Homeಅಂತರಾಷ್ಟ್ರೀಯಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

- Advertisement -
- Advertisement -

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ ನೆಟ್‌ವರ್ಕಿಂಗ್ ಮತ್ತು ಹೂಡಿಕೆಯ ಚರ್ಚೆಗಳಿಗೆ ಸೀಮಿತವಾಗಿದ್ದರೂ ಸಹ, ಈ ಹಿಂದೆ ಬಿಜೆಪಿ ನೀಡಿದ್ದ ಸ್ಪಷ್ಟನೆಯನ್ನು ಇವು ಪ್ರಶ್ನಿಸುವಂತೆ ಮಾಡಿವೆ. ಪುರಿಯವರ ಹೆಸರನ್ನು ಎಪ್‌ಸ್ಟೀನ್ ಕೇವಲ ‘ಸಾಂದರ್ಭಿಕವಾಗಿ ಬಳಸಿದ್ದಾರೆ’ ಎಂಬ ಬಿಜೆಪಿಯ ವಾದವು ಈಗ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಏಕೆಂದರೆ ಈ-ಇಮೇಲ್‌ಗಳು ಇಬ್ಬರ ನಡುವೆ ನಿಕಟ ಸಂಪರ್ಕವಿತ್ತೆಂದು ಸೂಚಿಸುತ್ತಿವೆ ಎಂದು ದಿ ವೈರ್ ವರದಿ ಮಾಡಿದೆ.

ಅಮೆರಿಕದ ನ್ಯಾಯ ಇಲಾಖೆಯು ಜನವರಿ 30, 2026ರಂದು ಬಿಡುಗಡೆ ಮಾಡಿರುವ ಸುಮಾರು 30 ಲಕ್ಷ ಪುಟಗಳ ಜೆಫ್ರಿ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹರ್ದೀಪ್ ಸಿಂಗ್ ಪುರಿ ಮತ್ತು ಎಪ್‌ಸ್ಟೀನ್‌ ನಡುವಿನ ಇ-ಮೇಲ್ ಸಂಭಾಷಣೆಗಳು ಲಭ್ಯವಾಗಿವೆ. ಪುರಿಯವರು ಎಪ್‌ಸ್ಟೀನ್ ಅನ್ನು ಆತನ ನ್ಯೂಯಾರ್ಕ್‌ನ ಮನೆಯಲ್ಲಿ ಕನಿಷ್ಠ ಮೂರು ಬಾರಿ (ಫೆಬ್ರವರಿ 4, 2015, ಜನವರಿ 6, 2016 ಮತ್ತು ಮೇ 19, 2017) ಭೇಟಿಯಾಗಿದ್ದರು ಎಂದು ದಾಖಲೆಗಳು ದೃಢಪಡಿಸಿವೆ. ಎಪ್‌ಸ್ಟೀನ್‌ ಲಿಂಕ್ಡ್‌ಇನ್ ಸಹ-ಸಂಸ್ಥಾಪಕ ರೀಡ್ ಹಾಫ್‌ಮನ್ ಸೇರಿದಂತೆ ಸಿಲಿಕಾನ್ ವ್ಯಾಲಿಯ ಪ್ರಮುಖ ಹೂಡಿಕೆದಾರರೊಂದಿಗೆ ಪುರಿಯವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದ. ಪುರಿಯವರು ಈ ಸಂಭಾಷಣೆಗಳಲ್ಲಿ ಪ್ರಧಾನಿ ಮೋದಿಯವರ ‘ಡಿಜಿಟಲ್ ಇಂಡಿಯಾ’ ಮತ್ತು ‘ಮೇಕ್ ಇನ್ ಇಂಡಿಯಾ’ ಯೋಜನೆಗಳ ಬಗ್ಗೆ ವಿವರಿಸಿದ್ದರು. ಅಂದಿನ ಸಮಯದಲ್ಲಿ ಪುರಿಯವರು ಯಾವುದೇ ಸಾರ್ವಜನಿಕ ಹುದ್ದೆಯಲ್ಲಿರಲಿಲ್ಲ ಎಂದು ವರದಿ ವಿವರಿಸಿದೆ.

ಈ ಹಿಂದೆ ಬಿಜೆಪಿ ಈ ಸಂಪರ್ಕವನ್ನು ಕೇವಲ ಎಪ್‌ಸ್ಟೀನ್‌ “ಹೆಸರು ಹೇಳಿಕೊಳ್ಳುವಿಕೆ” (name-dropping) ಎಂದು ತಳ್ಳಿಹಾಕಿತ್ತು. ಆದರೆ, ಹೊಸ ಇ-ಮೇಲ್‌ಗಳು ಇಬ್ಬರ ನಡುವೆ ನಿರಂತರ ಮತ್ತು ವ್ಯವಹಾರಿಕ ಪರಿಚಿತತೆ ಇತ್ತೆಂದು ತೋರಿಸುತ್ತಿವೆ. ಎಪ್‌ಸ್ಟೀನ್‌ನ ಇಮೇಲ್‌ಗಳಲ್ಲಿ ಭಾರತದ ಪ್ರಧಾನಿ ಮತ್ತು ಇತರರ ಬಗ್ಗೆ ಇರುವ ಉಲ್ಲೇಖಗಳನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ “ಅಪರಾಧಿಯ ನಿರರ್ಥಕ ಮಾತುಗಳು” ಎಂದು ತಿರಸ್ಕರಿಸಿದೆ ಎಂದು ವರದಿ ಹೇಳಿದೆ.

ಎಪ್‌ಸ್ಟೀನ್‌ ಜೊತೆ ಇ-ಮೇಲ್ ಸಂಭಾಷಣೆಗಳು ನಡೆದ ಸಮಯದಲ್ಲಿ ಹರ್ದೀಪ್‌ ಸಿಂಗ್ ಪುರಿಯವರು ಯಾವುದೇ ಸಾರ್ವಜನಿಕ ಅಥವಾ ಸರ್ಕಾರಿ ಹುದ್ದೆಯನ್ನು ಹೊಂದಿರಲಿಲ್ಲ. ವೃತ್ತಿಪರ ರಾಜತಾಂತ್ರಿಕರಾಗಿದ್ದ ಅವರು, ಭಾರತೀಯ ವಿದೇಶಾಂಗ ಸೇವೆಯಿಂದ ನಿವೃತ್ತರಾದ ನಂತರ, ನ್ಯೂಯಾರ್ಕ್‌ನಲ್ಲಿರುವ ‘ಇಂಟರ್ನ್ಯಾಷನಲ್ ಪೀಸ್ ಇನ್‌ಸ್ಟಿಟ್ಯೂಟ್’ ಎಂಬ ಪ್ರಮುಖ ಥಿಂಕ್-ಟ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅವರು 2014ರಲ್ಲಿ ಬಿಜೆಪಿ ಸೇರಿದರು ಮತ್ತು ಸುಮಾರು ಮೂರು ವರ್ಷಗಳ ನಂತರ, ಅಂದರೆ ಸೆಪ್ಟೆಂಬರ್ 2017ರಲ್ಲಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಸ್ತುತ, ಅವರು ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಸ್ತುತ ಬಿಡುಗಡೆಯಾದ ಫೈಲ್‌ಗಳು ಇ-ಮೇಲ್ ವೇಳಾಪಟ್ಟಿಗಳು, ಸಭೆಗಳ ದೃಢೀಕರಣ ಮತ್ತು ಭಾರತದ ಇಂಟರ್ನೆಟ್ ಆರ್ಥಿಕತೆಯ ವ್ಯವಹಾರಿಕ ಅವಕಾಶಗಳ ಬಗ್ಗೆ ನಡೆದ ಗಂಭೀರ ಚರ್ಚೆಗಳನ್ನು ಒಳಗೊಂಡಿವೆ. ಮುಖ್ಯವಾಗಿ, ಈ ಇ-ಮೇಲ್‌ಗಳು ಎಪ್‌ಸ್ಟೀನ್‌ ಭಾಗಿಯಾಗಿದ್ದ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿಲ್ಲ ಎಂದು ವರದಿಗಳು ಸ್ಪಷ್ಟಪಡಿಸಿವೆ. ಈ ಸಂಭಾಷಣೆಗಳು ಕೇವಲ ಹೂಡಿಕೆ ಮತ್ತು ವಾಣಿಜ್ಯ ವಿಷಯಗಳಿಗೆ ಮಾತ್ರ ಸೀಮಿತವಾಗಿದ್ದವು ಎಂಬುದು ಇಲ್ಲಿ ಗಮನಾರ್ಹ ಅಂಶವಾಗಿದೆ.

ಜೆಫ್ರಿ ಎಪ್‌ಸ್ಟೀನ್‌ನ ಸಂಪೂರ್ಣ ಕ್ರಿಮಿನಲ್ ಹಿನ್ನೆಲೆ 2018ರ ಸುಮಾರಿಗೆ ಜಗತ್ತಿಗೆ ಬಹಿರಂಗವಾಯಿತು. ಆದರೆ, ಅದಕ್ಕೂ ಮೊದಲೇ ಅಂದರೆ 2008ರಲ್ಲಿಯೇ ಫ್ಲೋರಿಡಾದಲ್ಲಿ ಅಪ್ರಾಪ್ತ ಬಾಲಕಿಯರ ಲೈಂಗಿಕ ಶೋಷಣೆಯ ಆರೋಪದ ಮೇಲೆ ಆತ ಶಿಕ್ಷೆಗೆ ಒಳಗಾಗಿದ್ದ. ಆದಾಗ್ಯೂ, ಆತ ಯುಎಸ್‌ನ ಶ್ರೀಮಂತ ಮತ್ತು ಪ್ರಸಿದ್ಧ ವ್ಯಕ್ತಿಗಳಿಗೆ ದಲ್ಲಾಳಿಯಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರೆಸಿದ್ದ. ಅವರಲ್ಲಿ ಹೆಚ್ಚಿನವರು ಈಗ ಆತನೊಂದಿಗೆ ಸಂಬಂಧ ಹೊಂದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದಾರೆ.

ಭಾರತದ ವಿದೇಶಾಂಗ ಸಚಿವಾಲಯವು ಎಪ್‌ಸ್ಟೀನ್ ಒಬ್ಬ ‘ಶಿಕ್ಷೆಗೊಳಗಾದ ಅಪರಾಧಿ’ ಎಂಬ ಅಂಶವನ್ನು ಒತ್ತಿಹೇಳಿದೆ. ಈ ಉಲ್ಲೇಖವು 2008 ರ ಶಿಕ್ಷೆಯಾಗಿದೆ. ಅಪ್ರಾಪ್ತ ವಯಸ್ಕರ ಲೈಂಗಿಕ ಕಳ್ಳಸಾಗಣೆಗಾಗಿ ಫೆಡರಲ್ ಆರೋಪದ ಮೇಲೆ ಜುಲೈ 2019ರಲ್ಲಿ ಎಪ್‌ಸ್ಟೀನ್ ಅನ್ನು ಮತ್ತೆ ಬಂಧಿಸಲಾಗಿತ್ತು. ಇದಾಗಿ, ಒಂದು ತಿಂಗಳಿಗೆ ಆತ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಎನ್ನಲಾಗಿದೆ.

“ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖವಾಗಿ ಎಂಬ ವಿಷಯದ ಕುರಿತು ಪ್ರತಿಕ್ರಿಯೆ ಕೋರಿ ನಾವು ಹರ್ದೀಪ್ ಸಿಂಗ್ ಪುರಿ ಅವರನ್ನು ಸಂಪರ್ಕಿಸಿದ್ದೆವು, ಈ ವೇಳೆ ಅವರು ಎಪ್‌ಸ್ಟೀನ್ ಜೊತೆಗಿನ ಭೇಟಿಯನ್ನು ಒಪ್ಪಿಕೊಂಡಿದ್ದಾರೆ, ಆದರೆ ಈ ಭೇಟಿಗಳು ಕೇವಲ ವ್ಯವಹಾರಿಕ ಉದ್ದೇಶಕ್ಕೆ ಸೀಮಿತವಾಗಿದ್ದವು ಎಂದು ಸ್ಪಷ್ಟಪಡಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿದ್ದ ಎಂಟು ವರ್ಷಗಳ ಅವಧಿಯಲ್ಲಿ ನಾನು ಆತನನ್ನು ಕೇವಲ ಮೂರು ಬಾರಿ ಮಾತ್ರ ಭೇಟಿಯಾಗಿದ್ದೆ. ಈ ಎಲ್ಲಾ ಭೇಟಿಗಳು ತಾನು ‘ಇಂಟರ್ನ್ಯಾಷನಲ್ ಪೀಸ್ ಇನ್‌ಸ್ಟಿಟ್ಯೂಟ್’ನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ನಡೆದವು ಎಂದು ಹೇಳಿದ್ದಾರೆ. ಎಪ್‌ಸ್ಟೀನ್‌ನ ಅಪರಾಧ ಹಿನ್ನೆಲೆಯ ಬಗ್ಗೆ ಆ ಸಮಯದಲ್ಲಿ ತನಗೆ ಯಾವುದೇ ಅರಿವಿರಲಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ” ಎಂದು ದಿ ವೈರ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...