Homeಕರ್ನಾಟಕದರ ಹೆಚ್ಚಳ : 'ನಮ್ಮ ಮೆಟ್ರೋ' ಪ್ರಯಾಣಿಕರ ಸಂಖ್ಯೆ ಕುಸಿತ

ದರ ಹೆಚ್ಚಳ : ‘ನಮ್ಮ ಮೆಟ್ರೋ’ ಪ್ರಯಾಣಿಕರ ಸಂಖ್ಯೆ ಕುಸಿತ

- Advertisement -
- Advertisement -

ನಮ್ಮ ಮೆಟ್ರೋ ಪ್ರಯಾಣ ದರ, ವಿಶೇಷವಾಗಿ 6 ​​ರಿಂದ 25 ಕಿ.ಮೀ. ನಡುವಿನ ದೂರಕ್ಕೆ, ‘ಅಸಹಜ’ ಅಥವಾ ಭಾರೀ ಏರಿಕೆ ಕಂಡು ಬಂದಿರುವುದು ‘ತಾಂತ್ರಿಕ ದೋಷಗಳಿಂದ’ ಆಗಿರಬಹುದು. ಈ ಬಗ್ಗೆ ಇನ್ನೂ ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ ಅಥವಾ ಸರಿಯಾದ ಮಾಹಿತಿ ದೊರೆತಿಲ್ಲ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಫೆಬ್ರವರಿ 9ರಂದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ರಿಯಾಯಿತಿ ರಹಿತ ದರಗಳನ್ನು ಸರಾಸರಿ ಶೇ. 51.55 ರಷ್ಟು ಮತ್ತು ರಿಯಾಯಿತಿ ಸಹಿತ ದರಗಳನ್ನು ಶೇ. 45-46 ರಷ್ಟು ಹೆಚ್ಚಿಸಿದೆ. ಜೂನ್ 2017ರ ನಂತರ ಇದೇ ಮೊದಲ ಬಾರಿಗೆ ದರ ಹೆಚ್ಚಳವಾಗಿದೆ.

ಆದಾಗ್ಯೂ, ಹಲವಾರು ಮಾರ್ಗಗಳಲ್ಲಿ ಪ್ರಯಾಣ ದರಗಳು ಶೇಕಡ 100ರಷ್ಟು ಏರಿಕೆಯಾಗಿವೆ ಎಂದು ಅನೇಕ ಪ್ರಯಾಣಿಕರು ದೂರಿದ್ದಾರೆ. ನಿಯಮಿತ ಪ್ರಯಾಣಿಕರು, ವಿಶೇಷವಾಗಿ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಉದಾಹರಣೆಗೆ : ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿ ನಡುವಿನ 6.7 ಕಿ.ಮೀ ಪ್ರಯಾಣ ದರ ಪ್ರಸ್ತುತ 40 ರೂಪಾಯಿ ಆಗಿದ್ದು, ಹಿಂದಿನ ದರಕ್ಕಿಂತ 20 ರೂಪಾಯಿ ಹೆಚ್ಚಾಗಿದೆ. ಇತರ ಹಲವು ಮಾರ್ಗಗಳಲ್ಲಿ ಇದೇ ರೀತಿಯ ಹೆಚ್ಚಳ ಕಂಡು ಬಂದಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ವಿವರಿಸಿದೆ.

ಭಾರೀ ದರ ಹೆಚ್ಚಳದ ಸಂಬಂಧ ಪ್ರಯಾಣಿಕರಿಗೆ ತಕ್ಷಣಕ್ಕೆ ಯಾವುದೇ ಪರಿಹಾರ ಸಿಗುವ ಸಾಧ್ಯತೆ ಕಡಿಮೆ. ಬಿಎಂಆರ್‌ಸಿಎಲ್ ಈ ಸಮಸ್ಯೆಯನ್ನು ಇನ್ನೂ ಪರಿಶೀಲಿಸುತ್ತಿರುವುದಾಗಿ ಹೇಳಿದೆ.

ದರ ಏರಿಕೆ ಮಾತ್ರವಲ್ಲದೆ, ಸ್ಮಾರ್ಟ್ ಕಾರ್ಡ್‌ಗಳಲ್ಲಿನ ಕನಿಷ್ಠ ಉಳಿತಾಯ ಮಿತಿಯನ್ನು 50 ರೂಪಾಯಿಯಿಂದ 90 ರೂಪಾಯಿಗೆ ಏರಿಸಿರುವ ಬಗ್ಗೆಯೂ ಟೀಕೆಗಳು ವ್ಯಕ್ತವಾಗಿವೆ.

ಒಂದು ಬಾರಿಯ ಪ್ರಯಾಣಕ್ಕೆ ಬೇಕಾಗುವ ಗರಿಷ್ಠ ದರದಷ್ಟು ಮೊತ್ತ ಕಾರ್ಡ್‌ನಲ್ಲಿ ಇರಬೇಕು ಎಂದು ನಿಗಮದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಯಾಣಿಕರೊಬ್ಬರು, ಈ ಹಿಂದೆ ಗರಿಷ್ಠ ಮೊತ್ತ 60 ರೂಪಾಯಿ ಇದ್ದಾಗ ಕಾರ್ಡ್‌ನ ಉಳಿತಾಯ ಮಿತಿ 50 ರೂಪಾಯಿ ಇದ್ದದ್ದು ಏಕೆ? ಎಂಬುವುದಾಗಿ ಪ್ರಶ್ನಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ತಿಳಿಸಿದೆ.

ಕನಿಷ್ಠ ಮೊತ್ತವನ್ನು ಕಡಿಮೆ ಮಾಡುವ ಸಾಧ್ಯತೆಯನ್ನು ಬಿಎಂಆರ್‌ಸಿಎಲ್ ಅಧಿಕಾರಿ ತಳ್ಳಿಹಾಕಿದ್ದಾರೆ. ಅದೇ ರೀತಿ, ಕ್ಯೂಆರ್ ಕೋಡ್ ಟಿಕೆಟ್‌ಗಳ ಮೇಲಿನ ಶೇಕಡ 5 ರಷ್ಟು ರಿಯಾಯಿತಿಯನ್ನು ಕೂಡ ಮರುಸ್ಥಾಪಿಸಲಾಗುವುದಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ಪ್ರಯಾಣ ದರ ಹೆಚ್ಚಳವು ಪ್ರಯಾಣಿಕರ ಮೇಲೆ ಪರಿಣಾಮ ಬೀರುತ್ತಿರುವಂತೆ ತೋರುತ್ತಿದೆ ಎಂದು ವರದಿ ಹೇಳಿದೆ.

ದರ ಏರಿಕೆ ಜಾರಿಗೆ ಬಂದ ನಂತರದ ವಾರದ ಮೊದಲ ದಿನವಾದ ಸೋಮವಾರ, ಒಟ್ಟು ಮೆಟ್ರೋ ಪ್ರಯಾಣಿಕರ ಸಂಖ್ಯೆ 8,28,149 ರಷ್ಟಿತ್ತು. ಈ ವರ್ಷದ ನಾಲ್ಕು ಸೋಮವಾರಗಳಲ್ಲಿ (ಜನವರಿ 13, ಮಕರ ಸಂಕ್ರಾಂತಿಯ ಮುನ್ನಾದಿನ ಹೊರತುಪಡಿಸಿ) ದಾಖಲಾದ 8.8 ಲಕ್ಷ ಪ್ರಯಾಣಿಕರ ಸಂಖ್ಯೆಗಿಂತ ಇದು ಶೇಕಡಾ 6 ರಷ್ಟು ಕಡಿಮೆಯಾಗಿದೆ.

ಪ್ರಯಾಣ ದರ ಏರಿಕೆಯ ನಂತರ ದಿನಕ್ಕೆ ಹೆಚ್ಚುವರಿಯಾಗಿ 55-60 ಲಕ್ಷ ರೂಪಾಯಿ ಗಳಿಸುವ ಅಂದಾಜು ಮಾಡಿರುವ ಬಿಎಂಆರ್‌ಸಿಎಲ್, ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 1-2 ರಷ್ಟು ಇಳಿಕೆ ನಿರೀಕ್ಷಿಸಿದೆ.

2025ರ ನಂತರ ಪ್ರತಿ ಸೋಮವಾರ ಪ್ರಯಾಣಿಸಿದವರ ಸಂಖ್ಯೆ

ಜನವರಿ 6: 8,61,593

ಜನವರಿ 13: 7,84,539 (ಸಂಕ್ರಾಂತಿ ರಜಾ ದಿನ)

ಜನವರಿ 20: 8,79,537

ಜನವರಿ 27: 9,09,756

ಫೆಬ್ರವರಿ 3: 8,70,147

ಫೆಬ್ರವರಿ 10: 8,28,149

ಫೆಬ್ರವರಿ 11: 7,78,774 (ಮಂಗಳವಾರ)

ಸಾರ್ವಜನಿಕ ಸಾರಿಗೆ ವ್ಯವಸ್ಥೆ ’ಜನಸ್ನೇಹಿ’ಯಾಗುವುದು ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...