Homeಕರ್ನಾಟಕದೇಶ-ವಿದೇಶದಲ್ಲೂ ನಂದಿನಿ ಹಾಲು ಲಭ್ಯ, ಬೆಂಗಳೂರಿನಲ್ಲಿ ಮಾತ್ರ ಲಭ್ಯವಿಲ್ಲ!: ಇದು ಕೃತಕ ಅಭಾವದ ಸೃಷ್ಟಿನಾ?

ದೇಶ-ವಿದೇಶದಲ್ಲೂ ನಂದಿನಿ ಹಾಲು ಲಭ್ಯ, ಬೆಂಗಳೂರಿನಲ್ಲಿ ಮಾತ್ರ ಲಭ್ಯವಿಲ್ಲ!: ಇದು ಕೃತಕ ಅಭಾವದ ಸೃಷ್ಟಿನಾ?

- Advertisement -
- Advertisement -

ದೇಶ- ವಿದೇಶಗಳಲ್ಲೂ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಲಭ್ಯವಾಗುತ್ತಿದೆ. ಆದರೆ ಸ್ಥಳೀಯವಾಗಿ ಕರ್ನಾಟಕದಲ್ಲಿ ಮಾತ್ರ ನಂದಿನಿ ಹಾಲು ಸಿಗುತ್ತಿಲ್ಲ. ಬೆಂಗಳೂರಿನ ನಂದಿನಿ ಮಿಲ್ಕ್ ಪಾರ್ಲರ್‌ ಗಳಲ್ಲಿ ನಂದಿನಿ ಉತ್ಪನ್ನಗಳು ಸಿಗುತ್ತಿಲ್ಲ.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು ಸೇರಿ ವಿವಿಧ ದೇಶಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಸಿಗುತ್ತವೆ. ಪ್ರಮುಖವಾಗಿ ಸಿಂಗಪುರ ಮತ್ತು ಮಧ್ಯಪ್ರಾಚ್ಯ ದೇಶಗಳಿಗೆ ನಂದಿನಿ ಹಾಲಿನ ಉತ್ಪನ್ನಗಳು ಪೂರೈಕೆಯಾಗುತ್ತಿವೆ.

ರಾಜ್ಯದಲ್ಲಿ ನಂದಿನಿ ಉತ್ಪನ್ನ ಪೂರೈಕೆ ಕಡಿಮೆಯಾಗಿರುವುದನ್ನೇ ನೋಡಿಕೊಂಡು ಅಮುಲ್ ಹಾಲು ಮತ್ತು ಮೊಸರನ್ನು ಇ–ಕಾಮರ್ಸ್‌ ಮೂಲಕ ಮಾರುಕಟ್ಟೆಗೆ ಪ್ರವೇಶ ಮಾಡಿಸಲಾಗುತ್ತಿದೆ. ಈ ಹಿಂದೆ ಕೆಎಂಎಫ್ ಮತ್ತು ಅಮುಲ್ ವಿಲೀನದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಸ್ತಾಪಿಸಿದ್ದರು. ಆದರೆ ರಾಜ್ಯದಲ್ಲಿ ಅದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ ಇದೀಗ ಕೃತಕ ಅಭಾವ ಸೃಷ್ಟಿಸಿ, ಅಮುಲ್‌ನ್ನು ರಾಜ್ಯದಲ್ಲಿ ಪ್ರವೇಶ ಮಾಡಿಸಲಾಗುತ್ತಿದೆ ಎನ್ನುವ ಅನುಮಾನ ರೈತರು ಮತ್ತು ಗ್ರಾಹಕರಲ್ಲಿ ಮೂಡಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ”ಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ -ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು” ಎಂದಿದ್ದಾರೆ.

”ಇಲ್ಲಿನ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್ʼನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ಬಂದು ಹೋದ ಬಳಿಕ ರಾಜ್ಯದಲ್ಲಿ ಹೈನುಗಾರಿಕೆ ಹೆಚ್ಚಾಗಿತ್ತು, ಅದರಂತೆ ಹಾಲು ಶೇಖರಣೆ ಪ್ರಮಾಣವೂ ಹೆಚ್ಚಾಗಿತ್ತು. ಕೆಎಮ್‌ಎಫ್‌ ದಿನಕ್ಕೆ 96 ಲಕ್ಷ ಕೆ.ಜಿ ತನಕವೂ ಹಾಲು ಸಂಗ್ರಹ ಮಾಡುವ ಮೂಲಕ ದಾಖಲೆ ಬರೆದಿತ್ತು. ಹಾಲಿನ ಪ್ರಮಾಣ ಏರಿಕೆಯಾದ ಬಳಿಕ ಕೆಎಂಎಫ್ ತನ್ನ ಮಾರುಕಟ್ಟೆಯನ್ನು ವಿಸ್ತರಣೆ ಮಾಡಿಕೊಂಡಿದೆ. ಹಾಲಿನ ಪುಡಿ, ಐಸ್‌ಕ್ರೀಮ್, ಚೀಸ್‌, ಬೆಣ್ಣೆ, ತುಪ್ಪ, ಸಿಹಿ ತಿನಿಸು ತಯಾರಿಕೆಯನ್ನೂ ಹೆಚ್ಚಳ ಮಾಡಿಕೊಂಡಿದೆ. ಶಾಲಾ ಮಕ್ಕಳಿಗೆ, ಮಿಲಿಟರಿ ಕ್ಯಾಂಪ್‌ಗಳಿಗೆ ಗುಡ್‌ಲೈಫ್ ಹಾಲು ಪೂರೈಕೆಯಾಗುತ್ತಿದೆ.

ಆದರೆ ಕೆಲದಿನಗಳಿಂದ ಹಾಲು ಸಂಗ್ರಹ ಪ್ರಮಾಣ ಸರಾಸರಿ 76 ಲಕ್ಷ ಕೆ.ಜಿಗೆ ಇಳಿಕೆಯಾಗಿದೆ. 20 ಲಕ್ಷ ಕೆ.ಜಿ ಹಾಲು ಕಡಿಮೆಯಾಗಿದ್ದು, ಈ ವ್ಯತ್ಯಯಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಕೆಎಂಎಫ್ ಅಧಿಕಾರಿಗಳು ಮಾತನಾಡಿ, ”ಬೇಸಿಗೆಯಲ್ಲಿ ಹಾಲು ಉತ್ಪಾದನೆ ಕಡಿಮೆಯಾಗುವುದು ಸಾಮಾನ್ಯ. ಒಂದು ದಿನ ಮಾತ್ರ 96 ಲಕ್ಷ ಕೆ.ಜಿ ತನಕ ಹೋಗಿತ್ತು. ನಿತ್ಯ ಹಾಲು ಸಂಗ್ರಹ ಪ್ರಮಾಣ ಸರಾಸರಿ 81 ಲಕ್ಷ ಕೆ.ಜಿ. ಇತ್ತು. ಈಗ 5 ಲಕ್ಷ ಕೆ.ಜಿ ಕಡಿಮೆಯಾಗಿದ್ದು, ಹಾಲಿನ ಪುಡಿ ಸೇರಿ ಬೇರೆ ಉತ್ಪನ್ನಗಳ ತಯಾರಿಕೆ ಕಡಿಮೆ ಮಾಡಿ ಗ್ರಾಹಕರಿಗೆ ಹಾಲು ಪೂರೈಕೆಗೆ ಪ್ರಯತ್ನಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಹಾಲು ಸಂಗ್ರಹ ಕಡಿಮೆಯಾಗುತ್ತಿರುವ ಬಗ್ಗೆ ಹಾಲು ಒಕ್ಕೂಟ ಪ್ರತಿಕ್ರಿಯಿಸಿದ್ದು, ”ರೈತರಿಂದ ಹಾಲು ಖರೀದಿಯ ದರ ಕಡಿಮೆ ಇದೆ. ಇದೇ ಕಾರಣಕ್ಕೆ ಹಾಲು ಸಂಗ್ರಹ ಪ್ರಮಾಣ ಕಡಿಮೆಯಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ”ಬೇರೆ ರಾಜ್ಯಗಳಲ್ಲಿ ರೈತರಿಂದ ಲೀಟರ್‌ ಹಾಲಿಗೆ ₹50ರಿಂದ ₹60 ತನಕ ಹಣ ಕೊಟ್ಟು ಖರೀದಿ ಮಾಡಲಾಗುತ್ತದೆ ಆದರೆ ನಮ್ಮ ರಾಜ್ಯದಲ್ಲಿ ಲೀಟರ್‌ಗೆ ಕೇವಲ ₹39 ಮಾತ್ರ ನೀಡಲಾಗುತ್ತದೆ” ಎಂದು ತಿಳಿಸಿದ್ದಾರೆ.

ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ”ದುಬಾರಿ ಪಶು ಆಹಾರ ಖರೀದಿಸಿ ಹೈನುಗಾರಿಕೆ ಮಾಡುವುದು ರೈತರಿಗೆ ಕಷ್ಟವಾಗುತ್ತಿದೆ. ಆದ್ದರಿಂದ ಹಾಲು ಉತ್ಪಾದನೆ ಕಡಿಮೆಯಾಗಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...