Homeಕರ್ನಾಟಕದೇಶ-ವಿದೇಶದಲ್ಲೂ ನಂದಿನಿ ಹಾಲು ಲಭ್ಯ, ಬೆಂಗಳೂರಿನಲ್ಲಿ ಮಾತ್ರ ಲಭ್ಯವಿಲ್ಲ!: ಇದು ಕೃತಕ ಅಭಾವದ ಸೃಷ್ಟಿನಾ?

ದೇಶ-ವಿದೇಶದಲ್ಲೂ ನಂದಿನಿ ಹಾಲು ಲಭ್ಯ, ಬೆಂಗಳೂರಿನಲ್ಲಿ ಮಾತ್ರ ಲಭ್ಯವಿಲ್ಲ!: ಇದು ಕೃತಕ ಅಭಾವದ ಸೃಷ್ಟಿನಾ?

- Advertisement -
- Advertisement -

ದೇಶ- ವಿದೇಶಗಳಲ್ಲೂ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಲಭ್ಯವಾಗುತ್ತಿದೆ. ಆದರೆ ಸ್ಥಳೀಯವಾಗಿ ಕರ್ನಾಟಕದಲ್ಲಿ ಮಾತ್ರ ನಂದಿನಿ ಹಾಲು ಸಿಗುತ್ತಿಲ್ಲ. ಬೆಂಗಳೂರಿನ ನಂದಿನಿ ಮಿಲ್ಕ್ ಪಾರ್ಲರ್‌ ಗಳಲ್ಲಿ ನಂದಿನಿ ಉತ್ಪನ್ನಗಳು ಸಿಗುತ್ತಿಲ್ಲ.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು ಸೇರಿ ವಿವಿಧ ದೇಶಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಸಿಗುತ್ತವೆ. ಪ್ರಮುಖವಾಗಿ ಸಿಂಗಪುರ ಮತ್ತು ಮಧ್ಯಪ್ರಾಚ್ಯ ದೇಶಗಳಿಗೆ ನಂದಿನಿ ಹಾಲಿನ ಉತ್ಪನ್ನಗಳು ಪೂರೈಕೆಯಾಗುತ್ತಿವೆ.

ರಾಜ್ಯದಲ್ಲಿ ನಂದಿನಿ ಉತ್ಪನ್ನ ಪೂರೈಕೆ ಕಡಿಮೆಯಾಗಿರುವುದನ್ನೇ ನೋಡಿಕೊಂಡು ಅಮುಲ್ ಹಾಲು ಮತ್ತು ಮೊಸರನ್ನು ಇ–ಕಾಮರ್ಸ್‌ ಮೂಲಕ ಮಾರುಕಟ್ಟೆಗೆ ಪ್ರವೇಶ ಮಾಡಿಸಲಾಗುತ್ತಿದೆ. ಈ ಹಿಂದೆ ಕೆಎಂಎಫ್ ಮತ್ತು ಅಮುಲ್ ವಿಲೀನದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಸ್ತಾಪಿಸಿದ್ದರು. ಆದರೆ ರಾಜ್ಯದಲ್ಲಿ ಅದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ ಇದೀಗ ಕೃತಕ ಅಭಾವ ಸೃಷ್ಟಿಸಿ, ಅಮುಲ್‌ನ್ನು ರಾಜ್ಯದಲ್ಲಿ ಪ್ರವೇಶ ಮಾಡಿಸಲಾಗುತ್ತಿದೆ ಎನ್ನುವ ಅನುಮಾನ ರೈತರು ಮತ್ತು ಗ್ರಾಹಕರಲ್ಲಿ ಮೂಡಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ”ಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ -ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು” ಎಂದಿದ್ದಾರೆ.

”ಇಲ್ಲಿನ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್ʼನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ಬಂದು ಹೋದ ಬಳಿಕ ರಾಜ್ಯದಲ್ಲಿ ಹೈನುಗಾರಿಕೆ ಹೆಚ್ಚಾಗಿತ್ತು, ಅದರಂತೆ ಹಾಲು ಶೇಖರಣೆ ಪ್ರಮಾಣವೂ ಹೆಚ್ಚಾಗಿತ್ತು. ಕೆಎಮ್‌ಎಫ್‌ ದಿನಕ್ಕೆ 96 ಲಕ್ಷ ಕೆ.ಜಿ ತನಕವೂ ಹಾಲು ಸಂಗ್ರಹ ಮಾಡುವ ಮೂಲಕ ದಾಖಲೆ ಬರೆದಿತ್ತು. ಹಾಲಿನ ಪ್ರಮಾಣ ಏರಿಕೆಯಾದ ಬಳಿಕ ಕೆಎಂಎಫ್ ತನ್ನ ಮಾರುಕಟ್ಟೆಯನ್ನು ವಿಸ್ತರಣೆ ಮಾಡಿಕೊಂಡಿದೆ. ಹಾಲಿನ ಪುಡಿ, ಐಸ್‌ಕ್ರೀಮ್, ಚೀಸ್‌, ಬೆಣ್ಣೆ, ತುಪ್ಪ, ಸಿಹಿ ತಿನಿಸು ತಯಾರಿಕೆಯನ್ನೂ ಹೆಚ್ಚಳ ಮಾಡಿಕೊಂಡಿದೆ. ಶಾಲಾ ಮಕ್ಕಳಿಗೆ, ಮಿಲಿಟರಿ ಕ್ಯಾಂಪ್‌ಗಳಿಗೆ ಗುಡ್‌ಲೈಫ್ ಹಾಲು ಪೂರೈಕೆಯಾಗುತ್ತಿದೆ.

ಆದರೆ ಕೆಲದಿನಗಳಿಂದ ಹಾಲು ಸಂಗ್ರಹ ಪ್ರಮಾಣ ಸರಾಸರಿ 76 ಲಕ್ಷ ಕೆ.ಜಿಗೆ ಇಳಿಕೆಯಾಗಿದೆ. 20 ಲಕ್ಷ ಕೆ.ಜಿ ಹಾಲು ಕಡಿಮೆಯಾಗಿದ್ದು, ಈ ವ್ಯತ್ಯಯಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಕೆಎಂಎಫ್ ಅಧಿಕಾರಿಗಳು ಮಾತನಾಡಿ, ”ಬೇಸಿಗೆಯಲ್ಲಿ ಹಾಲು ಉತ್ಪಾದನೆ ಕಡಿಮೆಯಾಗುವುದು ಸಾಮಾನ್ಯ. ಒಂದು ದಿನ ಮಾತ್ರ 96 ಲಕ್ಷ ಕೆ.ಜಿ ತನಕ ಹೋಗಿತ್ತು. ನಿತ್ಯ ಹಾಲು ಸಂಗ್ರಹ ಪ್ರಮಾಣ ಸರಾಸರಿ 81 ಲಕ್ಷ ಕೆ.ಜಿ. ಇತ್ತು. ಈಗ 5 ಲಕ್ಷ ಕೆ.ಜಿ ಕಡಿಮೆಯಾಗಿದ್ದು, ಹಾಲಿನ ಪುಡಿ ಸೇರಿ ಬೇರೆ ಉತ್ಪನ್ನಗಳ ತಯಾರಿಕೆ ಕಡಿಮೆ ಮಾಡಿ ಗ್ರಾಹಕರಿಗೆ ಹಾಲು ಪೂರೈಕೆಗೆ ಪ್ರಯತ್ನಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಹಾಲು ಸಂಗ್ರಹ ಕಡಿಮೆಯಾಗುತ್ತಿರುವ ಬಗ್ಗೆ ಹಾಲು ಒಕ್ಕೂಟ ಪ್ರತಿಕ್ರಿಯಿಸಿದ್ದು, ”ರೈತರಿಂದ ಹಾಲು ಖರೀದಿಯ ದರ ಕಡಿಮೆ ಇದೆ. ಇದೇ ಕಾರಣಕ್ಕೆ ಹಾಲು ಸಂಗ್ರಹ ಪ್ರಮಾಣ ಕಡಿಮೆಯಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ”ಬೇರೆ ರಾಜ್ಯಗಳಲ್ಲಿ ರೈತರಿಂದ ಲೀಟರ್‌ ಹಾಲಿಗೆ ₹50ರಿಂದ ₹60 ತನಕ ಹಣ ಕೊಟ್ಟು ಖರೀದಿ ಮಾಡಲಾಗುತ್ತದೆ ಆದರೆ ನಮ್ಮ ರಾಜ್ಯದಲ್ಲಿ ಲೀಟರ್‌ಗೆ ಕೇವಲ ₹39 ಮಾತ್ರ ನೀಡಲಾಗುತ್ತದೆ” ಎಂದು ತಿಳಿಸಿದ್ದಾರೆ.

ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ”ದುಬಾರಿ ಪಶು ಆಹಾರ ಖರೀದಿಸಿ ಹೈನುಗಾರಿಕೆ ಮಾಡುವುದು ರೈತರಿಗೆ ಕಷ್ಟವಾಗುತ್ತಿದೆ. ಆದ್ದರಿಂದ ಹಾಲು ಉತ್ಪಾದನೆ ಕಡಿಮೆಯಾಗಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...