Homeಮುಖಪುಟಪ್ರೀತಿಗಾಗಿ ಬೆಂಗಳೂರು - ನಮ್ಮೂರ ಎಲ್ಲರೂ ನಮ್ಮೋರು ಎಂದ ನೆಟ್ಟಿಗರು

ಪ್ರೀತಿಗಾಗಿ ಬೆಂಗಳೂರು – ನಮ್ಮೂರ ಎಲ್ಲರೂ ನಮ್ಮೋರು ಎಂದ ನೆಟ್ಟಿಗರು

- Advertisement -
- Advertisement -

ಯುಗಾದಿಗೆ DVG ರೋಡು
ಕ್ರಿಸ್ಮಸ್‌ಗೆ Brigade ರೋಡು
ರಂಜಾನ್‌ಗೆ Mosque ರೋಡು
ಈ ಒಗ್ಗಟ್ಟನ್ನು ಮುರಿಯಬೇಡ ಬಿಟ್ಟು ಬಿಡು
#ನಮ್ಮೂರ_ಎಲ್ಲರೂ_ನಮ್ಮೋರು…

ಬದುಕು ಅರಸಿ ಬರುವ ಯಾರಿಗೂ ಬೆಂಗಳೂರೇ ಭೇದ ಮಾಡುವುದಿಲ್ಲ. ಇನ್ನು ಮನುಷ್ಯತ್ವದ ಸಿಹಿ ಉಂಡ ನಮಗ್ಯಾವ ವಿಷ? ವಿಷ ಕಕ್ಕುವ ಕೋಮುವಾದವನ್ನು ಬೇರು ಸಮೇತ ಕಿತ್ತು ಬಿಸಾಕೋಣ. ಮಾನವತ್ವದ ಸೇತುವೆ ಕಟ್ಟೋಣ. #ನಮ್ಮೂರ_ಎಲ್ಲರೂ_ನಮ್ಮೋರು…

ಇವು ಪ್ರೀತಿಗಾಗಿ ಬೆಂಗಳೂರು – Bengaluru For Love ವತಿಯಿಂದ ಕರೆ ನೀಡಿದ್ದ ಟ್ವಿಟರ್ ಅಭಿಯಾನದಲ್ಲಿ ಕೇಳಿಬಂದ ಘೋಷವಾಕ್ಯಗಳು.. ಕೋವಿಡ್ ಎರಡನೇ ಅಲೆ ತೀವ್ರಗೊಂಡಿರುವ ಸಂದರ್ಭದಲ್ಲಿ ಕೋಮು ದ್ವೇಷವೂ ತಲೆಎತ್ತಿದೆ. ನಮಗೆ ಉತ್ತಮ ಆರೋಗ್ಯ ವ್ಯವಸ್ಥೆ, ಎಲ್ಲರಿಗೂ ಲಸಿಕೆ ಬೇಕು ಹೊರತು ಕೋಮು ರಾಜಕಾರಣವಲ್ಲ ಎಂದು ನೂರಾರು ಜನರು ಸಾರಿ ಹೇಳುವ ಮೂಲಕ ಜಾತಿ-ಮತ ದ್ವೇಷಕ್ಕೆ ನಮ್ಮಲ್ಲಿ ಜಾಗವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಬಿಎಂಪಿ ವಾರ್‌ ರೂಂನಲ್ಲಿ ಬೆಡ್ ಬ್ಲಾಕಿಂಗ್ ಹಗರಣ ನಡೆಯುತ್ತಿದೆ, 17 ಜನ ಮುಸ್ಲಿಂ ಸಿಬ್ಬಂದಿ ಇದಕ್ಕೆ ಕಾರಣ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮಾಡಿದ ಆರೋಪದ ನಂತರ ಕೋಮುದ್ವೇಷ ತೀವ್ರವಾಗಿದ್ದು, ಅನ್ಯಧರ್ಮ ದ್ವೇಷ ಆರಂಭವಾಗಿದೆ. ಆದರೆ ನಮ್ಮ ಬೆಂಗಳೂರು ಸರ್ವಧರ್ಮ ಸಹಿಷ್ಣು ಸಂಸ್ಕೃತಿ ಉಳ್ಳ ನಗರವಾಗಿದೆ. ಹಾಗಾಗಿ ನಮ್ಮೂರಿನ ಎಲ್ಲರೂ ನಮ್ಮವರೆ ಎಂದು ಸಾರಿ ಹೇಳುವ ಮೂಲಕ ಪ್ರೀತಿಯನ್ನು ಹಂಚೋಣ, ದ್ವೇಷವನ್ನು ತಡಯೋಣ ಎಂಬ ಉದ್ದೇಶದಿಂದ ಈ ಟ್ವಿಟರ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಪ್ರಜ್ಞಾವಂತರು ಕರೆ ನೀಡಿದ್ದ ಈ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರನ್ನು ಕೋಮುವಾದಿಗಳ ನಾಡಗಲು ಬಿಡುವುದಿಲ್ಲ, ಇದು ಮಾನವೀಯತೆಯ ಬೀಡು ಎಂದು ಸಾರಿದ್ದಾರೆ.

“ನಮಗೆ‌ ಬೇಕಿರುವುದು ಪ್ರೀತಿಯ ರಾಜಕೀಯ. ನಮ್ಮ‌ಜನರಿಗೆ ಬೇಕಿರುವುದು ಊಟ, ಬೆಡ್, ಆಮ್ಲಜನಕ, ಔಷಧಿ. ಅದನ್ನು ನೀಡಿ, ನಿಮ್ಮ ಕೊಳಕು ರಾಜಕೀಯ‌ ಪಕ್ಕಕಿಡಿ” ಎಂದು ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರಾದ ವಿನಯ್ ಶ್ರೀನಿವಾಸನ್ ಟ್ವೀಟ್ ಮಾಡಿದ್ದಾರೆ.

ಅದೇ ರೀತಿ ಲಸಿಕೆಯ ಮೇಲೆ ಗಮನ ನೀಡಬೇಕೆ ಹೊರತು ಧ್ರುವೀಕರಣದ ಮೇಲಲ್ಲ. ಜಾತಿ-ಧರ್ಮ ಈಗಾದರೂ ಬಿಡಿ, ಲಸಿಕೆ ಆಮ್ಲಜನಕ ತಂದುಕೊಡಿ ಎಂದು ರಕ್ಷಿತ್ ಪೊನ್ನಾಥಪುರರವರು ಟ್ವೀಟ್ ಮಾಡಿದ್ದಾರೆ.

ಬದುಕು ಅರಸಿ ಬರುವ ಯಾರಿಗೂ ಬೆಂಗಳೂರೇ ಭೇದ ಮಾಡುವುದಿಲ್ಲ. ಇನ್ನು ಮನುಷ್ಯತ್ವದ ಸಿಹಿ ಉಂಡ ನಮಗ್ಯಾವ ವಿಷ? ವಿಷ ಕಕ್ಕುವ ಕೋಮುವಾದವನ್ನು ಬೇರು ಸಮೇತ ಕಿತ್ತು ಬಿಸಾಕೋಣ. ಮಾನವತ್ವದ ಸೇತುವೆ ಕಟ್ಟೋಣ ಪ್ರಸಾದ್ ಎಂಬುವವರು ತಿಳಿಸಿದ್ದಾರೆ.

ಮತ್ತಷ್ಟು ಗಮನ ಸೆಳೆದ ಟ್ವೀಟ್‌ಗಳು ಇಲ್ಲಿವೆ ನೋಡಿ…


ಇದನ್ನೂ ಓದಿ: ಕೋವಿಡ್ ನಿರ್ವಹಣೆಗೆ ಕಾರ್ಯಪಡೆ ನೇಮಿಸಿದ ಸುಪ್ರೀಂ: ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...