವಿವರಗಳನ್ನು ಈ ತಿಂಗಳ 31 ರಂದು ತಿಳಿಸಲಾಗುವುದು ಎಂದು ಘೋಷಿಸಿದ್ದ ಹಿನ್ನಲೆಯಲ್ಲಿ, ಈಗಾಗಲೇ ಚುನಾವಣಾ ಆಯೋಗದಲ್ಲಿ ನೋಂದಾಯಿಸಿರುವ ರಾಜಕೀಯ ಪಕ್ಷ ‘ಮಕ್ಕಳ್ ಸೇವೈ ಕಚ್ಚಿ’ ಎಂಬ ಹೆಸರನ್ನು ನಟ ರಜನಿಕಾಂತ್ ಬಳಸಲಿದ್ದಾರೆ ತಮಿಳುನಾಡು ಮಾಧ್ಯಮಗಳು ವರದಿ ಮಾಡಿದೆ.

ಆ ಈ ಬಗ್ಗೆ ರಜನಿಕಾಂತ್ ಅವರ ಪಕ್ಷ ಯಾವುದೇ ಮಾಹಿತಿಯನ್ನು ಖಚಿತಪಡಿಸಿಲ್ಲ. “ನಾಯಕತ್ವವು ಈ ಬಗ್ಗೆ ಅಧಿಕೃತ ಘೋಷಣೆ ಮಾಡುವವರೆಗೆ ಕಾಯಿರಿ” ಎಂದು ರಜನಿಕಾಂತ್‌ ಅಭಿಮಾನಿ ಸಂಘದ ಮುಖ್ಯಸ್ಥ ಸುಧಾಕರ್ ಹೇಳಿದ್ದಾರೆ.

ಇದನ್ನೂ ಓದಿ: ನಟ ರಜನಿಕಾಂತ್ ಅವರ ಬಹುನಿರೀಕ್ಷಿತ ಹೊಸ ಪಕ್ಷ ಜನವರಿಯಲ್ಲಿ ಆರಂಭ

ರಜನಿ ಅಭಿಮಾನಿಗಳ ಸಂಘ ಹೇಳಿಕೆ

“ಭಾರತದ ಚುನಾವಣಾ ಆಯೋಗ ಹೊರಡಿಸಿದ ಹೇಳಿಕೆಯನ್ನು ಉಲ್ಲೇಖಿಸಿ, ಕೆಲವು ಮಾಧ್ಯಮಗಳು ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ರಜಿನಿ ಅಭಿಮಾನಿಗಳ ಸಂಘಕ್ಕೆ ಸೇರಿದೆ ಎಂದು ಹೇಳಿದ್ದು, ನಾಯಕತ್ವದ ಅಧಿಕೃತ ಪ್ರಕಟಣೆ ಬರುವವರೆಗೂ ಕಾಯುವಂತೆ ಅಭಿಮಾನಿಗಳಲ್ಲಿ ಕೇಳಿಕೊಳ್ಳುತ್ತೇವೆ” ಎಂದು ಸಂಘದ ಮುಖ್ಯಸ್ಥ ವಿ.ಎಂ ಸುಧಾಕರ್ ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್ ನಲ್ಲಿ ತನ್ನ ಹೆಸರನ್ನು ’ಮಕ್ಕಳ್ ಸೇವೈ ಕಚ್ಚಿ’ ಎಂದು ಬದಲಾಯಿಸಿಕೊಂಡ ಪಕ್ಷವು ಈ ಹಿಂದೆ ‘ಆಲ್ ಇಂಡಿಯಾ ಮಕ್ಕಳ್ ಶಕ್ತಿ ಕಳಗಂ’ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿತ್ತು ಎಂದು ಚುನಾವಣಾ ಆಯೋಗದಲ್ಲಿ ನೋಂದಾಯಿಸಲಾದ ಮಾಹಿತಿಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ಸತ್ಯಗಳು

ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ಈ ಹಿನ್ನೆಲೆಯಲ್ಲಿ ಚುನಾವಣಾ ಸ್ಪರ್ಧೆಯಲ್ಲಿ ರಾಜಕೀಯ ಪಕ್ಷಗಳಿಗೆ ನೀಡಬೇಕಾದ ಚಿಹ್ನೆಗಳ ಬಗ್ಗೆ ಚುನಾವಣಾ ಆಯೋಗವು ಡಿಸೆಂಬರ್ 14 ರಂದು ಆದೇಶ ಹೊರಡಿಸಿದ್ದು, ಇದಕ್ಕೆ ಮಕ್ಕಳ್ ಸೇವೈ ಕಚ್ಚಿಗೆ ’ಆಟೋ’ ಚಿಹ್ನೆಯನ್ನು ನೀಡಿದೆ.

ಈ ಸಂಬಂಧಿತ ವಿಷಯದಲ್ಲಿ ‘ಎರಡು ಬೆರಳುಗಳ ಹಸ್ತ ಮುದ್ರೆ’ ಅಥವಾ ‘ಬಾಬಾ ಮುದ್ರೆ’ಯ ಚಿಹ್ನೆಯನ್ನು ಕೊಡಬೇಕು ಎಂದು ಪಕ್ಷವು ಕೇಳಿಕೊಂಡಿತ್ತು. ಆದರೆ ಹಸ್ತವು ಕಾಂಗ್ರೆಸ್ ಪಕ್ಷದ ಚುನಾವಣಾ ಚಿಹ್ನೆಯನ್ನು ಹೋಲುತ್ತದೆ ಎಂದು ಅದನ್ನು ನೀಡಲು ನಿರಾಕರಿಸಿದ ಚುನಾವಣಾ ಆಯೋಗವು ಆಟೋ ಚಿಹ್ನೆಯನ್ನು ನೀಡಿದೆ.

ಇದಲ್ಲದೆ, ಚುನಾವಣಾ ಆಯೋಗವು ಡಿಸೆಂಬರ್ 14 ರಂದು ಭಾರತದ ಇತರ ರಾಜಕೀಯ ಪಕ್ಷಗಳಿಗೆ ಚುನಾವಣಾ ಚಿಹ್ನೆಗಳನ್ನು ನಿಗದಿಪಡಿಸಿತ್ತು.

ಇದನ್ನೂ ಓದಿ: ಮುಖ್ಯಮಂತ್ರಿಯಾಗಲು ಎಂದಿಗೂ ಬಯಸಲಿಲ್ಲ: ಹೊಸ ಪಕ್ಷ ಘೋಷಿಸಿದ ರಜನಿಕಾಂತ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...