Homeಮುಖಪುಟಪ್ರೀತಿಗಾಗಿ ಬೆಂಗಳೂರು - ನಮ್ಮೂರ ಎಲ್ಲರೂ ನಮ್ಮೋರು ಎಂದ ನೆಟ್ಟಿಗರು

ಪ್ರೀತಿಗಾಗಿ ಬೆಂಗಳೂರು – ನಮ್ಮೂರ ಎಲ್ಲರೂ ನಮ್ಮೋರು ಎಂದ ನೆಟ್ಟಿಗರು

- Advertisement -
- Advertisement -

ಯುಗಾದಿಗೆ DVG ರೋಡು
ಕ್ರಿಸ್ಮಸ್‌ಗೆ Brigade ರೋಡು
ರಂಜಾನ್‌ಗೆ Mosque ರೋಡು
ಈ ಒಗ್ಗಟ್ಟನ್ನು ಮುರಿಯಬೇಡ ಬಿಟ್ಟು ಬಿಡು
#ನಮ್ಮೂರ_ಎಲ್ಲರೂ_ನಮ್ಮೋರು…

ಬದುಕು ಅರಸಿ ಬರುವ ಯಾರಿಗೂ ಬೆಂಗಳೂರೇ ಭೇದ ಮಾಡುವುದಿಲ್ಲ. ಇನ್ನು ಮನುಷ್ಯತ್ವದ ಸಿಹಿ ಉಂಡ ನಮಗ್ಯಾವ ವಿಷ? ವಿಷ ಕಕ್ಕುವ ಕೋಮುವಾದವನ್ನು ಬೇರು ಸಮೇತ ಕಿತ್ತು ಬಿಸಾಕೋಣ. ಮಾನವತ್ವದ ಸೇತುವೆ ಕಟ್ಟೋಣ. #ನಮ್ಮೂರ_ಎಲ್ಲರೂ_ನಮ್ಮೋರು…

ಇವು ಪ್ರೀತಿಗಾಗಿ ಬೆಂಗಳೂರು – Bengaluru For Love ವತಿಯಿಂದ ಕರೆ ನೀಡಿದ್ದ ಟ್ವಿಟರ್ ಅಭಿಯಾನದಲ್ಲಿ ಕೇಳಿಬಂದ ಘೋಷವಾಕ್ಯಗಳು.. ಕೋವಿಡ್ ಎರಡನೇ ಅಲೆ ತೀವ್ರಗೊಂಡಿರುವ ಸಂದರ್ಭದಲ್ಲಿ ಕೋಮು ದ್ವೇಷವೂ ತಲೆಎತ್ತಿದೆ. ನಮಗೆ ಉತ್ತಮ ಆರೋಗ್ಯ ವ್ಯವಸ್ಥೆ, ಎಲ್ಲರಿಗೂ ಲಸಿಕೆ ಬೇಕು ಹೊರತು ಕೋಮು ರಾಜಕಾರಣವಲ್ಲ ಎಂದು ನೂರಾರು ಜನರು ಸಾರಿ ಹೇಳುವ ಮೂಲಕ ಜಾತಿ-ಮತ ದ್ವೇಷಕ್ಕೆ ನಮ್ಮಲ್ಲಿ ಜಾಗವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಬಿಎಂಪಿ ವಾರ್‌ ರೂಂನಲ್ಲಿ ಬೆಡ್ ಬ್ಲಾಕಿಂಗ್ ಹಗರಣ ನಡೆಯುತ್ತಿದೆ, 17 ಜನ ಮುಸ್ಲಿಂ ಸಿಬ್ಬಂದಿ ಇದಕ್ಕೆ ಕಾರಣ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮಾಡಿದ ಆರೋಪದ ನಂತರ ಕೋಮುದ್ವೇಷ ತೀವ್ರವಾಗಿದ್ದು, ಅನ್ಯಧರ್ಮ ದ್ವೇಷ ಆರಂಭವಾಗಿದೆ. ಆದರೆ ನಮ್ಮ ಬೆಂಗಳೂರು ಸರ್ವಧರ್ಮ ಸಹಿಷ್ಣು ಸಂಸ್ಕೃತಿ ಉಳ್ಳ ನಗರವಾಗಿದೆ. ಹಾಗಾಗಿ ನಮ್ಮೂರಿನ ಎಲ್ಲರೂ ನಮ್ಮವರೆ ಎಂದು ಸಾರಿ ಹೇಳುವ ಮೂಲಕ ಪ್ರೀತಿಯನ್ನು ಹಂಚೋಣ, ದ್ವೇಷವನ್ನು ತಡಯೋಣ ಎಂಬ ಉದ್ದೇಶದಿಂದ ಈ ಟ್ವಿಟರ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಪ್ರಜ್ಞಾವಂತರು ಕರೆ ನೀಡಿದ್ದ ಈ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರನ್ನು ಕೋಮುವಾದಿಗಳ ನಾಡಗಲು ಬಿಡುವುದಿಲ್ಲ, ಇದು ಮಾನವೀಯತೆಯ ಬೀಡು ಎಂದು ಸಾರಿದ್ದಾರೆ.

“ನಮಗೆ‌ ಬೇಕಿರುವುದು ಪ್ರೀತಿಯ ರಾಜಕೀಯ. ನಮ್ಮ‌ಜನರಿಗೆ ಬೇಕಿರುವುದು ಊಟ, ಬೆಡ್, ಆಮ್ಲಜನಕ, ಔಷಧಿ. ಅದನ್ನು ನೀಡಿ, ನಿಮ್ಮ ಕೊಳಕು ರಾಜಕೀಯ‌ ಪಕ್ಕಕಿಡಿ” ಎಂದು ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರಾದ ವಿನಯ್ ಶ್ರೀನಿವಾಸನ್ ಟ್ವೀಟ್ ಮಾಡಿದ್ದಾರೆ.

ಅದೇ ರೀತಿ ಲಸಿಕೆಯ ಮೇಲೆ ಗಮನ ನೀಡಬೇಕೆ ಹೊರತು ಧ್ರುವೀಕರಣದ ಮೇಲಲ್ಲ. ಜಾತಿ-ಧರ್ಮ ಈಗಾದರೂ ಬಿಡಿ, ಲಸಿಕೆ ಆಮ್ಲಜನಕ ತಂದುಕೊಡಿ ಎಂದು ರಕ್ಷಿತ್ ಪೊನ್ನಾಥಪುರರವರು ಟ್ವೀಟ್ ಮಾಡಿದ್ದಾರೆ.

ಬದುಕು ಅರಸಿ ಬರುವ ಯಾರಿಗೂ ಬೆಂಗಳೂರೇ ಭೇದ ಮಾಡುವುದಿಲ್ಲ. ಇನ್ನು ಮನುಷ್ಯತ್ವದ ಸಿಹಿ ಉಂಡ ನಮಗ್ಯಾವ ವಿಷ? ವಿಷ ಕಕ್ಕುವ ಕೋಮುವಾದವನ್ನು ಬೇರು ಸಮೇತ ಕಿತ್ತು ಬಿಸಾಕೋಣ. ಮಾನವತ್ವದ ಸೇತುವೆ ಕಟ್ಟೋಣ ಪ್ರಸಾದ್ ಎಂಬುವವರು ತಿಳಿಸಿದ್ದಾರೆ.

ಮತ್ತಷ್ಟು ಗಮನ ಸೆಳೆದ ಟ್ವೀಟ್‌ಗಳು ಇಲ್ಲಿವೆ ನೋಡಿ…


ಇದನ್ನೂ ಓದಿ: ಕೋವಿಡ್ ನಿರ್ವಹಣೆಗೆ ಕಾರ್ಯಪಡೆ ನೇಮಿಸಿದ ಸುಪ್ರೀಂ: ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...