Homeಅಂತರಾಷ್ಟ್ರೀಯಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

- Advertisement -
- Advertisement -

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ ನೆಟ್‌ವರ್ಕಿಂಗ್ ಮತ್ತು ಹೂಡಿಕೆಯ ಚರ್ಚೆಗಳಿಗೆ ಸೀಮಿತವಾಗಿದ್ದರೂ ಸಹ, ಈ ಹಿಂದೆ ಬಿಜೆಪಿ ನೀಡಿದ್ದ ಸ್ಪಷ್ಟನೆಯನ್ನು ಇವು ಪ್ರಶ್ನಿಸುವಂತೆ ಮಾಡಿವೆ. ಪುರಿಯವರ ಹೆಸರನ್ನು ಎಪ್‌ಸ್ಟೀನ್ ಕೇವಲ ‘ಸಾಂದರ್ಭಿಕವಾಗಿ ಬಳಸಿದ್ದಾರೆ’ ಎಂಬ ಬಿಜೆಪಿಯ ವಾದವು ಈಗ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಏಕೆಂದರೆ ಈ-ಇಮೇಲ್‌ಗಳು ಇಬ್ಬರ ನಡುವೆ ನಿಕಟ ಸಂಪರ್ಕವಿತ್ತೆಂದು ಸೂಚಿಸುತ್ತಿವೆ ಎಂದು ದಿ ವೈರ್ ವರದಿ ಮಾಡಿದೆ.

ಅಮೆರಿಕದ ನ್ಯಾಯ ಇಲಾಖೆಯು ಜನವರಿ 30, 2026ರಂದು ಬಿಡುಗಡೆ ಮಾಡಿರುವ ಸುಮಾರು 30 ಲಕ್ಷ ಪುಟಗಳ ಜೆಫ್ರಿ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹರ್ದೀಪ್ ಸಿಂಗ್ ಪುರಿ ಮತ್ತು ಎಪ್‌ಸ್ಟೀನ್‌ ನಡುವಿನ ಇ-ಮೇಲ್ ಸಂಭಾಷಣೆಗಳು ಲಭ್ಯವಾಗಿವೆ. ಪುರಿಯವರು ಎಪ್‌ಸ್ಟೀನ್ ಅನ್ನು ಆತನ ನ್ಯೂಯಾರ್ಕ್‌ನ ಮನೆಯಲ್ಲಿ ಕನಿಷ್ಠ ಮೂರು ಬಾರಿ (ಫೆಬ್ರವರಿ 4, 2015, ಜನವರಿ 6, 2016 ಮತ್ತು ಮೇ 19, 2017) ಭೇಟಿಯಾಗಿದ್ದರು ಎಂದು ದಾಖಲೆಗಳು ದೃಢಪಡಿಸಿವೆ. ಎಪ್‌ಸ್ಟೀನ್‌ ಲಿಂಕ್ಡ್‌ಇನ್ ಸಹ-ಸಂಸ್ಥಾಪಕ ರೀಡ್ ಹಾಫ್‌ಮನ್ ಸೇರಿದಂತೆ ಸಿಲಿಕಾನ್ ವ್ಯಾಲಿಯ ಪ್ರಮುಖ ಹೂಡಿಕೆದಾರರೊಂದಿಗೆ ಪುರಿಯವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದ. ಪುರಿಯವರು ಈ ಸಂಭಾಷಣೆಗಳಲ್ಲಿ ಪ್ರಧಾನಿ ಮೋದಿಯವರ ‘ಡಿಜಿಟಲ್ ಇಂಡಿಯಾ’ ಮತ್ತು ‘ಮೇಕ್ ಇನ್ ಇಂಡಿಯಾ’ ಯೋಜನೆಗಳ ಬಗ್ಗೆ ವಿವರಿಸಿದ್ದರು. ಅಂದಿನ ಸಮಯದಲ್ಲಿ ಪುರಿಯವರು ಯಾವುದೇ ಸಾರ್ವಜನಿಕ ಹುದ್ದೆಯಲ್ಲಿರಲಿಲ್ಲ ಎಂದು ವರದಿ ವಿವರಿಸಿದೆ.

ಈ ಹಿಂದೆ ಬಿಜೆಪಿ ಈ ಸಂಪರ್ಕವನ್ನು ಕೇವಲ ಎಪ್‌ಸ್ಟೀನ್‌ “ಹೆಸರು ಹೇಳಿಕೊಳ್ಳುವಿಕೆ” (name-dropping) ಎಂದು ತಳ್ಳಿಹಾಕಿತ್ತು. ಆದರೆ, ಹೊಸ ಇ-ಮೇಲ್‌ಗಳು ಇಬ್ಬರ ನಡುವೆ ನಿರಂತರ ಮತ್ತು ವ್ಯವಹಾರಿಕ ಪರಿಚಿತತೆ ಇತ್ತೆಂದು ತೋರಿಸುತ್ತಿವೆ. ಎಪ್‌ಸ್ಟೀನ್‌ನ ಇಮೇಲ್‌ಗಳಲ್ಲಿ ಭಾರತದ ಪ್ರಧಾನಿ ಮತ್ತು ಇತರರ ಬಗ್ಗೆ ಇರುವ ಉಲ್ಲೇಖಗಳನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ “ಅಪರಾಧಿಯ ನಿರರ್ಥಕ ಮಾತುಗಳು” ಎಂದು ತಿರಸ್ಕರಿಸಿದೆ ಎಂದು ವರದಿ ಹೇಳಿದೆ.

ಎಪ್‌ಸ್ಟೀನ್‌ ಜೊತೆ ಇ-ಮೇಲ್ ಸಂಭಾಷಣೆಗಳು ನಡೆದ ಸಮಯದಲ್ಲಿ ಹರ್ದೀಪ್‌ ಸಿಂಗ್ ಪುರಿಯವರು ಯಾವುದೇ ಸಾರ್ವಜನಿಕ ಅಥವಾ ಸರ್ಕಾರಿ ಹುದ್ದೆಯನ್ನು ಹೊಂದಿರಲಿಲ್ಲ. ವೃತ್ತಿಪರ ರಾಜತಾಂತ್ರಿಕರಾಗಿದ್ದ ಅವರು, ಭಾರತೀಯ ವಿದೇಶಾಂಗ ಸೇವೆಯಿಂದ ನಿವೃತ್ತರಾದ ನಂತರ, ನ್ಯೂಯಾರ್ಕ್‌ನಲ್ಲಿರುವ ‘ಇಂಟರ್ನ್ಯಾಷನಲ್ ಪೀಸ್ ಇನ್‌ಸ್ಟಿಟ್ಯೂಟ್’ ಎಂಬ ಪ್ರಮುಖ ಥಿಂಕ್-ಟ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅವರು 2014ರಲ್ಲಿ ಬಿಜೆಪಿ ಸೇರಿದರು ಮತ್ತು ಸುಮಾರು ಮೂರು ವರ್ಷಗಳ ನಂತರ, ಅಂದರೆ ಸೆಪ್ಟೆಂಬರ್ 2017ರಲ್ಲಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಸ್ತುತ, ಅವರು ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಸ್ತುತ ಬಿಡುಗಡೆಯಾದ ಫೈಲ್‌ಗಳು ಇ-ಮೇಲ್ ವೇಳಾಪಟ್ಟಿಗಳು, ಸಭೆಗಳ ದೃಢೀಕರಣ ಮತ್ತು ಭಾರತದ ಇಂಟರ್ನೆಟ್ ಆರ್ಥಿಕತೆಯ ವ್ಯವಹಾರಿಕ ಅವಕಾಶಗಳ ಬಗ್ಗೆ ನಡೆದ ಗಂಭೀರ ಚರ್ಚೆಗಳನ್ನು ಒಳಗೊಂಡಿವೆ. ಮುಖ್ಯವಾಗಿ, ಈ ಇ-ಮೇಲ್‌ಗಳು ಎಪ್‌ಸ್ಟೀನ್‌ ಭಾಗಿಯಾಗಿದ್ದ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿಲ್ಲ ಎಂದು ವರದಿಗಳು ಸ್ಪಷ್ಟಪಡಿಸಿವೆ. ಈ ಸಂಭಾಷಣೆಗಳು ಕೇವಲ ಹೂಡಿಕೆ ಮತ್ತು ವಾಣಿಜ್ಯ ವಿಷಯಗಳಿಗೆ ಮಾತ್ರ ಸೀಮಿತವಾಗಿದ್ದವು ಎಂಬುದು ಇಲ್ಲಿ ಗಮನಾರ್ಹ ಅಂಶವಾಗಿದೆ.

ಜೆಫ್ರಿ ಎಪ್‌ಸ್ಟೀನ್‌ನ ಸಂಪೂರ್ಣ ಕ್ರಿಮಿನಲ್ ಹಿನ್ನೆಲೆ 2018ರ ಸುಮಾರಿಗೆ ಜಗತ್ತಿಗೆ ಬಹಿರಂಗವಾಯಿತು. ಆದರೆ, ಅದಕ್ಕೂ ಮೊದಲೇ ಅಂದರೆ 2008ರಲ್ಲಿಯೇ ಫ್ಲೋರಿಡಾದಲ್ಲಿ ಅಪ್ರಾಪ್ತ ಬಾಲಕಿಯರ ಲೈಂಗಿಕ ಶೋಷಣೆಯ ಆರೋಪದ ಮೇಲೆ ಆತ ಶಿಕ್ಷೆಗೆ ಒಳಗಾಗಿದ್ದ. ಆದಾಗ್ಯೂ, ಆತ ಯುಎಸ್‌ನ ಶ್ರೀಮಂತ ಮತ್ತು ಪ್ರಸಿದ್ಧ ವ್ಯಕ್ತಿಗಳಿಗೆ ದಲ್ಲಾಳಿಯಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರೆಸಿದ್ದ. ಅವರಲ್ಲಿ ಹೆಚ್ಚಿನವರು ಈಗ ಆತನೊಂದಿಗೆ ಸಂಬಂಧ ಹೊಂದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದಾರೆ.

ಭಾರತದ ವಿದೇಶಾಂಗ ಸಚಿವಾಲಯವು ಎಪ್‌ಸ್ಟೀನ್ ಒಬ್ಬ ‘ಶಿಕ್ಷೆಗೊಳಗಾದ ಅಪರಾಧಿ’ ಎಂಬ ಅಂಶವನ್ನು ಒತ್ತಿಹೇಳಿದೆ. ಈ ಉಲ್ಲೇಖವು 2008 ರ ಶಿಕ್ಷೆಯಾಗಿದೆ. ಅಪ್ರಾಪ್ತ ವಯಸ್ಕರ ಲೈಂಗಿಕ ಕಳ್ಳಸಾಗಣೆಗಾಗಿ ಫೆಡರಲ್ ಆರೋಪದ ಮೇಲೆ ಜುಲೈ 2019ರಲ್ಲಿ ಎಪ್‌ಸ್ಟೀನ್ ಅನ್ನು ಮತ್ತೆ ಬಂಧಿಸಲಾಗಿತ್ತು. ಇದಾಗಿ, ಒಂದು ತಿಂಗಳಿಗೆ ಆತ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಎನ್ನಲಾಗಿದೆ.

“ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖವಾಗಿ ಎಂಬ ವಿಷಯದ ಕುರಿತು ಪ್ರತಿಕ್ರಿಯೆ ಕೋರಿ ನಾವು ಹರ್ದೀಪ್ ಸಿಂಗ್ ಪುರಿ ಅವರನ್ನು ಸಂಪರ್ಕಿಸಿದ್ದೆವು, ಈ ವೇಳೆ ಅವರು ಎಪ್‌ಸ್ಟೀನ್ ಜೊತೆಗಿನ ಭೇಟಿಯನ್ನು ಒಪ್ಪಿಕೊಂಡಿದ್ದಾರೆ, ಆದರೆ ಈ ಭೇಟಿಗಳು ಕೇವಲ ವ್ಯವಹಾರಿಕ ಉದ್ದೇಶಕ್ಕೆ ಸೀಮಿತವಾಗಿದ್ದವು ಎಂದು ಸ್ಪಷ್ಟಪಡಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿದ್ದ ಎಂಟು ವರ್ಷಗಳ ಅವಧಿಯಲ್ಲಿ ನಾನು ಆತನನ್ನು ಕೇವಲ ಮೂರು ಬಾರಿ ಮಾತ್ರ ಭೇಟಿಯಾಗಿದ್ದೆ. ಈ ಎಲ್ಲಾ ಭೇಟಿಗಳು ತಾನು ‘ಇಂಟರ್ನ್ಯಾಷನಲ್ ಪೀಸ್ ಇನ್‌ಸ್ಟಿಟ್ಯೂಟ್’ನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ನಡೆದವು ಎಂದು ಹೇಳಿದ್ದಾರೆ. ಎಪ್‌ಸ್ಟೀನ್‌ನ ಅಪರಾಧ ಹಿನ್ನೆಲೆಯ ಬಗ್ಗೆ ಆ ಸಮಯದಲ್ಲಿ ತನಗೆ ಯಾವುದೇ ಅರಿವಿರಲಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ” ಎಂದು ದಿ ವೈರ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....