Homeಕರ್ನಾಟಕಎರಡು ವರ್ಷದಿಂದಲೇ ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ: ಕೆಎಂಎಫ್ ಎಂಡಿ, ಅಧ್ಯಕ್ಷರ ಹೇಳಿಕೆ

ಎರಡು ವರ್ಷದಿಂದಲೇ ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ: ಕೆಎಂಎಫ್ ಎಂಡಿ, ಅಧ್ಯಕ್ಷರ ಹೇಳಿಕೆ

- Advertisement -
- Advertisement -

ತಿರುಪತಿಯಲ್ಲಿ ಲಡ್ಡು ತಯಾರಿಸಲು ಕರ್ನಾಟಕದಿಂದ ಸರಬರಾಜು ಆಗುತ್ತಿದ್ದ ನಂದಿನಿ ತುಪ್ಪ 2021ರಿಂದಲೇ ಬಂದ್ ಆಗಿದೆ. ಬಹಳ ಕಡಿಮೆ ದರಕ್ಕೆ ಬಿಡ್ ಕರೆಯುವುದರಿಂದ ಟಿಟಿಡಿ ಟೆಂಡರ್‌ನಲ್ಲಿ ಕೆಎಂಎಫ್ ಪಾಲ್ಗೊಂಡಿರಲಿಲ್ಲ ಎಂದು ಕೆಎಂಎಫ್ ಅಧ್ಯಕ್ಷರಾದ ಭೀಮಾ ನಾಯ್ಕ್ ತಿಳಿಸಿದ್ದಾರೆ.

ತಿರುಪತಿ ಲಡ್ಡು ತಯಾರಿಗೆ ಕರ್ನಾಟಕದ ನಂದಿನಿ ತುಪ್ಪ ಸರಬರಾಜು ಮಾಡದೇ ಕಾಂಗ್ರೆಸ್ ಪಕ್ಷ ತನ್ನ ಅಜೆಂಡಾಕ್ಕಾಗಿ ಸುವರ್ಣ ಕರ್ನಾಟಕವನ್ನು ನಾಶ ಮಾಡಲು ಮುಂದಾಗಿದೆ ಎಂಬ ಆರೋಪಕ್ಕೆ ಉತ್ತರಿಸಿರುವ ಅವರು, “ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲದೇ ಈ ರೀತಿಯ ಹೇಳೀಕೆಗಳನ್ನು ನೀಡುತ್ತಿದ್ದಾರೆ. ವಾಸ್ತವವೆಂದರೆ 2 ವರ್ಷದ ಹಿಂದೆ ತುಪ್ಪ ಸರಬರಾಜು ಸ್ಥಗಿತಗೊಳಿಸಲಾಗಿತ್ತು” ಎಂದಿದ್ದಾರೆ.

ಕೆಎಂಎಫ್‌ ಅತ್ಯುತ್ತಮ ದರ್ಜೆಯ ನಂದಿನಿ ತುಪ್ಪವನ್ನು ಸರಬರಾಜು ಮಾಡುತ್ತಿದೆ. ಆ ಗುಣಮಟ್ಟದಲ್ಲಿ ರಾಜೀ ಮಾಡಿಕೊಳ್ಳಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ಟಿಟಿಡಿ ಟೆಂಡರ್‌ನಲ್ಲಿ ನಮ್ಮ ಬೆಲೆಗಿಂತ ಕಡಿಮೆ ದರಕ್ಕೆ ಬೇರೆ ಸಂಸ್ಥೆಗಳು ಬಿಡ್ ಮಾಡುತ್ತಿವೆ. ಹಾಗಾಗಿ ನಾವು ಸರಬರಾಜು ಮಾಡುತ್ತಿಲ್ಲ. ಆದರೆ ನಂದಿನಿ ಬ್ರಾಂಡ್‌ ಮೇಲೆ ಜನ ವಿಶ್ವಾಸ ಇಟ್ಟಿದ್ದಾರೆ. ರಾಜ್ಯದಲ್ಲಿ, ದೇಶದಲ್ಲಿ ನಮ್ಮ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.

ಟಿಟಿಡಿಗೆ ಸುಮಾರು 2000 ಟನ್ ತುಪ್ಪ ಬೇಕು. ಪ್ರತಿ ಆರು ತಿಂಗಳಿಗೊಮ್ಮೆ ಟೆಂಡರ್ ಕರೆಯುತ್ತಾರೆ. ಕಡಿಮೆ ಬೆಲೆಗೆ ಸ್ಪರ್ಧೆ ಮಾಡಲು ಇಚ್ಚೆ ಇಲ್ಲದೇ ನಾವು ಸರಬರಾಜು ನಿಲ್ಲಿಸಿದ್ದೇವೆ. ಆದರೂ ಅವರ ಮನವಿಗೆ ಸ್ಪಂದಿಸಿ 392 ರೂಗಳಿಗೆ ನಾವು 35% ತುಪ್ಪ ಕೊಟ್ಟಿದ್ದೀವಿ. ನಮ್ಮ ರೇಟ್‌ಗೆ ಬಂದರೆ ಈಗಲೂ ತುಪ್ಪ ಕೊಡುತ್ತೇವೆ. ಆದರೆ ಅವರು ನೀಡುವ ಕಡಿಮೆ ದರಕ್ಕೆ ತುಪ್ಪ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

ನಮ್ಮ ರೈತರು ಬಹಳ ಕಷ್ಟದಲ್ಲಿದ್ದಾರೆ. ಅವರಿಗೆ ಪ್ರತಿ ಲೀಟರ್‌ಗೆ 5 ರೂ ಹೆಚ್ಚು ಕೊಡಲು ನಾವು ಬೇಡಿಕೆ ಇಟ್ಟಿದ್ದೆವು. ಕೊನೆಗೆ ಮುಖ್ಯಮಂತ್ರಿಗಳು 3 ರೂ ಕೊಡಲು ಒಪ್ಪಿದ್ದಾರೆ. ಹಾಗಾಗಿ ನಾವು ನಮ್ಮ ರೈತರ ಹಿತದೃಷ್ಟಿಯಿಂದ ಬೆಲೆಯಲ್ಲಿ ರಾಜೀ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದರು.

ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸುವ ಹಾಲು ಒಕ್ಕೂಟಗಳಲ್ಲಿ ಯಾರು ಕಡಿಮೆ ಮೊತ್ತಕ್ಕೆ ಕೋಟ್ ಮಾಡುತ್ತಾರೋ ಅವರಿಗೆ ಟೆಂಡರ್ ಸಿಗುತ್ತದೆ. ಇಲ್ಲಿ ಯಾವ ರಾಜಕೀಯವು ಇಲ್ಲ. ತುಪ್ಪವನ್ನು ಅಂತರಾಷ್ಟ್ರೀಯ ಗುಣಮಟ್ಟಕ್ಕೆ ಅನುಗುಣವಾಗಿ ಉತ್ಪಾದನೆ ಮಾಡುತ್ತಿದ್ದೇವೆ. ನಮ್ಮ ಗುಣಮಟ್ಟವನ್ನು ಬೇರೆ ಕಂಪೆನಿಗಳನ್ನು ಹೋಲಿಕೆ ಮಾಡಲು ಸಾಧ್ಯವಿಲ್ಲ. ಮುಂದೆ ತಿರುಪತಿ ಲಡ್ಡುಗಳು ಈಗಿನಂತೆಯೇ ಇರುತ್ತವೆ ಎಂದು ಹೇಳಲಾಗದು ಎಂದು ಭೀಮಾನಾಯಕ್‌ ತಿಳಿಸಿದರು.

ಕೆಎಂಎಫ್‌ ಎಂಡಿ ಜಗದೀಶ್ ಮಾತನಾಡಿ ಟಟಿಡಿಯವರು 6 ತಿಂಗಳಿಗೊಮ್ಮೆ ತುಪ್ಪ ಖರೀದಿಸುತ್ತಿದ್ದರು. ಅತ್ಯಂತ ಕಡಿಮೆ ಬಿಡ್ ಮಾಡಿದವರಿಗೆ ಟೆಂಡರ್ ಸಿಗುತ್ತದೆ. ಸ್ಪರ್ಧಾತ್ಮಕ ಬಿಡ್ಡಿಂಗ್‌ಗೆ ನಾವು ಹೋಗಲು ಸಾಧ್ಯವಿಲ್ಲ. 2021-22ನೇ ಸಾಲಿನಲ್ಲಿ 345 ಟನ್ ತುಪ್ಪ ನಾವು ಕೋಟ್ ಮಾಡಿದ ದರಕ್ಕೆ ಕೊಂಡುಕೊಂಡಿದ್ದರು. ಆನಂತರ ನಾವು ಅವರು ಹೇಳುವ ಕಡಿಮೆ ಬೆಲೆಗೆ ಮಾರದಿರಲು ನಿರ್ಧರಿಸಿದ್ದೇವೆ ಎಂದರು.

ಹಾಲು, ಮೊಸರು ಮತ್ತು ತುಪ್ಪದ ಬೆಲೆ ಏರಿಕೆ ಬಗ್ಗೆ ಕೆಎಂಎಫ್‌ ಮಂಡಳಿ ನಿರ್ಧಾರ ತೆಗೆದುಕೊಳ್ಳುತ್ತದೆ. ಸರ್ಕಾರದ ಸಹಮತ ಪಡೆಯುತ್ತೇವೆ ಅಷ್ಟೇ. ಸದ್ಯ ಹಾಲು ಮೊಸರಿನ ಬೆಲೆ 3 ರೂ ಹೆಚ್ಚಳವಾಗಿರುವುದಕ್ಕೂ, ತುಪ್ಪ ಸರಬರಾಜು ನಿಲ್ಲಿಸಿರುವುದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಖರ್ಚು ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...