Homeಕರ್ನಾಟಕಎರಡು ವರ್ಷದಿಂದಲೇ ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ: ಕೆಎಂಎಫ್ ಎಂಡಿ, ಅಧ್ಯಕ್ಷರ ಹೇಳಿಕೆ

ಎರಡು ವರ್ಷದಿಂದಲೇ ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ: ಕೆಎಂಎಫ್ ಎಂಡಿ, ಅಧ್ಯಕ್ಷರ ಹೇಳಿಕೆ

- Advertisement -
- Advertisement -

ತಿರುಪತಿಯಲ್ಲಿ ಲಡ್ಡು ತಯಾರಿಸಲು ಕರ್ನಾಟಕದಿಂದ ಸರಬರಾಜು ಆಗುತ್ತಿದ್ದ ನಂದಿನಿ ತುಪ್ಪ 2021ರಿಂದಲೇ ಬಂದ್ ಆಗಿದೆ. ಬಹಳ ಕಡಿಮೆ ದರಕ್ಕೆ ಬಿಡ್ ಕರೆಯುವುದರಿಂದ ಟಿಟಿಡಿ ಟೆಂಡರ್‌ನಲ್ಲಿ ಕೆಎಂಎಫ್ ಪಾಲ್ಗೊಂಡಿರಲಿಲ್ಲ ಎಂದು ಕೆಎಂಎಫ್ ಅಧ್ಯಕ್ಷರಾದ ಭೀಮಾ ನಾಯ್ಕ್ ತಿಳಿಸಿದ್ದಾರೆ.

ತಿರುಪತಿ ಲಡ್ಡು ತಯಾರಿಗೆ ಕರ್ನಾಟಕದ ನಂದಿನಿ ತುಪ್ಪ ಸರಬರಾಜು ಮಾಡದೇ ಕಾಂಗ್ರೆಸ್ ಪಕ್ಷ ತನ್ನ ಅಜೆಂಡಾಕ್ಕಾಗಿ ಸುವರ್ಣ ಕರ್ನಾಟಕವನ್ನು ನಾಶ ಮಾಡಲು ಮುಂದಾಗಿದೆ ಎಂಬ ಆರೋಪಕ್ಕೆ ಉತ್ತರಿಸಿರುವ ಅವರು, “ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲದೇ ಈ ರೀತಿಯ ಹೇಳೀಕೆಗಳನ್ನು ನೀಡುತ್ತಿದ್ದಾರೆ. ವಾಸ್ತವವೆಂದರೆ 2 ವರ್ಷದ ಹಿಂದೆ ತುಪ್ಪ ಸರಬರಾಜು ಸ್ಥಗಿತಗೊಳಿಸಲಾಗಿತ್ತು” ಎಂದಿದ್ದಾರೆ.

ಕೆಎಂಎಫ್‌ ಅತ್ಯುತ್ತಮ ದರ್ಜೆಯ ನಂದಿನಿ ತುಪ್ಪವನ್ನು ಸರಬರಾಜು ಮಾಡುತ್ತಿದೆ. ಆ ಗುಣಮಟ್ಟದಲ್ಲಿ ರಾಜೀ ಮಾಡಿಕೊಳ್ಳಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ಟಿಟಿಡಿ ಟೆಂಡರ್‌ನಲ್ಲಿ ನಮ್ಮ ಬೆಲೆಗಿಂತ ಕಡಿಮೆ ದರಕ್ಕೆ ಬೇರೆ ಸಂಸ್ಥೆಗಳು ಬಿಡ್ ಮಾಡುತ್ತಿವೆ. ಹಾಗಾಗಿ ನಾವು ಸರಬರಾಜು ಮಾಡುತ್ತಿಲ್ಲ. ಆದರೆ ನಂದಿನಿ ಬ್ರಾಂಡ್‌ ಮೇಲೆ ಜನ ವಿಶ್ವಾಸ ಇಟ್ಟಿದ್ದಾರೆ. ರಾಜ್ಯದಲ್ಲಿ, ದೇಶದಲ್ಲಿ ನಮ್ಮ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.

ಟಿಟಿಡಿಗೆ ಸುಮಾರು 2000 ಟನ್ ತುಪ್ಪ ಬೇಕು. ಪ್ರತಿ ಆರು ತಿಂಗಳಿಗೊಮ್ಮೆ ಟೆಂಡರ್ ಕರೆಯುತ್ತಾರೆ. ಕಡಿಮೆ ಬೆಲೆಗೆ ಸ್ಪರ್ಧೆ ಮಾಡಲು ಇಚ್ಚೆ ಇಲ್ಲದೇ ನಾವು ಸರಬರಾಜು ನಿಲ್ಲಿಸಿದ್ದೇವೆ. ಆದರೂ ಅವರ ಮನವಿಗೆ ಸ್ಪಂದಿಸಿ 392 ರೂಗಳಿಗೆ ನಾವು 35% ತುಪ್ಪ ಕೊಟ್ಟಿದ್ದೀವಿ. ನಮ್ಮ ರೇಟ್‌ಗೆ ಬಂದರೆ ಈಗಲೂ ತುಪ್ಪ ಕೊಡುತ್ತೇವೆ. ಆದರೆ ಅವರು ನೀಡುವ ಕಡಿಮೆ ದರಕ್ಕೆ ತುಪ್ಪ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

ನಮ್ಮ ರೈತರು ಬಹಳ ಕಷ್ಟದಲ್ಲಿದ್ದಾರೆ. ಅವರಿಗೆ ಪ್ರತಿ ಲೀಟರ್‌ಗೆ 5 ರೂ ಹೆಚ್ಚು ಕೊಡಲು ನಾವು ಬೇಡಿಕೆ ಇಟ್ಟಿದ್ದೆವು. ಕೊನೆಗೆ ಮುಖ್ಯಮಂತ್ರಿಗಳು 3 ರೂ ಕೊಡಲು ಒಪ್ಪಿದ್ದಾರೆ. ಹಾಗಾಗಿ ನಾವು ನಮ್ಮ ರೈತರ ಹಿತದೃಷ್ಟಿಯಿಂದ ಬೆಲೆಯಲ್ಲಿ ರಾಜೀ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದರು.

ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸುವ ಹಾಲು ಒಕ್ಕೂಟಗಳಲ್ಲಿ ಯಾರು ಕಡಿಮೆ ಮೊತ್ತಕ್ಕೆ ಕೋಟ್ ಮಾಡುತ್ತಾರೋ ಅವರಿಗೆ ಟೆಂಡರ್ ಸಿಗುತ್ತದೆ. ಇಲ್ಲಿ ಯಾವ ರಾಜಕೀಯವು ಇಲ್ಲ. ತುಪ್ಪವನ್ನು ಅಂತರಾಷ್ಟ್ರೀಯ ಗುಣಮಟ್ಟಕ್ಕೆ ಅನುಗುಣವಾಗಿ ಉತ್ಪಾದನೆ ಮಾಡುತ್ತಿದ್ದೇವೆ. ನಮ್ಮ ಗುಣಮಟ್ಟವನ್ನು ಬೇರೆ ಕಂಪೆನಿಗಳನ್ನು ಹೋಲಿಕೆ ಮಾಡಲು ಸಾಧ್ಯವಿಲ್ಲ. ಮುಂದೆ ತಿರುಪತಿ ಲಡ್ಡುಗಳು ಈಗಿನಂತೆಯೇ ಇರುತ್ತವೆ ಎಂದು ಹೇಳಲಾಗದು ಎಂದು ಭೀಮಾನಾಯಕ್‌ ತಿಳಿಸಿದರು.

ಕೆಎಂಎಫ್‌ ಎಂಡಿ ಜಗದೀಶ್ ಮಾತನಾಡಿ ಟಟಿಡಿಯವರು 6 ತಿಂಗಳಿಗೊಮ್ಮೆ ತುಪ್ಪ ಖರೀದಿಸುತ್ತಿದ್ದರು. ಅತ್ಯಂತ ಕಡಿಮೆ ಬಿಡ್ ಮಾಡಿದವರಿಗೆ ಟೆಂಡರ್ ಸಿಗುತ್ತದೆ. ಸ್ಪರ್ಧಾತ್ಮಕ ಬಿಡ್ಡಿಂಗ್‌ಗೆ ನಾವು ಹೋಗಲು ಸಾಧ್ಯವಿಲ್ಲ. 2021-22ನೇ ಸಾಲಿನಲ್ಲಿ 345 ಟನ್ ತುಪ್ಪ ನಾವು ಕೋಟ್ ಮಾಡಿದ ದರಕ್ಕೆ ಕೊಂಡುಕೊಂಡಿದ್ದರು. ಆನಂತರ ನಾವು ಅವರು ಹೇಳುವ ಕಡಿಮೆ ಬೆಲೆಗೆ ಮಾರದಿರಲು ನಿರ್ಧರಿಸಿದ್ದೇವೆ ಎಂದರು.

ಹಾಲು, ಮೊಸರು ಮತ್ತು ತುಪ್ಪದ ಬೆಲೆ ಏರಿಕೆ ಬಗ್ಗೆ ಕೆಎಂಎಫ್‌ ಮಂಡಳಿ ನಿರ್ಧಾರ ತೆಗೆದುಕೊಳ್ಳುತ್ತದೆ. ಸರ್ಕಾರದ ಸಹಮತ ಪಡೆಯುತ್ತೇವೆ ಅಷ್ಟೇ. ಸದ್ಯ ಹಾಲು ಮೊಸರಿನ ಬೆಲೆ 3 ರೂ ಹೆಚ್ಚಳವಾಗಿರುವುದಕ್ಕೂ, ತುಪ್ಪ ಸರಬರಾಜು ನಿಲ್ಲಿಸಿರುವುದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಖರ್ಚು ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....