Homeಚಳವಳಿಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಇನ್ನಿಲ್ಲ

ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಇನ್ನಿಲ್ಲ

ಸಂವಿಧಾನದ ಆಶಯಗಳು, ಜಾತ್ಯಾತೀತತೆ, ಸೌಹಾರ್ದತೆಯ ಕುರಿತಾಗಿದ್ದ ಅವರ ನಿಲುವು ಮತ್ತು ಆಚರಣೆಗಳಿಗಾಗಿ ಅವರು ರಾಜ್ಯಾದ್ಯಂತ ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದರು.

- Advertisement -
- Advertisement -

ಪ್ರಗತಿಪರ ಚಿಂತಕ, ಹೋರಾಟಗಾರ, ನಮ್ಮ ಧ್ವನಿ ಬಳಗದ ಮುಖ್ಯಸ್ಥರಾದ ಮಹೇಂದ್ರ ಕುಮಾರ್‌ರವರಿಗೆ ಇಂದು ಮುಂಜಾನೆ ಹೃದಯಾಘಾತ ಸಂಭವಿಸಿದ್ದು ಕೊನೆಯುಸಿರೆಳೆದಿದ್ದಾರೆ.

ಹಠಾತ್‌ ಹೃದಯಾಘಾತ ಆದ ಕೂಡಲೇ ಅವರನ್ನು ಎಂ.ಎಸ್‌ ರಾಮಯ್ಯ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.

ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿನ ಅವರ ಮನೆಯಲ್ಲಿ ಸದ್ಯಕ್ಕೆ ಅವರ ಪಾರ್ಥೀವ ಶರೀರವನ್ನು ಇಡಲಾಗಿದ್ದು, ಇಂದು ಮಧ್ಯಾಹ್ನ ಅವರ ಸ್ವಗ್ರಾಮವಾದ ಕೊಪ್ಪಗೆ ಕೊಂಡೊಯ್ದು ಅಂತ್ಯ ಸಂಸ್ಕಾರ ನೇರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.

 

ಮಹೇಂದ್ರ ಕುಮಾರ್‌ರವರು ದಿಟ್ಟ ಹೋರಾಟಗಾರರಾಗಿದ್ದರು. ಯುವಕರಾಗಿದ್ದಲೇ ಹೋರಾಟದ ಮನೋಭಾವ ಬೆಳೆಸಿಕೊಂಡಿದ್ದ ಅವರು ಭಜರಂಗದಳ ಸಂಘಟನೆ ಸೇರಿದ್ದರಲ್ಲದೇ ಅದರ ರಾಜ್ಯಾಧ್ಯಕ್ಷರು ಸಹ ಆಗಿದ್ದರು. ಆ ನಂತರ ಆ ಸಂಘಟನೆಯೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಕಾರಣಕ್ಕೆ ಅದರಿಂದ ಹೊರಬಂದು ಪ್ರಗತಿಪರ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು.

ಜೀವಪರ ಚಳವಳಿಯೊಂದಿಗೆ ಬೆರೆತುಹೋದ ಅವರು ಈ ಮೊದಲು ಭಜರಂಗದಳ ಸಂಘಟನೆ ಸೇರಿ ಎಂತಹ ತಪ್ಪು ಮಾಡಿದ್ದೆ ಎಂಬುದನ್ನು ಅರಿತು, ಜನರ ಪರ ಕೆಲಸ ಮಾಡಲು ನಿರ್ಧರಿಸಿದ್ದರು.

ತಮ್ಮ ಮೂಲ ಸಂಘಟನೆಯ ಹುಳುಕುಗಳನ್ನು ವಿಮರ್ಶಿಸುತ್ತಲೇ, ಪ್ರಸ್ತುತ ಸಾಮಾಜಿಕ, ರಾಜಕೀಯ, ಆರ್ಥಿಕ ವಿಷಯಗಳ ಕುರಿತು, ಸಮಾಜದ ಆಗು ಹೋಗುಗಳಿಗೆ ಬಹಳ ಹತ್ತಿರದಿಂದ ಸ್ಪಂದಿಸುತ್ತಿದ್ದರು. ನಂತರ ನಮ್ಮ ಧ್ವನಿ ಬಳಗ ಎಂಬ ಸಮಾನ ಮನಸ್ಕರ ಸಂಘಟನೆಯೊಂದನ್ನು ಹುಟ್ಟುಹಾಕಿ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಶೋಷಿತರ ಜಾಗೃತಿಗಾಗಿ ಶ್ರಮಿಸುತ್ತಿದ್ದರು.

ಸಂವಿಧಾನದ ಆಶಯಗಳು, ಜಾತ್ಯಾತೀತತೆ, ಸೌಹಾರ್ದತೆಯ ಕುರಿತಾಗಿದ್ದ ಅವರ ನಿಲುವು ಮತ್ತು ಆಚರಣೆಗಳಿಗಾಗಿ ಅವರು ರಾಜ್ಯಾದ್ಯಂತ ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದರು.

ಡಿಜಿಟಲ್‌ ಮಾಧ್ಯಮ ವಿಭಾಗದಲ್ಲಿ ಮುಂದಿದ್ದ ಅವರು ಪ್ರತಿನಿತ್ಯ ತಮ್ಮ ಹರಿತ ಬರಹ ಮತ್ತು ವಿಡಿಯೋಗಳ ಮೂಲಕ ಲಕ್ಷಾಂತರ ಜನರನ್ನು ತಲುಪಿದ್ದರು. ಚಿಂತನಾರ್ಹ, ಸಕಾಲಿಕ ವಿಡಿಯೋಗಳಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದರು.

ನಿನ್ನೆಯವರೆಗೂ ಸಹ ಸಕ್ರಿಯರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಿಗಿಸಿಕೊಂಡಿದ್ದ ಮಹೇಂದ್ರ ಕುಮಾರ್‌ರವರು ರಾತ್ರಿ ಧೀಡಿರನೆ ಕಾಣಿಸಿಕೊಂಡ ಹೃದಯಾಘಾತದಿಂದಾಗಿ ಇಹಲೋಕ ತ್ಯಜಿಸಿದ್ದು ಅವರ ಅಪಾರ ಅಭಿಮಾನಿಗಳು, ಕುಟುಂಬ ಸದಸ್ಯರ, ಸಹ ಹೋರಾಟಗಾರರನ್ನು ಅಗಲಿದ್ದಾರೆ.

ಮಹೇಂದ್ರ ಕುಮಾರ್‌ರವರ ನಿಧಾನಕ್ಕೆ ರಾಜ್ಯದಾದ್ಯಂತ ಹಲವಾರು ಜನರು ಸಂತಾಪ ಸೂಚಿಸಿದ್ದು, ಧಿಡೀರ್‌ ಆಘಾತಕ್ಕೆ ಕಂಬನಿ ಮಿಡಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಮಸ್ಕಾರ, ನಿಜವಾದ ಸುದ್ದಿ ನಮ್ಮ ದೇಶದ ಜನಕ್ಕೆ ಏನಾದ್ರೂ ಈ ರೀತಿ ಮಾಧ್ಯಮಗಳಲ್ಲಿ ತಿಳಿಸಿದ್ದರೆ ನೇಮದಿಯಿ ಬದುಕು ಬಹುದು .

  2. ಮಹೆಂದರಕುಮಾರ ಅಣ್ಣಾ ಅವರು ಹೃದಯಾಘಾತ
    ವಾಗಿ ನಮ್ಮನ್ನು ಅಗಲಿದ ಸುದ್ದಿ ಕೇಳಿ ತುಂಬಾ
    ಧುಃಖ ವಾಯಿತು, ಸಂಕಷ್ಟದ ಸಮಯದಲ್ಲಿ
    ಅವರ ಅಗಲುವಿಕೆ ನಮ್ಮ ರಾಜ್ಯಕ್ಕೆ, ರಾಷ್ಟ್ರಕ್ಕೆ
    ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ
    ಶಾಂತಿ ನೀಡಲಿ ಹಾಗೂ ಅವರ ಕುಟಂಬದ
    ಎಲ್ಲಾ ಸದಸ್ಯರಿಗೆ ನೋವು ಸಹಿಸುವ ಶಕ್ತಿ
    ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ
    ನಿಮ್ಮ ವಿಚಾರ ಧಾರೆ ಸಮಾಜದಲ್ಲಿ ಬಿತ್ತುವ
    ಬೆಳೆಸುವ ಮೂಲಕ ನಿಮಗೆ ನನ್ನ ನುಡಿ ನಮನ
    ಸಲ್ಲಿಸುತ್ತೇನೆ.
    ಇಂತಿ ತಮ್ಮವನೆ ಆದ ಶರಣ ಶ್ರೀಶೈಲ ಜಿ ಮಸೂತಿ ಲಿಂಗಾಯತ ಬೆಂಗಳೂರು??????

  3. ಪ್ರಗತಿಪರ ಚಿಂತಕ, ಜಾತ್ಯಾತೀತ ನಿಲುವಿನ ಪ್ರಬಲ ಪ್ರತಿಪಾದಕ, ನೇರ ನಿಷ್ಟೂರ ಪತ್ರಕರ್ತ ಶ್ರೀ ಮಹೇಂದ್ರ ಕುಮಾರ್ ರವರ ಅಕಾಲಿಕ ನಿಧನ ರಾಜ್ಯದ ಪ್ರಗತಿಪರ ಹೋರಾಟಕ್ಕಾದ ತುಂಬಲಾರದ ನಷ್ಟ. ಭಗವಂತ ದಿವಂಗತರ ಕುಟುಂಬ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ತೀಸುತ್ತೇನೆ.

    ಹೊ.ನಾರಯಣ
    ಬೆಂಗಳೂರು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...