Homeಮುಖಪುಟಕಾನೂನು ಉಲ್ಲಂಘಿಸುತ್ತಿರುವ ನಮೋ ಟಿವಿ: ಲೈಸೆನ್ಸ್ ಇಲ್ಲದೇ ಉಪಗ್ರಹ ಬಳಕೆ!

ಕಾನೂನು ಉಲ್ಲಂಘಿಸುತ್ತಿರುವ ನಮೋ ಟಿವಿ: ಲೈಸೆನ್ಸ್ ಇಲ್ಲದೇ ಉಪಗ್ರಹ ಬಳಕೆ!

- Advertisement -
- Advertisement -

ಸಾಕಷ್ಟು ವಿವಾದ ಸೃಷ್ಟಿಸಿದ ಪ್ರಧಾನಿಯ ಪ್ರಪಗಂಡಾ ಚಾನೆಲ್ ನಮೋ ಟಿವಿ ಯಾವುದೇ ಲೈಸೆನ್ಸ್ ಪಡೆಯದೇ ತನ್ನ ಸಿಗ್ನಲ್ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್‍ಗೆ ಎನ್‍ಎಸ್‍ಎಸ್-6 ಉಪಗ್ರಹವನ್ನು ಬಳಸುತ್ತಿದೆ. ವ್ಯಕ್ತಿಯೋರ್ವನ ಅಜೆಂಡಾಗಳನ್ನು, ಹಿಕ್ಮತ್ತುಗಳನ್ನು ಪ್ರಸಾರ ಮಾಡಲು ಈ ನೆಲದ ಕಾನೂನನ್ನು ಧಿಕ್ಕರಿಸಿರುವುದು ದೇಶದ್ರೋಹವೇ ಅಲ್ಲವೇ?

ಪ್ರಧಾನಿ ಮತ್ತು ಬಿಜೆಪಿಯ ಚುನಾವಣಾ ಪ್ರಚಾರ ಮಾಡಲೆಂದೇ ಅತ್ಯಂತ ಅನುಮಾನಾಸ್ಪದ ರೀತಿಯಲ್ಲಿ ಆರಂಭಗೊಂಡ ನಮೋ ಚಾನೆಲ್, ಪ್ರಸಾರದ ನಿಯಮಗಳನ್ನು ಪಾಲಿಸಿದೆಯೇ ಮತ್ತು ಇದೆಲ್ಲ ಚುಮಾವಣಾ ನೀತಿ ಸಂಹಿತೆಯ ಉಲ್ಲಂಘನೆ ಅಲ್ಲವೇ ಎಂಬ ಪ್ರಶ್ನೆಗಳನ್ನು ಎತ್ತಿವೆ. ಆದರೆ ಮಾಹಿತಿ ಮತ್ತು ಪ್ರಸಾರ ಇಲಾಖೆ ಮತ್ತು ಚುನಾವಣಾ ಆಯೋಗ ಇನ್ನೂ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ ಮತ್ತು ಬರುವುದೂ ಇಲ್ಲ.
ವಾರ್ತಾ ಮತ್ತು ಪ್ರಸಾರ ಇಲಾಖೆ ಈಗಾಗಲೇ, ನಮೋ ಟಿವಿ ‘ವಿಶೇಷ ಸೇವೆಯ ಜಾಹಿರಾತು ಚಾನೆಲ್’ ಎಂದು ಘೋಷಿಸಿ, ಇದಕ್ಕೆಲ್ಲ ಲೈಸೆನ್ಸ್ ಅಗತ್ಯವಿಲ್ಲ ಎಂಬ ನಿಯಮವನ್ನು ಮುಂದೆ ಮಾಡಿದೆ. ಆದರೆ ಶುರುವಾದ ದಿನ ನ್ಯೂಸ್ ಚಾನೆಲ್ ಎಂದೇ ನಮೋ ಟಿವಿ ಹೇಳಿಕೊಂಡಿತ್ತು.

ಭಾರತದ ಕಾನೂನಿನ ಪ್ರಕಾರ, ಯಾವುದೇ ಚಾನೆಲ್ ಉಪಗ್ರಹಗಳಿಂದ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡಲು ಪ್ರಸಾರ ಇಲಾಖೆಯ ಅನುಮತಿ ಪಡೆಯಬೇಕು. ಕಂಪನಿಯ ಹಿನ್ನೆಲೆ ಮತ್ತು ಭದ್ರತಾ ವಿಷಯಗಳ ಪರಿಶೀಲನೆ ನಂತರವಷ್ಟೇ ಈ ಲೈಸೆನ್ಸ್ ನೀಡಲಾಗುತ್ತದೆ. ಆದರೆ ಇಂತಹ ಯಾವ ಲೈಸನ್ಸ್ ಹೊಂದಿರದ ನಮೋ ಟಿವಿ ಎನ್‍ಎಸ್‍ಎಸ್-6 ಉಪಗ್ರಹದಿಂದ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡುತ್ತಿದೆ.

LyngSat ನೀಡಿದ ಮಾಹಿತಿ

ಜಗತ್ತಿನ ಸಂವಹನ ಮತ್ತು ಸಂಪರ್ಕ ತಜ್ಞರು ಮಾಹಿತಿಗಾಗಿ LyngSat ವೆಬ್‍ಸೈಟ್ ಫಾಲೋ ಮಾಡುತ್ತಾರೆ. ವಿಶ್ವದ ಉಪಗ್ರಹ ಆಧರಿತ ಪ್ರಸಾರ ಸೇವೆಗಳ ನಿಖರ ಮಾಹಿತಿಯನ್ನು ಈ ತಾಣ ಒಳಗೊಂಡಿದೆ. ಇದರ ಪ್ರಕಾರ, ನಮೋ ಟಿವೆ ಎನ್‍ಎಸ್‍ಎಸ್-6 ಉಪಗ್ರಹ ಸೇವೆ ಬಳಸಿಕೊಳ್ಳುತ್ತಿಯೀ ಉಪಗ್ರಹವು ಲುಕ್ಸೆಂಬರ್ಗ್ ಮೂಲದ ಎಸಿಎಸ್ ವರ್ಲ್ಡ್ ಸ್ಕೈಸ್ ಸಂಸ್ಥೆಗೆ ಸೇರಿದೆ. LyngSat ನಡೆಸುವ ಕ್ರಿಸ್ಟಿನ್ ಲಿಂಗಮಾರ್ಕ್ ಇದನ್ನು ‘ದಿ ವೈರ್’ ಪೋರ್ಟಲ್‍ಗೆ ಸ್ಪಷ್ಟಪಡಿಸಿದ್ದಾರೆ. ವೆಬ್‍ಸೈಟಿನಲ್ಲಿ ನಮೋ ಟಿವಿ ಲಿಸ್ಟ್ ಆಗಿರುವ ಸ್ಕ್ರೀನ್‍ಶಾಟ್ ಅನ್ನು ನೋಡಿ.

LyngSat ಮಾದರಿಯ ಸೇವೆ ಒದಗಿಸುವ ‘ಫ್ಲೈಸ್ಯಾಟ್; ವೆಬ್‍ಸೈಟ್ ಕೂಡ ನಮೋ ಟಿವಿ ಎನ್‍ಎಸ್‍ಎಸ್-6 ಉಪಗ್ರಹವನ್ನು ಬಳಸುತ್ತಿರುವುದನ್ನು ದೃಡಪಡಿಸಿದೆ.
ಸತ್ಯ ಹೀಗಿದ್ದರೂ, ಪ್ರಸಾರ ಇಲಾಖೆ ‘ವಿಶೇಷ ಸೇವೆ’ಯನ್ನಷ್ಟೇ ನೀಡುವ ನಮೋ ಟಿವೆಗೆ ಲೈಸೆನ್ಸ್ ಅಗತ್ಯವಿಲ್ಲ ಎಂದು ಜನರನ್ನು ದಾರಿ ತಪ್ಪಿಸುತ್ತಿದೆ. ಪ್ರಸಾರದ ಲೈಸೆನ್ಸ್ ಪಡೆಯದೇ ನಮೋ ಟಿವಿ ಉಪಗ್ರಹ ಬಳಸಿ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡುತ್ತಿದ್ದು, ನಿಯಮಾವಳಿಯ ಸ್ಪಷ್ಟ ಉಲ್ಲಂಘನೆ ಮಾಡುತ್ತಿದೆ.

ಇಲ್ಲಿ ಒಂದು ಪ್ರಶ್ನೆ ಎಂದರೆ, ನಾವೇ ನಮೋ ಟಿವಿ ಮಾಲಿಕರು ಎಂದು ಹೇಳಲು ಯಾರೂ ಮುಂದೆ ಬರುತ್ತಿಲ್ಲ! ಪ್ರಸಾರ ಇಲಾಖೆ ತಡಯಾಜ್ಞೆ ಒಡ್ಡಿರುವುದು ಸದ್ಯಕ್ಕೆ ಸಮಾಧಾನದ ಸಂಗತಿ. ಅಧಿಕಾರದ ದುರುಪಯೋಗವನ್ನು ಅದರ ಅತಿ ತಳಮಟ್ಟಕ್ಕೆ ಒಯ್ದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗುತ್ತಿದ್ದಾರೆ.
(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...