Homeಮುಖಪುಟಪ್ರೀತಿಗಾಗಿ ಬೆಂಗಳೂರು - ನಮ್ಮೂರ ಎಲ್ಲರೂ ನಮ್ಮೋರು ಎಂದ ನೆಟ್ಟಿಗರು

ಪ್ರೀತಿಗಾಗಿ ಬೆಂಗಳೂರು – ನಮ್ಮೂರ ಎಲ್ಲರೂ ನಮ್ಮೋರು ಎಂದ ನೆಟ್ಟಿಗರು

- Advertisement -
- Advertisement -

ಯುಗಾದಿಗೆ DVG ರೋಡು
ಕ್ರಿಸ್ಮಸ್‌ಗೆ Brigade ರೋಡು
ರಂಜಾನ್‌ಗೆ Mosque ರೋಡು
ಈ ಒಗ್ಗಟ್ಟನ್ನು ಮುರಿಯಬೇಡ ಬಿಟ್ಟು ಬಿಡು
#ನಮ್ಮೂರ_ಎಲ್ಲರೂ_ನಮ್ಮೋರು…

ಬದುಕು ಅರಸಿ ಬರುವ ಯಾರಿಗೂ ಬೆಂಗಳೂರೇ ಭೇದ ಮಾಡುವುದಿಲ್ಲ. ಇನ್ನು ಮನುಷ್ಯತ್ವದ ಸಿಹಿ ಉಂಡ ನಮಗ್ಯಾವ ವಿಷ? ವಿಷ ಕಕ್ಕುವ ಕೋಮುವಾದವನ್ನು ಬೇರು ಸಮೇತ ಕಿತ್ತು ಬಿಸಾಕೋಣ. ಮಾನವತ್ವದ ಸೇತುವೆ ಕಟ್ಟೋಣ. #ನಮ್ಮೂರ_ಎಲ್ಲರೂ_ನಮ್ಮೋರು…

ಇವು ಪ್ರೀತಿಗಾಗಿ ಬೆಂಗಳೂರು – Bengaluru For Love ವತಿಯಿಂದ ಕರೆ ನೀಡಿದ್ದ ಟ್ವಿಟರ್ ಅಭಿಯಾನದಲ್ಲಿ ಕೇಳಿಬಂದ ಘೋಷವಾಕ್ಯಗಳು.. ಕೋವಿಡ್ ಎರಡನೇ ಅಲೆ ತೀವ್ರಗೊಂಡಿರುವ ಸಂದರ್ಭದಲ್ಲಿ ಕೋಮು ದ್ವೇಷವೂ ತಲೆಎತ್ತಿದೆ. ನಮಗೆ ಉತ್ತಮ ಆರೋಗ್ಯ ವ್ಯವಸ್ಥೆ, ಎಲ್ಲರಿಗೂ ಲಸಿಕೆ ಬೇಕು ಹೊರತು ಕೋಮು ರಾಜಕಾರಣವಲ್ಲ ಎಂದು ನೂರಾರು ಜನರು ಸಾರಿ ಹೇಳುವ ಮೂಲಕ ಜಾತಿ-ಮತ ದ್ವೇಷಕ್ಕೆ ನಮ್ಮಲ್ಲಿ ಜಾಗವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಬಿಎಂಪಿ ವಾರ್‌ ರೂಂನಲ್ಲಿ ಬೆಡ್ ಬ್ಲಾಕಿಂಗ್ ಹಗರಣ ನಡೆಯುತ್ತಿದೆ, 17 ಜನ ಮುಸ್ಲಿಂ ಸಿಬ್ಬಂದಿ ಇದಕ್ಕೆ ಕಾರಣ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮಾಡಿದ ಆರೋಪದ ನಂತರ ಕೋಮುದ್ವೇಷ ತೀವ್ರವಾಗಿದ್ದು, ಅನ್ಯಧರ್ಮ ದ್ವೇಷ ಆರಂಭವಾಗಿದೆ. ಆದರೆ ನಮ್ಮ ಬೆಂಗಳೂರು ಸರ್ವಧರ್ಮ ಸಹಿಷ್ಣು ಸಂಸ್ಕೃತಿ ಉಳ್ಳ ನಗರವಾಗಿದೆ. ಹಾಗಾಗಿ ನಮ್ಮೂರಿನ ಎಲ್ಲರೂ ನಮ್ಮವರೆ ಎಂದು ಸಾರಿ ಹೇಳುವ ಮೂಲಕ ಪ್ರೀತಿಯನ್ನು ಹಂಚೋಣ, ದ್ವೇಷವನ್ನು ತಡಯೋಣ ಎಂಬ ಉದ್ದೇಶದಿಂದ ಈ ಟ್ವಿಟರ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಪ್ರಜ್ಞಾವಂತರು ಕರೆ ನೀಡಿದ್ದ ಈ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರನ್ನು ಕೋಮುವಾದಿಗಳ ನಾಡಗಲು ಬಿಡುವುದಿಲ್ಲ, ಇದು ಮಾನವೀಯತೆಯ ಬೀಡು ಎಂದು ಸಾರಿದ್ದಾರೆ.

“ನಮಗೆ‌ ಬೇಕಿರುವುದು ಪ್ರೀತಿಯ ರಾಜಕೀಯ. ನಮ್ಮ‌ಜನರಿಗೆ ಬೇಕಿರುವುದು ಊಟ, ಬೆಡ್, ಆಮ್ಲಜನಕ, ಔಷಧಿ. ಅದನ್ನು ನೀಡಿ, ನಿಮ್ಮ ಕೊಳಕು ರಾಜಕೀಯ‌ ಪಕ್ಕಕಿಡಿ” ಎಂದು ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರಾದ ವಿನಯ್ ಶ್ರೀನಿವಾಸನ್ ಟ್ವೀಟ್ ಮಾಡಿದ್ದಾರೆ.

ಅದೇ ರೀತಿ ಲಸಿಕೆಯ ಮೇಲೆ ಗಮನ ನೀಡಬೇಕೆ ಹೊರತು ಧ್ರುವೀಕರಣದ ಮೇಲಲ್ಲ. ಜಾತಿ-ಧರ್ಮ ಈಗಾದರೂ ಬಿಡಿ, ಲಸಿಕೆ ಆಮ್ಲಜನಕ ತಂದುಕೊಡಿ ಎಂದು ರಕ್ಷಿತ್ ಪೊನ್ನಾಥಪುರರವರು ಟ್ವೀಟ್ ಮಾಡಿದ್ದಾರೆ.

ಬದುಕು ಅರಸಿ ಬರುವ ಯಾರಿಗೂ ಬೆಂಗಳೂರೇ ಭೇದ ಮಾಡುವುದಿಲ್ಲ. ಇನ್ನು ಮನುಷ್ಯತ್ವದ ಸಿಹಿ ಉಂಡ ನಮಗ್ಯಾವ ವಿಷ? ವಿಷ ಕಕ್ಕುವ ಕೋಮುವಾದವನ್ನು ಬೇರು ಸಮೇತ ಕಿತ್ತು ಬಿಸಾಕೋಣ. ಮಾನವತ್ವದ ಸೇತುವೆ ಕಟ್ಟೋಣ ಪ್ರಸಾದ್ ಎಂಬುವವರು ತಿಳಿಸಿದ್ದಾರೆ.

ಮತ್ತಷ್ಟು ಗಮನ ಸೆಳೆದ ಟ್ವೀಟ್‌ಗಳು ಇಲ್ಲಿವೆ ನೋಡಿ…


ಇದನ್ನೂ ಓದಿ: ಕೋವಿಡ್ ನಿರ್ವಹಣೆಗೆ ಕಾರ್ಯಪಡೆ ನೇಮಿಸಿದ ಸುಪ್ರೀಂ: ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...