Homeಕರ್ನಾಟಕಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ದೇವನಹಳ್ಳಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದ ಸಿಎಂ

ಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ದೇವನಹಳ್ಳಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದ ಸಿಎಂ

- Advertisement -
- Advertisement -

ವಿಶ್ವವಿಖ್ಯಾತ ಪ್ರೇಕ್ಷಣೀಯ ಸ್ಥಳವಾದ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲೆಯ ನಂದಿಬೆಟ್ಟದಲ್ಲಿ ನಡೆದ ಬೆಂಗಳೂರು ಕಂದಾಯ ವಿಭಾಗದ ವಿಶೇಷ ಸಚಿವ ಸಂಪುಟದ ಸಭೆಯಲ್ಲಿ ‘ಚನ್ನರಾಯಪಟ್ಟಣ ಭೂಸ್ವಾಧೀನ ವಿಚಾರ’ ಪ್ರಸ್ತಾಪಿಸುತ್ತಾರೆ ಎಂಬ ರೈತರ ಭರವಸೆ ಹುಸಿಯಾಗಿದೆ.

ಇಂದು ರಾಜ್ಯ ಸರ್ಕಾರ ನಡೆಸಿದ ವಿಶೇಷ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ, ಚನ್ನರಾಯಪಟ್ಟಣದ ನಾಡ ಕಚೇರಿ ಮುಂಭಾಗ ನಡೆಯುತ್ತಿರುವ ಧರಣಿ ಸ್ಥಳದಲ್ಲಿ ರೈತರು ಮತ್ತು ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರು ಭೂಮಿ ಸತ್ಯಾಗ್ರಹದ ವೇದಿಕೆಯಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ದ ಮುಖಂಡರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇಂದಿನ ಸಭೆಯಲ್ಲಿ ಕೆಐಎಡಿಬಿ ಭೂಸ್ವಾಧೀನ ಕೈಬಿಡುವ ನಿರ್ಧಾರ ಪ್ರಕಟಿಸಬಹದು ಎಂದು ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ದೇವನಹಳ್ಳಿಯ ಕೂಗಳತೆ ದೂರದಲ್ಲಿ ಸಭೆ ನಡೆಸಿದ್ದರಿಂದ, ಭೂಸ್ವಾಧೀನದ ಬಗ್ಗೆ ಪ್ರಸ್ತಾಪಿಸಲು ಎಂಬ ಕಾರಣಕ್ಕೆ ರೈತರು ಸರ್ಕಾರದ ಗಮನ ಸೆಳೆಯಲು ಉಪವಾಸ ಆರಂಭಿಸಿದ್ದರು. ಆದರೆ, ಮುಖ್ಯಮಂತ್ರಿಗಳು ಸುದ್ದಿಗೋಷ್ಠಿಯಲ್ಲಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದೇ ಇರುವುದು ರೈತರಿಗೆ ನಿರಾಸೆ ಮೂಡಿಸಿದೆ.

ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಅಸಮಾಧಾನ

ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ಉಪವಾಸ ಸತ್ಯಾಗ್ರಹ ನಡೆಸಿದೆವು. ನಂದಿಬೆಟ್ಟದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ, ಚನ್ನರಾಯಪಟ್ಟಣದಲ್ಲಿ ಉದ್ದೇಶಿಸಿರುವ 1777 ಎಕರೆ ಬಲವಂತದ ಭೂಸ್ವಾಧೀನವನ್ನು ಕೈಬಿಡುವ ವಿಚಾರವನ್ನು ವಿಶೇಷ ಚರ್ಚೆಯ ವಿಷಯವಾಗಿ ತೆಗೆದುಕೊಳ್ಳುವಂತೆ ಮತ್ತು ರೈತರ ಪರವಾದ ನಿರ್ಣಯಕ್ಕೆ ಬರಲು ಸಾತ್ವಿಕವಾಗಿ ಒತ್ತಡ ಹೇರಲಾಯಿತು ಎಂದರು.

ಚನ್ನರಾಯಪಟ್ಟಣದ ಉಪವಾಸ ಸತ್ಯಾಗ್ರಹದಲ್ಲಿ ಮಕ್ಕಳು, ಯುವಜನರು, ಮಹಿಳೆಯರು, ವಯೋವೃದ್ಧರು ಸೇರಿದಂತೆ 13 ಹಳ್ಳಿಯ ರೈತರು, ಹಾಗೂ ರೈತಪರ ಹೋರಾಟಗಾರರಾದ ಆಂಜನೇಯ ರೆಡ್ಡಿ, ಚಂದ್ರ ತೇಜಸ್ವಿ ಮತ್ತು ಕಾರಳ್ಳಿ ಶ್ರೀನಿವಾಸ್ ಭಾಗಿಯಾಗಿದ್ದರು. ಇಲ್ಲಿ ಅನ್ನ ಬೆಳೆಯುವ ರೈತರೇ ಉಪವಾಸ ಕುಳಿತಿದ್ದಾರೆ; ಇದು ಒಳ್ಳೆಯ ಬೆಳವಣಿಗೆಯಲ್ಲ. ಈ ಹೋರಾಟ ಗೆಲ್ಲಲೇಬೇಕು. ಈ ಹೋರಾಟ ಇಂದು ಕೇವಲ ಚನ್ನರಾಯಪಟ್ಟಣದ ರೈತರ ಹೋರಾಟವಾಗಿ ಉಳಿದಿಲ್ಲ, ಇಡೀ ಕರ್ನಾಟಕವೇ ಇಲ್ಲಿನ ರೈತರ ಉಳಿವಿನ ನಿರ್ಧಾರಕ್ಕಾಗಿ ಕಾಯುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿರೋಧ ಪಕ್ಷದಲ್ಲಿದ್ದಾಗ ನೀಡಿದ ಭರವಸೆಯಂತೆ ನಡೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಜುಲೈ 4 ರಂದು ರೈತಪರ ನಿರ್ಣಯ ಹೊರಬರುತ್ತದೆ ಎಂಬ ನಿರೀಕ್ಷೆ ಇದೆ ಎಂದು ರೈತರು ಅಭಿಪ್ರಾಯಪಟ್ಟರು.

ಸಚಿವ ಸಂಪುಟ ಸಭೆಯಲ್ಲಿ ಚನ್ನರಾಯಪಟ್ಟಣ ಭೂಸ್ವಾಧೀನ ವಿಚಾರವನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಿದ ರೈತರು

ಇಲ್ಲಿ ಅನ್ನ ಬೆಳೆಯುವ ರೈತರು ಉಪವಾಸ ಕುಳಿತಿರುವಾಗ, ಅತ್ತ ನಮ್ಮನ್ನು ಬೆಂಬಲಿಸಿ ಫ್ರೀಡಂ ಪಾರ್ಕಿನಲ್ಲಿ ಹೋರಾಟಗಾರರು, ಪ್ರಗತಿಪರ ಚಿಂತಕರು, ಚಿತ್ರನಟರು, ನಿರ್ದೇಶಕರು, ಸಾಹಿತಿಗಳು, ಬರಹಗಾರರು ಉಪವಾಸ ಕುಳಿತಿದ್ದಾರೆ. ಅವರ ರೈತರ ಮೇಲಿನ ಕಾಳಜಿ ಮತ್ತು ತಾಯ್ತನದ ಪ್ರೀತಿಗೆ ನಾವು ಆಭಾರಿಯಾಗಿರುತ್ತೇವೆ. ದೇವನಹಳ್ಳಿಗೆ ಮಾತ್ರ ಸೀಮಿತವಾಗಿದ್ದ ಹೋರಾಟ ಇಂದು ನಾಡಿನ ಉದ್ದಗಲಕ್ಕೂ ಮಾತನಾಡುವಂತಾಗಿದೆ. ರಾಜ್ಯದ ಜನ ನಮ್ಮ ಕಷ್ಟವನ್ನು ತಮ್ಮಗೆ ಬಂದೊದಗಿರುವ ಆತಂಕವೆಂಬಂತೆ ಭಾವಿಸಿ ನಮ್ಮ ಹೋರಾಟಕ್ಕೆ ಜೊತೆಯಾಗಿದ್ದಾರೆ. ಅವರೆಲ್ಲರಿಗೂ ಇಲ್ಲಿನ ರೈತರಾದ ನಾವು ಹೃತ್ಪೂರ್ವಕ ಧನ್ಯವಾದ ತಿಳಿಸುತ್ತೇವೆ ಎಂದು ರೈತರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಹೋರಾಟ ನಮ್ಮ ಉಳಿವಿಗಾಗಿ ಮಾತ್ರವಲ್ಲ, ನಮ್ಮ ಕೃಷಿ ಪರಿಸರದ ಉಳಿವಿಗಾಗಿ, ಗ್ರಾಮೀಣ ಬದುಕಿನ ಉಳಿವಿಗಾಗಿ ಮಾಡುತ್ತಿರುವ ಹೋರಾಟ. ಆದ್ದರಿಂದ ನಾವು ಭರವಸೆ ನೀಡುತ್ತೇವೆ, ಈ ಭೂಮಿ ನಿಮ್ಮೆಲ್ಲರ ಬೆಂಬಲದಿಂದ ಉಳಿದೇ ಉಳಿಯುತ್ತದೆ. ನಾವು ಈ ನೆಲದ ಹಸಿರನ್ನು, ಗ್ರಾಮೀಣ ಸೊಗಡನ್ನು ಜೋಪಾನ ಮಾಡುತ್ತೇವೆ ಎಂದು ನಿಮಗೆ ಭರವಸೆ ನೀಡುತ್ತೇವೆ ಎಂದು ವಾಗ್ದಾನ ಮಾಡಿದ್ದಾರೆ.

ಜುಲೈ-4 ರ ಸಭೆ ಮೇಲೆ ಎಲ್ಲರ ಚಿತ್ತ

ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ ರೈತರು ಹಾಗೂ ಸಂಯುಕ್ತ ಹೋರಾಟ-ಕರ್ನಾಟಕ ಮುಖಂಡರ ಜೊತೆಗೆ ಇದೇ 4ರಂದು ಸಮಗ್ರ ಸಭೆ ನಡೆಸಿ ನಿರ್ಧಾರಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.

ಚನ್ನರಾಯಪಟ್ಟಣ ಭೂಸ್ವಾಧೀನ ಕೈಬಿಡುವಂತೆ ಸಿಎಂಗೆ ಪತ್ರ ಬರೆದ ಬಿಹಾರ ಸಂಸದ ರಾಜಾರಾಮ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...