Homeಅಂಕಣಗಳುಬಹುಜನ ಭಾರತ: ನಂದಿಗ್ರಾಮ ಬರೆಯಲಿದೆಯೇ ಜನತಂತ್ರದ ಭವಿಷ್ಯವನು?

ಬಹುಜನ ಭಾರತ: ನಂದಿಗ್ರಾಮ ಬರೆಯಲಿದೆಯೇ ಜನತಂತ್ರದ ಭವಿಷ್ಯವನು?

- Advertisement -
- Advertisement -

ನಂದಿಗ್ರಾಮದ ಹಿಂಸಾಚಾರ ಈ ಸರ್ಕಾರವನ್ನು ಪತನದ ಇಳಿಜಾರಿಗೆ ನೂಕಿತ್ತು. ರಾಜ್ಯವನ್ನು ಕೈಗಾರಿಕೀಕರಣದ ಹಾದಿಗೆ ಹಚ್ಚುವ ಭರದಲ್ಲಿ ಕುರುಡಾಗಿ ಜೇನುಹುಟ್ಟಿಗೆ ಕೈ ಇಟ್ಟಿತ್ತು ವಾಮವಾದಿ ಆಡಳಿತ. 2011ರಲ್ಲಿ ಛಿದ್ರವಾದ ಕೆಂಪುಕೋಟೆಯ ಅಡಿಯಲ್ಲಿ ಇಡಲಾದ ಸಿಡಿಮದ್ದು ತಯಾರಾದದ್ದು ನಂದಿಗ್ರಾಮದ ಮೂಸೆಯಲ್ಲಿ. ಆದರೆ ಈ ಸಿಡಿಮದ್ದನ್ನು ಅರೆದು ಗಟ್ಟಿ ಮಾಡುವ ಕ್ರಿಯೆಯಲ್ಲಿ ಖುದ್ದು ಎಡರಂಗ ಸರ್ಕಾರ ಕೈಜೋಡಿಸಿದ್ದು ಬಹುದೊಡ್ಡ ವಿಡಂಬನೆ. ಈ ಪರಿಯ ಮೈಮರೆವಿನಲ್ಲಿ ಮುಳುಗಿದ್ದ ಎಡರಂಗಕ್ಕೆ ಕಾಲ ಕೆಳಗಿನ ನೋಟವೇ ಕಾಣದಾಗಿತ್ತು. ತಪ್ಪುಗಳ ಮೇಲೆ ತಪ್ಪುಗಳನ್ನು ಮಾಡುತ್ತಲೇ ಹೋಯಿತು. ತಾನು ಜನರ ನಡುವೆ ಕೆಲಸ ಮಾಡಿ ಕಟ್ಟಿ ಬೆಳೆಸಿದ್ದ ಜನಶಕ್ತಿಯ ಕ್ರೋಧವನ್ನು ತನ್ನ ಮೈಮೇಲೆ ಎಳೆದುಕೊಂಡಿತು. ನೆಲಕ್ಕೆ ಆನಿಸಿ ಜನದನಿಯನ್ನು ಆಲಿಸಬೇಕಿದ್ದ ಕಿವಿಗಳಲ್ಲಿ ಟೊಳ್ಳುಗಾಳಿಯ ಸದ್ದೇ ತುಂಬಿ ಹೋಗಿತ್ತು. ದಮನದ ದಾರಿಯನ್ನು ಆರಿಸಿಕೊಂಡಿತು. ಎಡರಂಗದ ಕಾರ್ಯಕರ್ತರು ಪೊಲೀಸರ ವೇಷ ಧರಿಸಿದ್ದರು. ಅವರ ಕೈಯಲ್ಲಿ ಬಂದೂಕುಗಳಿದ್ದವು. ಹಿಂಸೆಯಲ್ಲಿ ಮುಳುಗೆದ್ದ ನಂದಿಗ್ರಾಮ ರಣರಂಗವಾಗಿತ್ತು. 14 ಮಂದಿ ಅಸುನೀಗಿದ್ದರು. ಎಡರಂಗ ಸರ್ಕಾರ 2011ರಲ್ಲಿ ಘೋರ ಪರಾಭವ ಕಂಡಿತ್ತು.

ಅಂದು ಮಮತಾ ಗೆಲುವಿನ ಪಯಣವನ್ನು ನಿರ್ಣಯಿಸಿದ್ದ ಅದೇ ನಂದಿಗ್ರಾಮ ಇಂದು ಆಕೆಯನ್ನು ಸತ್ವಪರೀಕ್ಷೆಗೆ ಗುರಿಪಡಿಸಿದೆ. ನಂದಿಗ್ರಾಮ ಮತ್ತು ಸಿಂಗೂರಿನಲ್ಲಿ ಕೃಷಿ ವ್ಯವಸ್ಥೆ ಮತ್ತು ಕೈಗಾರಿಕೀಕರಣದ ಕವಲುದಾರಿಯಲ್ಲಿ ನಿಂತಿತ್ತು ಬಂಗಾಳ. ಎಡರಂಗ ಸರ್ಕಾರ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಗೊಡವೆಗೆ ಹೋಗದೆ ದುಡುಕಿತು. ಬಲವಂತ ಭೂಗ್ರಹಣದ ವಿರುದ್ಧ ಜನರೊಂದಿಗೆ ನಿಂತು ಮಮತಾ ಕಟ್ಟಿ ಬೆಳೆಸಿದ ಆಂದೋಲನವನ್ನು ಹಣಿಯಲು ಹೋಗಿ ಮಣ್ಣು ಮುಕ್ಕಿತು. ಆದರೆ ಅಂದು ಕೈಗಾರಿಕೆಗಳ ಸ್ಥಾಪನೆಗೆ ಕೃಷಿ ಭೂಮಿಯ ಬಲವಂತದ ಸ್ವಾಧೀನವನ್ನು ವಿರೋಧಿಸಿದ ಮಮತಾ ದೀದಿ ಕಳೆದ ಹತ್ತು ವರ್ಷಗಳ ತಮ್ಮ ಆಡಳಿತದಲ್ಲಿ ಮಾಡಿದ್ದಾದರೂ ಏನು? ಕೃಷಿ ಮತ್ತು ಕೈಗಾರಿಕೆಯ ಸಮನ್ವಯ ಅರ್ಥವ್ಯವಸ್ಥೆಯೊಂದನ್ನು ಜನವಿಶ್ವಾಸದ ಅಡಿಪಾಯದ ಮೇಲೆ ಕಟ್ಟಿ ಬೆಳೆಸಬೇಕಿತ್ತಲ್ಲವೇ? ಈ ಕಾರ್ಯದಲ್ಲಿ ಅವರು ಸಂಪೂರ್ಣ ವಿಫಲರಾದರು.

ಬಂಗಾಳದ ಅರ್ಥವ್ಯವಸ್ಥೆ ಹೆಚ್ಚೂಕಡಿಮೆ ಹದಿನಾಲ್ಕು ವರ್ಷಗಳ ಹಳೆಯ ನಂದಿಗ್ರಾಮ-ಸಿಂಗೂರುಗಳಲ್ಲೇ ಹೂತು ಹೋಗಿದೆ. ನಂದಿಗ್ರಾಮ ಹೊಮ್ಮಿಸಿದ ಸವಾಲುಗಳ ನೋಟಕ್ಕೆ ನೋಟ ಬೆರೆಸಿ ನೋಡಲಿಲ್ಲ ಮಮತಾ ಆಡಳಿತ. ಮಮತಾ ದಂಡು ಮತ್ತು ದಂಡನಾಯಕರು ನಡೆಸಿದ ಭ್ರಷ್ಟಾಚಾರವನ್ನೂ ತಮ್ಮ ಕೊರಳಿಗೆ ಸುತ್ತಿಕೊಂಡಿದ್ದಾರೆ. ಪರಿವರ್ತನೆಯ ಮಂತ್ರ ಜಪಿಸಿ ಅಧಿಕಾರಕ್ಕೆ ಬಂದವರು ಮಮತಾ. ಸರ್ಕಾರದ ಪರಿವರ್ತನೆ ಆಯಿತೇ ವಿನಾ ವ್ಯವಸ್ಥೆ ಬದಲಾಗಲಿಲ್ಲ. ಹಾಗೆಂದು ಮಮತಾ ಆಡಳಿತದಲ್ಲಿ ಅಭಿವೃದ್ಧಿಯೇ ಆಗಿಲ್ಲ ಎನ್ನುವುದು ತಪ್ಪಾದೀತು. ಆದರೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿಲ್ಲ. ಅದರ ಸುತ್ತ ಬೆಸೆದಿದ್ದ ಆಶೋತ್ತರಗಳು ಚಿಗಿತು ಫಲ ನೀಡಲಿಲ್ಲ. ನಿಜ, ಮಮತಾ ಆಡಳಿತ ವಿರೋಧಿ ಅಲೆಯನ್ನೇನೂ ಎದುರಿಸಿಲ್ಲ.

ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು
PC: Deccan herald

ಎರಡು ಅವಧಿಗಳ ನಂತರವೂ ಅಂತಹ ಅಲೆ ಇಲ್ಲದಿರುವುದು ಸಾಧಾರಣ ಸಂಗತಿಯೇನೂ ಅಲ್ಲ. ತಾವು ಎಡಕ್ಕಿಂತ ಹೆಚ್ಚು ಎಡ ಎಂದು ತೋರಿಸಿಕೊಂಡ ದೀದಿ ನೀತಿ ನಿರ್ಧಾರಗಳಲ್ಲಿ ಮೂಲಭೂತ ಬದಲಾವಣೆಗೆ ಕೈ ಹಾಕಲಿಲ್ಲ. ಹೀಗಾಗಿ ನಿರಾಸೆಯ ಅಂತರ್ವಾಹಿನಿ ಜನಮಾನಸದಲ್ಲಿ ಹರಿದಿರುವುದು ಹೌದು. ಅದು ಭ್ರಮನಿರಸನದ ರೂಪನ್ನು ಇನ್ನೂ ತಳೆದಿಲ್ಲವೆಂದರೆ ಮಮತಾ ಸರ್ಕಾರದ ಹಲವಾರು ಜನಪ್ರಿಯ ಕಾರ್ಯಕ್ರಮಗಳೇ ಕಾರಣ. ಎಡರಂಗವೇ ಪ್ರತಿಪಕ್ಷವಾಗಿ ಉಳಿದಿದ್ದರೆ ಮಮತಾಗೆ ಎದುರೇ ಇರುತ್ತಿರಲಿಲ್ಲ. ಆದರೆ ಎಡರಂಗ ಮತ್ತು ಕಾಂಗ್ರೆಸ್ ಉಳಿಸಿರುವ ಶೂನ್ಯವನ್ನು ಮೋದಿ ಮತ್ತು ಅಮಿತ್ ಶಾ ಅವರ ಅತ್ಯುಗ್ರ ಅಕ್ರಮಣಕಾರಿ ಹಿಂದುತ್ವ ರಾಜಕಾರಣ ಕಬಳಿಸಿದೆ.

ಎದುರಾದದ್ದನ್ನೆಲ್ಲ ಉರುಳಿಸಿ ನೆಲಸಮ ಮಾಡುವ ದೈತ್ಯ ಬುಲ್ಡೋಜರ್ ರಾಜಕಾರಣವಿದು. ಹುಟ್ಟಾ ಬಂಡಾಯಗಾರ್ತಿ ಎಂಬ ಪಟ್ಟ ಪಡೆದಿರುವ ಮಮತಾ ಅವರನ್ನೂ ಅಲ್ಲಾಡಿಸಿರುವ ದಾಳಿಯಿದು. ಬೇರುಮಟ್ಟದಲ್ಲಿ ರಾಜಕಾರಣವನ್ನು ನಿಯಂತ್ರಿಸುವ ತೋಳ್ಬಲ-ಧನಬಲದ ಕಟ್ಟಾಳುಗಳನ್ನು ತೃಣಮೂಲದಿಂದ ಸೆಳೆದುಕೊಂಡಿದೆ ಬಿಜೆಪಿ. ಶಾರದ-ನಾರದ ಹಗರಣಗಳಲ್ಲಿ ಕಳಂಕಿತರಾದ ಹಲವು ತೃಣಮೂಲ ತಲೆಯಾಳುಗಳು ಇಂದು ಬಿಜೆಪಿ ಎಂಬ ’ಗಂಗೆ’ಯಲ್ಲಿ ಮುಳುಗಿ ’ಪವಿತ್ರ’ರಾಗಿದ್ದಾರೆ. ಹೀಗಾಗಿ ಬಿಜೆಪಿ ಕೇವಲ ’ಕಟ್ ಮನಿ’ ಭ್ರಷ್ಟಾಚಾರದ ವಿರುದ್ಧ ಕತ್ತಿ ಝಳಪಿಸುತ್ತಿದೆಯೇ ವಿನಾ ಶಾರದ- ನಾರದ ಚಿಟ್ ಫಂಡ್ ಹಗರಣಗಳ ಕುರಿತು ತುಟಿ ಹೊಲಿದುಕೊಂಡಿದೆ.

ಬೀಡುಬೀಸು ಪಕ್ಷಾಂತರ, ಹಣದಶಕ್ತಿಯ ಅಬ್ಬರ, ಕೇಂದ್ರದ ಅಧಿಕಾರದ ದಂಡದ ಯಥೇಚ್ಛ ಬಳಕೆ, ಕೋಮುವಾದಿ ಧ್ರುವೀಕರಣ ಹಾಗೂ ಮಿಥ್ಯಾಪ್ರಚಾರದ ಹಲವು ಹತಾರುಗಳನ್ನು ಝಳಪಿಸುತ್ತ ಬಿಜೆಪಿ ಬಂಗಾಳಕ್ಕೆ ಲಗ್ಗೆ ಹಾಕಿ ವರ್ಷಗಳೇ ಉರುಳಿವೆ. ತನ್ನ ಸನ್ನಾಹದಲ್ಲಿ ಅದು ಕಣ್ಣುಕುಕ್ಕುವ ಯಶಸ್ಸನ್ನು ಕಂಡಿದೆ ಕೂಡ. ಇಂದು ಬಂಗಾಳದ ಅಧಿಕಾರದ ಗದ್ದುಗೆಯ ಮೇಲೆ ಕೈಯಿರಿಸಿ ನಿಂತೀತೆಂದು ಹತ್ತು ವರ್ಷಗಳ ಹಿಂದೆ ಯಾರೂ ಊಹಿಸಿರಲಿಲ್ಲ.

ಇಂತಹ ಬಿಜೆಪಿ ಪ್ರವೇಶದ ನಂತರ ಪಶ್ಚಿಮ ಬಂಗಾಳದ ಬದಲಾದ ರಾಜಕಾರಣದ ವಿನ್ಯಾಸದ ಸುಳಿವುಗಳು ನಂದಿಗ್ರಾಮದ ಮಮತಾ ಬ್ಯಾನರ್ಜಿ-ಸುವೇಂದು ಅಧಿಕಾರಿ ಹಣಾಹಣಿಯಲ್ಲಿ ಕಾಣಸಿಗುತ್ತವೆ. ನಂದೀಗ್ರಾಮದ ಪರಿಶಿಷ್ಟ ಜಾತಿ-ಪಂಗಡಗಳ ಜನಸಂಖ್ಯೆಯ ಪ್ರಮಾಣ ಶೇ.16.5. ಈ ಸಮುದಾಯಗಳನ್ನೂ ಒಡೆದಿರುವ ಬಿಜೆಪಿ, ಹಿಂದೂ-ಮುಸ್ಲಿಮ್ ಧ್ರುವೀಕರಣ ಮತ್ತು ಭಾರೀ ಪ್ರಮಾಣದ ಪಕ್ಷಾಂತರದ ಮೂಲಕ ನಂದೀಗ್ರಾಮವನ್ನು ಗೆಲ್ಲಲು ಹೊರಟಿದೆ. ಈ ಮಾತು ಇಡೀ ಪಶ್ಚಿಮ ಬಂಗಾಳಕ್ಕೆ ಅಕ್ಷರಶಃ ವಿಸ್ತರಿಸಲಿದೆ. ನಂದಿಗ್ರಾಮದ ಕಂಪನಗಳು ರಾಜ್ಯಾದ್ಯಂತ ಹರಿಯಲಿವೆ. ಚುನಾವಣಾ ಫಲಿತಾಂಶಗಳ ನಂತರವೂ ಮುಂದುವರೆಯಲಿವೆ.

ಭಾರತದ ಸಹಬಾಳ್ವೆಯ ಆತ್ಮದ ಅಳಿವು ಉಳಿವಿಗಾಗಿ ನಡೆದಿರುವ ಬಂಗಾಳದ ಸಮರದ ಆತ್ಮ ನಂದಿಗ್ರಾಮ. ಇಲ್ಲಿ ಮಮತಾ ಸೋತರೆ ಈ ಉತ್ಪಾತದ ಕಂಪನಗಳು ದೇಶದ ಜನತಂತ್ರವನ್ನು ಅಸ್ಥಿರಗೊಳಿಸುವುದು ನಿಶ್ಚಿತ. ಬಿಜೆಪಿ ಬಯಸುತ್ತಿರುವ ಪ್ರತಿಪಕ್ಷಮುಕ್ತ ಭಾರತ ಬಾಗಿಲು ಬಡಿಯುತ್ತಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...