Homeಚಳವಳಿಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಇನ್ನಿಲ್ಲ

ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಇನ್ನಿಲ್ಲ

ಸಂವಿಧಾನದ ಆಶಯಗಳು, ಜಾತ್ಯಾತೀತತೆ, ಸೌಹಾರ್ದತೆಯ ಕುರಿತಾಗಿದ್ದ ಅವರ ನಿಲುವು ಮತ್ತು ಆಚರಣೆಗಳಿಗಾಗಿ ಅವರು ರಾಜ್ಯಾದ್ಯಂತ ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದರು.

- Advertisement -
- Advertisement -

ಪ್ರಗತಿಪರ ಚಿಂತಕ, ಹೋರಾಟಗಾರ, ನಮ್ಮ ಧ್ವನಿ ಬಳಗದ ಮುಖ್ಯಸ್ಥರಾದ ಮಹೇಂದ್ರ ಕುಮಾರ್‌ರವರಿಗೆ ಇಂದು ಮುಂಜಾನೆ ಹೃದಯಾಘಾತ ಸಂಭವಿಸಿದ್ದು ಕೊನೆಯುಸಿರೆಳೆದಿದ್ದಾರೆ.

ಹಠಾತ್‌ ಹೃದಯಾಘಾತ ಆದ ಕೂಡಲೇ ಅವರನ್ನು ಎಂ.ಎಸ್‌ ರಾಮಯ್ಯ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.

ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿನ ಅವರ ಮನೆಯಲ್ಲಿ ಸದ್ಯಕ್ಕೆ ಅವರ ಪಾರ್ಥೀವ ಶರೀರವನ್ನು ಇಡಲಾಗಿದ್ದು, ಇಂದು ಮಧ್ಯಾಹ್ನ ಅವರ ಸ್ವಗ್ರಾಮವಾದ ಕೊಪ್ಪಗೆ ಕೊಂಡೊಯ್ದು ಅಂತ್ಯ ಸಂಸ್ಕಾರ ನೇರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.

 

ಮಹೇಂದ್ರ ಕುಮಾರ್‌ರವರು ದಿಟ್ಟ ಹೋರಾಟಗಾರರಾಗಿದ್ದರು. ಯುವಕರಾಗಿದ್ದಲೇ ಹೋರಾಟದ ಮನೋಭಾವ ಬೆಳೆಸಿಕೊಂಡಿದ್ದ ಅವರು ಭಜರಂಗದಳ ಸಂಘಟನೆ ಸೇರಿದ್ದರಲ್ಲದೇ ಅದರ ರಾಜ್ಯಾಧ್ಯಕ್ಷರು ಸಹ ಆಗಿದ್ದರು. ಆ ನಂತರ ಆ ಸಂಘಟನೆಯೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಕಾರಣಕ್ಕೆ ಅದರಿಂದ ಹೊರಬಂದು ಪ್ರಗತಿಪರ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು.

ಜೀವಪರ ಚಳವಳಿಯೊಂದಿಗೆ ಬೆರೆತುಹೋದ ಅವರು ಈ ಮೊದಲು ಭಜರಂಗದಳ ಸಂಘಟನೆ ಸೇರಿ ಎಂತಹ ತಪ್ಪು ಮಾಡಿದ್ದೆ ಎಂಬುದನ್ನು ಅರಿತು, ಜನರ ಪರ ಕೆಲಸ ಮಾಡಲು ನಿರ್ಧರಿಸಿದ್ದರು.

ತಮ್ಮ ಮೂಲ ಸಂಘಟನೆಯ ಹುಳುಕುಗಳನ್ನು ವಿಮರ್ಶಿಸುತ್ತಲೇ, ಪ್ರಸ್ತುತ ಸಾಮಾಜಿಕ, ರಾಜಕೀಯ, ಆರ್ಥಿಕ ವಿಷಯಗಳ ಕುರಿತು, ಸಮಾಜದ ಆಗು ಹೋಗುಗಳಿಗೆ ಬಹಳ ಹತ್ತಿರದಿಂದ ಸ್ಪಂದಿಸುತ್ತಿದ್ದರು. ನಂತರ ನಮ್ಮ ಧ್ವನಿ ಬಳಗ ಎಂಬ ಸಮಾನ ಮನಸ್ಕರ ಸಂಘಟನೆಯೊಂದನ್ನು ಹುಟ್ಟುಹಾಕಿ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಶೋಷಿತರ ಜಾಗೃತಿಗಾಗಿ ಶ್ರಮಿಸುತ್ತಿದ್ದರು.

ಸಂವಿಧಾನದ ಆಶಯಗಳು, ಜಾತ್ಯಾತೀತತೆ, ಸೌಹಾರ್ದತೆಯ ಕುರಿತಾಗಿದ್ದ ಅವರ ನಿಲುವು ಮತ್ತು ಆಚರಣೆಗಳಿಗಾಗಿ ಅವರು ರಾಜ್ಯಾದ್ಯಂತ ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದರು.

ಡಿಜಿಟಲ್‌ ಮಾಧ್ಯಮ ವಿಭಾಗದಲ್ಲಿ ಮುಂದಿದ್ದ ಅವರು ಪ್ರತಿನಿತ್ಯ ತಮ್ಮ ಹರಿತ ಬರಹ ಮತ್ತು ವಿಡಿಯೋಗಳ ಮೂಲಕ ಲಕ್ಷಾಂತರ ಜನರನ್ನು ತಲುಪಿದ್ದರು. ಚಿಂತನಾರ್ಹ, ಸಕಾಲಿಕ ವಿಡಿಯೋಗಳಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದರು.

ನಿನ್ನೆಯವರೆಗೂ ಸಹ ಸಕ್ರಿಯರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಿಗಿಸಿಕೊಂಡಿದ್ದ ಮಹೇಂದ್ರ ಕುಮಾರ್‌ರವರು ರಾತ್ರಿ ಧೀಡಿರನೆ ಕಾಣಿಸಿಕೊಂಡ ಹೃದಯಾಘಾತದಿಂದಾಗಿ ಇಹಲೋಕ ತ್ಯಜಿಸಿದ್ದು ಅವರ ಅಪಾರ ಅಭಿಮಾನಿಗಳು, ಕುಟುಂಬ ಸದಸ್ಯರ, ಸಹ ಹೋರಾಟಗಾರರನ್ನು ಅಗಲಿದ್ದಾರೆ.

ಮಹೇಂದ್ರ ಕುಮಾರ್‌ರವರ ನಿಧಾನಕ್ಕೆ ರಾಜ್ಯದಾದ್ಯಂತ ಹಲವಾರು ಜನರು ಸಂತಾಪ ಸೂಚಿಸಿದ್ದು, ಧಿಡೀರ್‌ ಆಘಾತಕ್ಕೆ ಕಂಬನಿ ಮಿಡಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಮಸ್ಕಾರ, ನಿಜವಾದ ಸುದ್ದಿ ನಮ್ಮ ದೇಶದ ಜನಕ್ಕೆ ಏನಾದ್ರೂ ಈ ರೀತಿ ಮಾಧ್ಯಮಗಳಲ್ಲಿ ತಿಳಿಸಿದ್ದರೆ ನೇಮದಿಯಿ ಬದುಕು ಬಹುದು .

  2. ಮಹೆಂದರಕುಮಾರ ಅಣ್ಣಾ ಅವರು ಹೃದಯಾಘಾತ
    ವಾಗಿ ನಮ್ಮನ್ನು ಅಗಲಿದ ಸುದ್ದಿ ಕೇಳಿ ತುಂಬಾ
    ಧುಃಖ ವಾಯಿತು, ಸಂಕಷ್ಟದ ಸಮಯದಲ್ಲಿ
    ಅವರ ಅಗಲುವಿಕೆ ನಮ್ಮ ರಾಜ್ಯಕ್ಕೆ, ರಾಷ್ಟ್ರಕ್ಕೆ
    ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ
    ಶಾಂತಿ ನೀಡಲಿ ಹಾಗೂ ಅವರ ಕುಟಂಬದ
    ಎಲ್ಲಾ ಸದಸ್ಯರಿಗೆ ನೋವು ಸಹಿಸುವ ಶಕ್ತಿ
    ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ
    ನಿಮ್ಮ ವಿಚಾರ ಧಾರೆ ಸಮಾಜದಲ್ಲಿ ಬಿತ್ತುವ
    ಬೆಳೆಸುವ ಮೂಲಕ ನಿಮಗೆ ನನ್ನ ನುಡಿ ನಮನ
    ಸಲ್ಲಿಸುತ್ತೇನೆ.
    ಇಂತಿ ತಮ್ಮವನೆ ಆದ ಶರಣ ಶ್ರೀಶೈಲ ಜಿ ಮಸೂತಿ ಲಿಂಗಾಯತ ಬೆಂಗಳೂರು??????

  3. ಪ್ರಗತಿಪರ ಚಿಂತಕ, ಜಾತ್ಯಾತೀತ ನಿಲುವಿನ ಪ್ರಬಲ ಪ್ರತಿಪಾದಕ, ನೇರ ನಿಷ್ಟೂರ ಪತ್ರಕರ್ತ ಶ್ರೀ ಮಹೇಂದ್ರ ಕುಮಾರ್ ರವರ ಅಕಾಲಿಕ ನಿಧನ ರಾಜ್ಯದ ಪ್ರಗತಿಪರ ಹೋರಾಟಕ್ಕಾದ ತುಂಬಲಾರದ ನಷ್ಟ. ಭಗವಂತ ದಿವಂಗತರ ಕುಟುಂಬ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ತೀಸುತ್ತೇನೆ.

    ಹೊ.ನಾರಯಣ
    ಬೆಂಗಳೂರು.

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...