Homeಮುಖಪುಟಕಾನೂನು ಉಲ್ಲಂಘಿಸುತ್ತಿರುವ ನಮೋ ಟಿವಿ: ಲೈಸೆನ್ಸ್ ಇಲ್ಲದೇ ಉಪಗ್ರಹ ಬಳಕೆ!

ಕಾನೂನು ಉಲ್ಲಂಘಿಸುತ್ತಿರುವ ನಮೋ ಟಿವಿ: ಲೈಸೆನ್ಸ್ ಇಲ್ಲದೇ ಉಪಗ್ರಹ ಬಳಕೆ!

- Advertisement -
- Advertisement -

ಸಾಕಷ್ಟು ವಿವಾದ ಸೃಷ್ಟಿಸಿದ ಪ್ರಧಾನಿಯ ಪ್ರಪಗಂಡಾ ಚಾನೆಲ್ ನಮೋ ಟಿವಿ ಯಾವುದೇ ಲೈಸೆನ್ಸ್ ಪಡೆಯದೇ ತನ್ನ ಸಿಗ್ನಲ್ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್‍ಗೆ ಎನ್‍ಎಸ್‍ಎಸ್-6 ಉಪಗ್ರಹವನ್ನು ಬಳಸುತ್ತಿದೆ. ವ್ಯಕ್ತಿಯೋರ್ವನ ಅಜೆಂಡಾಗಳನ್ನು, ಹಿಕ್ಮತ್ತುಗಳನ್ನು ಪ್ರಸಾರ ಮಾಡಲು ಈ ನೆಲದ ಕಾನೂನನ್ನು ಧಿಕ್ಕರಿಸಿರುವುದು ದೇಶದ್ರೋಹವೇ ಅಲ್ಲವೇ?

ಪ್ರಧಾನಿ ಮತ್ತು ಬಿಜೆಪಿಯ ಚುನಾವಣಾ ಪ್ರಚಾರ ಮಾಡಲೆಂದೇ ಅತ್ಯಂತ ಅನುಮಾನಾಸ್ಪದ ರೀತಿಯಲ್ಲಿ ಆರಂಭಗೊಂಡ ನಮೋ ಚಾನೆಲ್, ಪ್ರಸಾರದ ನಿಯಮಗಳನ್ನು ಪಾಲಿಸಿದೆಯೇ ಮತ್ತು ಇದೆಲ್ಲ ಚುಮಾವಣಾ ನೀತಿ ಸಂಹಿತೆಯ ಉಲ್ಲಂಘನೆ ಅಲ್ಲವೇ ಎಂಬ ಪ್ರಶ್ನೆಗಳನ್ನು ಎತ್ತಿವೆ. ಆದರೆ ಮಾಹಿತಿ ಮತ್ತು ಪ್ರಸಾರ ಇಲಾಖೆ ಮತ್ತು ಚುನಾವಣಾ ಆಯೋಗ ಇನ್ನೂ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ ಮತ್ತು ಬರುವುದೂ ಇಲ್ಲ.
ವಾರ್ತಾ ಮತ್ತು ಪ್ರಸಾರ ಇಲಾಖೆ ಈಗಾಗಲೇ, ನಮೋ ಟಿವಿ ‘ವಿಶೇಷ ಸೇವೆಯ ಜಾಹಿರಾತು ಚಾನೆಲ್’ ಎಂದು ಘೋಷಿಸಿ, ಇದಕ್ಕೆಲ್ಲ ಲೈಸೆನ್ಸ್ ಅಗತ್ಯವಿಲ್ಲ ಎಂಬ ನಿಯಮವನ್ನು ಮುಂದೆ ಮಾಡಿದೆ. ಆದರೆ ಶುರುವಾದ ದಿನ ನ್ಯೂಸ್ ಚಾನೆಲ್ ಎಂದೇ ನಮೋ ಟಿವಿ ಹೇಳಿಕೊಂಡಿತ್ತು.

ಭಾರತದ ಕಾನೂನಿನ ಪ್ರಕಾರ, ಯಾವುದೇ ಚಾನೆಲ್ ಉಪಗ್ರಹಗಳಿಂದ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡಲು ಪ್ರಸಾರ ಇಲಾಖೆಯ ಅನುಮತಿ ಪಡೆಯಬೇಕು. ಕಂಪನಿಯ ಹಿನ್ನೆಲೆ ಮತ್ತು ಭದ್ರತಾ ವಿಷಯಗಳ ಪರಿಶೀಲನೆ ನಂತರವಷ್ಟೇ ಈ ಲೈಸೆನ್ಸ್ ನೀಡಲಾಗುತ್ತದೆ. ಆದರೆ ಇಂತಹ ಯಾವ ಲೈಸನ್ಸ್ ಹೊಂದಿರದ ನಮೋ ಟಿವಿ ಎನ್‍ಎಸ್‍ಎಸ್-6 ಉಪಗ್ರಹದಿಂದ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡುತ್ತಿದೆ.

LyngSat ನೀಡಿದ ಮಾಹಿತಿ

ಜಗತ್ತಿನ ಸಂವಹನ ಮತ್ತು ಸಂಪರ್ಕ ತಜ್ಞರು ಮಾಹಿತಿಗಾಗಿ LyngSat ವೆಬ್‍ಸೈಟ್ ಫಾಲೋ ಮಾಡುತ್ತಾರೆ. ವಿಶ್ವದ ಉಪಗ್ರಹ ಆಧರಿತ ಪ್ರಸಾರ ಸೇವೆಗಳ ನಿಖರ ಮಾಹಿತಿಯನ್ನು ಈ ತಾಣ ಒಳಗೊಂಡಿದೆ. ಇದರ ಪ್ರಕಾರ, ನಮೋ ಟಿವೆ ಎನ್‍ಎಸ್‍ಎಸ್-6 ಉಪಗ್ರಹ ಸೇವೆ ಬಳಸಿಕೊಳ್ಳುತ್ತಿಯೀ ಉಪಗ್ರಹವು ಲುಕ್ಸೆಂಬರ್ಗ್ ಮೂಲದ ಎಸಿಎಸ್ ವರ್ಲ್ಡ್ ಸ್ಕೈಸ್ ಸಂಸ್ಥೆಗೆ ಸೇರಿದೆ. LyngSat ನಡೆಸುವ ಕ್ರಿಸ್ಟಿನ್ ಲಿಂಗಮಾರ್ಕ್ ಇದನ್ನು ‘ದಿ ವೈರ್’ ಪೋರ್ಟಲ್‍ಗೆ ಸ್ಪಷ್ಟಪಡಿಸಿದ್ದಾರೆ. ವೆಬ್‍ಸೈಟಿನಲ್ಲಿ ನಮೋ ಟಿವಿ ಲಿಸ್ಟ್ ಆಗಿರುವ ಸ್ಕ್ರೀನ್‍ಶಾಟ್ ಅನ್ನು ನೋಡಿ.

LyngSat ಮಾದರಿಯ ಸೇವೆ ಒದಗಿಸುವ ‘ಫ್ಲೈಸ್ಯಾಟ್; ವೆಬ್‍ಸೈಟ್ ಕೂಡ ನಮೋ ಟಿವಿ ಎನ್‍ಎಸ್‍ಎಸ್-6 ಉಪಗ್ರಹವನ್ನು ಬಳಸುತ್ತಿರುವುದನ್ನು ದೃಡಪಡಿಸಿದೆ.
ಸತ್ಯ ಹೀಗಿದ್ದರೂ, ಪ್ರಸಾರ ಇಲಾಖೆ ‘ವಿಶೇಷ ಸೇವೆ’ಯನ್ನಷ್ಟೇ ನೀಡುವ ನಮೋ ಟಿವೆಗೆ ಲೈಸೆನ್ಸ್ ಅಗತ್ಯವಿಲ್ಲ ಎಂದು ಜನರನ್ನು ದಾರಿ ತಪ್ಪಿಸುತ್ತಿದೆ. ಪ್ರಸಾರದ ಲೈಸೆನ್ಸ್ ಪಡೆಯದೇ ನಮೋ ಟಿವಿ ಉಪಗ್ರಹ ಬಳಸಿ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡುತ್ತಿದ್ದು, ನಿಯಮಾವಳಿಯ ಸ್ಪಷ್ಟ ಉಲ್ಲಂಘನೆ ಮಾಡುತ್ತಿದೆ.

ಇಲ್ಲಿ ಒಂದು ಪ್ರಶ್ನೆ ಎಂದರೆ, ನಾವೇ ನಮೋ ಟಿವಿ ಮಾಲಿಕರು ಎಂದು ಹೇಳಲು ಯಾರೂ ಮುಂದೆ ಬರುತ್ತಿಲ್ಲ! ಪ್ರಸಾರ ಇಲಾಖೆ ತಡಯಾಜ್ಞೆ ಒಡ್ಡಿರುವುದು ಸದ್ಯಕ್ಕೆ ಸಮಾಧಾನದ ಸಂಗತಿ. ಅಧಿಕಾರದ ದುರುಪಯೋಗವನ್ನು ಅದರ ಅತಿ ತಳಮಟ್ಟಕ್ಕೆ ಒಯ್ದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗುತ್ತಿದ್ದಾರೆ.
(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...