Homeಕರ್ನಾಟಕಎರಡು ವರ್ಷದಿಂದಲೇ ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ: ಕೆಎಂಎಫ್ ಎಂಡಿ, ಅಧ್ಯಕ್ಷರ ಹೇಳಿಕೆ

ಎರಡು ವರ್ಷದಿಂದಲೇ ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ: ಕೆಎಂಎಫ್ ಎಂಡಿ, ಅಧ್ಯಕ್ಷರ ಹೇಳಿಕೆ

- Advertisement -
- Advertisement -

ತಿರುಪತಿಯಲ್ಲಿ ಲಡ್ಡು ತಯಾರಿಸಲು ಕರ್ನಾಟಕದಿಂದ ಸರಬರಾಜು ಆಗುತ್ತಿದ್ದ ನಂದಿನಿ ತುಪ್ಪ 2021ರಿಂದಲೇ ಬಂದ್ ಆಗಿದೆ. ಬಹಳ ಕಡಿಮೆ ದರಕ್ಕೆ ಬಿಡ್ ಕರೆಯುವುದರಿಂದ ಟಿಟಿಡಿ ಟೆಂಡರ್‌ನಲ್ಲಿ ಕೆಎಂಎಫ್ ಪಾಲ್ಗೊಂಡಿರಲಿಲ್ಲ ಎಂದು ಕೆಎಂಎಫ್ ಅಧ್ಯಕ್ಷರಾದ ಭೀಮಾ ನಾಯ್ಕ್ ತಿಳಿಸಿದ್ದಾರೆ.

ತಿರುಪತಿ ಲಡ್ಡು ತಯಾರಿಗೆ ಕರ್ನಾಟಕದ ನಂದಿನಿ ತುಪ್ಪ ಸರಬರಾಜು ಮಾಡದೇ ಕಾಂಗ್ರೆಸ್ ಪಕ್ಷ ತನ್ನ ಅಜೆಂಡಾಕ್ಕಾಗಿ ಸುವರ್ಣ ಕರ್ನಾಟಕವನ್ನು ನಾಶ ಮಾಡಲು ಮುಂದಾಗಿದೆ ಎಂಬ ಆರೋಪಕ್ಕೆ ಉತ್ತರಿಸಿರುವ ಅವರು, “ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲದೇ ಈ ರೀತಿಯ ಹೇಳೀಕೆಗಳನ್ನು ನೀಡುತ್ತಿದ್ದಾರೆ. ವಾಸ್ತವವೆಂದರೆ 2 ವರ್ಷದ ಹಿಂದೆ ತುಪ್ಪ ಸರಬರಾಜು ಸ್ಥಗಿತಗೊಳಿಸಲಾಗಿತ್ತು” ಎಂದಿದ್ದಾರೆ.

ಕೆಎಂಎಫ್‌ ಅತ್ಯುತ್ತಮ ದರ್ಜೆಯ ನಂದಿನಿ ತುಪ್ಪವನ್ನು ಸರಬರಾಜು ಮಾಡುತ್ತಿದೆ. ಆ ಗುಣಮಟ್ಟದಲ್ಲಿ ರಾಜೀ ಮಾಡಿಕೊಳ್ಳಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ಟಿಟಿಡಿ ಟೆಂಡರ್‌ನಲ್ಲಿ ನಮ್ಮ ಬೆಲೆಗಿಂತ ಕಡಿಮೆ ದರಕ್ಕೆ ಬೇರೆ ಸಂಸ್ಥೆಗಳು ಬಿಡ್ ಮಾಡುತ್ತಿವೆ. ಹಾಗಾಗಿ ನಾವು ಸರಬರಾಜು ಮಾಡುತ್ತಿಲ್ಲ. ಆದರೆ ನಂದಿನಿ ಬ್ರಾಂಡ್‌ ಮೇಲೆ ಜನ ವಿಶ್ವಾಸ ಇಟ್ಟಿದ್ದಾರೆ. ರಾಜ್ಯದಲ್ಲಿ, ದೇಶದಲ್ಲಿ ನಮ್ಮ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.

ಟಿಟಿಡಿಗೆ ಸುಮಾರು 2000 ಟನ್ ತುಪ್ಪ ಬೇಕು. ಪ್ರತಿ ಆರು ತಿಂಗಳಿಗೊಮ್ಮೆ ಟೆಂಡರ್ ಕರೆಯುತ್ತಾರೆ. ಕಡಿಮೆ ಬೆಲೆಗೆ ಸ್ಪರ್ಧೆ ಮಾಡಲು ಇಚ್ಚೆ ಇಲ್ಲದೇ ನಾವು ಸರಬರಾಜು ನಿಲ್ಲಿಸಿದ್ದೇವೆ. ಆದರೂ ಅವರ ಮನವಿಗೆ ಸ್ಪಂದಿಸಿ 392 ರೂಗಳಿಗೆ ನಾವು 35% ತುಪ್ಪ ಕೊಟ್ಟಿದ್ದೀವಿ. ನಮ್ಮ ರೇಟ್‌ಗೆ ಬಂದರೆ ಈಗಲೂ ತುಪ್ಪ ಕೊಡುತ್ತೇವೆ. ಆದರೆ ಅವರು ನೀಡುವ ಕಡಿಮೆ ದರಕ್ಕೆ ತುಪ್ಪ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

ನಮ್ಮ ರೈತರು ಬಹಳ ಕಷ್ಟದಲ್ಲಿದ್ದಾರೆ. ಅವರಿಗೆ ಪ್ರತಿ ಲೀಟರ್‌ಗೆ 5 ರೂ ಹೆಚ್ಚು ಕೊಡಲು ನಾವು ಬೇಡಿಕೆ ಇಟ್ಟಿದ್ದೆವು. ಕೊನೆಗೆ ಮುಖ್ಯಮಂತ್ರಿಗಳು 3 ರೂ ಕೊಡಲು ಒಪ್ಪಿದ್ದಾರೆ. ಹಾಗಾಗಿ ನಾವು ನಮ್ಮ ರೈತರ ಹಿತದೃಷ್ಟಿಯಿಂದ ಬೆಲೆಯಲ್ಲಿ ರಾಜೀ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದರು.

ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸುವ ಹಾಲು ಒಕ್ಕೂಟಗಳಲ್ಲಿ ಯಾರು ಕಡಿಮೆ ಮೊತ್ತಕ್ಕೆ ಕೋಟ್ ಮಾಡುತ್ತಾರೋ ಅವರಿಗೆ ಟೆಂಡರ್ ಸಿಗುತ್ತದೆ. ಇಲ್ಲಿ ಯಾವ ರಾಜಕೀಯವು ಇಲ್ಲ. ತುಪ್ಪವನ್ನು ಅಂತರಾಷ್ಟ್ರೀಯ ಗುಣಮಟ್ಟಕ್ಕೆ ಅನುಗುಣವಾಗಿ ಉತ್ಪಾದನೆ ಮಾಡುತ್ತಿದ್ದೇವೆ. ನಮ್ಮ ಗುಣಮಟ್ಟವನ್ನು ಬೇರೆ ಕಂಪೆನಿಗಳನ್ನು ಹೋಲಿಕೆ ಮಾಡಲು ಸಾಧ್ಯವಿಲ್ಲ. ಮುಂದೆ ತಿರುಪತಿ ಲಡ್ಡುಗಳು ಈಗಿನಂತೆಯೇ ಇರುತ್ತವೆ ಎಂದು ಹೇಳಲಾಗದು ಎಂದು ಭೀಮಾನಾಯಕ್‌ ತಿಳಿಸಿದರು.

ಕೆಎಂಎಫ್‌ ಎಂಡಿ ಜಗದೀಶ್ ಮಾತನಾಡಿ ಟಟಿಡಿಯವರು 6 ತಿಂಗಳಿಗೊಮ್ಮೆ ತುಪ್ಪ ಖರೀದಿಸುತ್ತಿದ್ದರು. ಅತ್ಯಂತ ಕಡಿಮೆ ಬಿಡ್ ಮಾಡಿದವರಿಗೆ ಟೆಂಡರ್ ಸಿಗುತ್ತದೆ. ಸ್ಪರ್ಧಾತ್ಮಕ ಬಿಡ್ಡಿಂಗ್‌ಗೆ ನಾವು ಹೋಗಲು ಸಾಧ್ಯವಿಲ್ಲ. 2021-22ನೇ ಸಾಲಿನಲ್ಲಿ 345 ಟನ್ ತುಪ್ಪ ನಾವು ಕೋಟ್ ಮಾಡಿದ ದರಕ್ಕೆ ಕೊಂಡುಕೊಂಡಿದ್ದರು. ಆನಂತರ ನಾವು ಅವರು ಹೇಳುವ ಕಡಿಮೆ ಬೆಲೆಗೆ ಮಾರದಿರಲು ನಿರ್ಧರಿಸಿದ್ದೇವೆ ಎಂದರು.

ಹಾಲು, ಮೊಸರು ಮತ್ತು ತುಪ್ಪದ ಬೆಲೆ ಏರಿಕೆ ಬಗ್ಗೆ ಕೆಎಂಎಫ್‌ ಮಂಡಳಿ ನಿರ್ಧಾರ ತೆಗೆದುಕೊಳ್ಳುತ್ತದೆ. ಸರ್ಕಾರದ ಸಹಮತ ಪಡೆಯುತ್ತೇವೆ ಅಷ್ಟೇ. ಸದ್ಯ ಹಾಲು ಮೊಸರಿನ ಬೆಲೆ 3 ರೂ ಹೆಚ್ಚಳವಾಗಿರುವುದಕ್ಕೂ, ತುಪ್ಪ ಸರಬರಾಜು ನಿಲ್ಲಿಸಿರುವುದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ಖರ್ಚು ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...