Homeಮುಖಪುಟಪ್ರೀತಿಗಾಗಿ ಬೆಂಗಳೂರು - ನಮ್ಮೂರ ಎಲ್ಲರೂ ನಮ್ಮೋರು ಎಂದ ನೆಟ್ಟಿಗರು

ಪ್ರೀತಿಗಾಗಿ ಬೆಂಗಳೂರು – ನಮ್ಮೂರ ಎಲ್ಲರೂ ನಮ್ಮೋರು ಎಂದ ನೆಟ್ಟಿಗರು

- Advertisement -
- Advertisement -

ಯುಗಾದಿಗೆ DVG ರೋಡು
ಕ್ರಿಸ್ಮಸ್‌ಗೆ Brigade ರೋಡು
ರಂಜಾನ್‌ಗೆ Mosque ರೋಡು
ಈ ಒಗ್ಗಟ್ಟನ್ನು ಮುರಿಯಬೇಡ ಬಿಟ್ಟು ಬಿಡು
#ನಮ್ಮೂರ_ಎಲ್ಲರೂ_ನಮ್ಮೋರು…

ಬದುಕು ಅರಸಿ ಬರುವ ಯಾರಿಗೂ ಬೆಂಗಳೂರೇ ಭೇದ ಮಾಡುವುದಿಲ್ಲ. ಇನ್ನು ಮನುಷ್ಯತ್ವದ ಸಿಹಿ ಉಂಡ ನಮಗ್ಯಾವ ವಿಷ? ವಿಷ ಕಕ್ಕುವ ಕೋಮುವಾದವನ್ನು ಬೇರು ಸಮೇತ ಕಿತ್ತು ಬಿಸಾಕೋಣ. ಮಾನವತ್ವದ ಸೇತುವೆ ಕಟ್ಟೋಣ. #ನಮ್ಮೂರ_ಎಲ್ಲರೂ_ನಮ್ಮೋರು…

ಇವು ಪ್ರೀತಿಗಾಗಿ ಬೆಂಗಳೂರು – Bengaluru For Love ವತಿಯಿಂದ ಕರೆ ನೀಡಿದ್ದ ಟ್ವಿಟರ್ ಅಭಿಯಾನದಲ್ಲಿ ಕೇಳಿಬಂದ ಘೋಷವಾಕ್ಯಗಳು.. ಕೋವಿಡ್ ಎರಡನೇ ಅಲೆ ತೀವ್ರಗೊಂಡಿರುವ ಸಂದರ್ಭದಲ್ಲಿ ಕೋಮು ದ್ವೇಷವೂ ತಲೆಎತ್ತಿದೆ. ನಮಗೆ ಉತ್ತಮ ಆರೋಗ್ಯ ವ್ಯವಸ್ಥೆ, ಎಲ್ಲರಿಗೂ ಲಸಿಕೆ ಬೇಕು ಹೊರತು ಕೋಮು ರಾಜಕಾರಣವಲ್ಲ ಎಂದು ನೂರಾರು ಜನರು ಸಾರಿ ಹೇಳುವ ಮೂಲಕ ಜಾತಿ-ಮತ ದ್ವೇಷಕ್ಕೆ ನಮ್ಮಲ್ಲಿ ಜಾಗವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಬಿಎಂಪಿ ವಾರ್‌ ರೂಂನಲ್ಲಿ ಬೆಡ್ ಬ್ಲಾಕಿಂಗ್ ಹಗರಣ ನಡೆಯುತ್ತಿದೆ, 17 ಜನ ಮುಸ್ಲಿಂ ಸಿಬ್ಬಂದಿ ಇದಕ್ಕೆ ಕಾರಣ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮಾಡಿದ ಆರೋಪದ ನಂತರ ಕೋಮುದ್ವೇಷ ತೀವ್ರವಾಗಿದ್ದು, ಅನ್ಯಧರ್ಮ ದ್ವೇಷ ಆರಂಭವಾಗಿದೆ. ಆದರೆ ನಮ್ಮ ಬೆಂಗಳೂರು ಸರ್ವಧರ್ಮ ಸಹಿಷ್ಣು ಸಂಸ್ಕೃತಿ ಉಳ್ಳ ನಗರವಾಗಿದೆ. ಹಾಗಾಗಿ ನಮ್ಮೂರಿನ ಎಲ್ಲರೂ ನಮ್ಮವರೆ ಎಂದು ಸಾರಿ ಹೇಳುವ ಮೂಲಕ ಪ್ರೀತಿಯನ್ನು ಹಂಚೋಣ, ದ್ವೇಷವನ್ನು ತಡಯೋಣ ಎಂಬ ಉದ್ದೇಶದಿಂದ ಈ ಟ್ವಿಟರ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಪ್ರಜ್ಞಾವಂತರು ಕರೆ ನೀಡಿದ್ದ ಈ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರನ್ನು ಕೋಮುವಾದಿಗಳ ನಾಡಗಲು ಬಿಡುವುದಿಲ್ಲ, ಇದು ಮಾನವೀಯತೆಯ ಬೀಡು ಎಂದು ಸಾರಿದ್ದಾರೆ.

“ನಮಗೆ‌ ಬೇಕಿರುವುದು ಪ್ರೀತಿಯ ರಾಜಕೀಯ. ನಮ್ಮ‌ಜನರಿಗೆ ಬೇಕಿರುವುದು ಊಟ, ಬೆಡ್, ಆಮ್ಲಜನಕ, ಔಷಧಿ. ಅದನ್ನು ನೀಡಿ, ನಿಮ್ಮ ಕೊಳಕು ರಾಜಕೀಯ‌ ಪಕ್ಕಕಿಡಿ” ಎಂದು ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರಾದ ವಿನಯ್ ಶ್ರೀನಿವಾಸನ್ ಟ್ವೀಟ್ ಮಾಡಿದ್ದಾರೆ.

ಅದೇ ರೀತಿ ಲಸಿಕೆಯ ಮೇಲೆ ಗಮನ ನೀಡಬೇಕೆ ಹೊರತು ಧ್ರುವೀಕರಣದ ಮೇಲಲ್ಲ. ಜಾತಿ-ಧರ್ಮ ಈಗಾದರೂ ಬಿಡಿ, ಲಸಿಕೆ ಆಮ್ಲಜನಕ ತಂದುಕೊಡಿ ಎಂದು ರಕ್ಷಿತ್ ಪೊನ್ನಾಥಪುರರವರು ಟ್ವೀಟ್ ಮಾಡಿದ್ದಾರೆ.

ಬದುಕು ಅರಸಿ ಬರುವ ಯಾರಿಗೂ ಬೆಂಗಳೂರೇ ಭೇದ ಮಾಡುವುದಿಲ್ಲ. ಇನ್ನು ಮನುಷ್ಯತ್ವದ ಸಿಹಿ ಉಂಡ ನಮಗ್ಯಾವ ವಿಷ? ವಿಷ ಕಕ್ಕುವ ಕೋಮುವಾದವನ್ನು ಬೇರು ಸಮೇತ ಕಿತ್ತು ಬಿಸಾಕೋಣ. ಮಾನವತ್ವದ ಸೇತುವೆ ಕಟ್ಟೋಣ ಪ್ರಸಾದ್ ಎಂಬುವವರು ತಿಳಿಸಿದ್ದಾರೆ.

ಮತ್ತಷ್ಟು ಗಮನ ಸೆಳೆದ ಟ್ವೀಟ್‌ಗಳು ಇಲ್ಲಿವೆ ನೋಡಿ…


ಇದನ್ನೂ ಓದಿ: ಕೋವಿಡ್ ನಿರ್ವಹಣೆಗೆ ಕಾರ್ಯಪಡೆ ನೇಮಿಸಿದ ಸುಪ್ರೀಂ: ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...