Homeಕರ್ನಾಟಕದೇಶ-ವಿದೇಶದಲ್ಲೂ ನಂದಿನಿ ಹಾಲು ಲಭ್ಯ, ಬೆಂಗಳೂರಿನಲ್ಲಿ ಮಾತ್ರ ಲಭ್ಯವಿಲ್ಲ!: ಇದು ಕೃತಕ ಅಭಾವದ ಸೃಷ್ಟಿನಾ?

ದೇಶ-ವಿದೇಶದಲ್ಲೂ ನಂದಿನಿ ಹಾಲು ಲಭ್ಯ, ಬೆಂಗಳೂರಿನಲ್ಲಿ ಮಾತ್ರ ಲಭ್ಯವಿಲ್ಲ!: ಇದು ಕೃತಕ ಅಭಾವದ ಸೃಷ್ಟಿನಾ?

- Advertisement -
- Advertisement -

ದೇಶ- ವಿದೇಶಗಳಲ್ಲೂ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಲಭ್ಯವಾಗುತ್ತಿದೆ. ಆದರೆ ಸ್ಥಳೀಯವಾಗಿ ಕರ್ನಾಟಕದಲ್ಲಿ ಮಾತ್ರ ನಂದಿನಿ ಹಾಲು ಸಿಗುತ್ತಿಲ್ಲ. ಬೆಂಗಳೂರಿನ ನಂದಿನಿ ಮಿಲ್ಕ್ ಪಾರ್ಲರ್‌ ಗಳಲ್ಲಿ ನಂದಿನಿ ಉತ್ಪನ್ನಗಳು ಸಿಗುತ್ತಿಲ್ಲ.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು ಸೇರಿ ವಿವಿಧ ದೇಶಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಸಿಗುತ್ತವೆ. ಪ್ರಮುಖವಾಗಿ ಸಿಂಗಪುರ ಮತ್ತು ಮಧ್ಯಪ್ರಾಚ್ಯ ದೇಶಗಳಿಗೆ ನಂದಿನಿ ಹಾಲಿನ ಉತ್ಪನ್ನಗಳು ಪೂರೈಕೆಯಾಗುತ್ತಿವೆ.

ರಾಜ್ಯದಲ್ಲಿ ನಂದಿನಿ ಉತ್ಪನ್ನ ಪೂರೈಕೆ ಕಡಿಮೆಯಾಗಿರುವುದನ್ನೇ ನೋಡಿಕೊಂಡು ಅಮುಲ್ ಹಾಲು ಮತ್ತು ಮೊಸರನ್ನು ಇ–ಕಾಮರ್ಸ್‌ ಮೂಲಕ ಮಾರುಕಟ್ಟೆಗೆ ಪ್ರವೇಶ ಮಾಡಿಸಲಾಗುತ್ತಿದೆ. ಈ ಹಿಂದೆ ಕೆಎಂಎಫ್ ಮತ್ತು ಅಮುಲ್ ವಿಲೀನದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಸ್ತಾಪಿಸಿದ್ದರು. ಆದರೆ ರಾಜ್ಯದಲ್ಲಿ ಅದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ ಇದೀಗ ಕೃತಕ ಅಭಾವ ಸೃಷ್ಟಿಸಿ, ಅಮುಲ್‌ನ್ನು ರಾಜ್ಯದಲ್ಲಿ ಪ್ರವೇಶ ಮಾಡಿಸಲಾಗುತ್ತಿದೆ ಎನ್ನುವ ಅನುಮಾನ ರೈತರು ಮತ್ತು ಗ್ರಾಹಕರಲ್ಲಿ ಮೂಡಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ”ಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ -ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು” ಎಂದಿದ್ದಾರೆ.

”ಇಲ್ಲಿನ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್ʼನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ಬಂದು ಹೋದ ಬಳಿಕ ರಾಜ್ಯದಲ್ಲಿ ಹೈನುಗಾರಿಕೆ ಹೆಚ್ಚಾಗಿತ್ತು, ಅದರಂತೆ ಹಾಲು ಶೇಖರಣೆ ಪ್ರಮಾಣವೂ ಹೆಚ್ಚಾಗಿತ್ತು. ಕೆಎಮ್‌ಎಫ್‌ ದಿನಕ್ಕೆ 96 ಲಕ್ಷ ಕೆ.ಜಿ ತನಕವೂ ಹಾಲು ಸಂಗ್ರಹ ಮಾಡುವ ಮೂಲಕ ದಾಖಲೆ ಬರೆದಿತ್ತು. ಹಾಲಿನ ಪ್ರಮಾಣ ಏರಿಕೆಯಾದ ಬಳಿಕ ಕೆಎಂಎಫ್ ತನ್ನ ಮಾರುಕಟ್ಟೆಯನ್ನು ವಿಸ್ತರಣೆ ಮಾಡಿಕೊಂಡಿದೆ. ಹಾಲಿನ ಪುಡಿ, ಐಸ್‌ಕ್ರೀಮ್, ಚೀಸ್‌, ಬೆಣ್ಣೆ, ತುಪ್ಪ, ಸಿಹಿ ತಿನಿಸು ತಯಾರಿಕೆಯನ್ನೂ ಹೆಚ್ಚಳ ಮಾಡಿಕೊಂಡಿದೆ. ಶಾಲಾ ಮಕ್ಕಳಿಗೆ, ಮಿಲಿಟರಿ ಕ್ಯಾಂಪ್‌ಗಳಿಗೆ ಗುಡ್‌ಲೈಫ್ ಹಾಲು ಪೂರೈಕೆಯಾಗುತ್ತಿದೆ.

ಆದರೆ ಕೆಲದಿನಗಳಿಂದ ಹಾಲು ಸಂಗ್ರಹ ಪ್ರಮಾಣ ಸರಾಸರಿ 76 ಲಕ್ಷ ಕೆ.ಜಿಗೆ ಇಳಿಕೆಯಾಗಿದೆ. 20 ಲಕ್ಷ ಕೆ.ಜಿ ಹಾಲು ಕಡಿಮೆಯಾಗಿದ್ದು, ಈ ವ್ಯತ್ಯಯಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಕೆಎಂಎಫ್ ಅಧಿಕಾರಿಗಳು ಮಾತನಾಡಿ, ”ಬೇಸಿಗೆಯಲ್ಲಿ ಹಾಲು ಉತ್ಪಾದನೆ ಕಡಿಮೆಯಾಗುವುದು ಸಾಮಾನ್ಯ. ಒಂದು ದಿನ ಮಾತ್ರ 96 ಲಕ್ಷ ಕೆ.ಜಿ ತನಕ ಹೋಗಿತ್ತು. ನಿತ್ಯ ಹಾಲು ಸಂಗ್ರಹ ಪ್ರಮಾಣ ಸರಾಸರಿ 81 ಲಕ್ಷ ಕೆ.ಜಿ. ಇತ್ತು. ಈಗ 5 ಲಕ್ಷ ಕೆ.ಜಿ ಕಡಿಮೆಯಾಗಿದ್ದು, ಹಾಲಿನ ಪುಡಿ ಸೇರಿ ಬೇರೆ ಉತ್ಪನ್ನಗಳ ತಯಾರಿಕೆ ಕಡಿಮೆ ಮಾಡಿ ಗ್ರಾಹಕರಿಗೆ ಹಾಲು ಪೂರೈಕೆಗೆ ಪ್ರಯತ್ನಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಹಾಲು ಸಂಗ್ರಹ ಕಡಿಮೆಯಾಗುತ್ತಿರುವ ಬಗ್ಗೆ ಹಾಲು ಒಕ್ಕೂಟ ಪ್ರತಿಕ್ರಿಯಿಸಿದ್ದು, ”ರೈತರಿಂದ ಹಾಲು ಖರೀದಿಯ ದರ ಕಡಿಮೆ ಇದೆ. ಇದೇ ಕಾರಣಕ್ಕೆ ಹಾಲು ಸಂಗ್ರಹ ಪ್ರಮಾಣ ಕಡಿಮೆಯಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ”ಬೇರೆ ರಾಜ್ಯಗಳಲ್ಲಿ ರೈತರಿಂದ ಲೀಟರ್‌ ಹಾಲಿಗೆ ₹50ರಿಂದ ₹60 ತನಕ ಹಣ ಕೊಟ್ಟು ಖರೀದಿ ಮಾಡಲಾಗುತ್ತದೆ ಆದರೆ ನಮ್ಮ ರಾಜ್ಯದಲ್ಲಿ ಲೀಟರ್‌ಗೆ ಕೇವಲ ₹39 ಮಾತ್ರ ನೀಡಲಾಗುತ್ತದೆ” ಎಂದು ತಿಳಿಸಿದ್ದಾರೆ.

ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ”ದುಬಾರಿ ಪಶು ಆಹಾರ ಖರೀದಿಸಿ ಹೈನುಗಾರಿಕೆ ಮಾಡುವುದು ರೈತರಿಗೆ ಕಷ್ಟವಾಗುತ್ತಿದೆ. ಆದ್ದರಿಂದ ಹಾಲು ಉತ್ಪಾದನೆ ಕಡಿಮೆಯಾಗಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...