Homeಮುಖಪುಟಕಾನೂನು ಉಲ್ಲಂಘಿಸುತ್ತಿರುವ ನಮೋ ಟಿವಿ: ಲೈಸೆನ್ಸ್ ಇಲ್ಲದೇ ಉಪಗ್ರಹ ಬಳಕೆ!

ಕಾನೂನು ಉಲ್ಲಂಘಿಸುತ್ತಿರುವ ನಮೋ ಟಿವಿ: ಲೈಸೆನ್ಸ್ ಇಲ್ಲದೇ ಉಪಗ್ರಹ ಬಳಕೆ!

- Advertisement -
- Advertisement -

ಸಾಕಷ್ಟು ವಿವಾದ ಸೃಷ್ಟಿಸಿದ ಪ್ರಧಾನಿಯ ಪ್ರಪಗಂಡಾ ಚಾನೆಲ್ ನಮೋ ಟಿವಿ ಯಾವುದೇ ಲೈಸೆನ್ಸ್ ಪಡೆಯದೇ ತನ್ನ ಸಿಗ್ನಲ್ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್‍ಗೆ ಎನ್‍ಎಸ್‍ಎಸ್-6 ಉಪಗ್ರಹವನ್ನು ಬಳಸುತ್ತಿದೆ. ವ್ಯಕ್ತಿಯೋರ್ವನ ಅಜೆಂಡಾಗಳನ್ನು, ಹಿಕ್ಮತ್ತುಗಳನ್ನು ಪ್ರಸಾರ ಮಾಡಲು ಈ ನೆಲದ ಕಾನೂನನ್ನು ಧಿಕ್ಕರಿಸಿರುವುದು ದೇಶದ್ರೋಹವೇ ಅಲ್ಲವೇ?

ಪ್ರಧಾನಿ ಮತ್ತು ಬಿಜೆಪಿಯ ಚುನಾವಣಾ ಪ್ರಚಾರ ಮಾಡಲೆಂದೇ ಅತ್ಯಂತ ಅನುಮಾನಾಸ್ಪದ ರೀತಿಯಲ್ಲಿ ಆರಂಭಗೊಂಡ ನಮೋ ಚಾನೆಲ್, ಪ್ರಸಾರದ ನಿಯಮಗಳನ್ನು ಪಾಲಿಸಿದೆಯೇ ಮತ್ತು ಇದೆಲ್ಲ ಚುಮಾವಣಾ ನೀತಿ ಸಂಹಿತೆಯ ಉಲ್ಲಂಘನೆ ಅಲ್ಲವೇ ಎಂಬ ಪ್ರಶ್ನೆಗಳನ್ನು ಎತ್ತಿವೆ. ಆದರೆ ಮಾಹಿತಿ ಮತ್ತು ಪ್ರಸಾರ ಇಲಾಖೆ ಮತ್ತು ಚುನಾವಣಾ ಆಯೋಗ ಇನ್ನೂ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ ಮತ್ತು ಬರುವುದೂ ಇಲ್ಲ.
ವಾರ್ತಾ ಮತ್ತು ಪ್ರಸಾರ ಇಲಾಖೆ ಈಗಾಗಲೇ, ನಮೋ ಟಿವಿ ‘ವಿಶೇಷ ಸೇವೆಯ ಜಾಹಿರಾತು ಚಾನೆಲ್’ ಎಂದು ಘೋಷಿಸಿ, ಇದಕ್ಕೆಲ್ಲ ಲೈಸೆನ್ಸ್ ಅಗತ್ಯವಿಲ್ಲ ಎಂಬ ನಿಯಮವನ್ನು ಮುಂದೆ ಮಾಡಿದೆ. ಆದರೆ ಶುರುವಾದ ದಿನ ನ್ಯೂಸ್ ಚಾನೆಲ್ ಎಂದೇ ನಮೋ ಟಿವಿ ಹೇಳಿಕೊಂಡಿತ್ತು.

ಭಾರತದ ಕಾನೂನಿನ ಪ್ರಕಾರ, ಯಾವುದೇ ಚಾನೆಲ್ ಉಪಗ್ರಹಗಳಿಂದ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡಲು ಪ್ರಸಾರ ಇಲಾಖೆಯ ಅನುಮತಿ ಪಡೆಯಬೇಕು. ಕಂಪನಿಯ ಹಿನ್ನೆಲೆ ಮತ್ತು ಭದ್ರತಾ ವಿಷಯಗಳ ಪರಿಶೀಲನೆ ನಂತರವಷ್ಟೇ ಈ ಲೈಸೆನ್ಸ್ ನೀಡಲಾಗುತ್ತದೆ. ಆದರೆ ಇಂತಹ ಯಾವ ಲೈಸನ್ಸ್ ಹೊಂದಿರದ ನಮೋ ಟಿವಿ ಎನ್‍ಎಸ್‍ಎಸ್-6 ಉಪಗ್ರಹದಿಂದ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡುತ್ತಿದೆ.

LyngSat ನೀಡಿದ ಮಾಹಿತಿ

ಜಗತ್ತಿನ ಸಂವಹನ ಮತ್ತು ಸಂಪರ್ಕ ತಜ್ಞರು ಮಾಹಿತಿಗಾಗಿ LyngSat ವೆಬ್‍ಸೈಟ್ ಫಾಲೋ ಮಾಡುತ್ತಾರೆ. ವಿಶ್ವದ ಉಪಗ್ರಹ ಆಧರಿತ ಪ್ರಸಾರ ಸೇವೆಗಳ ನಿಖರ ಮಾಹಿತಿಯನ್ನು ಈ ತಾಣ ಒಳಗೊಂಡಿದೆ. ಇದರ ಪ್ರಕಾರ, ನಮೋ ಟಿವೆ ಎನ್‍ಎಸ್‍ಎಸ್-6 ಉಪಗ್ರಹ ಸೇವೆ ಬಳಸಿಕೊಳ್ಳುತ್ತಿಯೀ ಉಪಗ್ರಹವು ಲುಕ್ಸೆಂಬರ್ಗ್ ಮೂಲದ ಎಸಿಎಸ್ ವರ್ಲ್ಡ್ ಸ್ಕೈಸ್ ಸಂಸ್ಥೆಗೆ ಸೇರಿದೆ. LyngSat ನಡೆಸುವ ಕ್ರಿಸ್ಟಿನ್ ಲಿಂಗಮಾರ್ಕ್ ಇದನ್ನು ‘ದಿ ವೈರ್’ ಪೋರ್ಟಲ್‍ಗೆ ಸ್ಪಷ್ಟಪಡಿಸಿದ್ದಾರೆ. ವೆಬ್‍ಸೈಟಿನಲ್ಲಿ ನಮೋ ಟಿವಿ ಲಿಸ್ಟ್ ಆಗಿರುವ ಸ್ಕ್ರೀನ್‍ಶಾಟ್ ಅನ್ನು ನೋಡಿ.

LyngSat ಮಾದರಿಯ ಸೇವೆ ಒದಗಿಸುವ ‘ಫ್ಲೈಸ್ಯಾಟ್; ವೆಬ್‍ಸೈಟ್ ಕೂಡ ನಮೋ ಟಿವಿ ಎನ್‍ಎಸ್‍ಎಸ್-6 ಉಪಗ್ರಹವನ್ನು ಬಳಸುತ್ತಿರುವುದನ್ನು ದೃಡಪಡಿಸಿದೆ.
ಸತ್ಯ ಹೀಗಿದ್ದರೂ, ಪ್ರಸಾರ ಇಲಾಖೆ ‘ವಿಶೇಷ ಸೇವೆ’ಯನ್ನಷ್ಟೇ ನೀಡುವ ನಮೋ ಟಿವೆಗೆ ಲೈಸೆನ್ಸ್ ಅಗತ್ಯವಿಲ್ಲ ಎಂದು ಜನರನ್ನು ದಾರಿ ತಪ್ಪಿಸುತ್ತಿದೆ. ಪ್ರಸಾರದ ಲೈಸೆನ್ಸ್ ಪಡೆಯದೇ ನಮೋ ಟಿವಿ ಉಪಗ್ರಹ ಬಳಸಿ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡುತ್ತಿದ್ದು, ನಿಯಮಾವಳಿಯ ಸ್ಪಷ್ಟ ಉಲ್ಲಂಘನೆ ಮಾಡುತ್ತಿದೆ.

ಇಲ್ಲಿ ಒಂದು ಪ್ರಶ್ನೆ ಎಂದರೆ, ನಾವೇ ನಮೋ ಟಿವಿ ಮಾಲಿಕರು ಎಂದು ಹೇಳಲು ಯಾರೂ ಮುಂದೆ ಬರುತ್ತಿಲ್ಲ! ಪ್ರಸಾರ ಇಲಾಖೆ ತಡಯಾಜ್ಞೆ ಒಡ್ಡಿರುವುದು ಸದ್ಯಕ್ಕೆ ಸಮಾಧಾನದ ಸಂಗತಿ. ಅಧಿಕಾರದ ದುರುಪಯೋಗವನ್ನು ಅದರ ಅತಿ ತಳಮಟ್ಟಕ್ಕೆ ಒಯ್ದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗುತ್ತಿದ್ದಾರೆ.
(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...