Homeಮುಖಪುಟನಂದಿಗ್ರಾಮ ಫಲಿತಾಂಶ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸುವೇಂದು ಅಧಿಕಾರಿ

ನಂದಿಗ್ರಾಮ ಫಲಿತಾಂಶ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸುವೇಂದು ಅಧಿಕಾರಿ

- Advertisement -
- Advertisement -

ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿ ವಿಚಾರಣೆ ಒಂದು ಕಡೆ ನಡೆಯುತ್ತಿದ್ದರೇ, ಮತ್ತೊಂದೆಡೆ ಸುವೇಂದು ಅಧಿಕಾರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿ ಹೊಸ ಬೆಳವಣಿಗೆಗೆ ಕಾರಣವಾಗಿದ್ದಾರೆ.

ಬುಧವಾರ ಮಮತಾ ಬ್ಯಾನರ್ಜಿಯವರ ಅರ್ಜಿ ವಿಚಾರಣೆ ನಡೆಸಿದ ಕೋಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶರಾದ ಶಂಪಾ ಸರ್ಕಾರ್, ಚುನಾವಣಾ ಆಯೋಗಕ್ಕೆ ಮತ್ತು ಚುನಾವಣಾ ರಿಟರ್ನಿಂಗ್ ಅಧಿಕಾರಿಗೆ ನೋಟಿಸ್ ನೀಡಬೇಕು ಎಂದು ಹೇಳಿದ್ದಾರೆ. ಜೊತೆಗೆ  ಮತದಾನಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಮತದಾನ ಯಂತ್ರಗಳನ್ನು (EVMs) ಸಂರಕ್ಷಿಸಬೇಕು ಎಂದು ಆದೇಶಿಸಿದ್ದರು.

ಹೊಸ ಬೆಳವಣಿಗೆಯಲ್ಲಿ ನಂದಿಗ್ರಾಮದ ಶಾಸಕ ಬಿಜೆಪಿಯ ಸುವೇಂದು ಅಧಿಕಾರಿ, ಮಮತಾ ಬ್ಯಾನರ್ಜಿಯವರ ಅರ್ಜಿ ವಿಚಾರಣೆಯನ್ನು ಬೇರೆ ರಾಜ್ಯಗಳಿಗೆ ವರ್ಗಾಯಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದರು. ಆದರೆ ಅವರ ತೃಣಮೂಲ ಕಾಂಗ್ರೆಸ್ ಪಕ್ಷವು ರಾಜ್ಯದ ಬೇರೆಡೆ ದೊಡ್ಡ ಜಯ ಸಾಧಿಸಿದೆ. ಅನೇಕ ತಿರುವುಗಳನ್ನು ಕಂಡು, ನಿಧಾನಗತಿಯ ಮತಎಣಿಕೆಯ ಬಳಿಕ ಮಮತಾ ಬ್ಯಾನರ್ಜಿ 2,000 ಕ್ಕಿಂತ ಕಡಿಮೆ ಮತಗಳಿಂದ ಸೋತಿದ್ದಾರೆ ಎಂದು ಘೋಷಿಸಲಾಗಿತ್ತು.

ಇದನ್ನೂ ಓದಿ: ನಂದಿಗ್ರಾಮ ಚುನಾವಣೆಯ ಇವಿಎಂ ಸಂರಕ್ಷಿಸಿ ಎಂದು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ

ಈ ತೀರ್ಪಿನ ವಿರುದ್ಧ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಮತಗಳ ಮರು ಎಣಿಕೆಗೆ ಮನವಿ ಮಾಡಿದ್ದರು. ಆದರೆ, ಚುನಾವಣಾ ಆಯೋಗ ಮನವಿಯನ್ನು ತಿರಸ್ಕರಿಸಿತ್ತು. ಬಳಿಕ ಮಮತಾ, ಕೋಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಬುಧವಾರ ಆನ್‌ಲೈನ್ ವಿಚಾರಣೆಗೆ ಹಾಜರಾಗಿದ್ದ ಮಮತಾ ಬ್ಯಾನರ್ಜಿ, ಸುವೇಂದು ಅಧಿಕಾರಿ ವಿರುದ್ಧ ಲಂಚ, ದ್ವೇಷ ಮತ್ತು ದ್ವೇಷದ ಪ್ರಚಾರ, ಬೂತ್ ಆಕ್ರಮಣ ಮತ್ತು ಧರ್ಮದ ಆಧಾರದ ಮೇಲೆ ಮತಗಳನ್ನು ಬೇಡುವುದು ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 12 ರಂದು ನಡೆಯಲಿದೆ.

ಈ ಮೊದಲು ನಂದಿಗ್ರಾಮ ಚುನಾವಣೆಯ ವಿಚಾರಣೆ ನಡೆಸುತ್ತಿದ್ದ ಕೊಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಕೌಶಿಕ್ ಚಂದಾ ಅವರು ಬಿಜೆಪಿ ನಾಯಕರೊಂದಿಗೆ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ಇದು ಪಕ್ಷಪಾತಕ್ಕೆ ಕಾರಣವಾಗಬಹುದು ಎಂದು ಉಲ್ಲೇಖಿಸಿ ಬದಲಾಯಿಸುವಂತೆ ಮಮತಾ ಬ್ಯಾನರ್ಜಿ ಅರ್ಜಿ ಸಲ್ಲಿಸಿದ್ದರು. ಬ್ಯಾನರ್ಜಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಿ, ಪ್ರಕರಣದಿಂದ ಹೊರ ಬಂದಿದ್ದ ನ್ಯಾಯಮೂರ್ತಿ ಕೌಶಿಕ್ ಚಂದಾ,  ಇದು ಮಮತಾ ಬ್ಯಾನರ್ಜಿ ಅವರ ನ್ಯಾಯಾಧೀಶರನ್ನು ಕೆಣಕುವ ಪೂರ್ವಯೋಜಿತ ಕ್ರಮ ಮತ್ತು ಅವರ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ: ಬಹುಜನ ಭಾರತ: ನಂದಿಗ್ರಾಮ ಬರೆಯಲಿದೆಯೇ ಜನತಂತ್ರದ ಭವಿಷ್ಯವನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...