Homeಮುಖಪುಟಕಾನೂನು ಉಲ್ಲಂಘಿಸುತ್ತಿರುವ ನಮೋ ಟಿವಿ: ಲೈಸೆನ್ಸ್ ಇಲ್ಲದೇ ಉಪಗ್ರಹ ಬಳಕೆ!

ಕಾನೂನು ಉಲ್ಲಂಘಿಸುತ್ತಿರುವ ನಮೋ ಟಿವಿ: ಲೈಸೆನ್ಸ್ ಇಲ್ಲದೇ ಉಪಗ್ರಹ ಬಳಕೆ!

- Advertisement -
- Advertisement -

ಸಾಕಷ್ಟು ವಿವಾದ ಸೃಷ್ಟಿಸಿದ ಪ್ರಧಾನಿಯ ಪ್ರಪಗಂಡಾ ಚಾನೆಲ್ ನಮೋ ಟಿವಿ ಯಾವುದೇ ಲೈಸೆನ್ಸ್ ಪಡೆಯದೇ ತನ್ನ ಸಿಗ್ನಲ್ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್‍ಗೆ ಎನ್‍ಎಸ್‍ಎಸ್-6 ಉಪಗ್ರಹವನ್ನು ಬಳಸುತ್ತಿದೆ. ವ್ಯಕ್ತಿಯೋರ್ವನ ಅಜೆಂಡಾಗಳನ್ನು, ಹಿಕ್ಮತ್ತುಗಳನ್ನು ಪ್ರಸಾರ ಮಾಡಲು ಈ ನೆಲದ ಕಾನೂನನ್ನು ಧಿಕ್ಕರಿಸಿರುವುದು ದೇಶದ್ರೋಹವೇ ಅಲ್ಲವೇ?

ಪ್ರಧಾನಿ ಮತ್ತು ಬಿಜೆಪಿಯ ಚುನಾವಣಾ ಪ್ರಚಾರ ಮಾಡಲೆಂದೇ ಅತ್ಯಂತ ಅನುಮಾನಾಸ್ಪದ ರೀತಿಯಲ್ಲಿ ಆರಂಭಗೊಂಡ ನಮೋ ಚಾನೆಲ್, ಪ್ರಸಾರದ ನಿಯಮಗಳನ್ನು ಪಾಲಿಸಿದೆಯೇ ಮತ್ತು ಇದೆಲ್ಲ ಚುಮಾವಣಾ ನೀತಿ ಸಂಹಿತೆಯ ಉಲ್ಲಂಘನೆ ಅಲ್ಲವೇ ಎಂಬ ಪ್ರಶ್ನೆಗಳನ್ನು ಎತ್ತಿವೆ. ಆದರೆ ಮಾಹಿತಿ ಮತ್ತು ಪ್ರಸಾರ ಇಲಾಖೆ ಮತ್ತು ಚುನಾವಣಾ ಆಯೋಗ ಇನ್ನೂ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ ಮತ್ತು ಬರುವುದೂ ಇಲ್ಲ.
ವಾರ್ತಾ ಮತ್ತು ಪ್ರಸಾರ ಇಲಾಖೆ ಈಗಾಗಲೇ, ನಮೋ ಟಿವಿ ‘ವಿಶೇಷ ಸೇವೆಯ ಜಾಹಿರಾತು ಚಾನೆಲ್’ ಎಂದು ಘೋಷಿಸಿ, ಇದಕ್ಕೆಲ್ಲ ಲೈಸೆನ್ಸ್ ಅಗತ್ಯವಿಲ್ಲ ಎಂಬ ನಿಯಮವನ್ನು ಮುಂದೆ ಮಾಡಿದೆ. ಆದರೆ ಶುರುವಾದ ದಿನ ನ್ಯೂಸ್ ಚಾನೆಲ್ ಎಂದೇ ನಮೋ ಟಿವಿ ಹೇಳಿಕೊಂಡಿತ್ತು.

ಭಾರತದ ಕಾನೂನಿನ ಪ್ರಕಾರ, ಯಾವುದೇ ಚಾನೆಲ್ ಉಪಗ್ರಹಗಳಿಂದ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡಲು ಪ್ರಸಾರ ಇಲಾಖೆಯ ಅನುಮತಿ ಪಡೆಯಬೇಕು. ಕಂಪನಿಯ ಹಿನ್ನೆಲೆ ಮತ್ತು ಭದ್ರತಾ ವಿಷಯಗಳ ಪರಿಶೀಲನೆ ನಂತರವಷ್ಟೇ ಈ ಲೈಸೆನ್ಸ್ ನೀಡಲಾಗುತ್ತದೆ. ಆದರೆ ಇಂತಹ ಯಾವ ಲೈಸನ್ಸ್ ಹೊಂದಿರದ ನಮೋ ಟಿವಿ ಎನ್‍ಎಸ್‍ಎಸ್-6 ಉಪಗ್ರಹದಿಂದ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡುತ್ತಿದೆ.

LyngSat ನೀಡಿದ ಮಾಹಿತಿ

ಜಗತ್ತಿನ ಸಂವಹನ ಮತ್ತು ಸಂಪರ್ಕ ತಜ್ಞರು ಮಾಹಿತಿಗಾಗಿ LyngSat ವೆಬ್‍ಸೈಟ್ ಫಾಲೋ ಮಾಡುತ್ತಾರೆ. ವಿಶ್ವದ ಉಪಗ್ರಹ ಆಧರಿತ ಪ್ರಸಾರ ಸೇವೆಗಳ ನಿಖರ ಮಾಹಿತಿಯನ್ನು ಈ ತಾಣ ಒಳಗೊಂಡಿದೆ. ಇದರ ಪ್ರಕಾರ, ನಮೋ ಟಿವೆ ಎನ್‍ಎಸ್‍ಎಸ್-6 ಉಪಗ್ರಹ ಸೇವೆ ಬಳಸಿಕೊಳ್ಳುತ್ತಿಯೀ ಉಪಗ್ರಹವು ಲುಕ್ಸೆಂಬರ್ಗ್ ಮೂಲದ ಎಸಿಎಸ್ ವರ್ಲ್ಡ್ ಸ್ಕೈಸ್ ಸಂಸ್ಥೆಗೆ ಸೇರಿದೆ. LyngSat ನಡೆಸುವ ಕ್ರಿಸ್ಟಿನ್ ಲಿಂಗಮಾರ್ಕ್ ಇದನ್ನು ‘ದಿ ವೈರ್’ ಪೋರ್ಟಲ್‍ಗೆ ಸ್ಪಷ್ಟಪಡಿಸಿದ್ದಾರೆ. ವೆಬ್‍ಸೈಟಿನಲ್ಲಿ ನಮೋ ಟಿವಿ ಲಿಸ್ಟ್ ಆಗಿರುವ ಸ್ಕ್ರೀನ್‍ಶಾಟ್ ಅನ್ನು ನೋಡಿ.

LyngSat ಮಾದರಿಯ ಸೇವೆ ಒದಗಿಸುವ ‘ಫ್ಲೈಸ್ಯಾಟ್; ವೆಬ್‍ಸೈಟ್ ಕೂಡ ನಮೋ ಟಿವಿ ಎನ್‍ಎಸ್‍ಎಸ್-6 ಉಪಗ್ರಹವನ್ನು ಬಳಸುತ್ತಿರುವುದನ್ನು ದೃಡಪಡಿಸಿದೆ.
ಸತ್ಯ ಹೀಗಿದ್ದರೂ, ಪ್ರಸಾರ ಇಲಾಖೆ ‘ವಿಶೇಷ ಸೇವೆ’ಯನ್ನಷ್ಟೇ ನೀಡುವ ನಮೋ ಟಿವೆಗೆ ಲೈಸೆನ್ಸ್ ಅಗತ್ಯವಿಲ್ಲ ಎಂದು ಜನರನ್ನು ದಾರಿ ತಪ್ಪಿಸುತ್ತಿದೆ. ಪ್ರಸಾರದ ಲೈಸೆನ್ಸ್ ಪಡೆಯದೇ ನಮೋ ಟಿವಿ ಉಪಗ್ರಹ ಬಳಸಿ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡುತ್ತಿದ್ದು, ನಿಯಮಾವಳಿಯ ಸ್ಪಷ್ಟ ಉಲ್ಲಂಘನೆ ಮಾಡುತ್ತಿದೆ.

ಇಲ್ಲಿ ಒಂದು ಪ್ರಶ್ನೆ ಎಂದರೆ, ನಾವೇ ನಮೋ ಟಿವಿ ಮಾಲಿಕರು ಎಂದು ಹೇಳಲು ಯಾರೂ ಮುಂದೆ ಬರುತ್ತಿಲ್ಲ! ಪ್ರಸಾರ ಇಲಾಖೆ ತಡಯಾಜ್ಞೆ ಒಡ್ಡಿರುವುದು ಸದ್ಯಕ್ಕೆ ಸಮಾಧಾನದ ಸಂಗತಿ. ಅಧಿಕಾರದ ದುರುಪಯೋಗವನ್ನು ಅದರ ಅತಿ ತಳಮಟ್ಟಕ್ಕೆ ಒಯ್ದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗುತ್ತಿದ್ದಾರೆ.
(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...