Homeಕವನನಮ್ಮೊಳಗೂ ಮನದ ಮಾತುಗಳಿವೆ -ಗೋಪಾಲಕೃಷ್ಣ ಹುಲಿಮನೆ

ನಮ್ಮೊಳಗೂ ಮನದ ಮಾತುಗಳಿವೆ -ಗೋಪಾಲಕೃಷ್ಣ ಹುಲಿಮನೆ

- Advertisement -
- Advertisement -

ಮನದ ಮಾತುಗಳು ನಮ್ಮೊಳಗೂ ಇವೆ
ನಿನ್ನ ಕಿವುಡು ಕಿವಿಗೆ ಧಿಕ್ಕಾರವಿರಲಿ…

ಇಲ್ಲಿ ಎಲ್ಲವೂ ಚೆನ್ನಾಗಿಯೇ ಇದೆ..
ಹೆಣದ ವಾಸನೆಯ ಗೊಂಬೆ..!
ಗೋಡೆಯ ಆಚೆಯ ದಿಕ್ಕು..!
ಛಿದ್ರವಾದ ಪುಲ್ವಾಮ ಹುತಾತ್ಮರ
ಕೆಂಪು ನಿದ್ರೆಯ ರಕ್ತವ ಮರೆತರೆ
ಇಲ್ಲಿ ಎಲ್ಲವೂ ಚೆನ್ನಾಗಿಯೇ ಇದೆ.

ಹೊಟ್ಟೆ ಹಸಿವಾಗುತ್ತಿದೆ
ಎಂದು ಕೂಗುವ ದೇಶದ್ರೋಹಿಗಳ ನಡುವೆ,
ಕೊರಾನ ತಡೆಗೆ ಮೈಲುಗಟ್ಟಲೆ ನಡೆದು
ವಿಮಾನದಲ್ಲಿ ತೇಲಿ ಬಂದವರ ನೆನೆದರೆ,
ಆಸ್ಪತ್ರೆಯ ಆಕ್ಸಿಜನ್ ಕೊರತೆಯಾಗಿಲ್ಲ
ಎಂಬ ತಲೆಬರಹ ಓದಿ ಹೌದು ಎಂದು ಕೊಂಡರೆ
ಇಲ್ಲಿ ಎಲ್ಲವೂ ಚೆನ್ನಾಗಿಯೇ ಇದೆ..!

ಟೀಕಾ ಉತ್ಸವದಲ್ಲಿ ತುಳಿತಕ್ಕೆ ಸಿಕ್ಕು ಸತ್ತವರು…!
ಗಂಗೆಯ ಗಬ್ಬಿನಲ್ಲಿ ಕೊಳೆತು ತೇಲುವವರು,
ಮುಚ್ಚಿ ಹೋದ ಅನ್ನದ ಪಾಡು,
ಇವೆಲ್ಲವುಗಳ ಹೊರತು ಪಡಿಸಿ
ವಿಕಾಸವನ್ನು ಮಾತ್ರ ನೋಡುವ ಕನ್ನಡಕ ತೊಟ್ಟರೆ
ಇಲ್ಲಿ ಎಲ್ಲವೂ ಚೆನ್ನಾಗಿಯೇ ಇದೆ…

ಕೀನ್ಯಾ ನೆರವಿನ ಪ್ರೀತಿಗೆ ಹೋಲಿಸಿದರೆ
ಕಸಿದುಕೊಂಡ ಕ್ರೌರ್ಯ
ಮಂದಿರದ ಕನಸಿನಂತೆ ಸೊಗಸಾಗಿಯೇ ಇದೆ…
ಮತ್ತೆ
ತಾವು ಕೊಟ್ಟ ಕೆಟ್ಟು ನಿಂತ
ವೆಂಟಿಲೇಟರ್-ಗಳಿಗಿಂತಲೂ
ನಿಮ್ಮ ಸಾಧನೆಯ ಪ್ರಗತಿ
ಇಂದಿನ ಪೆಟ್ರೋಲ್ ರೇಟಿನ ಅಂಕಿಯಂತಿದೆ…

ನ್ಯಾಯಕ್ಕಾಗಿ ಹಗಲು ರಾತ್ರಿ ಬೀದಿಯಲ್ಲಿ ಬಿದ್ದು
ತಮ್ಮ ಸಾಧನೆಗೆ ಅಡ್ಡಗಾಲಿಟ್ಟವರ ನೆನೆದರೆ
ದೇಶಪ್ರೇಮ ನನ್ನಲ್ಲೂ ಉಕ್ಕುತ್ತದೆ…!

ಮನದ ಮಾತುಗಳು ನಮ್ಮೊಳಗೂ ಇವೆ
ನಿನ್ನ ಕಿವುಡು ಕಿವಿಗೆ ಧಿಕ್ಕಾರವಿರಲಿ.

  • ಗೋಪಾಲಕೃಷ್ಣ ಹುಲಿಮನೆ

(ಗೋಪಾಲಕೃಷ್ಣ ಹುಲಿಮನೆಯವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿಮನೆ ಗ್ರಾಮದ ಯುವ ಕವಿ)


ಇದನ್ನೂ ಓದಿ: ನಮ್ಮ ತೋಟದ ಸಾಲಿಗೆ ನೀವೂ ಬನ್ನಿ-7: ಬೇಲಿಯೆಂದರೆ ಹಸಿರ ಕಲೆ, ಇಲಿ, ಇಲಿಬುಲ್ಡೆ ಇತ್ಯಾದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅತ್ಯಂತ ಅರ್ಥಪೂರ್ಣವಾದ ಕಠೋರ ವಾಸ್ತವ ಸ್ಥಿತಿ ತೀಕ್ಷ್ಣವಾಗಿ ಕಾವ್ಯ ರೂಪದಲ್ಲಿ ಬಿಚ್ಚಿಡುವ ಅತ್ಯಂತ ಪಕ್ವ ಕವಿತೆ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...