Homeಮುಖಪುಟನಂದಿಗ್ರಾಮ ಫಲಿತಾಂಶ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸುವೇಂದು ಅಧಿಕಾರಿ

ನಂದಿಗ್ರಾಮ ಫಲಿತಾಂಶ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸುವೇಂದು ಅಧಿಕಾರಿ

- Advertisement -
- Advertisement -

ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿ ವಿಚಾರಣೆ ಒಂದು ಕಡೆ ನಡೆಯುತ್ತಿದ್ದರೇ, ಮತ್ತೊಂದೆಡೆ ಸುವೇಂದು ಅಧಿಕಾರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿ ಹೊಸ ಬೆಳವಣಿಗೆಗೆ ಕಾರಣವಾಗಿದ್ದಾರೆ.

ಬುಧವಾರ ಮಮತಾ ಬ್ಯಾನರ್ಜಿಯವರ ಅರ್ಜಿ ವಿಚಾರಣೆ ನಡೆಸಿದ ಕೋಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶರಾದ ಶಂಪಾ ಸರ್ಕಾರ್, ಚುನಾವಣಾ ಆಯೋಗಕ್ಕೆ ಮತ್ತು ಚುನಾವಣಾ ರಿಟರ್ನಿಂಗ್ ಅಧಿಕಾರಿಗೆ ನೋಟಿಸ್ ನೀಡಬೇಕು ಎಂದು ಹೇಳಿದ್ದಾರೆ. ಜೊತೆಗೆ  ಮತದಾನಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಮತದಾನ ಯಂತ್ರಗಳನ್ನು (EVMs) ಸಂರಕ್ಷಿಸಬೇಕು ಎಂದು ಆದೇಶಿಸಿದ್ದರು.

ಹೊಸ ಬೆಳವಣಿಗೆಯಲ್ಲಿ ನಂದಿಗ್ರಾಮದ ಶಾಸಕ ಬಿಜೆಪಿಯ ಸುವೇಂದು ಅಧಿಕಾರಿ, ಮಮತಾ ಬ್ಯಾನರ್ಜಿಯವರ ಅರ್ಜಿ ವಿಚಾರಣೆಯನ್ನು ಬೇರೆ ರಾಜ್ಯಗಳಿಗೆ ವರ್ಗಾಯಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದರು. ಆದರೆ ಅವರ ತೃಣಮೂಲ ಕಾಂಗ್ರೆಸ್ ಪಕ್ಷವು ರಾಜ್ಯದ ಬೇರೆಡೆ ದೊಡ್ಡ ಜಯ ಸಾಧಿಸಿದೆ. ಅನೇಕ ತಿರುವುಗಳನ್ನು ಕಂಡು, ನಿಧಾನಗತಿಯ ಮತಎಣಿಕೆಯ ಬಳಿಕ ಮಮತಾ ಬ್ಯಾನರ್ಜಿ 2,000 ಕ್ಕಿಂತ ಕಡಿಮೆ ಮತಗಳಿಂದ ಸೋತಿದ್ದಾರೆ ಎಂದು ಘೋಷಿಸಲಾಗಿತ್ತು.

ಇದನ್ನೂ ಓದಿ: ನಂದಿಗ್ರಾಮ ಚುನಾವಣೆಯ ಇವಿಎಂ ಸಂರಕ್ಷಿಸಿ ಎಂದು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ

ಈ ತೀರ್ಪಿನ ವಿರುದ್ಧ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಮತಗಳ ಮರು ಎಣಿಕೆಗೆ ಮನವಿ ಮಾಡಿದ್ದರು. ಆದರೆ, ಚುನಾವಣಾ ಆಯೋಗ ಮನವಿಯನ್ನು ತಿರಸ್ಕರಿಸಿತ್ತು. ಬಳಿಕ ಮಮತಾ, ಕೋಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಬುಧವಾರ ಆನ್‌ಲೈನ್ ವಿಚಾರಣೆಗೆ ಹಾಜರಾಗಿದ್ದ ಮಮತಾ ಬ್ಯಾನರ್ಜಿ, ಸುವೇಂದು ಅಧಿಕಾರಿ ವಿರುದ್ಧ ಲಂಚ, ದ್ವೇಷ ಮತ್ತು ದ್ವೇಷದ ಪ್ರಚಾರ, ಬೂತ್ ಆಕ್ರಮಣ ಮತ್ತು ಧರ್ಮದ ಆಧಾರದ ಮೇಲೆ ಮತಗಳನ್ನು ಬೇಡುವುದು ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 12 ರಂದು ನಡೆಯಲಿದೆ.

ಈ ಮೊದಲು ನಂದಿಗ್ರಾಮ ಚುನಾವಣೆಯ ವಿಚಾರಣೆ ನಡೆಸುತ್ತಿದ್ದ ಕೊಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಕೌಶಿಕ್ ಚಂದಾ ಅವರು ಬಿಜೆಪಿ ನಾಯಕರೊಂದಿಗೆ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ಇದು ಪಕ್ಷಪಾತಕ್ಕೆ ಕಾರಣವಾಗಬಹುದು ಎಂದು ಉಲ್ಲೇಖಿಸಿ ಬದಲಾಯಿಸುವಂತೆ ಮಮತಾ ಬ್ಯಾನರ್ಜಿ ಅರ್ಜಿ ಸಲ್ಲಿಸಿದ್ದರು. ಬ್ಯಾನರ್ಜಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಿ, ಪ್ರಕರಣದಿಂದ ಹೊರ ಬಂದಿದ್ದ ನ್ಯಾಯಮೂರ್ತಿ ಕೌಶಿಕ್ ಚಂದಾ,  ಇದು ಮಮತಾ ಬ್ಯಾನರ್ಜಿ ಅವರ ನ್ಯಾಯಾಧೀಶರನ್ನು ಕೆಣಕುವ ಪೂರ್ವಯೋಜಿತ ಕ್ರಮ ಮತ್ತು ಅವರ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ: ಬಹುಜನ ಭಾರತ: ನಂದಿಗ್ರಾಮ ಬರೆಯಲಿದೆಯೇ ಜನತಂತ್ರದ ಭವಿಷ್ಯವನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...