Homeಅಂತರಾಷ್ಟ್ರೀಯಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

- Advertisement -
- Advertisement -

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ ನೆಟ್‌ವರ್ಕಿಂಗ್ ಮತ್ತು ಹೂಡಿಕೆಯ ಚರ್ಚೆಗಳಿಗೆ ಸೀಮಿತವಾಗಿದ್ದರೂ ಸಹ, ಈ ಹಿಂದೆ ಬಿಜೆಪಿ ನೀಡಿದ್ದ ಸ್ಪಷ್ಟನೆಯನ್ನು ಇವು ಪ್ರಶ್ನಿಸುವಂತೆ ಮಾಡಿವೆ. ಪುರಿಯವರ ಹೆಸರನ್ನು ಎಪ್‌ಸ್ಟೀನ್ ಕೇವಲ ‘ಸಾಂದರ್ಭಿಕವಾಗಿ ಬಳಸಿದ್ದಾರೆ’ ಎಂಬ ಬಿಜೆಪಿಯ ವಾದವು ಈಗ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಏಕೆಂದರೆ ಈ-ಇಮೇಲ್‌ಗಳು ಇಬ್ಬರ ನಡುವೆ ನಿಕಟ ಸಂಪರ್ಕವಿತ್ತೆಂದು ಸೂಚಿಸುತ್ತಿವೆ ಎಂದು ದಿ ವೈರ್ ವರದಿ ಮಾಡಿದೆ.

ಅಮೆರಿಕದ ನ್ಯಾಯ ಇಲಾಖೆಯು ಜನವರಿ 30, 2026ರಂದು ಬಿಡುಗಡೆ ಮಾಡಿರುವ ಸುಮಾರು 30 ಲಕ್ಷ ಪುಟಗಳ ಜೆಫ್ರಿ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹರ್ದೀಪ್ ಸಿಂಗ್ ಪುರಿ ಮತ್ತು ಎಪ್‌ಸ್ಟೀನ್‌ ನಡುವಿನ ಇ-ಮೇಲ್ ಸಂಭಾಷಣೆಗಳು ಲಭ್ಯವಾಗಿವೆ. ಪುರಿಯವರು ಎಪ್‌ಸ್ಟೀನ್ ಅನ್ನು ಆತನ ನ್ಯೂಯಾರ್ಕ್‌ನ ಮನೆಯಲ್ಲಿ ಕನಿಷ್ಠ ಮೂರು ಬಾರಿ (ಫೆಬ್ರವರಿ 4, 2015, ಜನವರಿ 6, 2016 ಮತ್ತು ಮೇ 19, 2017) ಭೇಟಿಯಾಗಿದ್ದರು ಎಂದು ದಾಖಲೆಗಳು ದೃಢಪಡಿಸಿವೆ. ಎಪ್‌ಸ್ಟೀನ್‌ ಲಿಂಕ್ಡ್‌ಇನ್ ಸಹ-ಸಂಸ್ಥಾಪಕ ರೀಡ್ ಹಾಫ್‌ಮನ್ ಸೇರಿದಂತೆ ಸಿಲಿಕಾನ್ ವ್ಯಾಲಿಯ ಪ್ರಮುಖ ಹೂಡಿಕೆದಾರರೊಂದಿಗೆ ಪುರಿಯವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದ. ಪುರಿಯವರು ಈ ಸಂಭಾಷಣೆಗಳಲ್ಲಿ ಪ್ರಧಾನಿ ಮೋದಿಯವರ ‘ಡಿಜಿಟಲ್ ಇಂಡಿಯಾ’ ಮತ್ತು ‘ಮೇಕ್ ಇನ್ ಇಂಡಿಯಾ’ ಯೋಜನೆಗಳ ಬಗ್ಗೆ ವಿವರಿಸಿದ್ದರು. ಅಂದಿನ ಸಮಯದಲ್ಲಿ ಪುರಿಯವರು ಯಾವುದೇ ಸಾರ್ವಜನಿಕ ಹುದ್ದೆಯಲ್ಲಿರಲಿಲ್ಲ ಎಂದು ವರದಿ ವಿವರಿಸಿದೆ.

ಈ ಹಿಂದೆ ಬಿಜೆಪಿ ಈ ಸಂಪರ್ಕವನ್ನು ಕೇವಲ ಎಪ್‌ಸ್ಟೀನ್‌ “ಹೆಸರು ಹೇಳಿಕೊಳ್ಳುವಿಕೆ” (name-dropping) ಎಂದು ತಳ್ಳಿಹಾಕಿತ್ತು. ಆದರೆ, ಹೊಸ ಇ-ಮೇಲ್‌ಗಳು ಇಬ್ಬರ ನಡುವೆ ನಿರಂತರ ಮತ್ತು ವ್ಯವಹಾರಿಕ ಪರಿಚಿತತೆ ಇತ್ತೆಂದು ತೋರಿಸುತ್ತಿವೆ. ಎಪ್‌ಸ್ಟೀನ್‌ನ ಇಮೇಲ್‌ಗಳಲ್ಲಿ ಭಾರತದ ಪ್ರಧಾನಿ ಮತ್ತು ಇತರರ ಬಗ್ಗೆ ಇರುವ ಉಲ್ಲೇಖಗಳನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ “ಅಪರಾಧಿಯ ನಿರರ್ಥಕ ಮಾತುಗಳು” ಎಂದು ತಿರಸ್ಕರಿಸಿದೆ ಎಂದು ವರದಿ ಹೇಳಿದೆ.

ಎಪ್‌ಸ್ಟೀನ್‌ ಜೊತೆ ಇ-ಮೇಲ್ ಸಂಭಾಷಣೆಗಳು ನಡೆದ ಸಮಯದಲ್ಲಿ ಹರ್ದೀಪ್‌ ಸಿಂಗ್ ಪುರಿಯವರು ಯಾವುದೇ ಸಾರ್ವಜನಿಕ ಅಥವಾ ಸರ್ಕಾರಿ ಹುದ್ದೆಯನ್ನು ಹೊಂದಿರಲಿಲ್ಲ. ವೃತ್ತಿಪರ ರಾಜತಾಂತ್ರಿಕರಾಗಿದ್ದ ಅವರು, ಭಾರತೀಯ ವಿದೇಶಾಂಗ ಸೇವೆಯಿಂದ ನಿವೃತ್ತರಾದ ನಂತರ, ನ್ಯೂಯಾರ್ಕ್‌ನಲ್ಲಿರುವ ‘ಇಂಟರ್ನ್ಯಾಷನಲ್ ಪೀಸ್ ಇನ್‌ಸ್ಟಿಟ್ಯೂಟ್’ ಎಂಬ ಪ್ರಮುಖ ಥಿಂಕ್-ಟ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅವರು 2014ರಲ್ಲಿ ಬಿಜೆಪಿ ಸೇರಿದರು ಮತ್ತು ಸುಮಾರು ಮೂರು ವರ್ಷಗಳ ನಂತರ, ಅಂದರೆ ಸೆಪ್ಟೆಂಬರ್ 2017ರಲ್ಲಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಸ್ತುತ, ಅವರು ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಸ್ತುತ ಬಿಡುಗಡೆಯಾದ ಫೈಲ್‌ಗಳು ಇ-ಮೇಲ್ ವೇಳಾಪಟ್ಟಿಗಳು, ಸಭೆಗಳ ದೃಢೀಕರಣ ಮತ್ತು ಭಾರತದ ಇಂಟರ್ನೆಟ್ ಆರ್ಥಿಕತೆಯ ವ್ಯವಹಾರಿಕ ಅವಕಾಶಗಳ ಬಗ್ಗೆ ನಡೆದ ಗಂಭೀರ ಚರ್ಚೆಗಳನ್ನು ಒಳಗೊಂಡಿವೆ. ಮುಖ್ಯವಾಗಿ, ಈ ಇ-ಮೇಲ್‌ಗಳು ಎಪ್‌ಸ್ಟೀನ್‌ ಭಾಗಿಯಾಗಿದ್ದ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿಲ್ಲ ಎಂದು ವರದಿಗಳು ಸ್ಪಷ್ಟಪಡಿಸಿವೆ. ಈ ಸಂಭಾಷಣೆಗಳು ಕೇವಲ ಹೂಡಿಕೆ ಮತ್ತು ವಾಣಿಜ್ಯ ವಿಷಯಗಳಿಗೆ ಮಾತ್ರ ಸೀಮಿತವಾಗಿದ್ದವು ಎಂಬುದು ಇಲ್ಲಿ ಗಮನಾರ್ಹ ಅಂಶವಾಗಿದೆ.

ಜೆಫ್ರಿ ಎಪ್‌ಸ್ಟೀನ್‌ನ ಸಂಪೂರ್ಣ ಕ್ರಿಮಿನಲ್ ಹಿನ್ನೆಲೆ 2018ರ ಸುಮಾರಿಗೆ ಜಗತ್ತಿಗೆ ಬಹಿರಂಗವಾಯಿತು. ಆದರೆ, ಅದಕ್ಕೂ ಮೊದಲೇ ಅಂದರೆ 2008ರಲ್ಲಿಯೇ ಫ್ಲೋರಿಡಾದಲ್ಲಿ ಅಪ್ರಾಪ್ತ ಬಾಲಕಿಯರ ಲೈಂಗಿಕ ಶೋಷಣೆಯ ಆರೋಪದ ಮೇಲೆ ಆತ ಶಿಕ್ಷೆಗೆ ಒಳಗಾಗಿದ್ದ. ಆದಾಗ್ಯೂ, ಆತ ಯುಎಸ್‌ನ ಶ್ರೀಮಂತ ಮತ್ತು ಪ್ರಸಿದ್ಧ ವ್ಯಕ್ತಿಗಳಿಗೆ ದಲ್ಲಾಳಿಯಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರೆಸಿದ್ದ. ಅವರಲ್ಲಿ ಹೆಚ್ಚಿನವರು ಈಗ ಆತನೊಂದಿಗೆ ಸಂಬಂಧ ಹೊಂದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದಾರೆ.

ಭಾರತದ ವಿದೇಶಾಂಗ ಸಚಿವಾಲಯವು ಎಪ್‌ಸ್ಟೀನ್ ಒಬ್ಬ ‘ಶಿಕ್ಷೆಗೊಳಗಾದ ಅಪರಾಧಿ’ ಎಂಬ ಅಂಶವನ್ನು ಒತ್ತಿಹೇಳಿದೆ. ಈ ಉಲ್ಲೇಖವು 2008 ರ ಶಿಕ್ಷೆಯಾಗಿದೆ. ಅಪ್ರಾಪ್ತ ವಯಸ್ಕರ ಲೈಂಗಿಕ ಕಳ್ಳಸಾಗಣೆಗಾಗಿ ಫೆಡರಲ್ ಆರೋಪದ ಮೇಲೆ ಜುಲೈ 2019ರಲ್ಲಿ ಎಪ್‌ಸ್ಟೀನ್ ಅನ್ನು ಮತ್ತೆ ಬಂಧಿಸಲಾಗಿತ್ತು. ಇದಾಗಿ, ಒಂದು ತಿಂಗಳಿಗೆ ಆತ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಎನ್ನಲಾಗಿದೆ.

“ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖವಾಗಿ ಎಂಬ ವಿಷಯದ ಕುರಿತು ಪ್ರತಿಕ್ರಿಯೆ ಕೋರಿ ನಾವು ಹರ್ದೀಪ್ ಸಿಂಗ್ ಪುರಿ ಅವರನ್ನು ಸಂಪರ್ಕಿಸಿದ್ದೆವು, ಈ ವೇಳೆ ಅವರು ಎಪ್‌ಸ್ಟೀನ್ ಜೊತೆಗಿನ ಭೇಟಿಯನ್ನು ಒಪ್ಪಿಕೊಂಡಿದ್ದಾರೆ, ಆದರೆ ಈ ಭೇಟಿಗಳು ಕೇವಲ ವ್ಯವಹಾರಿಕ ಉದ್ದೇಶಕ್ಕೆ ಸೀಮಿತವಾಗಿದ್ದವು ಎಂದು ಸ್ಪಷ್ಟಪಡಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿದ್ದ ಎಂಟು ವರ್ಷಗಳ ಅವಧಿಯಲ್ಲಿ ನಾನು ಆತನನ್ನು ಕೇವಲ ಮೂರು ಬಾರಿ ಮಾತ್ರ ಭೇಟಿಯಾಗಿದ್ದೆ. ಈ ಎಲ್ಲಾ ಭೇಟಿಗಳು ತಾನು ‘ಇಂಟರ್ನ್ಯಾಷನಲ್ ಪೀಸ್ ಇನ್‌ಸ್ಟಿಟ್ಯೂಟ್’ನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ನಡೆದವು ಎಂದು ಹೇಳಿದ್ದಾರೆ. ಎಪ್‌ಸ್ಟೀನ್‌ನ ಅಪರಾಧ ಹಿನ್ನೆಲೆಯ ಬಗ್ಗೆ ಆ ಸಮಯದಲ್ಲಿ ತನಗೆ ಯಾವುದೇ ಅರಿವಿರಲಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ” ಎಂದು ದಿ ವೈರ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...