Homeಮುಖಪುಟಕಾನೂನು ಉಲ್ಲಂಘಿಸುತ್ತಿರುವ ನಮೋ ಟಿವಿ: ಲೈಸೆನ್ಸ್ ಇಲ್ಲದೇ ಉಪಗ್ರಹ ಬಳಕೆ!

ಕಾನೂನು ಉಲ್ಲಂಘಿಸುತ್ತಿರುವ ನಮೋ ಟಿವಿ: ಲೈಸೆನ್ಸ್ ಇಲ್ಲದೇ ಉಪಗ್ರಹ ಬಳಕೆ!

- Advertisement -
- Advertisement -

ಸಾಕಷ್ಟು ವಿವಾದ ಸೃಷ್ಟಿಸಿದ ಪ್ರಧಾನಿಯ ಪ್ರಪಗಂಡಾ ಚಾನೆಲ್ ನಮೋ ಟಿವಿ ಯಾವುದೇ ಲೈಸೆನ್ಸ್ ಪಡೆಯದೇ ತನ್ನ ಸಿಗ್ನಲ್ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್‍ಗೆ ಎನ್‍ಎಸ್‍ಎಸ್-6 ಉಪಗ್ರಹವನ್ನು ಬಳಸುತ್ತಿದೆ. ವ್ಯಕ್ತಿಯೋರ್ವನ ಅಜೆಂಡಾಗಳನ್ನು, ಹಿಕ್ಮತ್ತುಗಳನ್ನು ಪ್ರಸಾರ ಮಾಡಲು ಈ ನೆಲದ ಕಾನೂನನ್ನು ಧಿಕ್ಕರಿಸಿರುವುದು ದೇಶದ್ರೋಹವೇ ಅಲ್ಲವೇ?

ಪ್ರಧಾನಿ ಮತ್ತು ಬಿಜೆಪಿಯ ಚುನಾವಣಾ ಪ್ರಚಾರ ಮಾಡಲೆಂದೇ ಅತ್ಯಂತ ಅನುಮಾನಾಸ್ಪದ ರೀತಿಯಲ್ಲಿ ಆರಂಭಗೊಂಡ ನಮೋ ಚಾನೆಲ್, ಪ್ರಸಾರದ ನಿಯಮಗಳನ್ನು ಪಾಲಿಸಿದೆಯೇ ಮತ್ತು ಇದೆಲ್ಲ ಚುಮಾವಣಾ ನೀತಿ ಸಂಹಿತೆಯ ಉಲ್ಲಂಘನೆ ಅಲ್ಲವೇ ಎಂಬ ಪ್ರಶ್ನೆಗಳನ್ನು ಎತ್ತಿವೆ. ಆದರೆ ಮಾಹಿತಿ ಮತ್ತು ಪ್ರಸಾರ ಇಲಾಖೆ ಮತ್ತು ಚುನಾವಣಾ ಆಯೋಗ ಇನ್ನೂ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ ಮತ್ತು ಬರುವುದೂ ಇಲ್ಲ.
ವಾರ್ತಾ ಮತ್ತು ಪ್ರಸಾರ ಇಲಾಖೆ ಈಗಾಗಲೇ, ನಮೋ ಟಿವಿ ‘ವಿಶೇಷ ಸೇವೆಯ ಜಾಹಿರಾತು ಚಾನೆಲ್’ ಎಂದು ಘೋಷಿಸಿ, ಇದಕ್ಕೆಲ್ಲ ಲೈಸೆನ್ಸ್ ಅಗತ್ಯವಿಲ್ಲ ಎಂಬ ನಿಯಮವನ್ನು ಮುಂದೆ ಮಾಡಿದೆ. ಆದರೆ ಶುರುವಾದ ದಿನ ನ್ಯೂಸ್ ಚಾನೆಲ್ ಎಂದೇ ನಮೋ ಟಿವಿ ಹೇಳಿಕೊಂಡಿತ್ತು.

ಭಾರತದ ಕಾನೂನಿನ ಪ್ರಕಾರ, ಯಾವುದೇ ಚಾನೆಲ್ ಉಪಗ್ರಹಗಳಿಂದ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡಲು ಪ್ರಸಾರ ಇಲಾಖೆಯ ಅನುಮತಿ ಪಡೆಯಬೇಕು. ಕಂಪನಿಯ ಹಿನ್ನೆಲೆ ಮತ್ತು ಭದ್ರತಾ ವಿಷಯಗಳ ಪರಿಶೀಲನೆ ನಂತರವಷ್ಟೇ ಈ ಲೈಸೆನ್ಸ್ ನೀಡಲಾಗುತ್ತದೆ. ಆದರೆ ಇಂತಹ ಯಾವ ಲೈಸನ್ಸ್ ಹೊಂದಿರದ ನಮೋ ಟಿವಿ ಎನ್‍ಎಸ್‍ಎಸ್-6 ಉಪಗ್ರಹದಿಂದ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡುತ್ತಿದೆ.

LyngSat ನೀಡಿದ ಮಾಹಿತಿ

ಜಗತ್ತಿನ ಸಂವಹನ ಮತ್ತು ಸಂಪರ್ಕ ತಜ್ಞರು ಮಾಹಿತಿಗಾಗಿ LyngSat ವೆಬ್‍ಸೈಟ್ ಫಾಲೋ ಮಾಡುತ್ತಾರೆ. ವಿಶ್ವದ ಉಪಗ್ರಹ ಆಧರಿತ ಪ್ರಸಾರ ಸೇವೆಗಳ ನಿಖರ ಮಾಹಿತಿಯನ್ನು ಈ ತಾಣ ಒಳಗೊಂಡಿದೆ. ಇದರ ಪ್ರಕಾರ, ನಮೋ ಟಿವೆ ಎನ್‍ಎಸ್‍ಎಸ್-6 ಉಪಗ್ರಹ ಸೇವೆ ಬಳಸಿಕೊಳ್ಳುತ್ತಿಯೀ ಉಪಗ್ರಹವು ಲುಕ್ಸೆಂಬರ್ಗ್ ಮೂಲದ ಎಸಿಎಸ್ ವರ್ಲ್ಡ್ ಸ್ಕೈಸ್ ಸಂಸ್ಥೆಗೆ ಸೇರಿದೆ. LyngSat ನಡೆಸುವ ಕ್ರಿಸ್ಟಿನ್ ಲಿಂಗಮಾರ್ಕ್ ಇದನ್ನು ‘ದಿ ವೈರ್’ ಪೋರ್ಟಲ್‍ಗೆ ಸ್ಪಷ್ಟಪಡಿಸಿದ್ದಾರೆ. ವೆಬ್‍ಸೈಟಿನಲ್ಲಿ ನಮೋ ಟಿವಿ ಲಿಸ್ಟ್ ಆಗಿರುವ ಸ್ಕ್ರೀನ್‍ಶಾಟ್ ಅನ್ನು ನೋಡಿ.

LyngSat ಮಾದರಿಯ ಸೇವೆ ಒದಗಿಸುವ ‘ಫ್ಲೈಸ್ಯಾಟ್; ವೆಬ್‍ಸೈಟ್ ಕೂಡ ನಮೋ ಟಿವಿ ಎನ್‍ಎಸ್‍ಎಸ್-6 ಉಪಗ್ರಹವನ್ನು ಬಳಸುತ್ತಿರುವುದನ್ನು ದೃಡಪಡಿಸಿದೆ.
ಸತ್ಯ ಹೀಗಿದ್ದರೂ, ಪ್ರಸಾರ ಇಲಾಖೆ ‘ವಿಶೇಷ ಸೇವೆ’ಯನ್ನಷ್ಟೇ ನೀಡುವ ನಮೋ ಟಿವೆಗೆ ಲೈಸೆನ್ಸ್ ಅಗತ್ಯವಿಲ್ಲ ಎಂದು ಜನರನ್ನು ದಾರಿ ತಪ್ಪಿಸುತ್ತಿದೆ. ಪ್ರಸಾರದ ಲೈಸೆನ್ಸ್ ಪಡೆಯದೇ ನಮೋ ಟಿವಿ ಉಪಗ್ರಹ ಬಳಸಿ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡುತ್ತಿದ್ದು, ನಿಯಮಾವಳಿಯ ಸ್ಪಷ್ಟ ಉಲ್ಲಂಘನೆ ಮಾಡುತ್ತಿದೆ.

ಇಲ್ಲಿ ಒಂದು ಪ್ರಶ್ನೆ ಎಂದರೆ, ನಾವೇ ನಮೋ ಟಿವಿ ಮಾಲಿಕರು ಎಂದು ಹೇಳಲು ಯಾರೂ ಮುಂದೆ ಬರುತ್ತಿಲ್ಲ! ಪ್ರಸಾರ ಇಲಾಖೆ ತಡಯಾಜ್ಞೆ ಒಡ್ಡಿರುವುದು ಸದ್ಯಕ್ಕೆ ಸಮಾಧಾನದ ಸಂಗತಿ. ಅಧಿಕಾರದ ದುರುಪಯೋಗವನ್ನು ಅದರ ಅತಿ ತಳಮಟ್ಟಕ್ಕೆ ಒಯ್ದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗುತ್ತಿದ್ದಾರೆ.
(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...