Homeಅಂತರಾಷ್ಟ್ರೀಯಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

- Advertisement -
- Advertisement -

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ ನೆಟ್‌ವರ್ಕಿಂಗ್ ಮತ್ತು ಹೂಡಿಕೆಯ ಚರ್ಚೆಗಳಿಗೆ ಸೀಮಿತವಾಗಿದ್ದರೂ ಸಹ, ಈ ಹಿಂದೆ ಬಿಜೆಪಿ ನೀಡಿದ್ದ ಸ್ಪಷ್ಟನೆಯನ್ನು ಇವು ಪ್ರಶ್ನಿಸುವಂತೆ ಮಾಡಿವೆ. ಪುರಿಯವರ ಹೆಸರನ್ನು ಎಪ್‌ಸ್ಟೀನ್ ಕೇವಲ ‘ಸಾಂದರ್ಭಿಕವಾಗಿ ಬಳಸಿದ್ದಾರೆ’ ಎಂಬ ಬಿಜೆಪಿಯ ವಾದವು ಈಗ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಏಕೆಂದರೆ ಈ-ಇಮೇಲ್‌ಗಳು ಇಬ್ಬರ ನಡುವೆ ನಿಕಟ ಸಂಪರ್ಕವಿತ್ತೆಂದು ಸೂಚಿಸುತ್ತಿವೆ ಎಂದು ದಿ ವೈರ್ ವರದಿ ಮಾಡಿದೆ.

ಅಮೆರಿಕದ ನ್ಯಾಯ ಇಲಾಖೆಯು ಜನವರಿ 30, 2026ರಂದು ಬಿಡುಗಡೆ ಮಾಡಿರುವ ಸುಮಾರು 30 ಲಕ್ಷ ಪುಟಗಳ ಜೆಫ್ರಿ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹರ್ದೀಪ್ ಸಿಂಗ್ ಪುರಿ ಮತ್ತು ಎಪ್‌ಸ್ಟೀನ್‌ ನಡುವಿನ ಇ-ಮೇಲ್ ಸಂಭಾಷಣೆಗಳು ಲಭ್ಯವಾಗಿವೆ. ಪುರಿಯವರು ಎಪ್‌ಸ್ಟೀನ್ ಅನ್ನು ಆತನ ನ್ಯೂಯಾರ್ಕ್‌ನ ಮನೆಯಲ್ಲಿ ಕನಿಷ್ಠ ಮೂರು ಬಾರಿ (ಫೆಬ್ರವರಿ 4, 2015, ಜನವರಿ 6, 2016 ಮತ್ತು ಮೇ 19, 2017) ಭೇಟಿಯಾಗಿದ್ದರು ಎಂದು ದಾಖಲೆಗಳು ದೃಢಪಡಿಸಿವೆ. ಎಪ್‌ಸ್ಟೀನ್‌ ಲಿಂಕ್ಡ್‌ಇನ್ ಸಹ-ಸಂಸ್ಥಾಪಕ ರೀಡ್ ಹಾಫ್‌ಮನ್ ಸೇರಿದಂತೆ ಸಿಲಿಕಾನ್ ವ್ಯಾಲಿಯ ಪ್ರಮುಖ ಹೂಡಿಕೆದಾರರೊಂದಿಗೆ ಪುರಿಯವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದ. ಪುರಿಯವರು ಈ ಸಂಭಾಷಣೆಗಳಲ್ಲಿ ಪ್ರಧಾನಿ ಮೋದಿಯವರ ‘ಡಿಜಿಟಲ್ ಇಂಡಿಯಾ’ ಮತ್ತು ‘ಮೇಕ್ ಇನ್ ಇಂಡಿಯಾ’ ಯೋಜನೆಗಳ ಬಗ್ಗೆ ವಿವರಿಸಿದ್ದರು. ಅಂದಿನ ಸಮಯದಲ್ಲಿ ಪುರಿಯವರು ಯಾವುದೇ ಸಾರ್ವಜನಿಕ ಹುದ್ದೆಯಲ್ಲಿರಲಿಲ್ಲ ಎಂದು ವರದಿ ವಿವರಿಸಿದೆ.

ಈ ಹಿಂದೆ ಬಿಜೆಪಿ ಈ ಸಂಪರ್ಕವನ್ನು ಕೇವಲ ಎಪ್‌ಸ್ಟೀನ್‌ “ಹೆಸರು ಹೇಳಿಕೊಳ್ಳುವಿಕೆ” (name-dropping) ಎಂದು ತಳ್ಳಿಹಾಕಿತ್ತು. ಆದರೆ, ಹೊಸ ಇ-ಮೇಲ್‌ಗಳು ಇಬ್ಬರ ನಡುವೆ ನಿರಂತರ ಮತ್ತು ವ್ಯವಹಾರಿಕ ಪರಿಚಿತತೆ ಇತ್ತೆಂದು ತೋರಿಸುತ್ತಿವೆ. ಎಪ್‌ಸ್ಟೀನ್‌ನ ಇಮೇಲ್‌ಗಳಲ್ಲಿ ಭಾರತದ ಪ್ರಧಾನಿ ಮತ್ತು ಇತರರ ಬಗ್ಗೆ ಇರುವ ಉಲ್ಲೇಖಗಳನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ “ಅಪರಾಧಿಯ ನಿರರ್ಥಕ ಮಾತುಗಳು” ಎಂದು ತಿರಸ್ಕರಿಸಿದೆ ಎಂದು ವರದಿ ಹೇಳಿದೆ.

ಎಪ್‌ಸ್ಟೀನ್‌ ಜೊತೆ ಇ-ಮೇಲ್ ಸಂಭಾಷಣೆಗಳು ನಡೆದ ಸಮಯದಲ್ಲಿ ಹರ್ದೀಪ್‌ ಸಿಂಗ್ ಪುರಿಯವರು ಯಾವುದೇ ಸಾರ್ವಜನಿಕ ಅಥವಾ ಸರ್ಕಾರಿ ಹುದ್ದೆಯನ್ನು ಹೊಂದಿರಲಿಲ್ಲ. ವೃತ್ತಿಪರ ರಾಜತಾಂತ್ರಿಕರಾಗಿದ್ದ ಅವರು, ಭಾರತೀಯ ವಿದೇಶಾಂಗ ಸೇವೆಯಿಂದ ನಿವೃತ್ತರಾದ ನಂತರ, ನ್ಯೂಯಾರ್ಕ್‌ನಲ್ಲಿರುವ ‘ಇಂಟರ್ನ್ಯಾಷನಲ್ ಪೀಸ್ ಇನ್‌ಸ್ಟಿಟ್ಯೂಟ್’ ಎಂಬ ಪ್ರಮುಖ ಥಿಂಕ್-ಟ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅವರು 2014ರಲ್ಲಿ ಬಿಜೆಪಿ ಸೇರಿದರು ಮತ್ತು ಸುಮಾರು ಮೂರು ವರ್ಷಗಳ ನಂತರ, ಅಂದರೆ ಸೆಪ್ಟೆಂಬರ್ 2017ರಲ್ಲಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಸ್ತುತ, ಅವರು ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಸ್ತುತ ಬಿಡುಗಡೆಯಾದ ಫೈಲ್‌ಗಳು ಇ-ಮೇಲ್ ವೇಳಾಪಟ್ಟಿಗಳು, ಸಭೆಗಳ ದೃಢೀಕರಣ ಮತ್ತು ಭಾರತದ ಇಂಟರ್ನೆಟ್ ಆರ್ಥಿಕತೆಯ ವ್ಯವಹಾರಿಕ ಅವಕಾಶಗಳ ಬಗ್ಗೆ ನಡೆದ ಗಂಭೀರ ಚರ್ಚೆಗಳನ್ನು ಒಳಗೊಂಡಿವೆ. ಮುಖ್ಯವಾಗಿ, ಈ ಇ-ಮೇಲ್‌ಗಳು ಎಪ್‌ಸ್ಟೀನ್‌ ಭಾಗಿಯಾಗಿದ್ದ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿಲ್ಲ ಎಂದು ವರದಿಗಳು ಸ್ಪಷ್ಟಪಡಿಸಿವೆ. ಈ ಸಂಭಾಷಣೆಗಳು ಕೇವಲ ಹೂಡಿಕೆ ಮತ್ತು ವಾಣಿಜ್ಯ ವಿಷಯಗಳಿಗೆ ಮಾತ್ರ ಸೀಮಿತವಾಗಿದ್ದವು ಎಂಬುದು ಇಲ್ಲಿ ಗಮನಾರ್ಹ ಅಂಶವಾಗಿದೆ.

ಜೆಫ್ರಿ ಎಪ್‌ಸ್ಟೀನ್‌ನ ಸಂಪೂರ್ಣ ಕ್ರಿಮಿನಲ್ ಹಿನ್ನೆಲೆ 2018ರ ಸುಮಾರಿಗೆ ಜಗತ್ತಿಗೆ ಬಹಿರಂಗವಾಯಿತು. ಆದರೆ, ಅದಕ್ಕೂ ಮೊದಲೇ ಅಂದರೆ 2008ರಲ್ಲಿಯೇ ಫ್ಲೋರಿಡಾದಲ್ಲಿ ಅಪ್ರಾಪ್ತ ಬಾಲಕಿಯರ ಲೈಂಗಿಕ ಶೋಷಣೆಯ ಆರೋಪದ ಮೇಲೆ ಆತ ಶಿಕ್ಷೆಗೆ ಒಳಗಾಗಿದ್ದ. ಆದಾಗ್ಯೂ, ಆತ ಯುಎಸ್‌ನ ಶ್ರೀಮಂತ ಮತ್ತು ಪ್ರಸಿದ್ಧ ವ್ಯಕ್ತಿಗಳಿಗೆ ದಲ್ಲಾಳಿಯಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರೆಸಿದ್ದ. ಅವರಲ್ಲಿ ಹೆಚ್ಚಿನವರು ಈಗ ಆತನೊಂದಿಗೆ ಸಂಬಂಧ ಹೊಂದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದಾರೆ.

ಭಾರತದ ವಿದೇಶಾಂಗ ಸಚಿವಾಲಯವು ಎಪ್‌ಸ್ಟೀನ್ ಒಬ್ಬ ‘ಶಿಕ್ಷೆಗೊಳಗಾದ ಅಪರಾಧಿ’ ಎಂಬ ಅಂಶವನ್ನು ಒತ್ತಿಹೇಳಿದೆ. ಈ ಉಲ್ಲೇಖವು 2008 ರ ಶಿಕ್ಷೆಯಾಗಿದೆ. ಅಪ್ರಾಪ್ತ ವಯಸ್ಕರ ಲೈಂಗಿಕ ಕಳ್ಳಸಾಗಣೆಗಾಗಿ ಫೆಡರಲ್ ಆರೋಪದ ಮೇಲೆ ಜುಲೈ 2019ರಲ್ಲಿ ಎಪ್‌ಸ್ಟೀನ್ ಅನ್ನು ಮತ್ತೆ ಬಂಧಿಸಲಾಗಿತ್ತು. ಇದಾಗಿ, ಒಂದು ತಿಂಗಳಿಗೆ ಆತ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಎನ್ನಲಾಗಿದೆ.

“ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖವಾಗಿ ಎಂಬ ವಿಷಯದ ಕುರಿತು ಪ್ರತಿಕ್ರಿಯೆ ಕೋರಿ ನಾವು ಹರ್ದೀಪ್ ಸಿಂಗ್ ಪುರಿ ಅವರನ್ನು ಸಂಪರ್ಕಿಸಿದ್ದೆವು, ಈ ವೇಳೆ ಅವರು ಎಪ್‌ಸ್ಟೀನ್ ಜೊತೆಗಿನ ಭೇಟಿಯನ್ನು ಒಪ್ಪಿಕೊಂಡಿದ್ದಾರೆ, ಆದರೆ ಈ ಭೇಟಿಗಳು ಕೇವಲ ವ್ಯವಹಾರಿಕ ಉದ್ದೇಶಕ್ಕೆ ಸೀಮಿತವಾಗಿದ್ದವು ಎಂದು ಸ್ಪಷ್ಟಪಡಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿದ್ದ ಎಂಟು ವರ್ಷಗಳ ಅವಧಿಯಲ್ಲಿ ನಾನು ಆತನನ್ನು ಕೇವಲ ಮೂರು ಬಾರಿ ಮಾತ್ರ ಭೇಟಿಯಾಗಿದ್ದೆ. ಈ ಎಲ್ಲಾ ಭೇಟಿಗಳು ತಾನು ‘ಇಂಟರ್ನ್ಯಾಷನಲ್ ಪೀಸ್ ಇನ್‌ಸ್ಟಿಟ್ಯೂಟ್’ನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ನಡೆದವು ಎಂದು ಹೇಳಿದ್ದಾರೆ. ಎಪ್‌ಸ್ಟೀನ್‌ನ ಅಪರಾಧ ಹಿನ್ನೆಲೆಯ ಬಗ್ಗೆ ಆ ಸಮಯದಲ್ಲಿ ತನಗೆ ಯಾವುದೇ ಅರಿವಿರಲಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ” ಎಂದು ದಿ ವೈರ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...