Homeಅಂತರಾಷ್ಟ್ರೀಯಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

- Advertisement -
- Advertisement -

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ ನೆಟ್‌ವರ್ಕಿಂಗ್ ಮತ್ತು ಹೂಡಿಕೆಯ ಚರ್ಚೆಗಳಿಗೆ ಸೀಮಿತವಾಗಿದ್ದರೂ ಸಹ, ಈ ಹಿಂದೆ ಬಿಜೆಪಿ ನೀಡಿದ್ದ ಸ್ಪಷ್ಟನೆಯನ್ನು ಇವು ಪ್ರಶ್ನಿಸುವಂತೆ ಮಾಡಿವೆ. ಪುರಿಯವರ ಹೆಸರನ್ನು ಎಪ್‌ಸ್ಟೀನ್ ಕೇವಲ ‘ಸಾಂದರ್ಭಿಕವಾಗಿ ಬಳಸಿದ್ದಾರೆ’ ಎಂಬ ಬಿಜೆಪಿಯ ವಾದವು ಈಗ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಏಕೆಂದರೆ ಈ-ಇಮೇಲ್‌ಗಳು ಇಬ್ಬರ ನಡುವೆ ನಿಕಟ ಸಂಪರ್ಕವಿತ್ತೆಂದು ಸೂಚಿಸುತ್ತಿವೆ ಎಂದು ದಿ ವೈರ್ ವರದಿ ಮಾಡಿದೆ.

ಅಮೆರಿಕದ ನ್ಯಾಯ ಇಲಾಖೆಯು ಜನವರಿ 30, 2026ರಂದು ಬಿಡುಗಡೆ ಮಾಡಿರುವ ಸುಮಾರು 30 ಲಕ್ಷ ಪುಟಗಳ ಜೆಫ್ರಿ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹರ್ದೀಪ್ ಸಿಂಗ್ ಪುರಿ ಮತ್ತು ಎಪ್‌ಸ್ಟೀನ್‌ ನಡುವಿನ ಇ-ಮೇಲ್ ಸಂಭಾಷಣೆಗಳು ಲಭ್ಯವಾಗಿವೆ. ಪುರಿಯವರು ಎಪ್‌ಸ್ಟೀನ್ ಅನ್ನು ಆತನ ನ್ಯೂಯಾರ್ಕ್‌ನ ಮನೆಯಲ್ಲಿ ಕನಿಷ್ಠ ಮೂರು ಬಾರಿ (ಫೆಬ್ರವರಿ 4, 2015, ಜನವರಿ 6, 2016 ಮತ್ತು ಮೇ 19, 2017) ಭೇಟಿಯಾಗಿದ್ದರು ಎಂದು ದಾಖಲೆಗಳು ದೃಢಪಡಿಸಿವೆ. ಎಪ್‌ಸ್ಟೀನ್‌ ಲಿಂಕ್ಡ್‌ಇನ್ ಸಹ-ಸಂಸ್ಥಾಪಕ ರೀಡ್ ಹಾಫ್‌ಮನ್ ಸೇರಿದಂತೆ ಸಿಲಿಕಾನ್ ವ್ಯಾಲಿಯ ಪ್ರಮುಖ ಹೂಡಿಕೆದಾರರೊಂದಿಗೆ ಪುರಿಯವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದ. ಪುರಿಯವರು ಈ ಸಂಭಾಷಣೆಗಳಲ್ಲಿ ಪ್ರಧಾನಿ ಮೋದಿಯವರ ‘ಡಿಜಿಟಲ್ ಇಂಡಿಯಾ’ ಮತ್ತು ‘ಮೇಕ್ ಇನ್ ಇಂಡಿಯಾ’ ಯೋಜನೆಗಳ ಬಗ್ಗೆ ವಿವರಿಸಿದ್ದರು. ಅಂದಿನ ಸಮಯದಲ್ಲಿ ಪುರಿಯವರು ಯಾವುದೇ ಸಾರ್ವಜನಿಕ ಹುದ್ದೆಯಲ್ಲಿರಲಿಲ್ಲ ಎಂದು ವರದಿ ವಿವರಿಸಿದೆ.

ಈ ಹಿಂದೆ ಬಿಜೆಪಿ ಈ ಸಂಪರ್ಕವನ್ನು ಕೇವಲ ಎಪ್‌ಸ್ಟೀನ್‌ “ಹೆಸರು ಹೇಳಿಕೊಳ್ಳುವಿಕೆ” (name-dropping) ಎಂದು ತಳ್ಳಿಹಾಕಿತ್ತು. ಆದರೆ, ಹೊಸ ಇ-ಮೇಲ್‌ಗಳು ಇಬ್ಬರ ನಡುವೆ ನಿರಂತರ ಮತ್ತು ವ್ಯವಹಾರಿಕ ಪರಿಚಿತತೆ ಇತ್ತೆಂದು ತೋರಿಸುತ್ತಿವೆ. ಎಪ್‌ಸ್ಟೀನ್‌ನ ಇಮೇಲ್‌ಗಳಲ್ಲಿ ಭಾರತದ ಪ್ರಧಾನಿ ಮತ್ತು ಇತರರ ಬಗ್ಗೆ ಇರುವ ಉಲ್ಲೇಖಗಳನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ “ಅಪರಾಧಿಯ ನಿರರ್ಥಕ ಮಾತುಗಳು” ಎಂದು ತಿರಸ್ಕರಿಸಿದೆ ಎಂದು ವರದಿ ಹೇಳಿದೆ.

ಎಪ್‌ಸ್ಟೀನ್‌ ಜೊತೆ ಇ-ಮೇಲ್ ಸಂಭಾಷಣೆಗಳು ನಡೆದ ಸಮಯದಲ್ಲಿ ಹರ್ದೀಪ್‌ ಸಿಂಗ್ ಪುರಿಯವರು ಯಾವುದೇ ಸಾರ್ವಜನಿಕ ಅಥವಾ ಸರ್ಕಾರಿ ಹುದ್ದೆಯನ್ನು ಹೊಂದಿರಲಿಲ್ಲ. ವೃತ್ತಿಪರ ರಾಜತಾಂತ್ರಿಕರಾಗಿದ್ದ ಅವರು, ಭಾರತೀಯ ವಿದೇಶಾಂಗ ಸೇವೆಯಿಂದ ನಿವೃತ್ತರಾದ ನಂತರ, ನ್ಯೂಯಾರ್ಕ್‌ನಲ್ಲಿರುವ ‘ಇಂಟರ್ನ್ಯಾಷನಲ್ ಪೀಸ್ ಇನ್‌ಸ್ಟಿಟ್ಯೂಟ್’ ಎಂಬ ಪ್ರಮುಖ ಥಿಂಕ್-ಟ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅವರು 2014ರಲ್ಲಿ ಬಿಜೆಪಿ ಸೇರಿದರು ಮತ್ತು ಸುಮಾರು ಮೂರು ವರ್ಷಗಳ ನಂತರ, ಅಂದರೆ ಸೆಪ್ಟೆಂಬರ್ 2017ರಲ್ಲಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಸ್ತುತ, ಅವರು ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಸ್ತುತ ಬಿಡುಗಡೆಯಾದ ಫೈಲ್‌ಗಳು ಇ-ಮೇಲ್ ವೇಳಾಪಟ್ಟಿಗಳು, ಸಭೆಗಳ ದೃಢೀಕರಣ ಮತ್ತು ಭಾರತದ ಇಂಟರ್ನೆಟ್ ಆರ್ಥಿಕತೆಯ ವ್ಯವಹಾರಿಕ ಅವಕಾಶಗಳ ಬಗ್ಗೆ ನಡೆದ ಗಂಭೀರ ಚರ್ಚೆಗಳನ್ನು ಒಳಗೊಂಡಿವೆ. ಮುಖ್ಯವಾಗಿ, ಈ ಇ-ಮೇಲ್‌ಗಳು ಎಪ್‌ಸ್ಟೀನ್‌ ಭಾಗಿಯಾಗಿದ್ದ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿಲ್ಲ ಎಂದು ವರದಿಗಳು ಸ್ಪಷ್ಟಪಡಿಸಿವೆ. ಈ ಸಂಭಾಷಣೆಗಳು ಕೇವಲ ಹೂಡಿಕೆ ಮತ್ತು ವಾಣಿಜ್ಯ ವಿಷಯಗಳಿಗೆ ಮಾತ್ರ ಸೀಮಿತವಾಗಿದ್ದವು ಎಂಬುದು ಇಲ್ಲಿ ಗಮನಾರ್ಹ ಅಂಶವಾಗಿದೆ.

ಜೆಫ್ರಿ ಎಪ್‌ಸ್ಟೀನ್‌ನ ಸಂಪೂರ್ಣ ಕ್ರಿಮಿನಲ್ ಹಿನ್ನೆಲೆ 2018ರ ಸುಮಾರಿಗೆ ಜಗತ್ತಿಗೆ ಬಹಿರಂಗವಾಯಿತು. ಆದರೆ, ಅದಕ್ಕೂ ಮೊದಲೇ ಅಂದರೆ 2008ರಲ್ಲಿಯೇ ಫ್ಲೋರಿಡಾದಲ್ಲಿ ಅಪ್ರಾಪ್ತ ಬಾಲಕಿಯರ ಲೈಂಗಿಕ ಶೋಷಣೆಯ ಆರೋಪದ ಮೇಲೆ ಆತ ಶಿಕ್ಷೆಗೆ ಒಳಗಾಗಿದ್ದ. ಆದಾಗ್ಯೂ, ಆತ ಯುಎಸ್‌ನ ಶ್ರೀಮಂತ ಮತ್ತು ಪ್ರಸಿದ್ಧ ವ್ಯಕ್ತಿಗಳಿಗೆ ದಲ್ಲಾಳಿಯಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರೆಸಿದ್ದ. ಅವರಲ್ಲಿ ಹೆಚ್ಚಿನವರು ಈಗ ಆತನೊಂದಿಗೆ ಸಂಬಂಧ ಹೊಂದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದಾರೆ.

ಭಾರತದ ವಿದೇಶಾಂಗ ಸಚಿವಾಲಯವು ಎಪ್‌ಸ್ಟೀನ್ ಒಬ್ಬ ‘ಶಿಕ್ಷೆಗೊಳಗಾದ ಅಪರಾಧಿ’ ಎಂಬ ಅಂಶವನ್ನು ಒತ್ತಿಹೇಳಿದೆ. ಈ ಉಲ್ಲೇಖವು 2008 ರ ಶಿಕ್ಷೆಯಾಗಿದೆ. ಅಪ್ರಾಪ್ತ ವಯಸ್ಕರ ಲೈಂಗಿಕ ಕಳ್ಳಸಾಗಣೆಗಾಗಿ ಫೆಡರಲ್ ಆರೋಪದ ಮೇಲೆ ಜುಲೈ 2019ರಲ್ಲಿ ಎಪ್‌ಸ್ಟೀನ್ ಅನ್ನು ಮತ್ತೆ ಬಂಧಿಸಲಾಗಿತ್ತು. ಇದಾಗಿ, ಒಂದು ತಿಂಗಳಿಗೆ ಆತ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಎನ್ನಲಾಗಿದೆ.

“ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖವಾಗಿ ಎಂಬ ವಿಷಯದ ಕುರಿತು ಪ್ರತಿಕ್ರಿಯೆ ಕೋರಿ ನಾವು ಹರ್ದೀಪ್ ಸಿಂಗ್ ಪುರಿ ಅವರನ್ನು ಸಂಪರ್ಕಿಸಿದ್ದೆವು, ಈ ವೇಳೆ ಅವರು ಎಪ್‌ಸ್ಟೀನ್ ಜೊತೆಗಿನ ಭೇಟಿಯನ್ನು ಒಪ್ಪಿಕೊಂಡಿದ್ದಾರೆ, ಆದರೆ ಈ ಭೇಟಿಗಳು ಕೇವಲ ವ್ಯವಹಾರಿಕ ಉದ್ದೇಶಕ್ಕೆ ಸೀಮಿತವಾಗಿದ್ದವು ಎಂದು ಸ್ಪಷ್ಟಪಡಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿದ್ದ ಎಂಟು ವರ್ಷಗಳ ಅವಧಿಯಲ್ಲಿ ನಾನು ಆತನನ್ನು ಕೇವಲ ಮೂರು ಬಾರಿ ಮಾತ್ರ ಭೇಟಿಯಾಗಿದ್ದೆ. ಈ ಎಲ್ಲಾ ಭೇಟಿಗಳು ತಾನು ‘ಇಂಟರ್ನ್ಯಾಷನಲ್ ಪೀಸ್ ಇನ್‌ಸ್ಟಿಟ್ಯೂಟ್’ನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ನಡೆದವು ಎಂದು ಹೇಳಿದ್ದಾರೆ. ಎಪ್‌ಸ್ಟೀನ್‌ನ ಅಪರಾಧ ಹಿನ್ನೆಲೆಯ ಬಗ್ಗೆ ಆ ಸಮಯದಲ್ಲಿ ತನಗೆ ಯಾವುದೇ ಅರಿವಿರಲಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ” ಎಂದು ದಿ ವೈರ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...