Homeಮುಖಪುಟನಂದಿಗ್ರಾಮ: ವೀಲ್‌ಚೇರ್‌ನಲ್ಲಿಯೇ ರ್‍ಯಾಲಿ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ನಂದಿಗ್ರಾಮ: ವೀಲ್‌ಚೇರ್‌ನಲ್ಲಿಯೇ ರ್‍ಯಾಲಿ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಎರಡನೇ ಹಂತದ ಮತದಾನ ಏಪ್ರಿಲ್ 1 ರಂದು ನಡೆಯಲಿದೆ. ಮೇ 2 ರಂದು ಫಲಿತಾಂಶ ಹೊರಬೀಳಲಿದೆ.

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಒಂದು ಹಂತದ ಮತದಾನ ಮುಗಿದಿದೆ. ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಆಡಿಯೊ ಲೀಕ್ ಪ್ರಕರಣದ ಬಗ್ಗೆ ಆರೋಪ-ಪ್ರತ್ಯಾರೋಪಗಳ ನಡುವೆಯೇ ಎರಡನೇ ಹಂತದ ಮತದಾನಕ್ಕೆ ಭರ್ಜರಿ ಪ್ರಚಾರ ಆರಂಭವಾಗಿದೆ. ನಂದಿಗ್ರಾಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವೀಲ್‌ಚೇರ್‌ನಲ್ಲಿಯೇ ಕುಳಿತು ರ್‍ಯಾಲಿ ನಡೆಸಿದ್ದಾರೆ.

ತೀವ್ರ ಕುತೂಹಲ ಕೆರಳಿಸಿರುವ ನಂದಿಗ್ರಾಮದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ಇದೆ. ಈ ತಿಂಗಳ ಆರಂಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸುವಾಗ ಹಲ್ಲೆಗೊಳಗಾಗಿದ್ದರು. ನಂದಿಗ್ರಾಮಕ್ಕೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಪ್ರಚಾರ ಆರಂಭವಾಗಿದೆ.

ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್, ನಂದಿಗ್ರಾಮದಲ್ಲಿ ಎಂಟು ಕಿ.ಮೀ ರೋಡ್ ಶೋ ನಡೆಸಿದೆ. ದೇಶದಲ್ಲಿ ಹೋಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಟಿಎಂಸಿ ಸಾರ್ವಜನಿಕ ಸಭೆ ಆಯೋಜಿಸಿದೆ. ಗುರುವಾರ (ಏಪ್ರಿಲ್ 1) ನಂದಿಗ್ರಾಮದಲ್ಲಿ ಮತದಾನ ನಡೆಯಲಿದೆ.

ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಬಿಟ್ಟು ಬಿಜೆಪಿಗೆ ಸೇರ್ಪಡೆಯಾಗಿರುವ ಸುವೇಂದು ಅಧಿಕಾರಿ ನಡುವೆ ತೀವ್ರ ಪೈಪೋಟಿ ಇದೆ.

ಇದನ್ನೂ ಓದಿ: ದೆಹಲಿ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ: ಈ ಮಸೂದೆ ಏನು ಹೇಳುತ್ತದೆ?

 

ರಾಜ್ಯದಲ್ಲಿ ಮೊದಲ ಬಾರಿಗೆ ಗೆಲುವು ಸಾಧಿಸಲು ಪ್ರಯತ್ನಿಸುತ್ತಿರುವ ಬಿಜೆಪಿಯು ಆಡಳಿತ ಪಕ್ಷ ಟಿಎಂಸಿ ವಿರುದ್ಧ ಹಲವು ದೋಷಾರೋಪಣೆಗಳನ್ನು ಮಾಡಿದೆ. ನಂದಿಗ್ರಾಮದಲ್ಲಿ ಹಲ್ಲೆ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯ ಭದ್ರತೆಯ ಉಸ್ತುವಾರಿ ವಹಿಸಿಕೊಂಡಿದ್ದ ಪೊಲೀಸ್ ಅಧಿಕಾರಿಯನ್ನು ಚುನಾವಣಾ ಆಯೋಗ ಅಮಾನತುಗೊಳಿಸಿತ್ತು.

ಮೊದಲ ಹಂತದ ಮತದಾನ ಮುಗಿದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ 30 ರಲ್ಲಿ 26 ಸ್ಥಾನಗಳನ್ನು ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರೆ. ಜೊತೆಗೆ 200 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿ ಬಹುಮತ ಪಡೆಯುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಎಂಟು ಹಂತಗಳಲ್ಲಿ ಮಾರ್ಚ್ 27 ರಿಂದ 8 ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಎರಡನೇ ಹಂತದ ಮತದಾನ ಏಪ್ರಿಲ್ 1 ರಂದು ನಡೆಯಲಿದೆ. ಮೇ 2 ರಂದು ಫಲಿತಾಂಶ ಹೊರಬೀಳಲಿದೆ.


 

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...