Homeಕರ್ನಾಟಕಎರಡು ವರ್ಷದಿಂದಲೇ ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ: ಕೆಎಂಎಫ್ ಎಂಡಿ, ಅಧ್ಯಕ್ಷರ ಹೇಳಿಕೆ

ಎರಡು ವರ್ಷದಿಂದಲೇ ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ: ಕೆಎಂಎಫ್ ಎಂಡಿ, ಅಧ್ಯಕ್ಷರ ಹೇಳಿಕೆ

- Advertisement -
- Advertisement -

ತಿರುಪತಿಯಲ್ಲಿ ಲಡ್ಡು ತಯಾರಿಸಲು ಕರ್ನಾಟಕದಿಂದ ಸರಬರಾಜು ಆಗುತ್ತಿದ್ದ ನಂದಿನಿ ತುಪ್ಪ 2021ರಿಂದಲೇ ಬಂದ್ ಆಗಿದೆ. ಬಹಳ ಕಡಿಮೆ ದರಕ್ಕೆ ಬಿಡ್ ಕರೆಯುವುದರಿಂದ ಟಿಟಿಡಿ ಟೆಂಡರ್‌ನಲ್ಲಿ ಕೆಎಂಎಫ್ ಪಾಲ್ಗೊಂಡಿರಲಿಲ್ಲ ಎಂದು ಕೆಎಂಎಫ್ ಅಧ್ಯಕ್ಷರಾದ ಭೀಮಾ ನಾಯ್ಕ್ ತಿಳಿಸಿದ್ದಾರೆ.

ತಿರುಪತಿ ಲಡ್ಡು ತಯಾರಿಗೆ ಕರ್ನಾಟಕದ ನಂದಿನಿ ತುಪ್ಪ ಸರಬರಾಜು ಮಾಡದೇ ಕಾಂಗ್ರೆಸ್ ಪಕ್ಷ ತನ್ನ ಅಜೆಂಡಾಕ್ಕಾಗಿ ಸುವರ್ಣ ಕರ್ನಾಟಕವನ್ನು ನಾಶ ಮಾಡಲು ಮುಂದಾಗಿದೆ ಎಂಬ ಆರೋಪಕ್ಕೆ ಉತ್ತರಿಸಿರುವ ಅವರು, “ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲದೇ ಈ ರೀತಿಯ ಹೇಳೀಕೆಗಳನ್ನು ನೀಡುತ್ತಿದ್ದಾರೆ. ವಾಸ್ತವವೆಂದರೆ 2 ವರ್ಷದ ಹಿಂದೆ ತುಪ್ಪ ಸರಬರಾಜು ಸ್ಥಗಿತಗೊಳಿಸಲಾಗಿತ್ತು” ಎಂದಿದ್ದಾರೆ.

ಕೆಎಂಎಫ್‌ ಅತ್ಯುತ್ತಮ ದರ್ಜೆಯ ನಂದಿನಿ ತುಪ್ಪವನ್ನು ಸರಬರಾಜು ಮಾಡುತ್ತಿದೆ. ಆ ಗುಣಮಟ್ಟದಲ್ಲಿ ರಾಜೀ ಮಾಡಿಕೊಳ್ಳಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ಟಿಟಿಡಿ ಟೆಂಡರ್‌ನಲ್ಲಿ ನಮ್ಮ ಬೆಲೆಗಿಂತ ಕಡಿಮೆ ದರಕ್ಕೆ ಬೇರೆ ಸಂಸ್ಥೆಗಳು ಬಿಡ್ ಮಾಡುತ್ತಿವೆ. ಹಾಗಾಗಿ ನಾವು ಸರಬರಾಜು ಮಾಡುತ್ತಿಲ್ಲ. ಆದರೆ ನಂದಿನಿ ಬ್ರಾಂಡ್‌ ಮೇಲೆ ಜನ ವಿಶ್ವಾಸ ಇಟ್ಟಿದ್ದಾರೆ. ರಾಜ್ಯದಲ್ಲಿ, ದೇಶದಲ್ಲಿ ನಮ್ಮ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.

ಟಿಟಿಡಿಗೆ ಸುಮಾರು 2000 ಟನ್ ತುಪ್ಪ ಬೇಕು. ಪ್ರತಿ ಆರು ತಿಂಗಳಿಗೊಮ್ಮೆ ಟೆಂಡರ್ ಕರೆಯುತ್ತಾರೆ. ಕಡಿಮೆ ಬೆಲೆಗೆ ಸ್ಪರ್ಧೆ ಮಾಡಲು ಇಚ್ಚೆ ಇಲ್ಲದೇ ನಾವು ಸರಬರಾಜು ನಿಲ್ಲಿಸಿದ್ದೇವೆ. ಆದರೂ ಅವರ ಮನವಿಗೆ ಸ್ಪಂದಿಸಿ 392 ರೂಗಳಿಗೆ ನಾವು 35% ತುಪ್ಪ ಕೊಟ್ಟಿದ್ದೀವಿ. ನಮ್ಮ ರೇಟ್‌ಗೆ ಬಂದರೆ ಈಗಲೂ ತುಪ್ಪ ಕೊಡುತ್ತೇವೆ. ಆದರೆ ಅವರು ನೀಡುವ ಕಡಿಮೆ ದರಕ್ಕೆ ತುಪ್ಪ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

ನಮ್ಮ ರೈತರು ಬಹಳ ಕಷ್ಟದಲ್ಲಿದ್ದಾರೆ. ಅವರಿಗೆ ಪ್ರತಿ ಲೀಟರ್‌ಗೆ 5 ರೂ ಹೆಚ್ಚು ಕೊಡಲು ನಾವು ಬೇಡಿಕೆ ಇಟ್ಟಿದ್ದೆವು. ಕೊನೆಗೆ ಮುಖ್ಯಮಂತ್ರಿಗಳು 3 ರೂ ಕೊಡಲು ಒಪ್ಪಿದ್ದಾರೆ. ಹಾಗಾಗಿ ನಾವು ನಮ್ಮ ರೈತರ ಹಿತದೃಷ್ಟಿಯಿಂದ ಬೆಲೆಯಲ್ಲಿ ರಾಜೀ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದರು.

ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸುವ ಹಾಲು ಒಕ್ಕೂಟಗಳಲ್ಲಿ ಯಾರು ಕಡಿಮೆ ಮೊತ್ತಕ್ಕೆ ಕೋಟ್ ಮಾಡುತ್ತಾರೋ ಅವರಿಗೆ ಟೆಂಡರ್ ಸಿಗುತ್ತದೆ. ಇಲ್ಲಿ ಯಾವ ರಾಜಕೀಯವು ಇಲ್ಲ. ತುಪ್ಪವನ್ನು ಅಂತರಾಷ್ಟ್ರೀಯ ಗುಣಮಟ್ಟಕ್ಕೆ ಅನುಗುಣವಾಗಿ ಉತ್ಪಾದನೆ ಮಾಡುತ್ತಿದ್ದೇವೆ. ನಮ್ಮ ಗುಣಮಟ್ಟವನ್ನು ಬೇರೆ ಕಂಪೆನಿಗಳನ್ನು ಹೋಲಿಕೆ ಮಾಡಲು ಸಾಧ್ಯವಿಲ್ಲ. ಮುಂದೆ ತಿರುಪತಿ ಲಡ್ಡುಗಳು ಈಗಿನಂತೆಯೇ ಇರುತ್ತವೆ ಎಂದು ಹೇಳಲಾಗದು ಎಂದು ಭೀಮಾನಾಯಕ್‌ ತಿಳಿಸಿದರು.

ಕೆಎಂಎಫ್‌ ಎಂಡಿ ಜಗದೀಶ್ ಮಾತನಾಡಿ ಟಟಿಡಿಯವರು 6 ತಿಂಗಳಿಗೊಮ್ಮೆ ತುಪ್ಪ ಖರೀದಿಸುತ್ತಿದ್ದರು. ಅತ್ಯಂತ ಕಡಿಮೆ ಬಿಡ್ ಮಾಡಿದವರಿಗೆ ಟೆಂಡರ್ ಸಿಗುತ್ತದೆ. ಸ್ಪರ್ಧಾತ್ಮಕ ಬಿಡ್ಡಿಂಗ್‌ಗೆ ನಾವು ಹೋಗಲು ಸಾಧ್ಯವಿಲ್ಲ. 2021-22ನೇ ಸಾಲಿನಲ್ಲಿ 345 ಟನ್ ತುಪ್ಪ ನಾವು ಕೋಟ್ ಮಾಡಿದ ದರಕ್ಕೆ ಕೊಂಡುಕೊಂಡಿದ್ದರು. ಆನಂತರ ನಾವು ಅವರು ಹೇಳುವ ಕಡಿಮೆ ಬೆಲೆಗೆ ಮಾರದಿರಲು ನಿರ್ಧರಿಸಿದ್ದೇವೆ ಎಂದರು.

ಹಾಲು, ಮೊಸರು ಮತ್ತು ತುಪ್ಪದ ಬೆಲೆ ಏರಿಕೆ ಬಗ್ಗೆ ಕೆಎಂಎಫ್‌ ಮಂಡಳಿ ನಿರ್ಧಾರ ತೆಗೆದುಕೊಳ್ಳುತ್ತದೆ. ಸರ್ಕಾರದ ಸಹಮತ ಪಡೆಯುತ್ತೇವೆ ಅಷ್ಟೇ. ಸದ್ಯ ಹಾಲು ಮೊಸರಿನ ಬೆಲೆ 3 ರೂ ಹೆಚ್ಚಳವಾಗಿರುವುದಕ್ಕೂ, ತುಪ್ಪ ಸರಬರಾಜು ನಿಲ್ಲಿಸಿರುವುದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಖರ್ಚು ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...