Homeಚಳವಳಿಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಇನ್ನಿಲ್ಲ

ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಇನ್ನಿಲ್ಲ

ಸಂವಿಧಾನದ ಆಶಯಗಳು, ಜಾತ್ಯಾತೀತತೆ, ಸೌಹಾರ್ದತೆಯ ಕುರಿತಾಗಿದ್ದ ಅವರ ನಿಲುವು ಮತ್ತು ಆಚರಣೆಗಳಿಗಾಗಿ ಅವರು ರಾಜ್ಯಾದ್ಯಂತ ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದರು.

- Advertisement -
- Advertisement -

ಪ್ರಗತಿಪರ ಚಿಂತಕ, ಹೋರಾಟಗಾರ, ನಮ್ಮ ಧ್ವನಿ ಬಳಗದ ಮುಖ್ಯಸ್ಥರಾದ ಮಹೇಂದ್ರ ಕುಮಾರ್‌ರವರಿಗೆ ಇಂದು ಮುಂಜಾನೆ ಹೃದಯಾಘಾತ ಸಂಭವಿಸಿದ್ದು ಕೊನೆಯುಸಿರೆಳೆದಿದ್ದಾರೆ.

ಹಠಾತ್‌ ಹೃದಯಾಘಾತ ಆದ ಕೂಡಲೇ ಅವರನ್ನು ಎಂ.ಎಸ್‌ ರಾಮಯ್ಯ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.

ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿನ ಅವರ ಮನೆಯಲ್ಲಿ ಸದ್ಯಕ್ಕೆ ಅವರ ಪಾರ್ಥೀವ ಶರೀರವನ್ನು ಇಡಲಾಗಿದ್ದು, ಇಂದು ಮಧ್ಯಾಹ್ನ ಅವರ ಸ್ವಗ್ರಾಮವಾದ ಕೊಪ್ಪಗೆ ಕೊಂಡೊಯ್ದು ಅಂತ್ಯ ಸಂಸ್ಕಾರ ನೇರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.

 

ಮಹೇಂದ್ರ ಕುಮಾರ್‌ರವರು ದಿಟ್ಟ ಹೋರಾಟಗಾರರಾಗಿದ್ದರು. ಯುವಕರಾಗಿದ್ದಲೇ ಹೋರಾಟದ ಮನೋಭಾವ ಬೆಳೆಸಿಕೊಂಡಿದ್ದ ಅವರು ಭಜರಂಗದಳ ಸಂಘಟನೆ ಸೇರಿದ್ದರಲ್ಲದೇ ಅದರ ರಾಜ್ಯಾಧ್ಯಕ್ಷರು ಸಹ ಆಗಿದ್ದರು. ಆ ನಂತರ ಆ ಸಂಘಟನೆಯೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಕಾರಣಕ್ಕೆ ಅದರಿಂದ ಹೊರಬಂದು ಪ್ರಗತಿಪರ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು.

ಜೀವಪರ ಚಳವಳಿಯೊಂದಿಗೆ ಬೆರೆತುಹೋದ ಅವರು ಈ ಮೊದಲು ಭಜರಂಗದಳ ಸಂಘಟನೆ ಸೇರಿ ಎಂತಹ ತಪ್ಪು ಮಾಡಿದ್ದೆ ಎಂಬುದನ್ನು ಅರಿತು, ಜನರ ಪರ ಕೆಲಸ ಮಾಡಲು ನಿರ್ಧರಿಸಿದ್ದರು.

ತಮ್ಮ ಮೂಲ ಸಂಘಟನೆಯ ಹುಳುಕುಗಳನ್ನು ವಿಮರ್ಶಿಸುತ್ತಲೇ, ಪ್ರಸ್ತುತ ಸಾಮಾಜಿಕ, ರಾಜಕೀಯ, ಆರ್ಥಿಕ ವಿಷಯಗಳ ಕುರಿತು, ಸಮಾಜದ ಆಗು ಹೋಗುಗಳಿಗೆ ಬಹಳ ಹತ್ತಿರದಿಂದ ಸ್ಪಂದಿಸುತ್ತಿದ್ದರು. ನಂತರ ನಮ್ಮ ಧ್ವನಿ ಬಳಗ ಎಂಬ ಸಮಾನ ಮನಸ್ಕರ ಸಂಘಟನೆಯೊಂದನ್ನು ಹುಟ್ಟುಹಾಕಿ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಶೋಷಿತರ ಜಾಗೃತಿಗಾಗಿ ಶ್ರಮಿಸುತ್ತಿದ್ದರು.

ಸಂವಿಧಾನದ ಆಶಯಗಳು, ಜಾತ್ಯಾತೀತತೆ, ಸೌಹಾರ್ದತೆಯ ಕುರಿತಾಗಿದ್ದ ಅವರ ನಿಲುವು ಮತ್ತು ಆಚರಣೆಗಳಿಗಾಗಿ ಅವರು ರಾಜ್ಯಾದ್ಯಂತ ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದರು.

ಡಿಜಿಟಲ್‌ ಮಾಧ್ಯಮ ವಿಭಾಗದಲ್ಲಿ ಮುಂದಿದ್ದ ಅವರು ಪ್ರತಿನಿತ್ಯ ತಮ್ಮ ಹರಿತ ಬರಹ ಮತ್ತು ವಿಡಿಯೋಗಳ ಮೂಲಕ ಲಕ್ಷಾಂತರ ಜನರನ್ನು ತಲುಪಿದ್ದರು. ಚಿಂತನಾರ್ಹ, ಸಕಾಲಿಕ ವಿಡಿಯೋಗಳಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದರು.

ನಿನ್ನೆಯವರೆಗೂ ಸಹ ಸಕ್ರಿಯರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಿಗಿಸಿಕೊಂಡಿದ್ದ ಮಹೇಂದ್ರ ಕುಮಾರ್‌ರವರು ರಾತ್ರಿ ಧೀಡಿರನೆ ಕಾಣಿಸಿಕೊಂಡ ಹೃದಯಾಘಾತದಿಂದಾಗಿ ಇಹಲೋಕ ತ್ಯಜಿಸಿದ್ದು ಅವರ ಅಪಾರ ಅಭಿಮಾನಿಗಳು, ಕುಟುಂಬ ಸದಸ್ಯರ, ಸಹ ಹೋರಾಟಗಾರರನ್ನು ಅಗಲಿದ್ದಾರೆ.

ಮಹೇಂದ್ರ ಕುಮಾರ್‌ರವರ ನಿಧಾನಕ್ಕೆ ರಾಜ್ಯದಾದ್ಯಂತ ಹಲವಾರು ಜನರು ಸಂತಾಪ ಸೂಚಿಸಿದ್ದು, ಧಿಡೀರ್‌ ಆಘಾತಕ್ಕೆ ಕಂಬನಿ ಮಿಡಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಮಸ್ಕಾರ, ನಿಜವಾದ ಸುದ್ದಿ ನಮ್ಮ ದೇಶದ ಜನಕ್ಕೆ ಏನಾದ್ರೂ ಈ ರೀತಿ ಮಾಧ್ಯಮಗಳಲ್ಲಿ ತಿಳಿಸಿದ್ದರೆ ನೇಮದಿಯಿ ಬದುಕು ಬಹುದು .

  2. ಮಹೆಂದರಕುಮಾರ ಅಣ್ಣಾ ಅವರು ಹೃದಯಾಘಾತ
    ವಾಗಿ ನಮ್ಮನ್ನು ಅಗಲಿದ ಸುದ್ದಿ ಕೇಳಿ ತುಂಬಾ
    ಧುಃಖ ವಾಯಿತು, ಸಂಕಷ್ಟದ ಸಮಯದಲ್ಲಿ
    ಅವರ ಅಗಲುವಿಕೆ ನಮ್ಮ ರಾಜ್ಯಕ್ಕೆ, ರಾಷ್ಟ್ರಕ್ಕೆ
    ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ
    ಶಾಂತಿ ನೀಡಲಿ ಹಾಗೂ ಅವರ ಕುಟಂಬದ
    ಎಲ್ಲಾ ಸದಸ್ಯರಿಗೆ ನೋವು ಸಹಿಸುವ ಶಕ್ತಿ
    ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ
    ನಿಮ್ಮ ವಿಚಾರ ಧಾರೆ ಸಮಾಜದಲ್ಲಿ ಬಿತ್ತುವ
    ಬೆಳೆಸುವ ಮೂಲಕ ನಿಮಗೆ ನನ್ನ ನುಡಿ ನಮನ
    ಸಲ್ಲಿಸುತ್ತೇನೆ.
    ಇಂತಿ ತಮ್ಮವನೆ ಆದ ಶರಣ ಶ್ರೀಶೈಲ ಜಿ ಮಸೂತಿ ಲಿಂಗಾಯತ ಬೆಂಗಳೂರು??????

  3. ಪ್ರಗತಿಪರ ಚಿಂತಕ, ಜಾತ್ಯಾತೀತ ನಿಲುವಿನ ಪ್ರಬಲ ಪ್ರತಿಪಾದಕ, ನೇರ ನಿಷ್ಟೂರ ಪತ್ರಕರ್ತ ಶ್ರೀ ಮಹೇಂದ್ರ ಕುಮಾರ್ ರವರ ಅಕಾಲಿಕ ನಿಧನ ರಾಜ್ಯದ ಪ್ರಗತಿಪರ ಹೋರಾಟಕ್ಕಾದ ತುಂಬಲಾರದ ನಷ್ಟ. ಭಗವಂತ ದಿವಂಗತರ ಕುಟುಂಬ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ತೀಸುತ್ತೇನೆ.

    ಹೊ.ನಾರಯಣ
    ಬೆಂಗಳೂರು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...