Homeಕರ್ನಾಟಕದರ ಹೆಚ್ಚಳ : 'ನಮ್ಮ ಮೆಟ್ರೋ' ಪ್ರಯಾಣಿಕರ ಸಂಖ್ಯೆ ಕುಸಿತ

ದರ ಹೆಚ್ಚಳ : ‘ನಮ್ಮ ಮೆಟ್ರೋ’ ಪ್ರಯಾಣಿಕರ ಸಂಖ್ಯೆ ಕುಸಿತ

- Advertisement -
- Advertisement -

ನಮ್ಮ ಮೆಟ್ರೋ ಪ್ರಯಾಣ ದರ, ವಿಶೇಷವಾಗಿ 6 ​​ರಿಂದ 25 ಕಿ.ಮೀ. ನಡುವಿನ ದೂರಕ್ಕೆ, ‘ಅಸಹಜ’ ಅಥವಾ ಭಾರೀ ಏರಿಕೆ ಕಂಡು ಬಂದಿರುವುದು ‘ತಾಂತ್ರಿಕ ದೋಷಗಳಿಂದ’ ಆಗಿರಬಹುದು. ಈ ಬಗ್ಗೆ ಇನ್ನೂ ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ ಅಥವಾ ಸರಿಯಾದ ಮಾಹಿತಿ ದೊರೆತಿಲ್ಲ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಫೆಬ್ರವರಿ 9ರಂದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ರಿಯಾಯಿತಿ ರಹಿತ ದರಗಳನ್ನು ಸರಾಸರಿ ಶೇ. 51.55 ರಷ್ಟು ಮತ್ತು ರಿಯಾಯಿತಿ ಸಹಿತ ದರಗಳನ್ನು ಶೇ. 45-46 ರಷ್ಟು ಹೆಚ್ಚಿಸಿದೆ. ಜೂನ್ 2017ರ ನಂತರ ಇದೇ ಮೊದಲ ಬಾರಿಗೆ ದರ ಹೆಚ್ಚಳವಾಗಿದೆ.

ಆದಾಗ್ಯೂ, ಹಲವಾರು ಮಾರ್ಗಗಳಲ್ಲಿ ಪ್ರಯಾಣ ದರಗಳು ಶೇಕಡ 100ರಷ್ಟು ಏರಿಕೆಯಾಗಿವೆ ಎಂದು ಅನೇಕ ಪ್ರಯಾಣಿಕರು ದೂರಿದ್ದಾರೆ. ನಿಯಮಿತ ಪ್ರಯಾಣಿಕರು, ವಿಶೇಷವಾಗಿ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಉದಾಹರಣೆಗೆ : ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿ ನಡುವಿನ 6.7 ಕಿ.ಮೀ ಪ್ರಯಾಣ ದರ ಪ್ರಸ್ತುತ 40 ರೂಪಾಯಿ ಆಗಿದ್ದು, ಹಿಂದಿನ ದರಕ್ಕಿಂತ 20 ರೂಪಾಯಿ ಹೆಚ್ಚಾಗಿದೆ. ಇತರ ಹಲವು ಮಾರ್ಗಗಳಲ್ಲಿ ಇದೇ ರೀತಿಯ ಹೆಚ್ಚಳ ಕಂಡು ಬಂದಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ವಿವರಿಸಿದೆ.

ಭಾರೀ ದರ ಹೆಚ್ಚಳದ ಸಂಬಂಧ ಪ್ರಯಾಣಿಕರಿಗೆ ತಕ್ಷಣಕ್ಕೆ ಯಾವುದೇ ಪರಿಹಾರ ಸಿಗುವ ಸಾಧ್ಯತೆ ಕಡಿಮೆ. ಬಿಎಂಆರ್‌ಸಿಎಲ್ ಈ ಸಮಸ್ಯೆಯನ್ನು ಇನ್ನೂ ಪರಿಶೀಲಿಸುತ್ತಿರುವುದಾಗಿ ಹೇಳಿದೆ.

ದರ ಏರಿಕೆ ಮಾತ್ರವಲ್ಲದೆ, ಸ್ಮಾರ್ಟ್ ಕಾರ್ಡ್‌ಗಳಲ್ಲಿನ ಕನಿಷ್ಠ ಉಳಿತಾಯ ಮಿತಿಯನ್ನು 50 ರೂಪಾಯಿಯಿಂದ 90 ರೂಪಾಯಿಗೆ ಏರಿಸಿರುವ ಬಗ್ಗೆಯೂ ಟೀಕೆಗಳು ವ್ಯಕ್ತವಾಗಿವೆ.

ಒಂದು ಬಾರಿಯ ಪ್ರಯಾಣಕ್ಕೆ ಬೇಕಾಗುವ ಗರಿಷ್ಠ ದರದಷ್ಟು ಮೊತ್ತ ಕಾರ್ಡ್‌ನಲ್ಲಿ ಇರಬೇಕು ಎಂದು ನಿಗಮದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಯಾಣಿಕರೊಬ್ಬರು, ಈ ಹಿಂದೆ ಗರಿಷ್ಠ ಮೊತ್ತ 60 ರೂಪಾಯಿ ಇದ್ದಾಗ ಕಾರ್ಡ್‌ನ ಉಳಿತಾಯ ಮಿತಿ 50 ರೂಪಾಯಿ ಇದ್ದದ್ದು ಏಕೆ? ಎಂಬುವುದಾಗಿ ಪ್ರಶ್ನಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ತಿಳಿಸಿದೆ.

ಕನಿಷ್ಠ ಮೊತ್ತವನ್ನು ಕಡಿಮೆ ಮಾಡುವ ಸಾಧ್ಯತೆಯನ್ನು ಬಿಎಂಆರ್‌ಸಿಎಲ್ ಅಧಿಕಾರಿ ತಳ್ಳಿಹಾಕಿದ್ದಾರೆ. ಅದೇ ರೀತಿ, ಕ್ಯೂಆರ್ ಕೋಡ್ ಟಿಕೆಟ್‌ಗಳ ಮೇಲಿನ ಶೇಕಡ 5 ರಷ್ಟು ರಿಯಾಯಿತಿಯನ್ನು ಕೂಡ ಮರುಸ್ಥಾಪಿಸಲಾಗುವುದಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ಪ್ರಯಾಣ ದರ ಹೆಚ್ಚಳವು ಪ್ರಯಾಣಿಕರ ಮೇಲೆ ಪರಿಣಾಮ ಬೀರುತ್ತಿರುವಂತೆ ತೋರುತ್ತಿದೆ ಎಂದು ವರದಿ ಹೇಳಿದೆ.

ದರ ಏರಿಕೆ ಜಾರಿಗೆ ಬಂದ ನಂತರದ ವಾರದ ಮೊದಲ ದಿನವಾದ ಸೋಮವಾರ, ಒಟ್ಟು ಮೆಟ್ರೋ ಪ್ರಯಾಣಿಕರ ಸಂಖ್ಯೆ 8,28,149 ರಷ್ಟಿತ್ತು. ಈ ವರ್ಷದ ನಾಲ್ಕು ಸೋಮವಾರಗಳಲ್ಲಿ (ಜನವರಿ 13, ಮಕರ ಸಂಕ್ರಾಂತಿಯ ಮುನ್ನಾದಿನ ಹೊರತುಪಡಿಸಿ) ದಾಖಲಾದ 8.8 ಲಕ್ಷ ಪ್ರಯಾಣಿಕರ ಸಂಖ್ಯೆಗಿಂತ ಇದು ಶೇಕಡಾ 6 ರಷ್ಟು ಕಡಿಮೆಯಾಗಿದೆ.

ಪ್ರಯಾಣ ದರ ಏರಿಕೆಯ ನಂತರ ದಿನಕ್ಕೆ ಹೆಚ್ಚುವರಿಯಾಗಿ 55-60 ಲಕ್ಷ ರೂಪಾಯಿ ಗಳಿಸುವ ಅಂದಾಜು ಮಾಡಿರುವ ಬಿಎಂಆರ್‌ಸಿಎಲ್, ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 1-2 ರಷ್ಟು ಇಳಿಕೆ ನಿರೀಕ್ಷಿಸಿದೆ.

2025ರ ನಂತರ ಪ್ರತಿ ಸೋಮವಾರ ಪ್ರಯಾಣಿಸಿದವರ ಸಂಖ್ಯೆ

ಜನವರಿ 6: 8,61,593

ಜನವರಿ 13: 7,84,539 (ಸಂಕ್ರಾಂತಿ ರಜಾ ದಿನ)

ಜನವರಿ 20: 8,79,537

ಜನವರಿ 27: 9,09,756

ಫೆಬ್ರವರಿ 3: 8,70,147

ಫೆಬ್ರವರಿ 10: 8,28,149

ಫೆಬ್ರವರಿ 11: 7,78,774 (ಮಂಗಳವಾರ)

ಸಾರ್ವಜನಿಕ ಸಾರಿಗೆ ವ್ಯವಸ್ಥೆ ’ಜನಸ್ನೇಹಿ’ಯಾಗುವುದು ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...