Homeಕರ್ನಾಟಕದರ ಹೆಚ್ಚಳ : 'ನಮ್ಮ ಮೆಟ್ರೋ' ಪ್ರಯಾಣಿಕರ ಸಂಖ್ಯೆ ಕುಸಿತ

ದರ ಹೆಚ್ಚಳ : ‘ನಮ್ಮ ಮೆಟ್ರೋ’ ಪ್ರಯಾಣಿಕರ ಸಂಖ್ಯೆ ಕುಸಿತ

- Advertisement -
- Advertisement -

ನಮ್ಮ ಮೆಟ್ರೋ ಪ್ರಯಾಣ ದರ, ವಿಶೇಷವಾಗಿ 6 ​​ರಿಂದ 25 ಕಿ.ಮೀ. ನಡುವಿನ ದೂರಕ್ಕೆ, ‘ಅಸಹಜ’ ಅಥವಾ ಭಾರೀ ಏರಿಕೆ ಕಂಡು ಬಂದಿರುವುದು ‘ತಾಂತ್ರಿಕ ದೋಷಗಳಿಂದ’ ಆಗಿರಬಹುದು. ಈ ಬಗ್ಗೆ ಇನ್ನೂ ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ ಅಥವಾ ಸರಿಯಾದ ಮಾಹಿತಿ ದೊರೆತಿಲ್ಲ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಫೆಬ್ರವರಿ 9ರಂದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ರಿಯಾಯಿತಿ ರಹಿತ ದರಗಳನ್ನು ಸರಾಸರಿ ಶೇ. 51.55 ರಷ್ಟು ಮತ್ತು ರಿಯಾಯಿತಿ ಸಹಿತ ದರಗಳನ್ನು ಶೇ. 45-46 ರಷ್ಟು ಹೆಚ್ಚಿಸಿದೆ. ಜೂನ್ 2017ರ ನಂತರ ಇದೇ ಮೊದಲ ಬಾರಿಗೆ ದರ ಹೆಚ್ಚಳವಾಗಿದೆ.

ಆದಾಗ್ಯೂ, ಹಲವಾರು ಮಾರ್ಗಗಳಲ್ಲಿ ಪ್ರಯಾಣ ದರಗಳು ಶೇಕಡ 100ರಷ್ಟು ಏರಿಕೆಯಾಗಿವೆ ಎಂದು ಅನೇಕ ಪ್ರಯಾಣಿಕರು ದೂರಿದ್ದಾರೆ. ನಿಯಮಿತ ಪ್ರಯಾಣಿಕರು, ವಿಶೇಷವಾಗಿ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಉದಾಹರಣೆಗೆ : ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿ ನಡುವಿನ 6.7 ಕಿ.ಮೀ ಪ್ರಯಾಣ ದರ ಪ್ರಸ್ತುತ 40 ರೂಪಾಯಿ ಆಗಿದ್ದು, ಹಿಂದಿನ ದರಕ್ಕಿಂತ 20 ರೂಪಾಯಿ ಹೆಚ್ಚಾಗಿದೆ. ಇತರ ಹಲವು ಮಾರ್ಗಗಳಲ್ಲಿ ಇದೇ ರೀತಿಯ ಹೆಚ್ಚಳ ಕಂಡು ಬಂದಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ವಿವರಿಸಿದೆ.

ಭಾರೀ ದರ ಹೆಚ್ಚಳದ ಸಂಬಂಧ ಪ್ರಯಾಣಿಕರಿಗೆ ತಕ್ಷಣಕ್ಕೆ ಯಾವುದೇ ಪರಿಹಾರ ಸಿಗುವ ಸಾಧ್ಯತೆ ಕಡಿಮೆ. ಬಿಎಂಆರ್‌ಸಿಎಲ್ ಈ ಸಮಸ್ಯೆಯನ್ನು ಇನ್ನೂ ಪರಿಶೀಲಿಸುತ್ತಿರುವುದಾಗಿ ಹೇಳಿದೆ.

ದರ ಏರಿಕೆ ಮಾತ್ರವಲ್ಲದೆ, ಸ್ಮಾರ್ಟ್ ಕಾರ್ಡ್‌ಗಳಲ್ಲಿನ ಕನಿಷ್ಠ ಉಳಿತಾಯ ಮಿತಿಯನ್ನು 50 ರೂಪಾಯಿಯಿಂದ 90 ರೂಪಾಯಿಗೆ ಏರಿಸಿರುವ ಬಗ್ಗೆಯೂ ಟೀಕೆಗಳು ವ್ಯಕ್ತವಾಗಿವೆ.

ಒಂದು ಬಾರಿಯ ಪ್ರಯಾಣಕ್ಕೆ ಬೇಕಾಗುವ ಗರಿಷ್ಠ ದರದಷ್ಟು ಮೊತ್ತ ಕಾರ್ಡ್‌ನಲ್ಲಿ ಇರಬೇಕು ಎಂದು ನಿಗಮದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಯಾಣಿಕರೊಬ್ಬರು, ಈ ಹಿಂದೆ ಗರಿಷ್ಠ ಮೊತ್ತ 60 ರೂಪಾಯಿ ಇದ್ದಾಗ ಕಾರ್ಡ್‌ನ ಉಳಿತಾಯ ಮಿತಿ 50 ರೂಪಾಯಿ ಇದ್ದದ್ದು ಏಕೆ? ಎಂಬುವುದಾಗಿ ಪ್ರಶ್ನಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ತಿಳಿಸಿದೆ.

ಕನಿಷ್ಠ ಮೊತ್ತವನ್ನು ಕಡಿಮೆ ಮಾಡುವ ಸಾಧ್ಯತೆಯನ್ನು ಬಿಎಂಆರ್‌ಸಿಎಲ್ ಅಧಿಕಾರಿ ತಳ್ಳಿಹಾಕಿದ್ದಾರೆ. ಅದೇ ರೀತಿ, ಕ್ಯೂಆರ್ ಕೋಡ್ ಟಿಕೆಟ್‌ಗಳ ಮೇಲಿನ ಶೇಕಡ 5 ರಷ್ಟು ರಿಯಾಯಿತಿಯನ್ನು ಕೂಡ ಮರುಸ್ಥಾಪಿಸಲಾಗುವುದಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ಪ್ರಯಾಣ ದರ ಹೆಚ್ಚಳವು ಪ್ರಯಾಣಿಕರ ಮೇಲೆ ಪರಿಣಾಮ ಬೀರುತ್ತಿರುವಂತೆ ತೋರುತ್ತಿದೆ ಎಂದು ವರದಿ ಹೇಳಿದೆ.

ದರ ಏರಿಕೆ ಜಾರಿಗೆ ಬಂದ ನಂತರದ ವಾರದ ಮೊದಲ ದಿನವಾದ ಸೋಮವಾರ, ಒಟ್ಟು ಮೆಟ್ರೋ ಪ್ರಯಾಣಿಕರ ಸಂಖ್ಯೆ 8,28,149 ರಷ್ಟಿತ್ತು. ಈ ವರ್ಷದ ನಾಲ್ಕು ಸೋಮವಾರಗಳಲ್ಲಿ (ಜನವರಿ 13, ಮಕರ ಸಂಕ್ರಾಂತಿಯ ಮುನ್ನಾದಿನ ಹೊರತುಪಡಿಸಿ) ದಾಖಲಾದ 8.8 ಲಕ್ಷ ಪ್ರಯಾಣಿಕರ ಸಂಖ್ಯೆಗಿಂತ ಇದು ಶೇಕಡಾ 6 ರಷ್ಟು ಕಡಿಮೆಯಾಗಿದೆ.

ಪ್ರಯಾಣ ದರ ಏರಿಕೆಯ ನಂತರ ದಿನಕ್ಕೆ ಹೆಚ್ಚುವರಿಯಾಗಿ 55-60 ಲಕ್ಷ ರೂಪಾಯಿ ಗಳಿಸುವ ಅಂದಾಜು ಮಾಡಿರುವ ಬಿಎಂಆರ್‌ಸಿಎಲ್, ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 1-2 ರಷ್ಟು ಇಳಿಕೆ ನಿರೀಕ್ಷಿಸಿದೆ.

2025ರ ನಂತರ ಪ್ರತಿ ಸೋಮವಾರ ಪ್ರಯಾಣಿಸಿದವರ ಸಂಖ್ಯೆ

ಜನವರಿ 6: 8,61,593

ಜನವರಿ 13: 7,84,539 (ಸಂಕ್ರಾಂತಿ ರಜಾ ದಿನ)

ಜನವರಿ 20: 8,79,537

ಜನವರಿ 27: 9,09,756

ಫೆಬ್ರವರಿ 3: 8,70,147

ಫೆಬ್ರವರಿ 10: 8,28,149

ಫೆಬ್ರವರಿ 11: 7,78,774 (ಮಂಗಳವಾರ)

ಸಾರ್ವಜನಿಕ ಸಾರಿಗೆ ವ್ಯವಸ್ಥೆ ’ಜನಸ್ನೇಹಿ’ಯಾಗುವುದು ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...