Homeಚಳವಳಿಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಇನ್ನಿಲ್ಲ

ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಇನ್ನಿಲ್ಲ

ಸಂವಿಧಾನದ ಆಶಯಗಳು, ಜಾತ್ಯಾತೀತತೆ, ಸೌಹಾರ್ದತೆಯ ಕುರಿತಾಗಿದ್ದ ಅವರ ನಿಲುವು ಮತ್ತು ಆಚರಣೆಗಳಿಗಾಗಿ ಅವರು ರಾಜ್ಯಾದ್ಯಂತ ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದರು.

- Advertisement -
- Advertisement -

ಪ್ರಗತಿಪರ ಚಿಂತಕ, ಹೋರಾಟಗಾರ, ನಮ್ಮ ಧ್ವನಿ ಬಳಗದ ಮುಖ್ಯಸ್ಥರಾದ ಮಹೇಂದ್ರ ಕುಮಾರ್‌ರವರಿಗೆ ಇಂದು ಮುಂಜಾನೆ ಹೃದಯಾಘಾತ ಸಂಭವಿಸಿದ್ದು ಕೊನೆಯುಸಿರೆಳೆದಿದ್ದಾರೆ.

ಹಠಾತ್‌ ಹೃದಯಾಘಾತ ಆದ ಕೂಡಲೇ ಅವರನ್ನು ಎಂ.ಎಸ್‌ ರಾಮಯ್ಯ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.

ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿನ ಅವರ ಮನೆಯಲ್ಲಿ ಸದ್ಯಕ್ಕೆ ಅವರ ಪಾರ್ಥೀವ ಶರೀರವನ್ನು ಇಡಲಾಗಿದ್ದು, ಇಂದು ಮಧ್ಯಾಹ್ನ ಅವರ ಸ್ವಗ್ರಾಮವಾದ ಕೊಪ್ಪಗೆ ಕೊಂಡೊಯ್ದು ಅಂತ್ಯ ಸಂಸ್ಕಾರ ನೇರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.

 

ಮಹೇಂದ್ರ ಕುಮಾರ್‌ರವರು ದಿಟ್ಟ ಹೋರಾಟಗಾರರಾಗಿದ್ದರು. ಯುವಕರಾಗಿದ್ದಲೇ ಹೋರಾಟದ ಮನೋಭಾವ ಬೆಳೆಸಿಕೊಂಡಿದ್ದ ಅವರು ಭಜರಂಗದಳ ಸಂಘಟನೆ ಸೇರಿದ್ದರಲ್ಲದೇ ಅದರ ರಾಜ್ಯಾಧ್ಯಕ್ಷರು ಸಹ ಆಗಿದ್ದರು. ಆ ನಂತರ ಆ ಸಂಘಟನೆಯೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಕಾರಣಕ್ಕೆ ಅದರಿಂದ ಹೊರಬಂದು ಪ್ರಗತಿಪರ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು.

ಜೀವಪರ ಚಳವಳಿಯೊಂದಿಗೆ ಬೆರೆತುಹೋದ ಅವರು ಈ ಮೊದಲು ಭಜರಂಗದಳ ಸಂಘಟನೆ ಸೇರಿ ಎಂತಹ ತಪ್ಪು ಮಾಡಿದ್ದೆ ಎಂಬುದನ್ನು ಅರಿತು, ಜನರ ಪರ ಕೆಲಸ ಮಾಡಲು ನಿರ್ಧರಿಸಿದ್ದರು.

ತಮ್ಮ ಮೂಲ ಸಂಘಟನೆಯ ಹುಳುಕುಗಳನ್ನು ವಿಮರ್ಶಿಸುತ್ತಲೇ, ಪ್ರಸ್ತುತ ಸಾಮಾಜಿಕ, ರಾಜಕೀಯ, ಆರ್ಥಿಕ ವಿಷಯಗಳ ಕುರಿತು, ಸಮಾಜದ ಆಗು ಹೋಗುಗಳಿಗೆ ಬಹಳ ಹತ್ತಿರದಿಂದ ಸ್ಪಂದಿಸುತ್ತಿದ್ದರು. ನಂತರ ನಮ್ಮ ಧ್ವನಿ ಬಳಗ ಎಂಬ ಸಮಾನ ಮನಸ್ಕರ ಸಂಘಟನೆಯೊಂದನ್ನು ಹುಟ್ಟುಹಾಕಿ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಶೋಷಿತರ ಜಾಗೃತಿಗಾಗಿ ಶ್ರಮಿಸುತ್ತಿದ್ದರು.

ಸಂವಿಧಾನದ ಆಶಯಗಳು, ಜಾತ್ಯಾತೀತತೆ, ಸೌಹಾರ್ದತೆಯ ಕುರಿತಾಗಿದ್ದ ಅವರ ನಿಲುವು ಮತ್ತು ಆಚರಣೆಗಳಿಗಾಗಿ ಅವರು ರಾಜ್ಯಾದ್ಯಂತ ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದರು.

ಡಿಜಿಟಲ್‌ ಮಾಧ್ಯಮ ವಿಭಾಗದಲ್ಲಿ ಮುಂದಿದ್ದ ಅವರು ಪ್ರತಿನಿತ್ಯ ತಮ್ಮ ಹರಿತ ಬರಹ ಮತ್ತು ವಿಡಿಯೋಗಳ ಮೂಲಕ ಲಕ್ಷಾಂತರ ಜನರನ್ನು ತಲುಪಿದ್ದರು. ಚಿಂತನಾರ್ಹ, ಸಕಾಲಿಕ ವಿಡಿಯೋಗಳಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದರು.

ನಿನ್ನೆಯವರೆಗೂ ಸಹ ಸಕ್ರಿಯರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಿಗಿಸಿಕೊಂಡಿದ್ದ ಮಹೇಂದ್ರ ಕುಮಾರ್‌ರವರು ರಾತ್ರಿ ಧೀಡಿರನೆ ಕಾಣಿಸಿಕೊಂಡ ಹೃದಯಾಘಾತದಿಂದಾಗಿ ಇಹಲೋಕ ತ್ಯಜಿಸಿದ್ದು ಅವರ ಅಪಾರ ಅಭಿಮಾನಿಗಳು, ಕುಟುಂಬ ಸದಸ್ಯರ, ಸಹ ಹೋರಾಟಗಾರರನ್ನು ಅಗಲಿದ್ದಾರೆ.

ಮಹೇಂದ್ರ ಕುಮಾರ್‌ರವರ ನಿಧಾನಕ್ಕೆ ರಾಜ್ಯದಾದ್ಯಂತ ಹಲವಾರು ಜನರು ಸಂತಾಪ ಸೂಚಿಸಿದ್ದು, ಧಿಡೀರ್‌ ಆಘಾತಕ್ಕೆ ಕಂಬನಿ ಮಿಡಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಮಸ್ಕಾರ, ನಿಜವಾದ ಸುದ್ದಿ ನಮ್ಮ ದೇಶದ ಜನಕ್ಕೆ ಏನಾದ್ರೂ ಈ ರೀತಿ ಮಾಧ್ಯಮಗಳಲ್ಲಿ ತಿಳಿಸಿದ್ದರೆ ನೇಮದಿಯಿ ಬದುಕು ಬಹುದು .

  2. ಮಹೆಂದರಕುಮಾರ ಅಣ್ಣಾ ಅವರು ಹೃದಯಾಘಾತ
    ವಾಗಿ ನಮ್ಮನ್ನು ಅಗಲಿದ ಸುದ್ದಿ ಕೇಳಿ ತುಂಬಾ
    ಧುಃಖ ವಾಯಿತು, ಸಂಕಷ್ಟದ ಸಮಯದಲ್ಲಿ
    ಅವರ ಅಗಲುವಿಕೆ ನಮ್ಮ ರಾಜ್ಯಕ್ಕೆ, ರಾಷ್ಟ್ರಕ್ಕೆ
    ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ
    ಶಾಂತಿ ನೀಡಲಿ ಹಾಗೂ ಅವರ ಕುಟಂಬದ
    ಎಲ್ಲಾ ಸದಸ್ಯರಿಗೆ ನೋವು ಸಹಿಸುವ ಶಕ್ತಿ
    ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ
    ನಿಮ್ಮ ವಿಚಾರ ಧಾರೆ ಸಮಾಜದಲ್ಲಿ ಬಿತ್ತುವ
    ಬೆಳೆಸುವ ಮೂಲಕ ನಿಮಗೆ ನನ್ನ ನುಡಿ ನಮನ
    ಸಲ್ಲಿಸುತ್ತೇನೆ.
    ಇಂತಿ ತಮ್ಮವನೆ ಆದ ಶರಣ ಶ್ರೀಶೈಲ ಜಿ ಮಸೂತಿ ಲಿಂಗಾಯತ ಬೆಂಗಳೂರು??????

  3. ಪ್ರಗತಿಪರ ಚಿಂತಕ, ಜಾತ್ಯಾತೀತ ನಿಲುವಿನ ಪ್ರಬಲ ಪ್ರತಿಪಾದಕ, ನೇರ ನಿಷ್ಟೂರ ಪತ್ರಕರ್ತ ಶ್ರೀ ಮಹೇಂದ್ರ ಕುಮಾರ್ ರವರ ಅಕಾಲಿಕ ನಿಧನ ರಾಜ್ಯದ ಪ್ರಗತಿಪರ ಹೋರಾಟಕ್ಕಾದ ತುಂಬಲಾರದ ನಷ್ಟ. ಭಗವಂತ ದಿವಂಗತರ ಕುಟುಂಬ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ತೀಸುತ್ತೇನೆ.

    ಹೊ.ನಾರಯಣ
    ಬೆಂಗಳೂರು.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...