Homeಕರ್ನಾಟಕಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ದೇವನಹಳ್ಳಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದ ಸಿಎಂ

ಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ದೇವನಹಳ್ಳಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದ ಸಿಎಂ

- Advertisement -
- Advertisement -

ವಿಶ್ವವಿಖ್ಯಾತ ಪ್ರೇಕ್ಷಣೀಯ ಸ್ಥಳವಾದ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲೆಯ ನಂದಿಬೆಟ್ಟದಲ್ಲಿ ನಡೆದ ಬೆಂಗಳೂರು ಕಂದಾಯ ವಿಭಾಗದ ವಿಶೇಷ ಸಚಿವ ಸಂಪುಟದ ಸಭೆಯಲ್ಲಿ ‘ಚನ್ನರಾಯಪಟ್ಟಣ ಭೂಸ್ವಾಧೀನ ವಿಚಾರ’ ಪ್ರಸ್ತಾಪಿಸುತ್ತಾರೆ ಎಂಬ ರೈತರ ಭರವಸೆ ಹುಸಿಯಾಗಿದೆ.

ಇಂದು ರಾಜ್ಯ ಸರ್ಕಾರ ನಡೆಸಿದ ವಿಶೇಷ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ, ಚನ್ನರಾಯಪಟ್ಟಣದ ನಾಡ ಕಚೇರಿ ಮುಂಭಾಗ ನಡೆಯುತ್ತಿರುವ ಧರಣಿ ಸ್ಥಳದಲ್ಲಿ ರೈತರು ಮತ್ತು ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರು ಭೂಮಿ ಸತ್ಯಾಗ್ರಹದ ವೇದಿಕೆಯಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ದ ಮುಖಂಡರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇಂದಿನ ಸಭೆಯಲ್ಲಿ ಕೆಐಎಡಿಬಿ ಭೂಸ್ವಾಧೀನ ಕೈಬಿಡುವ ನಿರ್ಧಾರ ಪ್ರಕಟಿಸಬಹದು ಎಂದು ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ದೇವನಹಳ್ಳಿಯ ಕೂಗಳತೆ ದೂರದಲ್ಲಿ ಸಭೆ ನಡೆಸಿದ್ದರಿಂದ, ಭೂಸ್ವಾಧೀನದ ಬಗ್ಗೆ ಪ್ರಸ್ತಾಪಿಸಲು ಎಂಬ ಕಾರಣಕ್ಕೆ ರೈತರು ಸರ್ಕಾರದ ಗಮನ ಸೆಳೆಯಲು ಉಪವಾಸ ಆರಂಭಿಸಿದ್ದರು. ಆದರೆ, ಮುಖ್ಯಮಂತ್ರಿಗಳು ಸುದ್ದಿಗೋಷ್ಠಿಯಲ್ಲಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದೇ ಇರುವುದು ರೈತರಿಗೆ ನಿರಾಸೆ ಮೂಡಿಸಿದೆ.

ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಅಸಮಾಧಾನ

ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ಉಪವಾಸ ಸತ್ಯಾಗ್ರಹ ನಡೆಸಿದೆವು. ನಂದಿಬೆಟ್ಟದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ, ಚನ್ನರಾಯಪಟ್ಟಣದಲ್ಲಿ ಉದ್ದೇಶಿಸಿರುವ 1777 ಎಕರೆ ಬಲವಂತದ ಭೂಸ್ವಾಧೀನವನ್ನು ಕೈಬಿಡುವ ವಿಚಾರವನ್ನು ವಿಶೇಷ ಚರ್ಚೆಯ ವಿಷಯವಾಗಿ ತೆಗೆದುಕೊಳ್ಳುವಂತೆ ಮತ್ತು ರೈತರ ಪರವಾದ ನಿರ್ಣಯಕ್ಕೆ ಬರಲು ಸಾತ್ವಿಕವಾಗಿ ಒತ್ತಡ ಹೇರಲಾಯಿತು ಎಂದರು.

ಚನ್ನರಾಯಪಟ್ಟಣದ ಉಪವಾಸ ಸತ್ಯಾಗ್ರಹದಲ್ಲಿ ಮಕ್ಕಳು, ಯುವಜನರು, ಮಹಿಳೆಯರು, ವಯೋವೃದ್ಧರು ಸೇರಿದಂತೆ 13 ಹಳ್ಳಿಯ ರೈತರು, ಹಾಗೂ ರೈತಪರ ಹೋರಾಟಗಾರರಾದ ಆಂಜನೇಯ ರೆಡ್ಡಿ, ಚಂದ್ರ ತೇಜಸ್ವಿ ಮತ್ತು ಕಾರಳ್ಳಿ ಶ್ರೀನಿವಾಸ್ ಭಾಗಿಯಾಗಿದ್ದರು. ಇಲ್ಲಿ ಅನ್ನ ಬೆಳೆಯುವ ರೈತರೇ ಉಪವಾಸ ಕುಳಿತಿದ್ದಾರೆ; ಇದು ಒಳ್ಳೆಯ ಬೆಳವಣಿಗೆಯಲ್ಲ. ಈ ಹೋರಾಟ ಗೆಲ್ಲಲೇಬೇಕು. ಈ ಹೋರಾಟ ಇಂದು ಕೇವಲ ಚನ್ನರಾಯಪಟ್ಟಣದ ರೈತರ ಹೋರಾಟವಾಗಿ ಉಳಿದಿಲ್ಲ, ಇಡೀ ಕರ್ನಾಟಕವೇ ಇಲ್ಲಿನ ರೈತರ ಉಳಿವಿನ ನಿರ್ಧಾರಕ್ಕಾಗಿ ಕಾಯುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿರೋಧ ಪಕ್ಷದಲ್ಲಿದ್ದಾಗ ನೀಡಿದ ಭರವಸೆಯಂತೆ ನಡೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಜುಲೈ 4 ರಂದು ರೈತಪರ ನಿರ್ಣಯ ಹೊರಬರುತ್ತದೆ ಎಂಬ ನಿರೀಕ್ಷೆ ಇದೆ ಎಂದು ರೈತರು ಅಭಿಪ್ರಾಯಪಟ್ಟರು.

ಸಚಿವ ಸಂಪುಟ ಸಭೆಯಲ್ಲಿ ಚನ್ನರಾಯಪಟ್ಟಣ ಭೂಸ್ವಾಧೀನ ವಿಚಾರವನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಿದ ರೈತರು

ಇಲ್ಲಿ ಅನ್ನ ಬೆಳೆಯುವ ರೈತರು ಉಪವಾಸ ಕುಳಿತಿರುವಾಗ, ಅತ್ತ ನಮ್ಮನ್ನು ಬೆಂಬಲಿಸಿ ಫ್ರೀಡಂ ಪಾರ್ಕಿನಲ್ಲಿ ಹೋರಾಟಗಾರರು, ಪ್ರಗತಿಪರ ಚಿಂತಕರು, ಚಿತ್ರನಟರು, ನಿರ್ದೇಶಕರು, ಸಾಹಿತಿಗಳು, ಬರಹಗಾರರು ಉಪವಾಸ ಕುಳಿತಿದ್ದಾರೆ. ಅವರ ರೈತರ ಮೇಲಿನ ಕಾಳಜಿ ಮತ್ತು ತಾಯ್ತನದ ಪ್ರೀತಿಗೆ ನಾವು ಆಭಾರಿಯಾಗಿರುತ್ತೇವೆ. ದೇವನಹಳ್ಳಿಗೆ ಮಾತ್ರ ಸೀಮಿತವಾಗಿದ್ದ ಹೋರಾಟ ಇಂದು ನಾಡಿನ ಉದ್ದಗಲಕ್ಕೂ ಮಾತನಾಡುವಂತಾಗಿದೆ. ರಾಜ್ಯದ ಜನ ನಮ್ಮ ಕಷ್ಟವನ್ನು ತಮ್ಮಗೆ ಬಂದೊದಗಿರುವ ಆತಂಕವೆಂಬಂತೆ ಭಾವಿಸಿ ನಮ್ಮ ಹೋರಾಟಕ್ಕೆ ಜೊತೆಯಾಗಿದ್ದಾರೆ. ಅವರೆಲ್ಲರಿಗೂ ಇಲ್ಲಿನ ರೈತರಾದ ನಾವು ಹೃತ್ಪೂರ್ವಕ ಧನ್ಯವಾದ ತಿಳಿಸುತ್ತೇವೆ ಎಂದು ರೈತರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಹೋರಾಟ ನಮ್ಮ ಉಳಿವಿಗಾಗಿ ಮಾತ್ರವಲ್ಲ, ನಮ್ಮ ಕೃಷಿ ಪರಿಸರದ ಉಳಿವಿಗಾಗಿ, ಗ್ರಾಮೀಣ ಬದುಕಿನ ಉಳಿವಿಗಾಗಿ ಮಾಡುತ್ತಿರುವ ಹೋರಾಟ. ಆದ್ದರಿಂದ ನಾವು ಭರವಸೆ ನೀಡುತ್ತೇವೆ, ಈ ಭೂಮಿ ನಿಮ್ಮೆಲ್ಲರ ಬೆಂಬಲದಿಂದ ಉಳಿದೇ ಉಳಿಯುತ್ತದೆ. ನಾವು ಈ ನೆಲದ ಹಸಿರನ್ನು, ಗ್ರಾಮೀಣ ಸೊಗಡನ್ನು ಜೋಪಾನ ಮಾಡುತ್ತೇವೆ ಎಂದು ನಿಮಗೆ ಭರವಸೆ ನೀಡುತ್ತೇವೆ ಎಂದು ವಾಗ್ದಾನ ಮಾಡಿದ್ದಾರೆ.

ಜುಲೈ-4 ರ ಸಭೆ ಮೇಲೆ ಎಲ್ಲರ ಚಿತ್ತ

ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ ರೈತರು ಹಾಗೂ ಸಂಯುಕ್ತ ಹೋರಾಟ-ಕರ್ನಾಟಕ ಮುಖಂಡರ ಜೊತೆಗೆ ಇದೇ 4ರಂದು ಸಮಗ್ರ ಸಭೆ ನಡೆಸಿ ನಿರ್ಧಾರಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.

ಚನ್ನರಾಯಪಟ್ಟಣ ಭೂಸ್ವಾಧೀನ ಕೈಬಿಡುವಂತೆ ಸಿಎಂಗೆ ಪತ್ರ ಬರೆದ ಬಿಹಾರ ಸಂಸದ ರಾಜಾರಾಮ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...

Islamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್‌ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ ಜೆಡಿ ವ್ಯಾನ್ಸ್ ನಿಯೋಗ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿರುವ ಅಮೆರಿಕ-ಇರಾನ್‌ ನಡುವಿನ ಮಹತ್ವದ ಶಾಂತಿ ಮಾತುಕತೆ ವಿಫಲವಾದಂತೆ ಗೋಚರಿಸುತ್ತಿದೆ. ಅಮೆರಿಕದ ಪರವಾಗಿ ಮಾತುಕತೆಗೆ ಆಗಮಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ, ಇರಾನ್‌ ಜೊತೆ ಯಾವುದೇ ಒಪ್ಪಂದ ಸಾಧ್ಯವಾಗದೆ...

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...