Homeಚಳವಳಿಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಇನ್ನಿಲ್ಲ

ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಇನ್ನಿಲ್ಲ

ಸಂವಿಧಾನದ ಆಶಯಗಳು, ಜಾತ್ಯಾತೀತತೆ, ಸೌಹಾರ್ದತೆಯ ಕುರಿತಾಗಿದ್ದ ಅವರ ನಿಲುವು ಮತ್ತು ಆಚರಣೆಗಳಿಗಾಗಿ ಅವರು ರಾಜ್ಯಾದ್ಯಂತ ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದರು.

- Advertisement -
- Advertisement -

ಪ್ರಗತಿಪರ ಚಿಂತಕ, ಹೋರಾಟಗಾರ, ನಮ್ಮ ಧ್ವನಿ ಬಳಗದ ಮುಖ್ಯಸ್ಥರಾದ ಮಹೇಂದ್ರ ಕುಮಾರ್‌ರವರಿಗೆ ಇಂದು ಮುಂಜಾನೆ ಹೃದಯಾಘಾತ ಸಂಭವಿಸಿದ್ದು ಕೊನೆಯುಸಿರೆಳೆದಿದ್ದಾರೆ.

ಹಠಾತ್‌ ಹೃದಯಾಘಾತ ಆದ ಕೂಡಲೇ ಅವರನ್ನು ಎಂ.ಎಸ್‌ ರಾಮಯ್ಯ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.

ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿನ ಅವರ ಮನೆಯಲ್ಲಿ ಸದ್ಯಕ್ಕೆ ಅವರ ಪಾರ್ಥೀವ ಶರೀರವನ್ನು ಇಡಲಾಗಿದ್ದು, ಇಂದು ಮಧ್ಯಾಹ್ನ ಅವರ ಸ್ವಗ್ರಾಮವಾದ ಕೊಪ್ಪಗೆ ಕೊಂಡೊಯ್ದು ಅಂತ್ಯ ಸಂಸ್ಕಾರ ನೇರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.

 

ಮಹೇಂದ್ರ ಕುಮಾರ್‌ರವರು ದಿಟ್ಟ ಹೋರಾಟಗಾರರಾಗಿದ್ದರು. ಯುವಕರಾಗಿದ್ದಲೇ ಹೋರಾಟದ ಮನೋಭಾವ ಬೆಳೆಸಿಕೊಂಡಿದ್ದ ಅವರು ಭಜರಂಗದಳ ಸಂಘಟನೆ ಸೇರಿದ್ದರಲ್ಲದೇ ಅದರ ರಾಜ್ಯಾಧ್ಯಕ್ಷರು ಸಹ ಆಗಿದ್ದರು. ಆ ನಂತರ ಆ ಸಂಘಟನೆಯೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಕಾರಣಕ್ಕೆ ಅದರಿಂದ ಹೊರಬಂದು ಪ್ರಗತಿಪರ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು.

ಜೀವಪರ ಚಳವಳಿಯೊಂದಿಗೆ ಬೆರೆತುಹೋದ ಅವರು ಈ ಮೊದಲು ಭಜರಂಗದಳ ಸಂಘಟನೆ ಸೇರಿ ಎಂತಹ ತಪ್ಪು ಮಾಡಿದ್ದೆ ಎಂಬುದನ್ನು ಅರಿತು, ಜನರ ಪರ ಕೆಲಸ ಮಾಡಲು ನಿರ್ಧರಿಸಿದ್ದರು.

ತಮ್ಮ ಮೂಲ ಸಂಘಟನೆಯ ಹುಳುಕುಗಳನ್ನು ವಿಮರ್ಶಿಸುತ್ತಲೇ, ಪ್ರಸ್ತುತ ಸಾಮಾಜಿಕ, ರಾಜಕೀಯ, ಆರ್ಥಿಕ ವಿಷಯಗಳ ಕುರಿತು, ಸಮಾಜದ ಆಗು ಹೋಗುಗಳಿಗೆ ಬಹಳ ಹತ್ತಿರದಿಂದ ಸ್ಪಂದಿಸುತ್ತಿದ್ದರು. ನಂತರ ನಮ್ಮ ಧ್ವನಿ ಬಳಗ ಎಂಬ ಸಮಾನ ಮನಸ್ಕರ ಸಂಘಟನೆಯೊಂದನ್ನು ಹುಟ್ಟುಹಾಕಿ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಶೋಷಿತರ ಜಾಗೃತಿಗಾಗಿ ಶ್ರಮಿಸುತ್ತಿದ್ದರು.

ಸಂವಿಧಾನದ ಆಶಯಗಳು, ಜಾತ್ಯಾತೀತತೆ, ಸೌಹಾರ್ದತೆಯ ಕುರಿತಾಗಿದ್ದ ಅವರ ನಿಲುವು ಮತ್ತು ಆಚರಣೆಗಳಿಗಾಗಿ ಅವರು ರಾಜ್ಯಾದ್ಯಂತ ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದರು.

ಡಿಜಿಟಲ್‌ ಮಾಧ್ಯಮ ವಿಭಾಗದಲ್ಲಿ ಮುಂದಿದ್ದ ಅವರು ಪ್ರತಿನಿತ್ಯ ತಮ್ಮ ಹರಿತ ಬರಹ ಮತ್ತು ವಿಡಿಯೋಗಳ ಮೂಲಕ ಲಕ್ಷಾಂತರ ಜನರನ್ನು ತಲುಪಿದ್ದರು. ಚಿಂತನಾರ್ಹ, ಸಕಾಲಿಕ ವಿಡಿಯೋಗಳಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದರು.

ನಿನ್ನೆಯವರೆಗೂ ಸಹ ಸಕ್ರಿಯರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಿಗಿಸಿಕೊಂಡಿದ್ದ ಮಹೇಂದ್ರ ಕುಮಾರ್‌ರವರು ರಾತ್ರಿ ಧೀಡಿರನೆ ಕಾಣಿಸಿಕೊಂಡ ಹೃದಯಾಘಾತದಿಂದಾಗಿ ಇಹಲೋಕ ತ್ಯಜಿಸಿದ್ದು ಅವರ ಅಪಾರ ಅಭಿಮಾನಿಗಳು, ಕುಟುಂಬ ಸದಸ್ಯರ, ಸಹ ಹೋರಾಟಗಾರರನ್ನು ಅಗಲಿದ್ದಾರೆ.

ಮಹೇಂದ್ರ ಕುಮಾರ್‌ರವರ ನಿಧಾನಕ್ಕೆ ರಾಜ್ಯದಾದ್ಯಂತ ಹಲವಾರು ಜನರು ಸಂತಾಪ ಸೂಚಿಸಿದ್ದು, ಧಿಡೀರ್‌ ಆಘಾತಕ್ಕೆ ಕಂಬನಿ ಮಿಡಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಮಸ್ಕಾರ, ನಿಜವಾದ ಸುದ್ದಿ ನಮ್ಮ ದೇಶದ ಜನಕ್ಕೆ ಏನಾದ್ರೂ ಈ ರೀತಿ ಮಾಧ್ಯಮಗಳಲ್ಲಿ ತಿಳಿಸಿದ್ದರೆ ನೇಮದಿಯಿ ಬದುಕು ಬಹುದು .

  2. ಮಹೆಂದರಕುಮಾರ ಅಣ್ಣಾ ಅವರು ಹೃದಯಾಘಾತ
    ವಾಗಿ ನಮ್ಮನ್ನು ಅಗಲಿದ ಸುದ್ದಿ ಕೇಳಿ ತುಂಬಾ
    ಧುಃಖ ವಾಯಿತು, ಸಂಕಷ್ಟದ ಸಮಯದಲ್ಲಿ
    ಅವರ ಅಗಲುವಿಕೆ ನಮ್ಮ ರಾಜ್ಯಕ್ಕೆ, ರಾಷ್ಟ್ರಕ್ಕೆ
    ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ
    ಶಾಂತಿ ನೀಡಲಿ ಹಾಗೂ ಅವರ ಕುಟಂಬದ
    ಎಲ್ಲಾ ಸದಸ್ಯರಿಗೆ ನೋವು ಸಹಿಸುವ ಶಕ್ತಿ
    ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ
    ನಿಮ್ಮ ವಿಚಾರ ಧಾರೆ ಸಮಾಜದಲ್ಲಿ ಬಿತ್ತುವ
    ಬೆಳೆಸುವ ಮೂಲಕ ನಿಮಗೆ ನನ್ನ ನುಡಿ ನಮನ
    ಸಲ್ಲಿಸುತ್ತೇನೆ.
    ಇಂತಿ ತಮ್ಮವನೆ ಆದ ಶರಣ ಶ್ರೀಶೈಲ ಜಿ ಮಸೂತಿ ಲಿಂಗಾಯತ ಬೆಂಗಳೂರು??????

  3. ಪ್ರಗತಿಪರ ಚಿಂತಕ, ಜಾತ್ಯಾತೀತ ನಿಲುವಿನ ಪ್ರಬಲ ಪ್ರತಿಪಾದಕ, ನೇರ ನಿಷ್ಟೂರ ಪತ್ರಕರ್ತ ಶ್ರೀ ಮಹೇಂದ್ರ ಕುಮಾರ್ ರವರ ಅಕಾಲಿಕ ನಿಧನ ರಾಜ್ಯದ ಪ್ರಗತಿಪರ ಹೋರಾಟಕ್ಕಾದ ತುಂಬಲಾರದ ನಷ್ಟ. ಭಗವಂತ ದಿವಂಗತರ ಕುಟುಂಬ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ತೀಸುತ್ತೇನೆ.

    ಹೊ.ನಾರಯಣ
    ಬೆಂಗಳೂರು.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...