Homeಮುಖಪುಟಕಾನೂನು ಉಲ್ಲಂಘಿಸುತ್ತಿರುವ ನಮೋ ಟಿವಿ: ಲೈಸೆನ್ಸ್ ಇಲ್ಲದೇ ಉಪಗ್ರಹ ಬಳಕೆ!

ಕಾನೂನು ಉಲ್ಲಂಘಿಸುತ್ತಿರುವ ನಮೋ ಟಿವಿ: ಲೈಸೆನ್ಸ್ ಇಲ್ಲದೇ ಉಪಗ್ರಹ ಬಳಕೆ!

- Advertisement -
- Advertisement -

ಸಾಕಷ್ಟು ವಿವಾದ ಸೃಷ್ಟಿಸಿದ ಪ್ರಧಾನಿಯ ಪ್ರಪಗಂಡಾ ಚಾನೆಲ್ ನಮೋ ಟಿವಿ ಯಾವುದೇ ಲೈಸೆನ್ಸ್ ಪಡೆಯದೇ ತನ್ನ ಸಿಗ್ನಲ್ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್‍ಗೆ ಎನ್‍ಎಸ್‍ಎಸ್-6 ಉಪಗ್ರಹವನ್ನು ಬಳಸುತ್ತಿದೆ. ವ್ಯಕ್ತಿಯೋರ್ವನ ಅಜೆಂಡಾಗಳನ್ನು, ಹಿಕ್ಮತ್ತುಗಳನ್ನು ಪ್ರಸಾರ ಮಾಡಲು ಈ ನೆಲದ ಕಾನೂನನ್ನು ಧಿಕ್ಕರಿಸಿರುವುದು ದೇಶದ್ರೋಹವೇ ಅಲ್ಲವೇ?

ಪ್ರಧಾನಿ ಮತ್ತು ಬಿಜೆಪಿಯ ಚುನಾವಣಾ ಪ್ರಚಾರ ಮಾಡಲೆಂದೇ ಅತ್ಯಂತ ಅನುಮಾನಾಸ್ಪದ ರೀತಿಯಲ್ಲಿ ಆರಂಭಗೊಂಡ ನಮೋ ಚಾನೆಲ್, ಪ್ರಸಾರದ ನಿಯಮಗಳನ್ನು ಪಾಲಿಸಿದೆಯೇ ಮತ್ತು ಇದೆಲ್ಲ ಚುಮಾವಣಾ ನೀತಿ ಸಂಹಿತೆಯ ಉಲ್ಲಂಘನೆ ಅಲ್ಲವೇ ಎಂಬ ಪ್ರಶ್ನೆಗಳನ್ನು ಎತ್ತಿವೆ. ಆದರೆ ಮಾಹಿತಿ ಮತ್ತು ಪ್ರಸಾರ ಇಲಾಖೆ ಮತ್ತು ಚುನಾವಣಾ ಆಯೋಗ ಇನ್ನೂ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ ಮತ್ತು ಬರುವುದೂ ಇಲ್ಲ.
ವಾರ್ತಾ ಮತ್ತು ಪ್ರಸಾರ ಇಲಾಖೆ ಈಗಾಗಲೇ, ನಮೋ ಟಿವಿ ‘ವಿಶೇಷ ಸೇವೆಯ ಜಾಹಿರಾತು ಚಾನೆಲ್’ ಎಂದು ಘೋಷಿಸಿ, ಇದಕ್ಕೆಲ್ಲ ಲೈಸೆನ್ಸ್ ಅಗತ್ಯವಿಲ್ಲ ಎಂಬ ನಿಯಮವನ್ನು ಮುಂದೆ ಮಾಡಿದೆ. ಆದರೆ ಶುರುವಾದ ದಿನ ನ್ಯೂಸ್ ಚಾನೆಲ್ ಎಂದೇ ನಮೋ ಟಿವಿ ಹೇಳಿಕೊಂಡಿತ್ತು.

ಭಾರತದ ಕಾನೂನಿನ ಪ್ರಕಾರ, ಯಾವುದೇ ಚಾನೆಲ್ ಉಪಗ್ರಹಗಳಿಂದ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡಲು ಪ್ರಸಾರ ಇಲಾಖೆಯ ಅನುಮತಿ ಪಡೆಯಬೇಕು. ಕಂಪನಿಯ ಹಿನ್ನೆಲೆ ಮತ್ತು ಭದ್ರತಾ ವಿಷಯಗಳ ಪರಿಶೀಲನೆ ನಂತರವಷ್ಟೇ ಈ ಲೈಸೆನ್ಸ್ ನೀಡಲಾಗುತ್ತದೆ. ಆದರೆ ಇಂತಹ ಯಾವ ಲೈಸನ್ಸ್ ಹೊಂದಿರದ ನಮೋ ಟಿವಿ ಎನ್‍ಎಸ್‍ಎಸ್-6 ಉಪಗ್ರಹದಿಂದ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡುತ್ತಿದೆ.

LyngSat ನೀಡಿದ ಮಾಹಿತಿ

ಜಗತ್ತಿನ ಸಂವಹನ ಮತ್ತು ಸಂಪರ್ಕ ತಜ್ಞರು ಮಾಹಿತಿಗಾಗಿ LyngSat ವೆಬ್‍ಸೈಟ್ ಫಾಲೋ ಮಾಡುತ್ತಾರೆ. ವಿಶ್ವದ ಉಪಗ್ರಹ ಆಧರಿತ ಪ್ರಸಾರ ಸೇವೆಗಳ ನಿಖರ ಮಾಹಿತಿಯನ್ನು ಈ ತಾಣ ಒಳಗೊಂಡಿದೆ. ಇದರ ಪ್ರಕಾರ, ನಮೋ ಟಿವೆ ಎನ್‍ಎಸ್‍ಎಸ್-6 ಉಪಗ್ರಹ ಸೇವೆ ಬಳಸಿಕೊಳ್ಳುತ್ತಿಯೀ ಉಪಗ್ರಹವು ಲುಕ್ಸೆಂಬರ್ಗ್ ಮೂಲದ ಎಸಿಎಸ್ ವರ್ಲ್ಡ್ ಸ್ಕೈಸ್ ಸಂಸ್ಥೆಗೆ ಸೇರಿದೆ. LyngSat ನಡೆಸುವ ಕ್ರಿಸ್ಟಿನ್ ಲಿಂಗಮಾರ್ಕ್ ಇದನ್ನು ‘ದಿ ವೈರ್’ ಪೋರ್ಟಲ್‍ಗೆ ಸ್ಪಷ್ಟಪಡಿಸಿದ್ದಾರೆ. ವೆಬ್‍ಸೈಟಿನಲ್ಲಿ ನಮೋ ಟಿವಿ ಲಿಸ್ಟ್ ಆಗಿರುವ ಸ್ಕ್ರೀನ್‍ಶಾಟ್ ಅನ್ನು ನೋಡಿ.

LyngSat ಮಾದರಿಯ ಸೇವೆ ಒದಗಿಸುವ ‘ಫ್ಲೈಸ್ಯಾಟ್; ವೆಬ್‍ಸೈಟ್ ಕೂಡ ನಮೋ ಟಿವಿ ಎನ್‍ಎಸ್‍ಎಸ್-6 ಉಪಗ್ರಹವನ್ನು ಬಳಸುತ್ತಿರುವುದನ್ನು ದೃಡಪಡಿಸಿದೆ.
ಸತ್ಯ ಹೀಗಿದ್ದರೂ, ಪ್ರಸಾರ ಇಲಾಖೆ ‘ವಿಶೇಷ ಸೇವೆ’ಯನ್ನಷ್ಟೇ ನೀಡುವ ನಮೋ ಟಿವೆಗೆ ಲೈಸೆನ್ಸ್ ಅಗತ್ಯವಿಲ್ಲ ಎಂದು ಜನರನ್ನು ದಾರಿ ತಪ್ಪಿಸುತ್ತಿದೆ. ಪ್ರಸಾರದ ಲೈಸೆನ್ಸ್ ಪಡೆಯದೇ ನಮೋ ಟಿವಿ ಉಪಗ್ರಹ ಬಳಸಿ ಅಪ್‍ಲಿಂಕ್ ಮತ್ತು ಡೌನ್‍ಲಿಂಕ್ ಮಾಡುತ್ತಿದ್ದು, ನಿಯಮಾವಳಿಯ ಸ್ಪಷ್ಟ ಉಲ್ಲಂಘನೆ ಮಾಡುತ್ತಿದೆ.

ಇಲ್ಲಿ ಒಂದು ಪ್ರಶ್ನೆ ಎಂದರೆ, ನಾವೇ ನಮೋ ಟಿವಿ ಮಾಲಿಕರು ಎಂದು ಹೇಳಲು ಯಾರೂ ಮುಂದೆ ಬರುತ್ತಿಲ್ಲ! ಪ್ರಸಾರ ಇಲಾಖೆ ತಡಯಾಜ್ಞೆ ಒಡ್ಡಿರುವುದು ಸದ್ಯಕ್ಕೆ ಸಮಾಧಾನದ ಸಂಗತಿ. ಅಧಿಕಾರದ ದುರುಪಯೋಗವನ್ನು ಅದರ ಅತಿ ತಳಮಟ್ಟಕ್ಕೆ ಒಯ್ದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗುತ್ತಿದ್ದಾರೆ.
(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್-19 ಲಸಿಕೆ ಮತ್ತು ಯುವ ವಯಸ್ಕರ ಹಠಾತ್ ಸಾವುಗಳ ನಡುವೆ ಯಾವುದೇ ವೈಜ್ಞಾನಿಕ ಸಂಬಂಧ ಕಂಡುಬಂದಿಲ್ಲ: ಏಮ್ಸ್ ಅಧ್ಯಯನ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ನಡೆಸಿದ ಒಂದು ವರ್ಷದ ಸಮಗ್ರ, ಶವಪರೀಕ್ಷೆ ಆಧಾರಿತ ವೀಕ್ಷಣಾ ಅಧ್ಯಯನವು, ಯುವ ವಯಸ್ಕರಲ್ಲಿ ಕೋವಿಡ್-19 ಲಸಿಕೆಯನ್ನು ಹಠಾತ್ ಸಾವುಗಳೊಂದಿಗೆ ಸಂಪರ್ಕಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ, ಇದು ಕೋವಿಡ್ ಲಸಿಕೆಗಳ...

ಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರು 'ಗದ್ದಾರ್‌ಗಳು' (ದೇಶದ್ರೋಹಿಗಳು) ಮತ್ತು 'ಡ್ರಮೆಬಾಜ್' (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ.  ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ...

ಆಸ್ಟ್ರೇಲಿಯಾ | ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ : 12 ಜನರು ಸಾವು

ಭಾನುವಾರ (ಡಿ.14) ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ನಲ್ಲಿ ಆಯೋಜಿಸಿದ್ದ ಯಹೂದಿ ಸಮುದಾಯದ 'ಹನುಕ್ಕಾ' ಕಾರ್ಯಕ್ರಮದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....

ಕೋಲ್ಕತ್ತಾದಲ್ಲಿ ನಡೆದ ಅವ್ಯವಸ್ಥೆ: ‘ಮೆಸ್ಸಿ ಭಾರತ ಪ್ರವಾಸ 2025’ರ ಪ್ರಮುಖ ಆಯೋಜಕರಿಗೆ 14 ದಿನಗಳ ಕಸ್ಟಡಿ

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಲಿಯೋನೆಲ್ ಮೆಸ್ಸಿ ಅವರ ಇಂಡಿಯಾ ಟೂರ್ 2025 ರ ಪ್ರಮುಖ ಆಯೋಜಕರನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆಯು ಪ್ರತಿಭಟನೆಗಳಿಗೆ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ...

ದೆಹಲಿಗೆ ಬರುವ ನಮ್ಮ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ : ಡಿಕೆಶಿ

ದೆಹಲಿ ಬರುತ್ತಿರುವ ನಮ್ಮವರ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಬಿಜೆಪಿಯವರಿಗೆ ಯಾಕಿಷ್ಟು ಆತಂಕ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮ್‌ಲೀಲಾ...

ಹೊಸೂರು ವಿಮಾನ ನಿಲ್ದಾಣ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಿಂದ 2,900 ಎಕರೆ ಸ್ವಾಧೀನ ಸಾಧ್ಯತೆ

ಚೆನ್ನೈ: ಬೆಂಗಳೂರಿಗೆ ಬಹಳ ಹತ್ತಿರದಲ್ಲಿರುವ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ನಗರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಲ್ಲಿ ಸರ್ಕಾರಿ ಸ್ವಾಮ್ಯದ 800 ಎಕರೆ ಸೇರಿದಂತೆ ಸುಮಾರು 3,000...

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) 'ಅನುಕರಣೀಯ' ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ...

ಮುಸ್ಲಿಂ ಎಂದು ಪರಿಶೀಲಿಸಿ ಗುಂಪುಹಲ್ಲೆ: ತೀವ್ರ ದಾಳಿಗೆ ಒಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ  ಸಾವು

ನವಾಡಾ ಜಿಲ್ಲೆಯ ರೋಹ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ಗುಂಪು ಹಲ್ಲೆಯಲ್ಲಿ ಕ್ರೂರವಾಗಿ ಹಲ್ಲೆಗೊಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ ಮೊಹಮ್ಮದ್ ಅಥರ್ ಹುಸೇನ್ ಶುಕ್ರವಾರ ತಡರಾತ್ರಿ ಬಿಹಾರ್ಷರೀಫ್ ಸದರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಸೆಂಬರ್...

ಅಮೆರಿಕಾದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 2 ಸಾವು, 8 ಜನರಿಗೆ ತೀವ್ರ ಗಾಯಗಳಾಗಿವೆ

ಅಮೆರಿಕಾದ ರೊಡ್ ಐಲ್ಯಂಡ್ ರಾಜ್ಯದ ಪ್ರೊವಿಡೆನ್ಸ್ ನಗರದಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಸಮಯದಲ್ಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದಿದೆ, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಡಿಸೆಂಬರ್ 13ರ,...