Homeಮುಖಪುಟಕಾನೂನು ಉಲ್ಲಂಘಿಸುತ್ತಿರುವ ನಮೋ ಟಿವಿ: ಲೈಸೆನ್ಸ್ ಇಲ್ಲದೇ ಉಪಗ್ರಹ ಬಳಕೆ!

ಕಾನೂನು ಉಲ್ಲಂಘಿಸುತ್ತಿರುವ ನಮೋ ಟಿವಿ: ಲೈಸೆನ್ಸ್ ಇಲ್ಲದೇ ಉಪಗ್ರಹ ಬಳಕೆ!

- Advertisement -
- Advertisement -

ಸಾಕಷ್ಟು ವಿವಾದ ಸೃಷ್ಟಿಸಿದ ಪ್ರಧಾನಿಯ ಪ್ರಪಗಂಡಾ ಚಾನೆಲ್ ನಮೋ ಟಿವಿ ಯಾವುದೇ ಲೈಸೆನ್ಸ್ ಪಡೆಯದೇ ತನ್ನ ಸಿಗ್ನಲ್ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್‍ಗೆ ಎನ್‍ಎಸ್‍ಎಸ್-6 ಉಪಗ್ರಹವನ್ನು ಬಳಸುತ್ತಿದೆ. ವ್ಯಕ್ತಿಯೋರ್ವನ ಅಜೆಂಡಾಗಳನ್ನು, ಹಿಕ್ಮತ್ತುಗಳನ್ನು ಪ್ರಸಾರ ಮಾಡಲು ಈ ನೆಲದ ಕಾನೂನನ್ನು ಧಿಕ್ಕರಿಸಿರುವುದು ದೇಶದ್ರೋಹವೇ ಅಲ್ಲವೇ?

ಪ್ರಧಾನಿ ಮತ್ತು ಬಿಜೆಪಿಯ ಚುನಾವಣಾ ಪ್ರಚಾರ ಮಾಡಲೆಂದೇ ಅತ್ಯಂತ ಅನುಮಾನಾಸ್ಪದ ರೀತಿಯಲ್ಲಿ ಆರಂಭಗೊಂಡ ನಮೋ ಚಾನೆಲ್, ಪ್ರಸಾರದ ನಿಯಮಗಳನ್ನು ಪಾಲಿಸಿದೆಯೇ ಮತ್ತು ಇದೆಲ್ಲ ಚುಮಾವಣಾ ನೀತಿ ಸಂಹಿತೆಯ ಉಲ್ಲಂಘನೆ ಅಲ್ಲವೇ ಎಂಬ ಪ್ರಶ್ನೆಗಳನ್ನು ಎತ್ತಿವೆ. ಆದರೆ ಮಾಹಿತಿ ಮತ್ತು ಪ್ರಸಾರ ಇಲಾಖೆ ಮತ್ತು ಚುನಾವಣಾ ಆಯೋಗ ಇನ್ನೂ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ ಮತ್ತು ಬರುವುದೂ ಇಲ್ಲ.
ವಾರ್ತಾ ಮತ್ತು ಪ್ರಸಾರ ಇಲಾಖೆ ಈಗಾಗಲೇ, ನಮೋ ಟಿವಿ ‘ವಿಶೇಷ ಸೇವೆಯ ಜಾಹಿರಾತು ಚಾನೆಲ್’ ಎಂದು ಘೋಷಿಸಿ, ಇದಕ್ಕೆಲ್ಲ ಲೈಸೆನ್ಸ್ ಅಗತ್ಯವಿಲ್ಲ ಎಂಬ ನಿಯಮವನ್ನು ಮುಂದೆ ಮಾಡಿದೆ. ಆದರೆ ಶುರುವಾದ ದಿನ ನ್ಯೂಸ್ ಚಾನೆಲ್ ಎಂದೇ ನಮೋ ಟಿವಿ ಹೇಳಿಕೊಂಡಿತ್ತು.

ಭಾರತದ ಕಾನೂನಿನ ಪ್ರಕಾರ, ಯಾವುದೇ ಚಾನೆಲ್ ಉಪಗ್ರಹಗಳಿಂದ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡಲು ಪ್ರಸಾರ ಇಲಾಖೆಯ ಅನುಮತಿ ಪಡೆಯಬೇಕು. ಕಂಪನಿಯ ಹಿನ್ನೆಲೆ ಮತ್ತು ಭದ್ರತಾ ವಿಷಯಗಳ ಪರಿಶೀಲನೆ ನಂತರವಷ್ಟೇ ಈ ಲೈಸೆನ್ಸ್ ನೀಡಲಾಗುತ್ತದೆ. ಆದರೆ ಇಂತಹ ಯಾವ ಲೈಸನ್ಸ್ ಹೊಂದಿರದ ನಮೋ ಟಿವಿ ಎನ್‍ಎಸ್‍ಎಸ್-6 ಉಪಗ್ರಹದಿಂದ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡುತ್ತಿದೆ.

LyngSat ನೀಡಿದ ಮಾಹಿತಿ

ಜಗತ್ತಿನ ಸಂವಹನ ಮತ್ತು ಸಂಪರ್ಕ ತಜ್ಞರು ಮಾಹಿತಿಗಾಗಿ LyngSat ವೆಬ್‍ಸೈಟ್ ಫಾಲೋ ಮಾಡುತ್ತಾರೆ. ವಿಶ್ವದ ಉಪಗ್ರಹ ಆಧರಿತ ಪ್ರಸಾರ ಸೇವೆಗಳ ನಿಖರ ಮಾಹಿತಿಯನ್ನು ಈ ತಾಣ ಒಳಗೊಂಡಿದೆ. ಇದರ ಪ್ರಕಾರ, ನಮೋ ಟಿವೆ ಎನ್‍ಎಸ್‍ಎಸ್-6 ಉಪಗ್ರಹ ಸೇವೆ ಬಳಸಿಕೊಳ್ಳುತ್ತಿಯೀ ಉಪಗ್ರಹವು ಲುಕ್ಸೆಂಬರ್ಗ್ ಮೂಲದ ಎಸಿಎಸ್ ವರ್ಲ್ಡ್ ಸ್ಕೈಸ್ ಸಂಸ್ಥೆಗೆ ಸೇರಿದೆ. LyngSat ನಡೆಸುವ ಕ್ರಿಸ್ಟಿನ್ ಲಿಂಗಮಾರ್ಕ್ ಇದನ್ನು ‘ದಿ ವೈರ್’ ಪೋರ್ಟಲ್‍ಗೆ ಸ್ಪಷ್ಟಪಡಿಸಿದ್ದಾರೆ. ವೆಬ್‍ಸೈಟಿನಲ್ಲಿ ನಮೋ ಟಿವಿ ಲಿಸ್ಟ್ ಆಗಿರುವ ಸ್ಕ್ರೀನ್‍ಶಾಟ್ ಅನ್ನು ನೋಡಿ.

LyngSat ಮಾದರಿಯ ಸೇವೆ ಒದಗಿಸುವ ‘ಫ್ಲೈಸ್ಯಾಟ್; ವೆಬ್‍ಸೈಟ್ ಕೂಡ ನಮೋ ಟಿವಿ ಎನ್‍ಎಸ್‍ಎಸ್-6 ಉಪಗ್ರಹವನ್ನು ಬಳಸುತ್ತಿರುವುದನ್ನು ದೃಡಪಡಿಸಿದೆ.
ಸತ್ಯ ಹೀಗಿದ್ದರೂ, ಪ್ರಸಾರ ಇಲಾಖೆ ‘ವಿಶೇಷ ಸೇವೆ’ಯನ್ನಷ್ಟೇ ನೀಡುವ ನಮೋ ಟಿವೆಗೆ ಲೈಸೆನ್ಸ್ ಅಗತ್ಯವಿಲ್ಲ ಎಂದು ಜನರನ್ನು ದಾರಿ ತಪ್ಪಿಸುತ್ತಿದೆ. ಪ್ರಸಾರದ ಲೈಸೆನ್ಸ್ ಪಡೆಯದೇ ನಮೋ ಟಿವಿ ಉಪಗ್ರಹ ಬಳಸಿ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡುತ್ತಿದ್ದು, ನಿಯಮಾವಳಿಯ ಸ್ಪಷ್ಟ ಉಲ್ಲಂಘನೆ ಮಾಡುತ್ತಿದೆ.

ಇಲ್ಲಿ ಒಂದು ಪ್ರಶ್ನೆ ಎಂದರೆ, ನಾವೇ ನಮೋ ಟಿವಿ ಮಾಲಿಕರು ಎಂದು ಹೇಳಲು ಯಾರೂ ಮುಂದೆ ಬರುತ್ತಿಲ್ಲ! ಪ್ರಸಾರ ಇಲಾಖೆ ತಡಯಾಜ್ಞೆ ಒಡ್ಡಿರುವುದು ಸದ್ಯಕ್ಕೆ ಸಮಾಧಾನದ ಸಂಗತಿ. ಅಧಿಕಾರದ ದುರುಪಯೋಗವನ್ನು ಅದರ ಅತಿ ತಳಮಟ್ಟಕ್ಕೆ ಒಯ್ದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗುತ್ತಿದ್ದಾರೆ.
(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...