Homeಕರ್ನಾಟಕಎರಡು ವರ್ಷದಿಂದಲೇ ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ: ಕೆಎಂಎಫ್ ಎಂಡಿ, ಅಧ್ಯಕ್ಷರ ಹೇಳಿಕೆ

ಎರಡು ವರ್ಷದಿಂದಲೇ ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ: ಕೆಎಂಎಫ್ ಎಂಡಿ, ಅಧ್ಯಕ್ಷರ ಹೇಳಿಕೆ

- Advertisement -
- Advertisement -

ತಿರುಪತಿಯಲ್ಲಿ ಲಡ್ಡು ತಯಾರಿಸಲು ಕರ್ನಾಟಕದಿಂದ ಸರಬರಾಜು ಆಗುತ್ತಿದ್ದ ನಂದಿನಿ ತುಪ್ಪ 2021ರಿಂದಲೇ ಬಂದ್ ಆಗಿದೆ. ಬಹಳ ಕಡಿಮೆ ದರಕ್ಕೆ ಬಿಡ್ ಕರೆಯುವುದರಿಂದ ಟಿಟಿಡಿ ಟೆಂಡರ್‌ನಲ್ಲಿ ಕೆಎಂಎಫ್ ಪಾಲ್ಗೊಂಡಿರಲಿಲ್ಲ ಎಂದು ಕೆಎಂಎಫ್ ಅಧ್ಯಕ್ಷರಾದ ಭೀಮಾ ನಾಯ್ಕ್ ತಿಳಿಸಿದ್ದಾರೆ.

ತಿರುಪತಿ ಲಡ್ಡು ತಯಾರಿಗೆ ಕರ್ನಾಟಕದ ನಂದಿನಿ ತುಪ್ಪ ಸರಬರಾಜು ಮಾಡದೇ ಕಾಂಗ್ರೆಸ್ ಪಕ್ಷ ತನ್ನ ಅಜೆಂಡಾಕ್ಕಾಗಿ ಸುವರ್ಣ ಕರ್ನಾಟಕವನ್ನು ನಾಶ ಮಾಡಲು ಮುಂದಾಗಿದೆ ಎಂಬ ಆರೋಪಕ್ಕೆ ಉತ್ತರಿಸಿರುವ ಅವರು, “ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲದೇ ಈ ರೀತಿಯ ಹೇಳೀಕೆಗಳನ್ನು ನೀಡುತ್ತಿದ್ದಾರೆ. ವಾಸ್ತವವೆಂದರೆ 2 ವರ್ಷದ ಹಿಂದೆ ತುಪ್ಪ ಸರಬರಾಜು ಸ್ಥಗಿತಗೊಳಿಸಲಾಗಿತ್ತು” ಎಂದಿದ್ದಾರೆ.

ಕೆಎಂಎಫ್‌ ಅತ್ಯುತ್ತಮ ದರ್ಜೆಯ ನಂದಿನಿ ತುಪ್ಪವನ್ನು ಸರಬರಾಜು ಮಾಡುತ್ತಿದೆ. ಆ ಗುಣಮಟ್ಟದಲ್ಲಿ ರಾಜೀ ಮಾಡಿಕೊಳ್ಳಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ಟಿಟಿಡಿ ಟೆಂಡರ್‌ನಲ್ಲಿ ನಮ್ಮ ಬೆಲೆಗಿಂತ ಕಡಿಮೆ ದರಕ್ಕೆ ಬೇರೆ ಸಂಸ್ಥೆಗಳು ಬಿಡ್ ಮಾಡುತ್ತಿವೆ. ಹಾಗಾಗಿ ನಾವು ಸರಬರಾಜು ಮಾಡುತ್ತಿಲ್ಲ. ಆದರೆ ನಂದಿನಿ ಬ್ರಾಂಡ್‌ ಮೇಲೆ ಜನ ವಿಶ್ವಾಸ ಇಟ್ಟಿದ್ದಾರೆ. ರಾಜ್ಯದಲ್ಲಿ, ದೇಶದಲ್ಲಿ ನಮ್ಮ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.

ಟಿಟಿಡಿಗೆ ಸುಮಾರು 2000 ಟನ್ ತುಪ್ಪ ಬೇಕು. ಪ್ರತಿ ಆರು ತಿಂಗಳಿಗೊಮ್ಮೆ ಟೆಂಡರ್ ಕರೆಯುತ್ತಾರೆ. ಕಡಿಮೆ ಬೆಲೆಗೆ ಸ್ಪರ್ಧೆ ಮಾಡಲು ಇಚ್ಚೆ ಇಲ್ಲದೇ ನಾವು ಸರಬರಾಜು ನಿಲ್ಲಿಸಿದ್ದೇವೆ. ಆದರೂ ಅವರ ಮನವಿಗೆ ಸ್ಪಂದಿಸಿ 392 ರೂಗಳಿಗೆ ನಾವು 35% ತುಪ್ಪ ಕೊಟ್ಟಿದ್ದೀವಿ. ನಮ್ಮ ರೇಟ್‌ಗೆ ಬಂದರೆ ಈಗಲೂ ತುಪ್ಪ ಕೊಡುತ್ತೇವೆ. ಆದರೆ ಅವರು ನೀಡುವ ಕಡಿಮೆ ದರಕ್ಕೆ ತುಪ್ಪ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

ನಮ್ಮ ರೈತರು ಬಹಳ ಕಷ್ಟದಲ್ಲಿದ್ದಾರೆ. ಅವರಿಗೆ ಪ್ರತಿ ಲೀಟರ್‌ಗೆ 5 ರೂ ಹೆಚ್ಚು ಕೊಡಲು ನಾವು ಬೇಡಿಕೆ ಇಟ್ಟಿದ್ದೆವು. ಕೊನೆಗೆ ಮುಖ್ಯಮಂತ್ರಿಗಳು 3 ರೂ ಕೊಡಲು ಒಪ್ಪಿದ್ದಾರೆ. ಹಾಗಾಗಿ ನಾವು ನಮ್ಮ ರೈತರ ಹಿತದೃಷ್ಟಿಯಿಂದ ಬೆಲೆಯಲ್ಲಿ ರಾಜೀ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದರು.

ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸುವ ಹಾಲು ಒಕ್ಕೂಟಗಳಲ್ಲಿ ಯಾರು ಕಡಿಮೆ ಮೊತ್ತಕ್ಕೆ ಕೋಟ್ ಮಾಡುತ್ತಾರೋ ಅವರಿಗೆ ಟೆಂಡರ್ ಸಿಗುತ್ತದೆ. ಇಲ್ಲಿ ಯಾವ ರಾಜಕೀಯವು ಇಲ್ಲ. ತುಪ್ಪವನ್ನು ಅಂತರಾಷ್ಟ್ರೀಯ ಗುಣಮಟ್ಟಕ್ಕೆ ಅನುಗುಣವಾಗಿ ಉತ್ಪಾದನೆ ಮಾಡುತ್ತಿದ್ದೇವೆ. ನಮ್ಮ ಗುಣಮಟ್ಟವನ್ನು ಬೇರೆ ಕಂಪೆನಿಗಳನ್ನು ಹೋಲಿಕೆ ಮಾಡಲು ಸಾಧ್ಯವಿಲ್ಲ. ಮುಂದೆ ತಿರುಪತಿ ಲಡ್ಡುಗಳು ಈಗಿನಂತೆಯೇ ಇರುತ್ತವೆ ಎಂದು ಹೇಳಲಾಗದು ಎಂದು ಭೀಮಾನಾಯಕ್‌ ತಿಳಿಸಿದರು.

ಕೆಎಂಎಫ್‌ ಎಂಡಿ ಜಗದೀಶ್ ಮಾತನಾಡಿ ಟಟಿಡಿಯವರು 6 ತಿಂಗಳಿಗೊಮ್ಮೆ ತುಪ್ಪ ಖರೀದಿಸುತ್ತಿದ್ದರು. ಅತ್ಯಂತ ಕಡಿಮೆ ಬಿಡ್ ಮಾಡಿದವರಿಗೆ ಟೆಂಡರ್ ಸಿಗುತ್ತದೆ. ಸ್ಪರ್ಧಾತ್ಮಕ ಬಿಡ್ಡಿಂಗ್‌ಗೆ ನಾವು ಹೋಗಲು ಸಾಧ್ಯವಿಲ್ಲ. 2021-22ನೇ ಸಾಲಿನಲ್ಲಿ 345 ಟನ್ ತುಪ್ಪ ನಾವು ಕೋಟ್ ಮಾಡಿದ ದರಕ್ಕೆ ಕೊಂಡುಕೊಂಡಿದ್ದರು. ಆನಂತರ ನಾವು ಅವರು ಹೇಳುವ ಕಡಿಮೆ ಬೆಲೆಗೆ ಮಾರದಿರಲು ನಿರ್ಧರಿಸಿದ್ದೇವೆ ಎಂದರು.

ಹಾಲು, ಮೊಸರು ಮತ್ತು ತುಪ್ಪದ ಬೆಲೆ ಏರಿಕೆ ಬಗ್ಗೆ ಕೆಎಂಎಫ್‌ ಮಂಡಳಿ ನಿರ್ಧಾರ ತೆಗೆದುಕೊಳ್ಳುತ್ತದೆ. ಸರ್ಕಾರದ ಸಹಮತ ಪಡೆಯುತ್ತೇವೆ ಅಷ್ಟೇ. ಸದ್ಯ ಹಾಲು ಮೊಸರಿನ ಬೆಲೆ 3 ರೂ ಹೆಚ್ಚಳವಾಗಿರುವುದಕ್ಕೂ, ತುಪ್ಪ ಸರಬರಾಜು ನಿಲ್ಲಿಸಿರುವುದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಖರ್ಚು ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...