Homeಮುಖಪುಟನಂದಿಗ್ರಾಮ: ವೀಲ್‌ಚೇರ್‌ನಲ್ಲಿಯೇ ರ್‍ಯಾಲಿ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ನಂದಿಗ್ರಾಮ: ವೀಲ್‌ಚೇರ್‌ನಲ್ಲಿಯೇ ರ್‍ಯಾಲಿ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಎರಡನೇ ಹಂತದ ಮತದಾನ ಏಪ್ರಿಲ್ 1 ರಂದು ನಡೆಯಲಿದೆ. ಮೇ 2 ರಂದು ಫಲಿತಾಂಶ ಹೊರಬೀಳಲಿದೆ.

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಒಂದು ಹಂತದ ಮತದಾನ ಮುಗಿದಿದೆ. ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಆಡಿಯೊ ಲೀಕ್ ಪ್ರಕರಣದ ಬಗ್ಗೆ ಆರೋಪ-ಪ್ರತ್ಯಾರೋಪಗಳ ನಡುವೆಯೇ ಎರಡನೇ ಹಂತದ ಮತದಾನಕ್ಕೆ ಭರ್ಜರಿ ಪ್ರಚಾರ ಆರಂಭವಾಗಿದೆ. ನಂದಿಗ್ರಾಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವೀಲ್‌ಚೇರ್‌ನಲ್ಲಿಯೇ ಕುಳಿತು ರ್‍ಯಾಲಿ ನಡೆಸಿದ್ದಾರೆ.

ತೀವ್ರ ಕುತೂಹಲ ಕೆರಳಿಸಿರುವ ನಂದಿಗ್ರಾಮದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ಇದೆ. ಈ ತಿಂಗಳ ಆರಂಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸುವಾಗ ಹಲ್ಲೆಗೊಳಗಾಗಿದ್ದರು. ನಂದಿಗ್ರಾಮಕ್ಕೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಪ್ರಚಾರ ಆರಂಭವಾಗಿದೆ.

ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್, ನಂದಿಗ್ರಾಮದಲ್ಲಿ ಎಂಟು ಕಿ.ಮೀ ರೋಡ್ ಶೋ ನಡೆಸಿದೆ. ದೇಶದಲ್ಲಿ ಹೋಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಟಿಎಂಸಿ ಸಾರ್ವಜನಿಕ ಸಭೆ ಆಯೋಜಿಸಿದೆ. ಗುರುವಾರ (ಏಪ್ರಿಲ್ 1) ನಂದಿಗ್ರಾಮದಲ್ಲಿ ಮತದಾನ ನಡೆಯಲಿದೆ.

ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಬಿಟ್ಟು ಬಿಜೆಪಿಗೆ ಸೇರ್ಪಡೆಯಾಗಿರುವ ಸುವೇಂದು ಅಧಿಕಾರಿ ನಡುವೆ ತೀವ್ರ ಪೈಪೋಟಿ ಇದೆ.

ಇದನ್ನೂ ಓದಿ: ದೆಹಲಿ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ: ಈ ಮಸೂದೆ ಏನು ಹೇಳುತ್ತದೆ?

 

ರಾಜ್ಯದಲ್ಲಿ ಮೊದಲ ಬಾರಿಗೆ ಗೆಲುವು ಸಾಧಿಸಲು ಪ್ರಯತ್ನಿಸುತ್ತಿರುವ ಬಿಜೆಪಿಯು ಆಡಳಿತ ಪಕ್ಷ ಟಿಎಂಸಿ ವಿರುದ್ಧ ಹಲವು ದೋಷಾರೋಪಣೆಗಳನ್ನು ಮಾಡಿದೆ. ನಂದಿಗ್ರಾಮದಲ್ಲಿ ಹಲ್ಲೆ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯ ಭದ್ರತೆಯ ಉಸ್ತುವಾರಿ ವಹಿಸಿಕೊಂಡಿದ್ದ ಪೊಲೀಸ್ ಅಧಿಕಾರಿಯನ್ನು ಚುನಾವಣಾ ಆಯೋಗ ಅಮಾನತುಗೊಳಿಸಿತ್ತು.

ಮೊದಲ ಹಂತದ ಮತದಾನ ಮುಗಿದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ 30 ರಲ್ಲಿ 26 ಸ್ಥಾನಗಳನ್ನು ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರೆ. ಜೊತೆಗೆ 200 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿ ಬಹುಮತ ಪಡೆಯುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಎಂಟು ಹಂತಗಳಲ್ಲಿ ಮಾರ್ಚ್ 27 ರಿಂದ 8 ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಎರಡನೇ ಹಂತದ ಮತದಾನ ಏಪ್ರಿಲ್ 1 ರಂದು ನಡೆಯಲಿದೆ. ಮೇ 2 ರಂದು ಫಲಿತಾಂಶ ಹೊರಬೀಳಲಿದೆ.


 

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...