Homeಕರ್ನಾಟಕಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ದೇವನಹಳ್ಳಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದ ಸಿಎಂ

ಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ದೇವನಹಳ್ಳಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದ ಸಿಎಂ

- Advertisement -
- Advertisement -

ವಿಶ್ವವಿಖ್ಯಾತ ಪ್ರೇಕ್ಷಣೀಯ ಸ್ಥಳವಾದ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲೆಯ ನಂದಿಬೆಟ್ಟದಲ್ಲಿ ನಡೆದ ಬೆಂಗಳೂರು ಕಂದಾಯ ವಿಭಾಗದ ವಿಶೇಷ ಸಚಿವ ಸಂಪುಟದ ಸಭೆಯಲ್ಲಿ ‘ಚನ್ನರಾಯಪಟ್ಟಣ ಭೂಸ್ವಾಧೀನ ವಿಚಾರ’ ಪ್ರಸ್ತಾಪಿಸುತ್ತಾರೆ ಎಂಬ ರೈತರ ಭರವಸೆ ಹುಸಿಯಾಗಿದೆ.

ಇಂದು ರಾಜ್ಯ ಸರ್ಕಾರ ನಡೆಸಿದ ವಿಶೇಷ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ, ಚನ್ನರಾಯಪಟ್ಟಣದ ನಾಡ ಕಚೇರಿ ಮುಂಭಾಗ ನಡೆಯುತ್ತಿರುವ ಧರಣಿ ಸ್ಥಳದಲ್ಲಿ ರೈತರು ಮತ್ತು ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರು ಭೂಮಿ ಸತ್ಯಾಗ್ರಹದ ವೇದಿಕೆಯಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ದ ಮುಖಂಡರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇಂದಿನ ಸಭೆಯಲ್ಲಿ ಕೆಐಎಡಿಬಿ ಭೂಸ್ವಾಧೀನ ಕೈಬಿಡುವ ನಿರ್ಧಾರ ಪ್ರಕಟಿಸಬಹದು ಎಂದು ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ದೇವನಹಳ್ಳಿಯ ಕೂಗಳತೆ ದೂರದಲ್ಲಿ ಸಭೆ ನಡೆಸಿದ್ದರಿಂದ, ಭೂಸ್ವಾಧೀನದ ಬಗ್ಗೆ ಪ್ರಸ್ತಾಪಿಸಲು ಎಂಬ ಕಾರಣಕ್ಕೆ ರೈತರು ಸರ್ಕಾರದ ಗಮನ ಸೆಳೆಯಲು ಉಪವಾಸ ಆರಂಭಿಸಿದ್ದರು. ಆದರೆ, ಮುಖ್ಯಮಂತ್ರಿಗಳು ಸುದ್ದಿಗೋಷ್ಠಿಯಲ್ಲಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದೇ ಇರುವುದು ರೈತರಿಗೆ ನಿರಾಸೆ ಮೂಡಿಸಿದೆ.

ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಅಸಮಾಧಾನ

ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ಉಪವಾಸ ಸತ್ಯಾಗ್ರಹ ನಡೆಸಿದೆವು. ನಂದಿಬೆಟ್ಟದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ, ಚನ್ನರಾಯಪಟ್ಟಣದಲ್ಲಿ ಉದ್ದೇಶಿಸಿರುವ 1777 ಎಕರೆ ಬಲವಂತದ ಭೂಸ್ವಾಧೀನವನ್ನು ಕೈಬಿಡುವ ವಿಚಾರವನ್ನು ವಿಶೇಷ ಚರ್ಚೆಯ ವಿಷಯವಾಗಿ ತೆಗೆದುಕೊಳ್ಳುವಂತೆ ಮತ್ತು ರೈತರ ಪರವಾದ ನಿರ್ಣಯಕ್ಕೆ ಬರಲು ಸಾತ್ವಿಕವಾಗಿ ಒತ್ತಡ ಹೇರಲಾಯಿತು ಎಂದರು.

ಚನ್ನರಾಯಪಟ್ಟಣದ ಉಪವಾಸ ಸತ್ಯಾಗ್ರಹದಲ್ಲಿ ಮಕ್ಕಳು, ಯುವಜನರು, ಮಹಿಳೆಯರು, ವಯೋವೃದ್ಧರು ಸೇರಿದಂತೆ 13 ಹಳ್ಳಿಯ ರೈತರು, ಹಾಗೂ ರೈತಪರ ಹೋರಾಟಗಾರರಾದ ಆಂಜನೇಯ ರೆಡ್ಡಿ, ಚಂದ್ರ ತೇಜಸ್ವಿ ಮತ್ತು ಕಾರಳ್ಳಿ ಶ್ರೀನಿವಾಸ್ ಭಾಗಿಯಾಗಿದ್ದರು. ಇಲ್ಲಿ ಅನ್ನ ಬೆಳೆಯುವ ರೈತರೇ ಉಪವಾಸ ಕುಳಿತಿದ್ದಾರೆ; ಇದು ಒಳ್ಳೆಯ ಬೆಳವಣಿಗೆಯಲ್ಲ. ಈ ಹೋರಾಟ ಗೆಲ್ಲಲೇಬೇಕು. ಈ ಹೋರಾಟ ಇಂದು ಕೇವಲ ಚನ್ನರಾಯಪಟ್ಟಣದ ರೈತರ ಹೋರಾಟವಾಗಿ ಉಳಿದಿಲ್ಲ, ಇಡೀ ಕರ್ನಾಟಕವೇ ಇಲ್ಲಿನ ರೈತರ ಉಳಿವಿನ ನಿರ್ಧಾರಕ್ಕಾಗಿ ಕಾಯುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿರೋಧ ಪಕ್ಷದಲ್ಲಿದ್ದಾಗ ನೀಡಿದ ಭರವಸೆಯಂತೆ ನಡೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಜುಲೈ 4 ರಂದು ರೈತಪರ ನಿರ್ಣಯ ಹೊರಬರುತ್ತದೆ ಎಂಬ ನಿರೀಕ್ಷೆ ಇದೆ ಎಂದು ರೈತರು ಅಭಿಪ್ರಾಯಪಟ್ಟರು.

ಸಚಿವ ಸಂಪುಟ ಸಭೆಯಲ್ಲಿ ಚನ್ನರಾಯಪಟ್ಟಣ ಭೂಸ್ವಾಧೀನ ವಿಚಾರವನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಿದ ರೈತರು

ಇಲ್ಲಿ ಅನ್ನ ಬೆಳೆಯುವ ರೈತರು ಉಪವಾಸ ಕುಳಿತಿರುವಾಗ, ಅತ್ತ ನಮ್ಮನ್ನು ಬೆಂಬಲಿಸಿ ಫ್ರೀಡಂ ಪಾರ್ಕಿನಲ್ಲಿ ಹೋರಾಟಗಾರರು, ಪ್ರಗತಿಪರ ಚಿಂತಕರು, ಚಿತ್ರನಟರು, ನಿರ್ದೇಶಕರು, ಸಾಹಿತಿಗಳು, ಬರಹಗಾರರು ಉಪವಾಸ ಕುಳಿತಿದ್ದಾರೆ. ಅವರ ರೈತರ ಮೇಲಿನ ಕಾಳಜಿ ಮತ್ತು ತಾಯ್ತನದ ಪ್ರೀತಿಗೆ ನಾವು ಆಭಾರಿಯಾಗಿರುತ್ತೇವೆ. ದೇವನಹಳ್ಳಿಗೆ ಮಾತ್ರ ಸೀಮಿತವಾಗಿದ್ದ ಹೋರಾಟ ಇಂದು ನಾಡಿನ ಉದ್ದಗಲಕ್ಕೂ ಮಾತನಾಡುವಂತಾಗಿದೆ. ರಾಜ್ಯದ ಜನ ನಮ್ಮ ಕಷ್ಟವನ್ನು ತಮ್ಮಗೆ ಬಂದೊದಗಿರುವ ಆತಂಕವೆಂಬಂತೆ ಭಾವಿಸಿ ನಮ್ಮ ಹೋರಾಟಕ್ಕೆ ಜೊತೆಯಾಗಿದ್ದಾರೆ. ಅವರೆಲ್ಲರಿಗೂ ಇಲ್ಲಿನ ರೈತರಾದ ನಾವು ಹೃತ್ಪೂರ್ವಕ ಧನ್ಯವಾದ ತಿಳಿಸುತ್ತೇವೆ ಎಂದು ರೈತರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಹೋರಾಟ ನಮ್ಮ ಉಳಿವಿಗಾಗಿ ಮಾತ್ರವಲ್ಲ, ನಮ್ಮ ಕೃಷಿ ಪರಿಸರದ ಉಳಿವಿಗಾಗಿ, ಗ್ರಾಮೀಣ ಬದುಕಿನ ಉಳಿವಿಗಾಗಿ ಮಾಡುತ್ತಿರುವ ಹೋರಾಟ. ಆದ್ದರಿಂದ ನಾವು ಭರವಸೆ ನೀಡುತ್ತೇವೆ, ಈ ಭೂಮಿ ನಿಮ್ಮೆಲ್ಲರ ಬೆಂಬಲದಿಂದ ಉಳಿದೇ ಉಳಿಯುತ್ತದೆ. ನಾವು ಈ ನೆಲದ ಹಸಿರನ್ನು, ಗ್ರಾಮೀಣ ಸೊಗಡನ್ನು ಜೋಪಾನ ಮಾಡುತ್ತೇವೆ ಎಂದು ನಿಮಗೆ ಭರವಸೆ ನೀಡುತ್ತೇವೆ ಎಂದು ವಾಗ್ದಾನ ಮಾಡಿದ್ದಾರೆ.

ಜುಲೈ-4 ರ ಸಭೆ ಮೇಲೆ ಎಲ್ಲರ ಚಿತ್ತ

ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ ರೈತರು ಹಾಗೂ ಸಂಯುಕ್ತ ಹೋರಾಟ-ಕರ್ನಾಟಕ ಮುಖಂಡರ ಜೊತೆಗೆ ಇದೇ 4ರಂದು ಸಮಗ್ರ ಸಭೆ ನಡೆಸಿ ನಿರ್ಧಾರಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.

ಚನ್ನರಾಯಪಟ್ಟಣ ಭೂಸ್ವಾಧೀನ ಕೈಬಿಡುವಂತೆ ಸಿಎಂಗೆ ಪತ್ರ ಬರೆದ ಬಿಹಾರ ಸಂಸದ ರಾಜಾರಾಮ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...